Author: kannadanewsnow05

ಹಾವೇರಿ : ಶಾಲೆಯ ಬಳಿ ಇರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರಿನ ತೊಟ್ಟಿಗೆ ಬಾಲಕನೊಬ್ಬ ಬಿದ್ದು ಮುಳುಗಿ ದಾರುಣವಾಗಿ ಸಾವನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (9) ಎಂದು ತಿಳಿದುಬಂದಿದೆ. ನಿನ್ನೆ ಸಾಯಂಕಾಲ ಶಾಲೆ ಮುಗಿದ ತಕ್ಷಣ ಪ್ರಜ್ವಲ್ ಮನೆಗೆ ಬಂದು ಬಳಿಕ ಹೊರಗಡೆ ಆಟ ಆಡಲು ತೆರಳಿದ್ದಾನೆ.ಈ ವೇಳೆ ಶಾಲೆಯ ಬಳಿ ಇರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರಿನ ತೊಟ್ಟಿಗೆ ಬಿದ್ದಿದ್ದಾನೆ.ಸಂಜೆಯಾದರೂ ಪ್ರಜ್ವಲ್ ಮನೆಗೆ ಬಾರದೇ ಇರುವುದನ್ನು ಗಮನಿಸಿದ ಮನೆಯವರು ಗಾಬರಿಗೊಂಡು ಎಲ್ಲಾ ಕಡೆ ಹುಡುಕಾಡಿದ್ದಾರೆ. ಕೊನೆಗೆ ನೀರಿನ ತೊಟ್ಟಿಯಲ್ಲಿ ಪ್ರಜ್ವಲ್ ಬಿದ್ದು ಮುಳುಗಿ ಸಾವನ್ನಪ್ಪಿರುವುದು ಗೊತ್ತಾಗಿದೆ.ಬಾಲಕನ ಮೃತದೇಹವನ್ನು ನೀರಿನ ತೊಟ್ಟಿಯಿಂದ ಮೇಲಕ್ಕೆತ್ತಿ ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ದಾಖಲಿಸಲಾಗಿದೆ.ಘಟನೆ ಕುರಿತಂತೆ ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಬೆಂಗಳೂರು : ಕಳೆದ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಾದಂತಹ ವಿಷಯ ಬಹಿರಂಗವಾಗಿದ್ದು ಶಂಕಿತ 6 ಜನ ಉಗ್ರರಿಗೆ ಐಸಿಸ್ ನಂಟು ಇದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೆಖಿಸಿದ್ದು ಇದೀಗ ಬಹಿರಂಗವಾಗಿದೆ. ಹೌದು ಶಂಕಿತ ಉಗ್ರರಾದ ಅಬ್ದುಲ್ ಮತಿನ್, ಮಾಜ್ ಮುನೀರ್, ಮುಜಾಮಿಲ್ ಶರೀಫ್, ಮೊಹಮ್ಮದ್ ಶರೀಫ್, ಶಾಜೀಬ್ ಮತ್ತು ಅರಮತ್ ಅಲಿ ಐಸಿಸ್ ಜೊತೆ ಸಂಪರ್ಕ ಹೊಂದಿರುವುದು ಎನ್ಐಎ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ.ಬೆಂಗಳೂರಿನ ರಾಮೇಶ್ವರಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಶಂಕಿತ ಉಗ್ರರಿಗೆ ಐಸಿಸ್ ಗೆ ಸಂಪರ್ಕ ಇತ್ತು. ಅಲ್ಲದೇ ಕೆಫೆ ಬಾಂಬ್ ಬ್ಲಾಸ್ಟ್ ಅಷ್ಟೇ ಅಲ್ಲದೆ ಐಸಿಸ್ ಇವರಿಗೆ ಮತ್ತೊಂದು ಕೆಲಸವನ್ನು ಕೂಡ ಇವರಿಗೆ ನೀಡಿತ್ತು. ಶಂಕಿತ ಉಗ್ರರಲ್ಲಿ ಪ್ರಮುಖ ನಾದವನಿಗೆ ಉಸ್ತುವಾರಿ ನೋಡಿಕೊಳ್ಳಲು ಸೂಚಿಸಿತ್ತು ಅಲ್ಲದೆ ಅವರಿಗೆ ಹಣದ ಸಹಾಯ ಕೂಡ ಐಸಿಸ್ ಮಾಡಿತ್ತು ಎಂಬ…

