Author: kannadanewsnow05

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೇಷ, ಆಕೆಯ ಪತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ನಿನ್ನೆ ಕಾವೂರು ಪೊಲೀಸ್ ಠಾಣೆಯಲ್ಲಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೇಷಾ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೇರಳಕ್ಕೆ ಪರಾರಿಯಾಗಿದ್ದಳು. ಇದೀಗ ಕಲ್ಲಡ್ಕ ಬಳಿ ಆಯಿಷಾ, ಪತಿ ಶೋಯೆಬ್ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ತಮ್ಮನಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಕೊಲೆ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರ ಎಸ್ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಪವಿತ್ರಗೌಡ ಮೆಸೇಜ್ ಮಾಡುತ್ತಿದ್ದಾಳೆ ಎಂದು A3 ಆರೋಪಿ ಪವನ್ ಮೆಸೇಜ್ ಗೆ ಪ್ರತ್ಯುತ್ತರ ನೀಡುತ್ತಿದ್ದ.ಪವಿತ್ರ ಗೌಡಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿದಾಗ ಪವಿತ್ರಗೌಡ ಸೂಪರ್ ಎಂದಿದ್ದಾರೆ. ಆಗ ಕೊಲೆ ಮಾಡುವ ಹಂತಕ್ಕೆ ಹೋಗದೆ ಬ್ಲಾಕ್ ಮಾಡಿ ರಿಪೋರ್ಟ್ ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದರು ಎಂದು ವಾದಿಸಿದರು. ಇದಕ್ಕೂ ಮುನ್ನ ಕಳೆದ ವಿಚಾರಣೆಯ ವೇಳೆ ಪೊಲೀಸರ ಹಲವು ಲೋಪಗಳನ್ನು ಎತ್ತಿ ಹಿಡಿದು ದರ್ಶನ್ ಪರ ವಕೀಲರಾದಂತಹ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇದಕ್ಕೆ ಪ್ರಸನ್ನ ಕುಮಾರ್ ಅವರು ಎಲ್ಲ ಪ್ರಶ್ನೆಗಳಲು ನಮ್ಮಲ್ಲಿ ಉತ್ತರವಿದೆ ಎಂದು ಕೊನೆಯಲ್ಲಿ ತಿಳಿಸಿದ್ದರು. ಇಂದು ಅದಕ್ಕೆ ಪ್ರತಿಯಾಗಿ ಪೊಲೀಸ್ ಪರ ವಕೀಲ ಎಸ್ಪಿಪಿ ಪ್ರಸನ್ನ…

Read More

ಗದಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದು, ಬಿವೈ ವಿಜಯೇಂದ್ರ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ಮತಗಳಿಂದ ಗೆದ್ದಿದ್ದಾನೆ ಎಂದು ಗಂಭೀರವಾದ ಆರೋಪ ಮಾಡಿದರು. ಗದಗನಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ ಹಾಕಬೇಕು, ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು. ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು ಎಂದು ಅವರು ತಿಳಿಸಿದರು. ಬಿವೈ ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ಶಾಸಕರಾಗಿದ್ದಿರಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಈವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಉತ್ತರ ನೀಡಿಲ್ಲ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ವೋಟ್​ನಿಂದ ಗೆದ್ದರು. ಏನು ಹೊಂದಾಣಿಕೆಯಾಗಿತ್ತು ಎನ್ನುವುದನ್ನು ಡಿಕೆ ಶಿವಕುಮಾರ್ ಬಹಿರಂಗ ಮಾಡಲಿ. ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬರ್ತಾಯಿದ್ದಾರೆ. ಈ ಹೊಂದಾಣಿಕೆ ರಾಜಕಾರಣ…

