Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಇತ್ತೀಚಿಗೆ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಗಾಂಜಾ, ಸಿಗರೇಟ್, ಗುಟ್ಕಾ ಹಾಗೂ ಎಣ್ಣೆ ಪಾರ್ಟಿ ಮಾಡುತ್ತಿರುವ ವಿಡಿಯೋ ಭಾರಿ ಸದ್ದು ಮಾಡಿತ್ತು. ಜೈಲಿನ ಮುಖ್ಯ ಅಧಿಕ್ಷಕಿ ಅನಿತಾ ಅವರು ಇದಕ್ಕೆಲ್ಲ ಬ್ರೇಕ್ ಹಾಕಿದಕ್ಕೆ ನನ್ನ ವಿರುದ್ಧ ಕೈದಿಗಳು ಪಿತೂರಿ ನಡೆಸಿದ್ದಾರೆ ಎಂದು ಅನಿತಾ ಕೂಡ ಆರೋಪಿಸಿದ್ದರು. ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕರ್ಮಕಾಂಡ ಕೂಡ ಬಯಲಾಗಿದೆ. ಹೌದು ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಗಳ ಐಷಾರಾಮಿ ಜೀವನ ಕೂಡ ಬಟಾ ಬಯಲಾಗಿದೆ. ಜೈಲಲ್ಲಿ ಇರುವ ಕೈದಿಗಳಿಗೆ ಗಾಂಜಾ, ಸಿಗರೇಟ್, ಬೀಡಿ ಸೇರಿದಂತೆ ಎಲ್ಲವೂ ಹೊರಗಿನಿಂದಲೇ ಸಪ್ಲೈ ಆಗುತ್ತಿದೆ. ಜೈಲಿನ ಸರ್ಕಲ್ ನಂಬರ್ 2ನೇ ಬ್ಯಾರಕ್ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಹಣ ಕೊಟ್ಟರೆ ಕೈದಿಗಳಿಗೆ ಇಪ್ಪತ್ತು ಸಾವಿರ ಬೆಲೆ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತಿದೆ. ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದಲೇ ಐಷಾರಾಮಿ ಜೀವನ ಅನಾವರಣವಾಗಿದೆ. ಜೈಲು ಅಧಿಕ ಕೃಷ್ಣಮೂರ್ತಿ.ಹಣ ಕೊಟ್ಟರೆ ಎಲ್ಲಾ ವ್ಯವಸ್ಥೆ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆನ್ನು ನೋವಿನ ಸಮಸ್ಯೆ ತಿಳಿಸಿ ನಟ ದರ್ಶನವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರ ಕಳೆದರೂ ಕೂಡ ಇದುವರೆಗೂ ದರ್ಶನ್ ಸರ್ಜರಿ ಮಾಡಿಸಿಲ್ಲ. ಹಾಗಾಗಿ ನಾಳೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಹೌದು ನಾಳೆ ಹೈ ಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸರ್ಜರಿ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರಗಳು ಕಳೆದರೂ ಕೂಡ ನಟ ದರ್ಶನವರು ಶಸ್ತ್ರಚಿಕಿತ್ಸೆ ಇದುವರೆಗೂ ಮಾಡಿಸಿಲ್ಲ. ಡಿಸೆಂಬರ್ 11ಕ್ಕೆ ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದೆ. ಹಾಗಾಗಿ ಮಧ್ಯಂತರ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ಹಿರಿಯ ವಕೀಲರಾದಂತಹ ಸಿವಿ ನಾಗೇಶ್ ಅವರು, ಸುಧೀರ್ಘವಾದ ಅಂತಹ ವಾದ ಮಂಡನೆ ಮಾಡಿದ್ದರು. ಬಳಿಕ ಸರ್ಕಾರದ…
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಅಕ್ಕಿ ಕಡಿಮೆ ಮಾಡಲ್ಲ ಎಂದು ತಿಳಿಸಿದರು. ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ. ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ…
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಬಿಟ್ಟು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡುತ್ತಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಡುತ್ತಾರಾ? ಬಿಜೆಪಿ 10 ಕೆಜಿ ಅಕ್ಕಿ ಕೊಡ್ದಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದಾರೆ ಎಂದು…
ಬೆಂಗಳೂರು : ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ, ಇದರ ಬೆನ್ನಲ್ಲೇ ಮುಂದಿನ ಎರಡು ವಾರಗಳ ಕಾಲ ಮಂಗಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2 ನೇ ವಾಯುಭಾರ ಕುಸಿತ ಡಿಸೆಂಬರ್ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದಾರೆ.ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು. ಈ ಫೆಂಗಲ್ ಚಂಡಮಾರುತದ ಹಾನಿಯಿಂದ…
ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ. ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50…
