Author: kannadanewsnow05

ನವದೆಹಲಿ : ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್‌ ವಿನೇಶ್ ಫೋಗಟ್ ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ ಪಡೆದಿದ್ದಾರೆ. ಏನಿದು ಅನರ್ಹತೆಗೊಂಡರು ಸಹ ಚಿನ್ನದ ಪದಕ ಹೇಗೆ ಸಿಕ್ತು ಅಂತ ನೀವು ಒಂದು ಕ್ಷಣ ಶಾಕ್ ಗೆ ಒಳಗಾಗಿರಬಹುದು. ಆದರೆ ಚಿನ್ನದ ಪದಕ ಸಿಕ್ಕಿದ್ದು ಸತ್ಯ ಹೇಗೆ ಅಂತತಿಳ್ಕೊಬೇಕಾ ಪೂರ್ತಿ ಓದಿ. ಶನಿವಾರ ಭಾರತಕ್ಕೆ ಮರಳಿದ ಫೋಗಟ್‌ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿತು. ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಈ ವೇಳೆ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು. ರೋಡ್‌ಶೋನಲ್ಲಿ ದೊಡ್ಡ ಗುಂಪು ಅವಳನ್ನು ಹಿಂಬಾಲಿಸಿತು. ದೆಹಲಿಯಿಂದ ಬಾಳಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನ ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ ತೆಗೆದುಕೊಂಡಿತು. ಬಳಿಕ ಅವರ ಹುಟ್ಟೂರು…

Read More

ಬೆಂಗಳೂರು : ಮಹಿಳೆ ಹಾಗೂ ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯ ಪೊಲೀಸರು ಇಬ್ಬರು ರೌಡಿಶೀಟರ್ ಗಳು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ರೌಡಿ ಶೀಟರ್ ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿಶೀಟರ್ ಗಳಾದ ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನ, ಸೌಮ್ಯ, ಪ್ರತಾಪ್, ಜತಿನ್ ವಿಜ್ಞೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶನನ್ನು ಚಂದ್ರ ಲೇಔಟ್ ಠಾಣೆಯ ಪೊಲೀಸರು ಇದೀಗ ಬಂಧಿಸಿದ್ದಾರೆ. ಕಳ್ಳತನ ಪ್ರಕರಣದಲ್ಲಿ ತಾಯಿ ಮಗ ಬಂಧಿಯಾಗಿದ್ದರು. ಈ ಬಗ್ಗೆ ತಿಳಿದುಕೊಂಡು ಗೊತ್ತಿದ್ದವರಿಂದಲೇ ತಾಯಿ ಮಗನನ್ನು ಅಪಹರಿಸಲಾಗಿದೆ.ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ ಮಗನಿಗೆ ಬೆದರಿಕೆ ಹಾಕಿದ್ದಾರೆ. ಹಣ ನೀಡದಿದ್ದರಿಂದ ಈ ವೇಳೆ ಆರೋಪಿಗಳು ತಾಯಿ ಮಗನನ್ನು ಅಪಹರಿಸಿದ್ದಾರೆ. ಆಗಸ್ಟ್ 13ರಂದು ರೌಡಿಶೀಟರ್ ಗಳು ತಾಯಿ ಮಗನನ್ನು ಅಪಹರಿಸಿದ್ದಾರೆ. ಇಬ್ಬರನ್ನು ಪರಿಚಯಸ್ಥ ಪ್ರತಾಪ್ ಎನ್ನುವವರ…

Read More

ಕೊಪ್ಪಳ : ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ನ ಗೇಟ್ ತಾತ್ಕಾಲಿಕ ಅಳವಡಿಕೆ ಯಶಸ್ವೀಯಾದ ಹಿನ್ನೆಲೆಯಲ್ಲಿ, ಗೇಟ್ ಅಳವಡಿಕೆಗೆ ಹಗಲಿರುಳು ಶ್ರಮಿಸಿದ ಸಿಬ್ಬಂದಿಗಳಿಗೆ ಡ್ಯಾಂ ಆವರಣದಲ್ಲಿ ಶಾಸಕ ಗಣೇಶ್ ಸನ್ಮಾನಿಸಿದರು. ಹೌದು ತುಂಗಭದ್ರಾ ಡ್ಯಾಮ್ ನ 19ನೇ ಕ್ರಸ್ಟ್ ಗೇಟ್ ನೀರಿನ ರಭಸದಿಂದ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರು ತುಂಗಭದ್ರ ಡ್ಯಾಮ್ ನಿಂದ ಹರಿದು ಹೋಗಿತ್ತು. ಈ ವೇಳೆ ಕಳೆದ ಕೆಲವು ದಿನಗಳಿಂದ ನಿರಂತರ ಶ್ರಮದಿಂದ ಒಟ್ಟು 5 ಎಲಿಮೆಂಟ್  ಯಶಸ್ವಿಯಾಗಿ ಎಲ್ಲ ಸಿಬ್ಬಂದಿಗಳು ಅಳವಡಿಸಿದ್ದಾರೆ. ಹಾಗಾಗಿ ಟಿಬಿ ಡ್ಯಾಂನ ಆವರಣದಲ್ಲಿ ಎಲ್ಲ ಸಿಬ್ಬಂದಿಗಳಿಗೆ ಶಾಸಕ ಗಣೇಶ್ ಅವರಿಂದ ಸನ್ಮಾನಿಸಲಾಯಿತು. ಶಾಸಕ ಗಣೇಶ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಅಲ್ಲದೆ ಕೊಟ್ಟ ಮಾತಿನಂತೆ ಕಾರ್ಮಿಕರಿಗೆ ತರ ತಲಾ 50000 ಬಹುಮಾನ ನೀಡಲಾಯಿತು. ಕವರ್ ನಲ್ಲಿ ಹಣವಿಟ್ಟು ಸಚಿವ ಜಮೀರ್ ಅಹ್ಮದ್ ಕಾರ್ಮಿಕರಿಗೆ ಬಹುಮಾನ ವಿತರಿಸಿದರು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜಮೀರ್ ಸೂಚನೆ ಮೇರೆಗೆ ಶಾಸಕ ಗಣೇಶನ…

