Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಕಾರವಾರದ ಕೋಡಿ ನದಿ ಬಳಿ ಸುತ್ತಮುತ್ತಲು ಕಳೆದ ಐದು ದಿನಗಳಿಂದ ರಣ ಹದ್ದು ಒಂದು ಹಾರಾಡುತ್ತಿದೆ. ಸುಮ್ಮನೆ ಹಾರಾಡುತ್ತಿದ್ದರೆ ಯಾರು ಭಯಪಡುವ ಅಗತ್ಯವಿಲ್ಲ. ಆದರೆ ರಣಹದ್ದಿಗೆ ಜಿಪಿಎಸ್ ಟ್ರಾನ್ಸ್ಮಿಟರ್ ಹಾಗೂ ಟ್ಯಾಗ್ ಅಳವಡಿಕೆಯಾಗಿದ್ದು ಸಹಜವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಹೌದು ಜಿಪಿಎಸ್ ಟ್ರಾನ್ಸ್ಮಿಟರ್ ಟ್ಯಾಗ್ ಹೊಂದಿದ್ದ ರಣಹದ್ದು ಕೊಡಿ ನದಿ ಸುತ್ತ ಹಾರಾಡಿದೆ. ಕಳೆದ ಐದು ದಿನಗಳಿಂದ ಟ್ಯಾಗ್ ಇದ್ದ ರಣಹದ್ದು ಹಾರಾಡುತ್ತಿದೆ. ರಣಹದ್ದಿನ ಮೇಲಿನ ಟ್ಯಾಗ್ ನೋಡಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶತ್ರುದೇಶ ಅಥವಾ ಉಗ್ರಸಂಘಟನೆಗಳ ಹದ್ದು ಎಂದು ಮಾಹಿತಿ ತಿಳಿದು ವಿವಿಧ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಸ್ಥಳಕ್ಕೆ ಬಂದ ರಾಜ್ಯ ಮತ್ತು ಕೇಂದ್ರ ಗುಪ್ತಚರ ಅಧಿಕಾರಿಗಳು ಬಂದಿದ್ದಾರೆ. ಅಸಲಿ ಸತ್ಯನೇ ಬೇರೆ ರಣಹದ್ದು ಟ್ಯಾಗ್ ಹಾಗೂ ಜಿಪಿಎಸ್ ಅಳವಡಿಕೆಯಿಂದ ಕಾರವಾರದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಪರಿಶೀಲನೆ ವೇಳೆ ಟ್ರಾನ್ಸ್ಮಿಟರ್ ಮೇಲಿನ ಮಾಹಿತಿ ಬಹಿರಂಗವಾಗಿದೆ. Mahaforest.gov.in ಎಂದು ಟ್ರಾನ್ಸ್ ಮೀಟರ್ ಮೇಲೆ ಬರೆದಿದೆ. ಸಂಶೋಧನೆಗಾಗಿ ಈ ಒಂದು…
ಮಂಗಳೂರು : ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಹಾಕಿಸಿಕೊಳ್ಳುವ ಸಂದರ್ಭದಲ್ಲಿ ಅಲ್ಲಿ ಕೆಲವು ಚಿಹ್ನೆಗಳನ್ನು ನಾವು ನೋಡುತ್ತೇವೆ. ಮೊಬೈಲ್ ಆನ್ ಮಾಡಬಾರದು, ಸಿಗರೇಟ್ ಸೇದಬಾರದು ಹಾಗೂ ಇನ್ನು ಹಲವು ಚಿಹ್ನೆಗಳನ್ನ ನೋಡಿರುತ್ತೇವೆ. ಅವೆಲ್ಲ ಮುನ್ನೆಚ್ಚರಿಕೆ ಕ್ರಮವಾಗಿ ಹಾಕಿರುತ್ತಾರೆ. ಇದೀಗ ಮಂಗಳೂರಿನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುತ್ತಿರುವಾಗಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಹೌದು ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 ಕಾರೊಂದು ಹೊತ್ತಿ ಉರಿದಿದೆ. ಮಂಗಳೂರಿನ ಲೇಡಿ ಹಿಲ್ ನ ಪೆಟ್ರೋಲ್ ಬಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ. ಪೆಟ್ರೋಲ್ ಹಾಕಿಸುತ್ತಿದ್ದ ಸಂದರ್ಭದಲ್ಲಿ ಮಾರುತಿ 800 ಕಾರ್ ಒಂದು ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ತಕ್ಷಣ ಹೊರಬಂದು ಬಚಾವ್ ಆಗಿದ್ದಾನೆ. ಪಾರ್ಶ್ವನಾಥ ಎನ್ನುವವರಿಗೆ ಮಾರುತಿ 800 ಕಾರು ಸೇರಿದೆ. ಕೂಡಲೇ ಪೆಟ್ರೋಲ್ ಬಂಕ್ ಸಿಬ್ಬಂದಿ ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸೈಟ್ ನೋಂದಣಿಗೆ ಚೆಕ್ ಮೂಲಕ ಹಣ ಕೊಟ್ಟಿದ್ದಾರ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾನ ಪತ್ರ ಮಾಡೋಕೆ ನನ್ನ ಭಾಮೈದ ನೋಂದಣಿ ಶುಲ್ಕ ಪಾವತಿಸಿದ್ದ.ತಹಶೀಲ್ದಾರ್ ಉಪ ವಿಭಾಗಾಧಿಕಾರಿ ಯಾಕೆ ಶುಲ್ಕ ಪಾವತಿಸುತ್ತಾರೆ ಸುಮ್ಮನೆ ಏನೋ ಹೇಳುತ್ತಾರೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಸ್ನೇಹಮಯಿ ಕೃಷ್ಣ ಆರೋಪವೇನು? ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಬೀರಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ…