ಹುಬ್ಬಳ್ಳಿ : ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವು ಬೆಳಕಿಗೆ ಬಂದಿದೆ. ಇದೀಗ ಈ ಎಲ್ಲಾ ಬಾಣಂತಿಯರ ಸಾವಿಗೆ ಅಂದಿನ ಸಿಎಂ ಹಾಗೂ ಆರೋಗ್ಯ ಸಚಿವರೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ, ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುತ್ತೇವೆ. ಬಿಜೆಪಿಗರು ಕೋವಿಡ್ ವೇಳೆ ಔಷಧಿಯನ್ನು ಖರೀದಿಸಿದ್ದಾರೆ. ಅಲ್ಲದೆ ಒಂದಕ್ಕೆ ಹತ್ತು ಪಟ್ಟು ದುಡ್ಡು ಕೊಟ್ಟು ಖರೀದಿಸಿದ್ದಾರೆ. ಟೆಂಡರ್ ಕರೆಯದೆ ಔಷಧ ಖರೀದಿ ಮಾಡಿದ್ದಾರೆ. ಅಂದಿನ ಸಿಎಂ ಮತ್ತು ಆರೋಗ್ಯ ಸಚಿವರು ಇದಕ್ಕೆ ಹೊಣೆ ಎಂದು ವಾಗ್ದಾಳಿ ನಡೆಸಿದರು. ಕಳಪೆ ಔಷಧಿ ಕೊಟ್ಟ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಳಪೆ ಔಷಧ ನೀಡಿದಂತಹ ಕಂಪನಿ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಹೇಳಿದ್ದೇನೆ. ಡ್ರಗ್ ಕಂಟ್ರೋಲರ್ ಅವರನ್ನು…
ಹುಬ್ಬಳ್ಳಿ : ಪ್ರಸ್ತುತ ರಾಜ್ಯದಲ್ಲಿ ಯಾವುದೇ ರೀತಿಯಾಗಿ ಆರ್ಥಿಕ ಸಂಕಷ್ಟ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಲೇ ಬಂದಿದೆ. ಗ್ಯಾರೆಂಟಿ ಯೋಜನೆಗಳು ಕುರಿತು ಸುಳ್ಳು ಅಪಪ್ರಚಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ. ಆದರೆ ಬೇರೇ ರಾಜ್ಯಗಳಲ್ಲಿ ಬಿಜೆಪಿಯವರು ಗ್ಯಾರಂಟಿ ಘೋಷಿಸುತ್ತಾರೆ. ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇದು ಇಬ್ಬಗೆ ನೀತಿ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ ಬರಿ ಸುಳ್ಳು ಅಪಪ್ರಚಾರ ಮಾಡುತ್ತಾರೆ. ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ. ಯಾವ ಕೆಲಸ ದುಡ್ಡಿಲ್ಲದೆ ನಿಂತಿದೆ ಸಾಬೀತು ಮಾಡಲಿ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.ಅಧಿವೇಶನ ಎರಡು ವಾರ ನಡೆಯಬೇಕು ಅಂತ ನಮ್ಮ ಉದ್ದೇಶ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಆದರೆ ವಿಪಕ್ಷ ಹೇಗೆ ಸಹಕಾರ ನೀಡುತ್ತದೆ ಅಂತ…
ಉತ್ತರಕನ್ನಡ : ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಪ್ರವಾಸದ ಬಸ್ ಒಂದು ಪಲ್ಟಿಯಾಗಿದ್ದ ಪರಿಣಾಮ ಬಸ್ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ್ ಗುಡಿ ಬಳಿ ನಡೆದಿದೆ. ಹೌದು ಗಣೇಶ್ ಗುಡಿ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 50 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳಿಗೆ ಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ್ ಗುಡಿಯ ಬಳಿ ಈ ಒಂದು ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಜೋವಿಡಾ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ತಾಲೂಕಿನ ಸೇಂಟ್ ಅಂತೋನಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಸೇಂಟ್ ಅಂತೋನಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಆಗಮಿಸಿದ್ದರು.3 ಖಾಸಗಿ ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಮೌಲಂಗಿ ಬಳಿಯ ಹೋಂ ಸ್ಟೇನಲ್ಲಿ ವಿದ್ಯಾರ್ಥಿಗಳು ತಂಗಿದ್ದರು. ಬೆಳಿಗ್ಗೆ ಜಲಸಾಹಸ ಕ್ರೀಡೆ…
ದಾವಣಗೆರೆ : ಬಿಜೆಪಿಯ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ನಿನ್ನೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯಕ್ಕೆ ಭೇಟಿ ನೀಡಿ, ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಮುಂದುವರೆಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕ ಯತ್ನಾಳ್ಗೆ ತಿರುಗೇಟು ನೀಡಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ. ಜವಾಬ್ದಾರಿಯಿಂದ ಆ ಸ್ಥಾನವನ್ನು ನಿರ್ವಹಣೆ ಮಾಡುತ್ತಿದ್ದೇನೆ. ಅವರಿಗೆ ಹೋರಾಟ ಮಾಡಬೇಡಿ ಎಂದು ನಾವು ಯಾವತ್ತಿಗೂ ಹೇಳಿಲ್ಲ ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಅವರ ಅನುಮಾನಗಳಿಗೆ ಆಸೆಗಳಿಗೆ ಕಾಲವೇ ಉತ್ತರಿಸುತ್ತದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಒಳ್ಳೆಯದಾಗಲಿ ಎಂದರು. ಅಧಿವೇಶನದಲ್ಲಿ ಸರ್ಕಾರದ ಹಗರಣ ಹೊರೆಗಳಿರುತ್ತೇವೆ. ಅಭಿವೃದ್ಧಿಗಾಗಿ ಸರ್ಕಾರದ ಕಿವಿ ಹಣ್ಣುವ ಕೆಲಸ ಮಾಡುತ್ತೇವೆ. ಯಾವುದೇ ಅಭಿವೃದ್ಧಿ ಇಲ್ಲದೆ ರಾಜ್ಯದ ಜನರು…