Read More

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಅತ್ಯಾಚಾರವೆಸಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ನಡೆದಿದೆ. 10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಫೋಟೋಗಳನ್ನು ಬಾಲಕಿಯು ಓದುತ್ತಿರುವ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದ ಎನ್ನಲಾಗಿದೆ.ಅಲ್ಲದೆ, ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದುಕೊಂಡು, ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು,…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಸಿಎಂ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ಜೊತೆಗೂಡಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡಲಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಂದು ಜೆಪಿ ಭವನದಲ್ಲಿ ಸಭೆಯ ಬಳಿಕ ಮಾತನಾಡಿದ ಅವರು, ಮುಡಾ ಹಗರಣ ವಿಚಾರದಲ್ಲಿ ಸಿಎಂ ಯಾವ ರೀತಿ ನಡೆದುಕೊಂಡಿದ್ದಾರೆ ಎಂದು ನೋಡಿದ್ದೇವೆ. ಸದನದಲ್ಲಿ ಸಭಾಧ್ಯಕ್ಷರ ರಕ್ಷಣೆ ಪಡೆದು ಪಲಾಯನ ಮಾಡಿದ್ದಾರೆ. ಇದರ ವಿರುದ್ಧ ನಾವು ಪಾದಯಾತ್ರೆ ಮಾಡಿದ್ದೇವೆ. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಸಿಎಂ ಸುಳ್ಳು ದಾಖಲೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ನಮಗೆ ಹಕ್ಕಿದೆ. ಸಿಎಂ ರಾಜ್ಯದ ಜನತೆಗೆ ಉತ್ತರ ನೀಡಬೇಕು ಎಂದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್​ಗೆ ಟಿಕೆಟ್ ಸಿಕ್ಕಿದರೆ ಸ್ಪರ್ಧಿಸೋಣ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದೆ. ನನಗೆ ಶಾಸಕನಾಗಬೇಕೆಂಬ ಹಪಹಪಿ ಇಲ್ಲ. ಈ ಬಗ್ಗೆ ಬಿಜೆಪಿ-ಜೆಡಿಎಸ್ ಹೈಕಮಾಂಡ್ ನಾಯಕರು ಚರ್ಚಿಸಿ ತೀರ್ಮಾನ ಮಾಡುತ್ತಾರೆ.ಪಕ್ಷದ ಬಲವರ್ಧನೆಗೆ ಇಂದು ಸಭೆ ಮಾಡಿದ್ದೇವೆ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ವಯಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇದೇ ಆಗಸ್ಟ್ 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೌದು ಆಗಸ್ಟ್ 23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಳಿದ್ದು, ಪ್ರಾಸಿಕ್ಯೂಷನ್ ವಿಚಾರವಾಗಿ ವರಿಷ್ಟರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಅಲ್ಲದೆ ಪ್ರಸಕ್ತ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರನ್ನು ಭೇಟಿ ಮಾಡಲು ಪ್ಲಾನ್ ಮಾಡಿದ್ದಾರೆ. ಸದ್ಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಹಾಗಾಗಿ ಕಾರ್ಯಕರ್ತರಿಂದ ಹಿಡಿದುಕೊಂಡು ಹೈಕಮಾಂಡ್, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೂ ಮುಂಚೆ ಆಗಸ್ಟ್ 22ರಂದು CLP ಮೀಟಿಂಗ್ ನಡೆಸಲಿದ್ದಾರೆ. ಪ್ರತಿ ಹಂತದಲ್ಲೂ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಕೇಂದ್ರ ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ಪ್ರಿಯಾಂಕ್ ಖರ್ಗೆ ಐಟಿ, ಇಡಿ ಬಂದಾಗ ಬಿಜೆಪಿಗೆ ಬಹಳ ಖುಷಿಯಾಗುತ್ತದೆ. ಯಾವಾಗ ಆಪರೇಷನ್ ಕಮಲ ವಿಫಲ ಆಗುತ್ತೋ ಐಟಿ ದಾಳಿಯೂ ವಿಫಲ ಆಗುತ್ತೆ. ನಂತರ ರಾಜ್ಯಕ್ಕೆ ಇಡಿ ಬರುತ್ತದೆ ಎಂದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ನೆಲ ಕಚ್ಚಿದೆ, ನಾಯಕತ್ವ ದುರ್ಬಲವಾಗಿದೆಯೋ ಅಂತಹ ರಾಜ್ಯಗಳಲ್ಲಿ ಸಿಬಿಐ, ಇಡಿ, ಐಟಿ, ರಾಜ್ಯಪಾಲರನ್ನು ಬಳಕೆ ಮಾಡಲಾಗುತ್ತಿದೆ. ರಾಜ್ಯಪಾಲರು ಸಂವಿಧಾನ ರಕ್ಷಣೆ ಮಾಡುವ ಸ್ಥಾನದಲ್ಲಿದ್ದಾರೆ. ನಿಮ್ಮಿಂದ ಅದು ಕಗ್ಗೊಲೆ ಆಗುವುದು ಬೇಡ. ಸಾಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡಬೇಡಿ. ಬಿಜೆಪಿಯ ಕಾರ್ಯಕರ್ತರಾಗಬೇಡಿ ಎಂದರು. ಇದು ದ್ವೇಷದ ರಾಜಕಾರಣ. ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಮೂಲಕ ನಾವು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿದ್ದೆವು. ಕಳೆದ ಸದನದಲ್ಲಿ ಒಂದು ದೇಶ ಒಂದು ಚುನಾವಣೆ ವಿರುದ್ಧ ನಿರ್ಣಯ ಕೈಗೊಂಡಿದ್ದೆವು. ಬರ ಪರಿಹಾರಕ್ಕಾಗಿ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಹಿಳೆಯರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದರು. ಪಿರಿಯಾಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಇದೀಗ ಮುಂದುವರೆದಿದೆ.ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಅಲ್ಲದೆ ಟೈರಿಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರು ರಸ್ತೆ ತಡೆ ಮಾಡಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮೊದಲು ಆಟೋದಲ್ಲಿ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ಕರೆದೊಯ್ದ ವ್ಯಕ್ತಿಯೇ ಯುವತಿಯನ್ನು ನಿರ್ಜನ ಪ್ರದೇಶದ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು, ಈ ಘಟನೆ ನಿನ್ನೆ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಡೆದಿದೆ. ರಾತ್ರಿ ವೇಳೆ ವಾಪಸ್ ರೂಮಿಗೆ ಹೋಗುವಾಗ ಯುವತಿ ಸ್ನೇಹಿತನ ಕಾರನ್ನ ತಾನೇ ಓಡಿಸೋದಾಗಿ ಹೇಳಿ ಕಾರು ಚಾಲನೆ ಮಾಡಿದ್ದಾಳೆ. ಆದರೆ, ಕಾರನ್ನು ಸರಿಯಾಗಿ ಓಡಿಸಲು ಬರದೇ ಮೂರು ಆಟೋಗಳಿಗೆ ಟಚ್ ಮಾಡಿದ್ದಾಳೆ. ಆಟೋ ಚಾಲಕರು ಯುವತಿ ಮೇಲೆ ಗಲಾಟೆ ಮಾಡಲು ಮುಂದಾಗುದ್ದಾರೆ. ಆಗ ಯುವತಿ ಭಯದಿಂದ ಪೊಲೀಸರ ಸಹಾಯವಾಣಿ 112ಗೆ ಕರೆ ಮಾಡಿದ್ದಾಳೆ ಎಂದು ತಿಳಿಸಿದರು. ಈ ವೇಳೆ ಪೊಲೀಸರು ಸ್ಥಳಕ್ಕೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರು ನಾಳೆ ಸೋಮವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ವಕೀಲರು ಹಾಗೂ ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದು, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ನೇತೃತ್ವದಲ್ಲಿ ಈ ಒಂದು ಸಮಾಲೋಚನೆ ಸಭೆ ನಡೆದಿದ್ದು ಸಭೆಯಲ್ಲಿ ಹೈಕೋರ್ಟ್ ಮೆಟ್ಟಿಲೆರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ. ಸಿದ್ದರಾಮಯ್ಯ ಅವರಿಗೆ ಪ್ರಾಜಿಕ್ಯೂಷನ್ ಗೆ ಅನುಮತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹಾಗಾಗಿ ನಾಳೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದು ವಕೀಲರಾದ ಅಭಿಷೇಕ್ ಮನು ಸಿಂಫ್ವಿ ಹಾಗೂ ಕಪಿಲ್ ಸಿಬಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹಾಗಾಗಿ ಸಿಎಂ ಪರ ಅಭಿಷೇಕ್ ಮನು ಸಿಂಫ್ವಿ ಹಾಗೂ ಕಪಿಲ್ ಸಿಬಲ್ ಅರ್ಜಿ ಸಲ್ಲಿಸಲಿದ್ದಾರೆ. ಹಾಗಾಗಿ ನಾಳೆ ಬೆಳಿಗ್ಗೆ…

Read More