ಮಂಗಳೂರು : ಇತ್ತೀಚಿಗೆ ಗದಗದಲ್ಲಿ ಮೂರು ಮಕ್ಕಳನ್ನು ನದಿಗೆ ತಳ್ಳಿ ತಂದೆಯೊಬ್ಬ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಅಂತದ್ದೇ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಗುವಿನ ಜೊತೆ ಫಲ್ಗುಣಿ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ತಂದೆ ಹಾಗೂ ಎರಡು ವರ್ಷದ ಮಗುವನ್ನು ರಕ್ಷಣೆ ಮಾಡದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಗುರುಪುರ ಎಂಬಲ್ಲಿ ಒಂದು ಘಟನೆ ನಡೆದಿದೆ. ಹೌದು ಮಗುವಿನ ಜೊತೆಗೆ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಗಳೂರು ಹೊರವಲಯದ ಗುರುಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹಾರುವ ಮೊದಲೇ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಕೈಕಂಬ ನಿವಾಸಿ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಎರಡು ವರ್ಷದ ಮಗುವಿನ ಜೊತೆಗೆ ಹಾರಲು ಯತ್ನಿಸಿದ್ದಾನೆ.ಕೂಡಲೇ ಸ್ಥಳೀಯರು ನೋಡಿ ತಂದೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ. ತಂದೆ ಹಾಗೂ ಮಗನು ರಕ್ಷಿಸಿದ ಸ್ಥಳೀಯರು, ಬಳಿಕ ಸಂದೀಪ್ ಗೆ ಬುದ್ಧಿವಾದ ಹೇಳಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ತೀರ್ಪು ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ. ಹೌದು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಮನವಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ವಸತಿ ಮತ್ತು ವಕ್ಫ್ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಇದು ನಿಮ್ಮೆಲ್ಲರ ಮುಂದೆ ರಾಜಕೀಯ ತೀರ್ಪು ಎಂದು ಬಹಿರಂಗವಾಗಿ ಕರೆದಿದ್ದಾರೆ ಎಂದು ಅಬ್ರಾಹಂ ತಿಳಿಸಿದ್ದರು. ಅಬ್ರಾಹಂ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದು, ಮುಂದಿನ…
ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಸ್ಟೀಲ್ ಕಂಪನಿಯ ಹಣ ಬರುತ್ತಿದೆಯಾ ಎನ್ನುವುದರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚೆಲುವರಾಯಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಾಗಿ ಸ್ಟೀಲ್ ಕಂಪನಿಯ ಜೊತೆಗೆ ಯಾವ ಸಂಬಂಧ ಬೆಳೆಸುತ್ತಿದ್ದಾರೆ ಎಂದು ಎಲ್ಲವೂ ನಮಗೂ ಗೊತ್ತಿದೆ. ಉಪಚುನಾವಣೆಗಾಗಿ ಫಂಡ್ ಹೇಗೆ ಕಲೆಕ್ಟ್ ಮಾಡುತ್ತಾರೆ ಅನ್ನೋದು ಗೊತ್ತು. ಒಬ್ಬರ ಬಗ್ಗೆ ಕುಮಾರಸ್ವಾಮಿ ಲಘುವಾಗಿ ಮಾತನಾಡುವುದನ್ನು ಬಿಡಬೇಕು. ಎಚ್ ಡಿ ಕುಮಾರಸ್ವಾಮಿ ಬಗ್ಗೆಯೂ ಎಲ್ಲವೂ ಗೊತ್ತಿದೆ.ಆ ಬಗ್ಗೆ ನಾವು ಮಾತನಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ಆಕ್ರೋಶ ಅವರ ಹಾಕಿದರು.
