Author: kannadanewsnow05

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರವಾಗಿ ಸಚಿವ ಸಂತೋಷ್ ಲಾಡ್, ಪ್ರಧಾನಿ ವಿರುದ್ಧ ರಾಷ್ಟ್ರಪತಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಆಕ್ರೋಶ ಹೊರ ಹಾಕಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪೊಲಿಟಿಕಲ್ ಟೂಲ್ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಅವಕಾಶವೇ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ 40 ವರ್ಷದ ಹಾದಿಯಲ್ಲಿ ಯಾವುದೇ ಕಪ್ಪು ಚುಕ್ಕೆ. ಇಲ್ಲ ಯಾವ ಆಧಾರದ ಮೇಲೆ ಸಿಎಂ ರಾಜೀನಾಮೆ ಕೊಡಬೇಕು? ಪ್ರಧಾನಿ ವಿರುದ್ಧ ರಾಷ್ಟ್ರಪತಿ ಪ್ರಾವಿಷನ್ ಗೆ ಕೊಟ್ಟರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುತ್ತಾರಾ ಎಂದು ಇದೆ ವೇಳೆ ಪ್ರಶ್ನಿಸಿದರು. ಎಲ್ಲದಕ್ಕೂ ಒಂದು ನಿಯಮ ಅಂತ ಇದೆ. ಪ್ರಾಸಿಕ್ಯೂಷನ್ ಗೆ ಕೊಡಲು ಕೇಂದ್ರದ ಮಾರ್ಗಸೂಚಿ ಇದೆ. ಸಿದ್ದರಾಮಯ್ಯ ಭಾಗಿಯಾದ ಬಗ್ಗೆ ದಾಖಲೆ ಇದೆಯಾ? ರಾಜೀನಾಮೆ ಕೇಳಲು…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ವಕೀಲ ಪ್ರದೀಪ್ ಕುಮಾರ್ ಅವರಿಗೆ ಅನಾಮಧೇಯ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ ಕುಮಾರ್ ದೂರು ಸೇರಿದಂತೆ ಮೂವರ ದೂರನ್ನು ಆಧರಿಸಿ ರಾಜ್ಯಪಾಲರು ಸಿಎಂ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆದರೆ, ಈಗ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ್ದ ಪ್ರದೀಪ್ ಕುಮಾರ್‌ಗೆ ಬೆದರಿಕೆ ಕರೆಗಳ ಕಾಟ ಶುರುವಾಗಿದೆ. ನಾವು ಪೋಲೀಸರು, ನಾವು ಪತ್ರಕರ್ತರು, ನಾವು ಅಧಿಕಾರಿಗಳು ಎಂದೆಲ್ಲಾ ಹೇಳಿಕೊಂಡು ನಾನಾ ಹೆಸರಿನಲ್ಲಿ ಅನಾಮಧೇಯ ಮೊಬೈಲ್ ಕರೆಗಳು ಬರುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂಬ ಆರೋಪ ಇರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಟಿ.ಜೆ. ಅಬ್ರಾಹಂ, ಪ್ರದೀಪ್ ಕುಮಾರ್ ಹಾಗೂ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಈ ಮೂವರೂ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರಿಗೆ ಕೆಲವು ದಾಖಲೆಗಳ ಸಮೇತ ದೂರನ್ನು ನೀಡಿದ್ದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ನೀಡಲು…