Read More

ಮಂಡ್ಯ : ಹಿಂದಿನ ಕಾಲದಲ್ಲಿ ಇದ್ದಂತಹ ಜಾತಿ ತಾರತಮ್ಯ ಪ್ರಸ್ತುತ ದೇಶದ ಹಲವು ಪ್ರದೇಶಗಳಲ್ಲಿ ಇನ್ನು ಆಚರಣೆಯಲ್ಲಿ ಇದೆ. ರಾಜ್ಯದಲ್ಲಿ ಇದೀಗ ಜಾತಿ ತಾರತಮ್ಯ ಮತ್ತೆ ಭುಗಿಲೆದಿದ್ದು ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ದಲಿತರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿರುವ ವಿಚಾರವಾಗಿ ಸವರ್ಣಿಯರು ಅಸಮಾಧಾನ ಹೊರಹಾಕಿದ್ದು, ಇದೀಗ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಮಂಡ್ಯದ ಹನಕೆರೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ವಿರೋಧದ ನಡುವೆ ಶ್ರೀ ಕಾಲಭೈಲೇಶ್ವರನಿಗೆ ದಲಿತರು ಪೂಜೆ ಸಲ್ಲಿಸಿದ್ದಾರೆ. ದಲಿತರ ದೇಗುಲಕ್ಕೆ ಪ್ರವೇಶಕ್ಕೆ ಸವರ್ಣೀಯರು ಸಮಾಧಾನ ಹೊರ ಹಾಕಿದ್ದಾರೆ. ದೇಗುಲದ ಒಳನೋಗಿ ಉತ್ಸವ ಮೂರ್ತಿಯನ್ನು ಹೊರ ತಂದು ಕಿಡಿ ಕಾರಿದ್ದಾರೆ. ದೇವಾಲಯ ನಾಮಫಲಕವನ್ನು ಹೊರಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಶ್ರೀ ಕಾಲಭೈರವೇಶ್ವರ ಸ್ವಾಮೀಜಿ ಬಾಗಿಲು ಬಂದಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ಮತ್ತು ಪೊಲೀಸರು ತಿಳಿಗೊಳಿಸಿದ್ದಾರೆ. ಇದೆ ಸಂದರ್ಭದಲ್ಲಿ ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಸವರ್ಣಿಯರು ಅಲ್ಲಿಂದ ತೆರಳಿದ್ದಾರೆ.…

Read More

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ.ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ. ಮೊದಲಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀಡಿಂಗ್ ಇರುವುದರಿಂದ ಎಷ್ಟೇ ವರ್ಷಗಳಾದರೂ ಅಕ್ಷರಗಳು ಅಳಿಸಿ ಹೋಗುವುದಿಲ್ಲ. ಕಾರ್ಡ್‌ಗಳು ಸಹ ಮುರಿಯುವ ಸಾಧ್ಯತೆ ಕಡಿಮೆ.ಹೊಸ…

Read More

ಬೆಳಗಾವಿ : ಗಂಡ ತನ್ನ ಮೇಲೆ ಸಂಶಯ ಪಡುತ್ತಾನೆ ಎಂದು ಬೇಸತ್ತು ಮನನೊಂದ ತಾಯಿಯೊಬ್ಬಳು ಮಗುವಿನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಗಾರ ಖುರ್ದ್ ಪಟ್ಟಣದ ಪರೀದಖಾನವಾಡಿಯ ತೋಟದ ಮನೆಯಲ್ಲಿ ನಡೆದಿದೆ. ಕೊಲೆಯಾದ ಮಗುವನ್ನು ಸಾತ್ವಿಕ್ ಎಂದು ತಿಳಿದುಬಂದಿದ್ದು, ಹತ್ಯೆಗೈದ ತಾಯಿಯನ್ನು ಭಾಗ್ಯಶ್ರೀ ಎಂದು ತಿಳಿದುಬಂದಿದೆ.ಕಳೆದ 7 ವರ್ಷಗಳ ಹಿಂದೆ ರಾಹುಲ್ ಕಟಗೇರಿ ಎಂಬಾತನೊಂದಿಗೆ ಮದುವೆಯಾಗಿದ್ದ ಭಾಗ್ಯಶ್ರಿ. ಮದುವೆಯಾದ ನಂತರವೂ ಸುಖವಾಗಿಲ್ಲ. ಗಂಡನೊಂದಿಗೆ ದಿನನಿತ್ಯ ಜಗಳ. ಜಗಳಕ್ಕೆ ಬೇಸತ್ತು ತವರುಮನೆಗೆ ಹೋಗಿದ್ದಳು. ಬಳಿಕ ಪತಿ ಹೆಂಡತಿಯ ತವರು ಮನೆ ಹಿರಿಯರೊಂದಿಗೆ ಮಾತಾಡಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದ. ಆದರೆ ಇಂದು ಮತ್ತೆ ಗಲಾಟೆ ಶುರುವಾಗಿದ್ದು ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ತಾಯಿ ಮಗುವಿನ ಕತ್ತು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Read More