Read More

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸರಕಾರವು ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇಂದು ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಹಾಗಾಗಿ ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ ನಮ್ಮ ಸರ್ಕಾರ ಹಾಗೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು. ಅದೇ ರೀತಿಯಾಗಿ ಹರಿಯಾಣದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲು ಆಗಿರುವ ವಿಚಾರವಾಗಿ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರುವ ಕುರಿತು ಪರಿಶೀಲನೆ ಮಾಡುತ್ತೇವೆ. ನಾವು ಎಲ್ಲಿ ಎಡವಿದ್ದೇವೆ ಅಂತ ಪರಿಶೀಲಿಸುತ್ತೇವೆ. ಜನರು ಕೊಟ್ಟಿರುವ ತೀರ್ಪಿನ ಬಗ್ಗೆ ನಾವೆಲ್ಲರೂ ಗೌರವ ಕೊಡಲೇಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮುಡಾ ಪ್ರಕರಣ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್ಗೆ ಹಿನ್ನಡೆ…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಬಸ್ಗೆ ಸ್ಕೂಟಿ ಒಂದು ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದಂತಹ ಕಾರು ಮಹಿಳೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಹೌದು ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಸಮೀಪ ಸ್ಕೂಟರ್‌ಗೆ ಬಿಎಂಟಿಸಿ ಬಸ್ ಗುದ್ದಿ ಮಹಿಳೆ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ‌ ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ ರಸ್ತೆಯಲ್ಲಿ ನಡೆದಿದೆ. ಸೊನ್ನೇನಹಳ್ಳಿಯ ಮಾರುತಿ ನಗರದ ನಿವಾಸಿ ಮೋನಿಕಾ (25) ಮೃತ ಮಹಿಳೆ ಎಂದು ಹೇಳಕಾಗುತ್ತಿದೆ. ಶೋರೂಂ ಒಂದರಲ್ಲಿ HR ಆಗಿ ಕೆಲಸ ಮಾಡುತ್ತಿದ್ದ ಮೋನಿಕಾ, ಇಂದು ಬೆಳಿಗ್ಗೆ ತಮ್ಮ ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸ್ಕೂಟರ್‌ಗೆ ಮುಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಮೋನಿಕಾ ಮೈಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಹರಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಜಾತಿ ನಿಂದನೆ ಆರೋಪ ಸಂಬಂಧ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೆ ಹುಲಿ ಕಾರ್ತಿಕ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಎಫ್ ಐ ಆರ್ ದಾಖಲಾಗಿರುವ ವಿಷಯ ತಿಳಿದು ಹುಲಿ ಕಾರ್ತಿಕ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ಯಾವುದೇ ಸಮುದಾಯವನ್ನು ಹಾಸ್ಯ ಮಾಡುವ ಉದ್ದೇಶ ಇಲ್ಲ. ಮನರಂಜನೆ ನೀಡುವ ಉದ್ದೇಶದಿಂದ ನಟನೆ ಮಾಡುತ್ತಿದ್ದೇವೆ. ಒಂದು ವೇಳೆ ಆ ರೀತಿ ನಿಮಗೆ ಕೇಳಿಸಿದ್ದಲ್ಲಿ ದಯವಿಟ್ಟು ಕ್ಷಮಿಸಿ. ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮದಲ್ಲ ಎಂದು ಹಾಸ್ಯನಟ ಹುಲಿ ಕಾರ್ತೀಕ್ ಸ್ಪಷ್ಟನೆಯನ್ನು ನೀಡಿದ್ದಾರೆ. ನಾವು ಎಲ್ಲ ಸಮುದಾಯವನ್ನು ನಗಿಸುವ ಕೆಲಸ ಮಾಡುತ್ತೇವೆ. ಯಾವುದೇ ಸಮುದಾಯವನ್ನು ನೋವಾಗುವ ರೀತಿಯಲ್ಲಿ ಮಾತನಾಡಿಲ್ಲ. ಯಾವುದೇ ಜಾತಿ, ಧರ್ಮದ ಬಗ್ಗೆ ಹಾಸ್ಯ ಮಾಡುವುದಕ್ಕೆ ಖಾಸಗಿ ವಾಹಿನಿಯಲ್ಲಿ ಅವಕಾಶ ಇರುವುದಿಲ್ಲ. ಸೂಕ್ತವಾಗಿ ವ್ಯವಸ್ಥೆ ಇದ್ದು ಅದರಂತೆ ಸ್ಕ್ರಿಪ್ಟ್ ತಯಾರಾಗುತ್ತದೆ. ಇನ್ನು ಕಾಮಿಡಿ ಸ್ಕಿಟ್‌ನಲ್ಲಿ ನಾನು…

Read More

ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಚರಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ವಿರುದ್ಧವಾಗಿ ಶಾಸಕ ಜನಾರ್ಧನ್ ರೆಡ್ಡಿ ಅವರು ಕಾರು ಎದುರಾಗಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜನಾರ್ಧನ್ ರೆಡ್ಡಿ ಕಾರು ಚಾಲಕನ ಮೇಲೆ FIR ದಾಖಲಾಗಿತ್ತು. ಇಂದು ಶಾಸಕ ಜನಾರ್ಧನ್ ರೆಡ್ಡಿ ಅವರ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಹೌದು ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ರೇಂಜ್ ರೋವರ್ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ಸಂಚಾರಿ ಠಾಣೆ ಪೊಲೀಸರಿಂದ ಜನಾರ್ಧನ್ ರೆಡ್ಡಿ ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿ ಗಂಗಾವತಿಗೆ ಪೊಲೀಸರು ತಂದಿದ್ದಾರೆ. ಅಕ್ಟೋಬರ್ 5ರಂದು ಸಿಎಂ ತೆರಳುತ್ತಿದ್ದ ವೇಳೆ ನಿಯಮ ಉಲ್ಲಂಘಹಿಸಲಾಗಿತ್ತು. ರಾಯಚೂರಿನಿಂದ ಜಿಂದಾಲ್ ಏರ್ ಪೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಅವರು ತೆರಳುತ್ತಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕಾನ್ವೆಗೆ ಎದುರಾಗಿ ಜನಾರ್ಧನ್ ರೆಡ್ಡಿ ಕಾರು ಚಲಾಯಿಸಿದ್ದರು.ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 3 ಕಾರುಗಳ ಮೇಲೆ FIR ದಾಖಲಾಗಿದೆ. ಗಂಗಾವತಿ…