ಶಿವಮೊಗ್ಗ : ಮದ್ಯದ ಅಮಲಿನಲ್ಲಿ ವೈದ್ಯನೊಬ್ಬ ಕಾರನ್ನು ಚಲಾಯಿಸುತ್ತಿರುವ ವೇಳೆ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹಡೆದ ರಭಸಕ್ಕೆ ಬೈಕ್ ಮೇಲೆ ಚಲಿಸುತ್ತಿದ್ದ ತಾಯಿ ಹಾಗೂ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು ಮದ್ಯದ ಅಮಲಿನಲ್ಲಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಸವಿ ಬೇಕರಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಾಯಿ ಉಮಾ ಹಾಗೂ ಮಗ ಶ್ರೇಯಸ್ಗೆ ಗಂಭೀರವಾದ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳದಿಂದ 200 ಮೀಟರ್ ದೂರ ಹೋಗಿ ತಾಯಿ ಹಾಗೂ ಮಗ ಬಿದ್ದಿದ್ದರು. ಸ್ಕೋಡಾ ಕಾರಿನಲ್ಲಿ ಡಾ. ಅಲ್ವಿನ್ ಅಂಥೋನಿ ಬರುವಾಗ ಈ ಒಂದು ಅಪಘಾತ ನಡೆದಿದೆ. ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್ ನಿಂದ ವೈದ್ಯ ಅಲ್ವಿನ್ ಹೊರಬಂದಿದ್ದರು. ಸವಿ ಬೇಕರಿ ಎದರು ಅಪಘಾತ ವೆಸಗಿ ಡಾ.…
ದಾವಣಗೆರೆ : ಸದ್ಯ ಕರ್ನಾಟಕದಲ್ಲಿ ಒಂದು ಕಡೆ ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆ ಪ್ರಚಾರ ಬಲು ಜೋರಾಗಿದ್ದು ಮತ್ತೊಂದು ಕಡೆ ವಕ್ಫ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಂದೂ ಮಠಗಳು ಆಯ್ತು ಸರ್ಕಾರಿ ಶಾಲೆಗಳು ಆಯ್ತು, ಸರ್ಕಾರಿ ಕಚೇರಿಗಳು ಸಹ ಆಯ್ತು ಇದೀಗ ದಾವಣಗೆರೆಯಲ್ಲಿ ಗೋಮಾಳದ ಜಾಗದ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ಹೌದು ದಾವಣಗೆರೆ ಜಿಲ್ಲೆಯಲ್ಲಿ ಗೋಮಾಳ ಜಾಗದ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ವಕ್ಫ್ ಬೋರ್ಡ್ ವಿರುದ್ಧ ನೀಲನಹಳ್ಳಿ ಗ್ರಾಮಸ್ಥರು ಇದೀಗ ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ತಾಲೂಕಿನ ನೀಲನಹಳ್ಳಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. 2020 ರ ಜನವರಿ 27 ರಂದು ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ದಾವಣಗೆರೆಯ ಎಸಿ ಆದೇಶ ಹಿನ್ನೆಲೆಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ಹಾಗಾಗಿ ಈ ಕುರಿತು ಸೂಕ್ತವಾದಂತಹ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನೊಂದೆಡೆ ಈ ಒಂದು ವಕ್ಫ್ ವಿವಾದದಿಂದ ಸಚಿವ ಜಮೀರ್ ಅಹ್ಮದ್ ಮುಜುಗರಕ್ಕೆ ಒಳಗಾಗಿದ್ದು…