ಬಳ್ಳಾರಿ : ಶ್ರೀರಾಮುಲು ಸಾರಿಗೆ ಸಚಿವರಾಗಿ ಸಂಡೂರಿಗೆ ಒಂದೇ ಒಂದು ಬಸ್ಟಾಂಡ್ ಕಟ್ಟಿಸಲಿಲ್ಲ. ಒಂದೇ ಒಂದು ಬಸ್ ಕೂಡ ಬಿಡಲಿಲ್ಲ. ಮೊನ್ನೆ ನಮ್ಮ ಸರ್ಕಾರ ಬಂದ ಮೇಲೆ 200 ಹೊಸ ಬಸ್ ಗಳನ್ನು ಬಿಟ್ಟಿದ್ದೇವೆ. ಶ್ರೀರಾಮುಲು ಆರೋಗ್ಯ ಸಚಿವರಾಗಿ ಸಂಡೂರಿಗೆ ಒಂದೇ ಒಂದು ಆಸ್ಪತ್ರೆ ಕೊಡಲಿಲ್ಲ. ನಾವು 100 ಬೆಡ್ ಗಳ ಆಸ್ಪತ್ರೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಂಡೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮತನಾಡಿದರು. ಅನ್ನಪೂರ್ಣ ತುಕಾರಾಮ್ ಅವರು ಸಂಡೂರು ಕ್ಷೇತ್ರದಿಂದ ಗೆಲ್ಲುವುದು ನೂರಕ್ಕೆ ನೂರು ಸತ್ಯ. ಟಿಕೆಟ್ ಘೋಷಣೆಗೂ ಮೊದಲೇ ನಾವು ಸಂಡೂರು ಕ್ಷೇತ್ರದಲ್ಲಿ ನಡೆಸಿದ ಎಲ್ಲಾ ಜನ ಸಮೀಕ್ಷೆಗಳಲ್ಲೂ ಅನ್ನಪೂರ್ಣ ಅವರ ಪರವಾಗಿಯೇ ಇತ್ತು. ಹೀಗಾಗಿ ಇವರನ್ನೇ ಅಭ್ಯರ್ಥಿಯಾಗಿ ಘೋಷಿಸಿದೆವು. ಲೋಕಸಭಾ ಚುನಾವಣೆಯಲ್ಲೂ ಈ.ತುಕಾರಾಮ್ ಅವರ ಪರವಾಗಿಯೇ ಎಲ್ಲಾ ಸಮೀಕ್ಷಾ ವರದಿಗಳು ಇದ್ದಿದ್ದರಿಂದ ಹೈಕಮಾಂಡ್ ತುಕಾರಾಮ್ ಅವರ ಹೆಸರನ್ನೇ ಘೋಷಿಸಿತು. ಸಮೀಕ್ಷೆಯಂತೆ ಲೋಕಸಭಾ ಚುನಾವಣೆಯಲ್ಲಿ ಈ.ತುಕಾರಾಮ್ ಗೆದ್ದರು. ಈಗ ಸಂಡೂರು ಉಪ ಚುನಾವಣೆಯಲ್ಲೂ…