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಸದ್ಯ ನಟ ದರ್ಶನ್ ಅವರು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ. ಆದರೆ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಲ್ಲಿ ವಿಮ್ಸ್ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು ಸಹ ದರ್ಶನ್ ಅವರು ಬೇಡ ಅಂತ ಹಠ ಹಿಡಿದಿದ್ದಾರೆ. ದರ್ಶನ್ ಗೆ ಬೆನ್ನು ಮೂಳೆಯ ಸ್ಕ್ಯಾನಿಂಗ್ ಮಾಡಿಸುವಂತೆ ವಿಮ್ಸ್ ಆಸ್ಪತ್ರೆಯ ಮೂಳೆ ತಜ್ಞರು ಹೇಳಿದ್ದರು.ಆದರೆ ದರ್ಶನ್ ಬಳ್ಳಾರಿಯಲ್ಲಿ ಸ್ಕ್ಯಾನಿಂಗ್ ಬೇಡ ಅಂತ ದರ್ಶನ್ ಹಠ ಹಿಡಿದಿದ್ದಾರೆ. ನೋವು ನಿವಾರಕ, ನರಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ವೈದ್ಯರು ಈಗಾಗಲೇ ನೀಡಿದ್ದಾರೆ. L1, L5 ಭಾಗದಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಜಲು 15 ದಿನಗಳು ನೀಡಿದರು ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದರು. ಅದಾದ ನಂತರ ತೇಪೆ ಹಚ್ಚಿದ ಗುಂಡಿಗಳು ಮಳೆಯ ರಭಸಕ್ಕೆ ಕೊಚ್ಚಿ ಹೋಗಿವೆ. ಈ ಕುರಿತಾಗಿ ಜೆಡಿಎಸ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದ್ದು, ಕಲೆಕ್ಷನ್‌ ಅಧ್ಯಕ್ಷನ “ಪರ್ಸಂಟೇಜ್‌ ಪುರಾಣ, ಪರ್ಸೆಂಟೇಜ್‌ ಗಿರಾಕಿ” ಎಂದು ಸ್ವತಃ ಕಾಂಗ್ರೆಸ್‌ ವಕ್ತಾರರೇ, ಹಾಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನ “ರೋಲ್‌ ಕಾಲ್‌ ಪುರಾಣ” ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ 15 ದಿನಗಳ ಕಾಲ ತೇಪೆ ಹಚ್ಚಿದ ರಸ್ತೆ ಗುಂಡಿಗಳು ಒಂದೇ ರಾತ್ರಿ ಸುರಿದ ಮಳೆಗೆ ಕೊಚ್ಚಿಹೋಗಿದೆ.ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಮೇಯುತ್ತಿರುವ “ಕಲೆಕ್ಷನ್‌ ಗಿರಾಕಿ”ಯ ಪರ್ಸಂಟೇಜ್‌ ಅವ್ಯವಹಾರಕ್ಕೆ ಮತ್ತು ಕಳಪೆ ಕಾಮಗಾರಿಗೆ ಪ್ರತ್ಯಕ್ಷ ಸಾಕ್ಷಿ !ಅಂದ್ಹಾಗೆ.., ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು…

Read More

ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರ ರಿಸಲ್ಟ್ನಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ. 370 ವಿಧಿ ಬಗ್ಗೆ ಮಾತನಾಡಿದರು. ಕಾಶ್ಮೀರ ಫೈಲ್ಸ್ ಫಿಲ್ಮ್ ಮಾಡಿದ್ರು. ಅದು ನಿರ್ಮಾಪಕ ಮತ್ತು ನಿರ್ದೇಶಕರಿಗೆ ಮಾತ್ರ ಲಾಭ ಆಗಿದ್ದು ಹೊರತು, ಇದರಿಂದ ಜಮ್ಮು ಕಾಶ್ಮೀರ ಜನರಿಗೆ ಏನು ಲಾಭ ಆಗಲಿಲ್ಲ. ಈಗ ಅಲ್ಲಿನ ಜನ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಬಿಜೆಪಿಯ ವಿಭಜನೆ ನೀತಿ ವರ್ಕ್ ಆಗ್ತಿಲ್ಲ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ…

Read More