ಮಂಗಳೂರು : ತಳ್ಳುಗಾಡಿಯ ಮೇಲೆ ವ್ಯಾಪಾರಿ ಒಬ್ಬರು ತರಕಾರಿ ಮಾರಾಟ ಮಾಡುತ್ತಿದ್ದರು. ಈ ವೇಳೆ ನೀರು ಚುಮುಕಿಸುವ ನೆಪದಲ್ಲಿ ತರಕಾರಿ ಮೇಲೆ ಉಗುಳಿರುವ ಘಟನೆ ಮಂಗಳೂರು ಜಿಲ್ಲೆಯ ಕಾರವಾರದ ಸಂಡೆ ಮಾರ್ಕೆಟ್ ನಲ್ಲಿ ಈ ಒಂದು ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ. ಹೌದು ತರಕಾರಿ ಮೇಲೆ ಉಗುಳುತ್ತಿರುವ ದೃಶ್ಯ ಇದೀಗ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಾರವಾರದ ಸಂಡೆ ಮಾರ್ಕೆಟ್ ನಲ್ಲಿ ಈ ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಅಬ್ದುಲ್ ಹಸನ್ ಸಾಬ್ ರಜಾಕ್ ವಿರುದ್ಧ ಈ ಒಂದು ಆರೋಪ ಕೇಳಿಬಂದಿದೆ. ತರಕಾರಿ ಮೇಲೆ ನೀರು ಹಾಕುತ್ತಾ ತರಕಾರಿ ವ್ಯಾಪಾರಿ ಉಗುಳಿದಿರುವ ಆರೋಪ ಕೇಳಿ ಬಂದಿದೆ. ಮೊಬೈಲ್ ನಲ್ಲಿ ಸ್ಥಳೀಯರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಹಲಾಲ್ ಮಾಡುತ್ತಿದ್ದೀಯ ಎಂದು ಆರೋಪಿಸಿದ್ದಾರೆ. ತರಕಾರಿ ವ್ಯಾಪಾರಿಯ ಈ ಒಂದು ನಡೆಯಗೆ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ, ಮುಡಾ ಹಾಗೂ ವಕ್ಫ್ ವಿವಾದದಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಇದರ ಬೆನ್ನಲ್ಲೇ ಗೃಹ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಬೆಂಗಳೂರಿನ ಎರಡು ಪೊಲೀಸ್ ಠಾಣೆಗಳಲ್ಲಿ ಕಳೆದ ಆರು ತಿಂಗಳಿನಿಂದ ಇನ್ಸ್ಪೆಕ್ಟರ್ ಗಳನ್ನೇ ನೇಮಿಸಿಲ್ಲ. ಹೌದು ಗೃಹ ಇಲಾಖೆಯಿಂದ ಮತ್ತೊಂದು ಎಡವಟ್ಟು ಆಗಿದ್ದು ಕಳೆದ 6 ತಿಂಗಳಿಂದ ಗಂಗಮ್ಮನ ಗುಡಿ ಠಾಣೆಗೆ ಇನ್ಸ್ಪೆಕ್ಟರ್ ನೇಮಕ ಮಾಡಿಲ್ಲ. 6 ತಿಂಗಳ ಹಿಂದೆ ಇನ್ಸ್ಪೆಕ್ಟರ್ ಸಿದ್ದೇಗೌಡ ನಿವೃತ್ತಿಯಾಗಿದ್ದಾರೆ. ಹಾಗಾಗಿ ಕಳೆದ 6 ತಿಂಗಳಿಂದ ಗಂಗಮ್ಮನ ಗುಡಿ ಠಾಣೆಗೆ ಇನ್ಸ್ಪೆಕ್ಟರ್ ನೇಮಿಸಿಲ್ಲ. ಅದೇ ರೀತಿಯಾಗಿ ಸೋಲದೇವನಹಳ್ಳಿ ಠಾಣೆಯಲ್ಲೂ ಕಳೆದ 3 ತಿಂಗಳಿನಿಂದ ಇನ್ಸ್ಪೆಕ್ಟರ್ ನೇಮಕವಾಗಿಲ್ಲ. 3 ತಿಂಗಳ ಹಿಂದೆಯೇ ಸೋಲದೇವನಹಳ್ಳಿಯ ಇನ್ಸ್ಪೆಕ್ಟರ್ ಹರಿಯಪ್ಪ ನಿವೃತ್ತಿಯಾಗಿದ್ದಾರೆ. ಇದುವರೆಗೂ ಎರಡು ಠಾಣೆಗಳಿಗೆ ಇನ್ಸ್ಪೆಕ್ಟರ್ ನೇಮಕ ಮಾಡಿಲ್ಲ. ಡ್ರಗ್ಸ್, ಆಸ್ತಿ ಕಲಹ ಸೇರಿ ಹಲವು ದೂರು ನೀಡಲು ಜನರು ಠಾಣೆಗಳಿಗೆ ಬರುತ್ತಿದ್ದಾರೆ.ಎರಡು ಠಾಣೆಗಳ ಕೆಳಹಂತದ ಅಧಿಕಾರಿಗಳಿಂದ ಉಡಾಫೆ ಉತ್ತರ ನೀಡುತ್ತಿರುವ ಆರೋಪ ಇದೀಗ…