Read More

ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತುಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ನಡೆದಿದೆ. ಹೌದು ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ. ಅಂಬ್ಲಿಗೋಳ ಗ್ರಾಮದಲ್ಲಿ ಗೌರಮ್ಮ (26) ಕೊಲೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದ್ಯದ ಅಮಲಿನಲ್ಲಿ ಹಲ್ಲೆಗೈದು ಕುತ್ತಿಗೆ ಬಿಗಿದು ಪತಿ ಮನೋಜ್ ನಿಂದ ಕೃತ್ಯ ನಡೆದಿದೆ. ಆರೋಪಿ ಪತಿ ಮನೋಜ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಉನ್ನತ ಶಿಕ್ಷಣ ಸಚಿವಸಚಿವ ಡಾ. ಎಂ ಸಿ ಸುಧಾಕರ್ ಅವರ ನಿವಾಸದ ಬಳಿ ದುರಂತ ಒಂದು ನಡೆದಿದ್ದು, ಅವರ ನಿವಾಸದ ಬಳಿ ಸ್ಕಾರ್ಪಿಯೊ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಸಚಿವ ಡಾ. ಎಂ.ಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಕಾರನ್ನು ಸ್ಕಾರ್ಪಿಯೋ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮಾಡಪ್ಪಲ್ಲಿ ಬಡಾವಣೆಯಲ್ಲಿರುವ ನಿವಾಸದ ಬಳಿ ಈ ಅವಘಡ ಸಂಭವಿಸಿದೆ. KA 04 MG 0455 ಸಂಖ್ಯೆಯ ಸ್ಕಾರ್ಪಿಯೋ ಕಾರು ಹೊತ್ತಿ ಉರಿದಿದೆ. ಸಚಿವ ಸುಧಾಕರ್ ಅವರ ನಿವಾಸದ ಸಮೀಪವೇ ಈ ಒಂದು ಕಾರನ್ನು ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ . ಘಟನೆಯ ಬಳಿಕ ಸ್ಕಾರ್ಪಿಯೋ ಕಾರು ಮಾಲಿಕ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಘಟನೆ ಕುರಿತಂತೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯ ಹಾಗೂ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಆಗುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಶಾಕಿಂಗ್ ಮಾಹಿತಿ ಒಂದು ಬಹಿರಂಗವಾಗಿದ್ದು, ಕೇವಲ ಹೆಣ್ಣು ಮಕ್ಕಳ ಮೇಲೆ ಅಷ್ಟೇ ಅಲ್ಲದೆ ಬಾಲಕರ ಮೇಲು ಕೂಡ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಶಾಕಿಂಗ್ ಅಂಶ ಬಯಲಾಗಿದೆ. ಈ ಕುರಿತು ಬೆಂಗಳೂರಿನ ಪೊಲೀಸರು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಸರಿ ಸುಮಾರು 114 ಬಾಲಕರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಕಳೆದ ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 33 ಪೋಕ್ಸೋ ಕೇಸ್​ಗಳು ದಾಖಲಾಗಿವೆ. ದಾಖಲಾದ 114 ಪ್ರಕರಣಗಳಲ್ಲಿ‌ 7 ಕೇಸ್​ಗಳಲ್ಲಿ ಮಾತ್ರ ಶಿಕ್ಷೆಯಾಗಿದ್ದು, ಉಳಿದ ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. 2021ರಲ್ಲಿ 24, 2022ರಲ್ಲಿ 25 ಪ್ರಕರಣಗಳು, 2023ರಲ್ಲಿ 33 ಹಾಗೂ ಈ ವರ್ಷ 32 ಪ್ರಕರಣಗಳು ದಾಖಲಾಗಿವೆ. ಬಾಲಕರ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಪೈಕಿ ಬೆಂಗಳೂರು ನಗರದಲ್ಲಿ ನಾಲ್ಕು ವರ್ಷಗಳಲ್ಲಿ 17 ಪ್ರಕರಣ ವರದಿಯಾಗಿವೆ.ಬಾಲಕರ ಮೇಲೆ…

Read More

ರಾಮನಗರ : ರಾಜ್ಯದಲ್ಲಿ ಇನ್ನು 15 ತಿಂಗಳಲ್ಲಿ ಗ್ಯಾರಂಟಿಗಳು ಸ್ಥಗಿತಗೊಳ್ಳುತ್ತವೆ. ಗೃಹಲಕ್ಷ್ಮಿಯ ಹಣ ಈಗ ಚನ್ನಪಟ್ಟಣದ ಜನರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇವರಿಗೆ ತಿಂದು ತಿಂದು ತೇಗಿ ತೇಗಿ ಅಜೀರ್ಣ ಆಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ರು. ಈ ಸರ್ಕಾರ ತೆಗೆಯೋವರೆಗೂ ನಾನು ಮನೆಯಲ್ಲಿ ಮಲಗಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರು ಶಪಥ ಮಾಡಿದರು. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿವೆ. ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಎನ್.ಡಿ.ಎ ಅಭ್ಯರ್ಥಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಿದ್ದು ನನ್ನ ಮೊಮ್ಮಗನನ್ನು ಗೆಲ್ಲಿಸುವವರೆಗೂ ಮನೆಗೆ ಹೋಗಿ ಮಲಗಲ್ಲ ಎಂದು ಗುಡುಗಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕೊನೆಯ ಉಸಿರು ಇರುವರೆಗೂ ಹೋರಾಟ ಮಾಡುತ್ತೇನೆ. ನನ್ನ ಮೊಮ್ಮಗನನ್ನ ಗೆಲ್ಲಿಸುವವರೆಗೂ ಮನೆಗೆ ಹೋಗಿ ಮಲಗಲ್ಲ…

Read More