Read More

ಬೆಂಗಳೂರು : ಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ದಂಪತಿಗಳ ನಡುವೆ ಗಲಾಟೆ ನಡೆಯಲಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ನಡೆದಿದೆ. ಹೌದು ಕೊಲೆಯಾದ ಮಹಿಳೆಯನ್ನು ಕಾವ್ಯ (27) ಎಂದು ತಿಳಿದುಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಪತ್ನಿ ಕಾವ್ಯಳನ್ನು ಕೊಲೆ ಮಾಡಿ ಪತಿ ಶಿವಾನಂದ್ ಪರಾರಿಯಾಗಿದ್ದಾನೆ. ಕಾವ್ಯ ಪೋಷಕರ ದೂರಿನ ಅನ್ವಯ ಇದೀಗ ಶಿವಾನಂದ್ ನನ್ನ ಪೊಲೀಸರು ಬಂಧಿಸಿದ್ದಾರೆ. ತಿಂಗಳ ಹಿಂದೆ ಗಲಾಟೆ ಮಾಡಿ ಕಾವ್ಯ ತವರುಮನೆ ಸೇರಿದ್ದಳು. ಈ ವೇಳೆ ಶಿವಾನಂದ ವಾರದ ಹಿಂದೆ ಅಷ್ಟೇ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ. ಹಬ್ಬಕ್ಕೆ ಬಟ್ಟೆ ಕೊಡಿಸುತ್ತೇನೆ ಎಂದು ಕೊಡಿಸಿಲ್ಲ ಎಂದು ಕಾವ್ಯ ಗಲಾಟೆ ಮಾಡಿದ್ದಾಳೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪೆಟ್ರೋಲ್ ಸುರೋದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಘಟನೆ ಕುರಿತಂತೆ ದಾಬಸ್…

Read More

ಉತ್ತರಪ್ರದೇಶ : ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಪ್ರಕರಣ ಖಂಡಿಸಿ ದೇಶದ ತುಂಬೆಲ್ಲಾ ಪ್ರತಿಭಟನೆ ನಡೆಯುತ್ತಿದೆ.ಈ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಪ್ರದೇಶದಲ್ಲಿ ನೈಟ್ ಡ್ಯೂಟಿಯಲ್ಲಿದ್ದ ನರ್ಸ್ ಮೇಲೆ ವೈದ್ಯನಿಂದ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಹೌದು ನೈಟ್‌ ಡ್ಯೂಟಿಯಲ್ಲಿದ್ದ ಮಹಿಳಾ ನರ್ಸ್ ಮೇಲೆ ಡಾಕ್ಟರ್ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುರಾದಾಬಾದ್ ನಗರದಲ್ಲಿ ನಡೆದಿದೆ. ಘಟನೆ ಕುರಿತಂತೆ ಸಂತ್ರಸ್ತೆಯ ತಂದೆ ಹೇಳಿಕೆ ನೀಡಿದ್ದು, ಕೋಣೆಯಲ್ಲಿದ್ದ ಡಾಕ್ಟರ್ ಮಗಳ ಮೇಲೆ ಹಲ್ಲೆಗೈದು ಅತ್ಯಾಚಾರ ನಡೆಸಿದ್ದಾನೆ. ನಂತರ ಅವಾಚ್ಯ ಶಬ್ದಗಳಿಂದ ಮಗಳನ್ನು ನಿಂದಿಸಿದ್ದಾನೆ. ಈ ವೇಳೆ ಆಕೆಯ ಬಳಿಯಲ್ಲಿದ್ದ ಮೊಬೈಲ್ ಸಹ ಕಸಿದುಕೊಂಡಿದ್ದಾನೆ. ಮರುದಿನ ಬೆಳಗ್ಗೆ ಮುಖ್ಯ ನರ್ಸ್ ಬಂದಾಗ ಮಗಳನ್ನು ಹೊರಗೆ ಕಳುಹಿಸಲಾಗಿದೆ. ನಡೆದ ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿತ್ತು ಎಂದು ಸಂತ್ರಸ್ತೆ ತಂದೆ ಹೇಳಿಕೆ ನೀಡಿದ್ದಾರೆ. ಯುವತಿ ಮನೆಗೆ ಬರುತ್ತಿದ್ದಂತೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ನಂತರ ಪೋಷಕರ ಜೊತೆ…

Read More

ಚಿಕ್ಕಬಳ್ಳಾಪುರ : ತಂದೆಯ ಆಸೆಗಾಗಿ ಸಹೋದರರ ಮಧ್ಯ ಪಡೆದಾಟ ನಡೆದಿದ್ದು ಈ ವೇಳೆ ಅಣ್ಣನನ್ನೇ ತಮ್ಮ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಡುವಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಣ್ಣ ತಮ್ಮನ ಗಲಾಟೆಯಲ್ಲಿ ಅಣ್ಣ ನಂಜುಂಡಯ್ಯ (55) ಸಾವನ್ನಪ್ಪಿರುವ ವ್ಯಕ್ತಿ ಎಂದು ಹೇಳಲಾಗುತ್ತಿದೆ.ಆಸ್ತಿಗಾಗಿ ಅಣ್ಣ ನಂಜುಂಡಯ್ಯ ಹಾಗೂ ತಮ್ಮ ರಾಮಾಂಜಿನಪ್ಪ‌ ನಡುವೆ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದು ತಮ್ಮ ರಾಮಾಂಜಿನಪ್ಪ‌ ಹಾಗೂ ಮಕ್ಕಳು ಅಣ್ಣ ನಂಜುಂಡಯ್ಯನವರ ಮೇಲೆ ಕೋಲು, ದೊಣ್ಣೆಗಳಿಂದ ಹೊಡೆದು ಗಾಯಗೊಳಿಸಿದ್ದಾರೆ. ತೀವ್ರ ಗಾಯಗೊಂಡ ನಂಜುಂಡಯ್ಯ ಅವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಂಜುಂಡಯ್ಯ ಮೃತಪಟ್ಟಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರ ಗೌಡ ಜಾಮೀನು ಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯವು ಆಗಸ್ಟ್ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡುವರೆ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಇದ್ದಾರೆ. ಇಂದು ಜಾಮೀನಿಗಾಗಿ ಪವಿತ್ರ ಗೌಡ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆಗಸ್ಟ್ 22ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು.ವಿಚಾರಣೆಯ ಸಂದರ್ಭದಲ್ಲಿ ಸಿಸಿಹೆಚ್ 57 ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿತು. ಇದೆ ವೇಳೆ ಮತ್ತೊಬ್ಬ ಆರೋಪಿ ಅನು ಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾನೆ. ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ ನಲ್ಲಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು , ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದೆ. ಇದೀಗ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಒಬ್ಬನಿಗೆ ಪ್ರತಿಭಟನೆಯ ವೇಳೆ ಗಾಯವಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು. ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಕಾರ್ಯಕರ್ತರಿಗೆ ಮುಖಂಡರಿಗೆ ಸಲಹೆ ನೀಡಿದ್ದಾರೆ.…

Read More

ಬೆಳಗಾವಿ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಈ ಕುರಿತು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಸ್ಪೋಟಕ ಭವಿಷ್ಯ ನುಡಿದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಕಚೇರಿ ಉದ್ಘಾಟಿಸಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಎಲ್ಲ ದಾಖಲೆಗಳನ್ನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಮತ್ತು ಸಿದ್ದರಾಮಯ್ಯನವರೇ ಅಕ್ರಮದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟ. ನಾನು ಒಬ್ಬ ವಕೀಲನಾಗಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಭವಿಷ್ಯ ನುಡಿದರು. ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದಕ್ಕೆ ಬಹಳಷ್ಟು ಖುಷಿ ಪಡೋರು ಕಾಂಗ್ರೆಸ್ ನಾಯಕರೇ ಹೆಚ್ಚು. ನಾವು ಸಿದ್ದರಾಮಯ್ಯ ಹಿಂದೆ ಇದ್ದೇವೆ, ಅವರ ಹೋರಾಟಕ್ಕೆ ಬೆಂಬಲಿಸುತ್ತೇವೆ ಎನ್ನುವವರು, ಒಳಗೊಳಗೆ ಖುಷಿ ಪಡೋರು ಕಾಂಗ್ರೆಸ್ ನಾಯಕರು. ಅದರ ಪರಿಣಾಮ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ. ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ತುಷಾರ್ ಮೆಹ್ತಾ ಅವರು ನಾಳೆ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದಾಗ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಿದ ಮಾತ್ರಕ್ಕೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು. ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ತುಷಾರ್ ಮೆಹ್ತಾ ಅವರು ನಾಳೆ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದಾಗ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಿದ ಮಾತ್ರಕ್ಕೆ ಅವರ ವಾದ ಕೇಳಬೇಕಿಲ್ಲ ಎಂದು ಸಿಎಂ ಪರ…

Read More