Author: kannadanewsnow05

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಜಿಕ್ಯೂಷನ್ ಗೆ ಅನುಮತಿ ವಿಚಾರವಾಗಿ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಅದೇ ರೀತಿಯಾಗಿ ಮಂಡ್ಯ ಜಿಲ್ಲೆಯಲ್ಲಿ ಮಳವಳ್ಳಿಯ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರಸ್ವಾಮಿ ರಾಜ್ಯಪಾಲರ ವಿರುದ್ಧ ನಾಲಿಗೆ ಹರಿ ಪಟ್ಟಿದ್ದು ನೀನು ರಾಜ್ಯಪಾಲ ಆಗೋಕೆ ನಾಲಾಯಕ್ ಎಂದು ಹೇಳಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ವೇಳೆ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದು ನರೇಂದ್ರಸ್ವಾಮಿ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರ ವಿರುದ್ಧ ಅಸಂಬದ್ಧ ಪದ ಬಳಸಿದ್ದಾರೆ. ಎಚ್ಡಿಕೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸೋಕೆ ಲೋಕಾಯುಕ್ತ ಕೇಳಿದ್ದಾರೆ. ಆದರೆ ಎಂಟು ತಿಂಗಳಿಂದ ಈ ಬಗ್ಗೆ ಕ್ರಮ ಕೈಗೊಳ್ಳದೆ ಕೂತಿದಿಯಲ್ಲಪ್ಪ? ಮಹಾನ್ ಇಂಡಸ್ಟ್ರಿಯಲಿಸ್ಟ್ ನಿರಾಣಿ ವಿರುದ್ಧ 108 ಹಗರಣಗಳಿವೆ. ಶಶಿಕಲಾ ಜೊಲ್ಲೇ ವಿಚಾರದಲ್ಲಿ ಜೊಲ್ಲು  ಸುರಿಸಿಕೊಂಡು ಕೂತಿದೀಯಲ್ಲಪ್ಪ? ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನಿನಗೆ ತಾಕತ್ತಿದ್ದರೆ ಸಿದ್ದರಾಮಯ್ಯ ವಿರುದ್ಧ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಜಿಕ್ಯೂಷನ್ ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿಯಲ್ಲಿ ಸಸಿಎಂ ಇಬ್ರಾಹಿಂ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ರಾಜ್ಯದ ಸ್ವಾಭಿಮಾನಕ್ಕೆ ತಂದಿದೆ ಎಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬೇಟಿ ಬಳಿಕ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದರು. ಸುಪ್ರೀಂ ಕೋರ್ಟ್ ನ ತೀರ್ಪನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪ ವಿರುದ್ಧವು ಪ್ರಕರಣಗಳು ಇವೆ. ಅವರ ವಿರುದ್ಧ ರಾಜಕೀಯ ಏಕೆ ಅನುಮತಿ ಕೊಟ್ಟಿಲ್ಲ? ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ಟಗರು ಇದ್ದಂತೆ ಧೈರ್ಯ ಹೇಳಿದ್ದೇನೆ. ಮೊದಲು ಸಿಎಂ ಜೊತೆಯಲ್ಲಿ ನಾನು ಇರಲಿಲ್ಲ. ಆದರೆ ಈಗ ಅವರ ಜೊತೆಯಲ್ಲಿ ಇರುತ್ತೇನೆ. ರಾಜ್ಯಪಾಲರು ಇವರ ಮನೆ ಕ್ಲರ್ಕ್ ಆ? ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ ಮಗ ಏಕೆ ಕೂತಿದ್ದರು?…

Read More

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ವಿಪಕ್ಷ ನಾಯಕರು ಇದು ಪಾದಯಾತ್ರೆಗೆ ಸಿಕ್ಕ ಜಯ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಸಂಸದ ವಿ.ಸೋಮಣ್ಣ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎನ್ನುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತುಮಕೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಾಹೇಬ್ರು ನುರಿತ ರಾಜಕಾರಣಿ, ಬುದ್ಧಿವಂತರು. ನಾನು ಅವರು ಬಹಳ ಆತ್ಮೀಯರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಿನ್ನೆ ಕೂಡ ಅವರ ಜೊತೆ ಮಾತನಾಡಿದ್ದೇನೆ. ಅವರು ಮಾತನಾಡಿದ್ದನ್ನ ನಾನು ಬಹಳ ಆನಂದದಿಂದ ಸ್ವೀಕರಿಸಿದ್ದೇನೆ. ಬಾಕಿದ್ದೇಲ್ಲಾ ಕಾನೂನು ನೋಡಿಕೊಳ್ಳುತ್ತೆ. ಕಾನೂನು ಏನು ಹೇಳುತ್ತೆ ಅದು ಆಗುತ್ತೆ. ಸಿದ್ದರಾಮಯ್ಯನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಕೆಲಸ ಮಾಡುತ್ತೆ. ಒಂದಂತೂ ಸತ್ಯ ಕಾನೂನಿಗಿಂತ ಯಾರೂ ದೊಡ್ಡವರಲ್ಲ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ದೂರದೃಷ್ಟಿಯ ಬ್ರಹ್ಮಾಸ್ತ್ರ ಏನಿದೆ ಅದರ ಪ್ರಕಾರ ಕಾನೂನು ಕೆಲಸ ಮಾಡುತ್ತದೆ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಆನೆಯ ದಂತಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎರಡು ಆನೆ ದಂತಗಳ ಸಮೇತ ಬಂಧಿಸಿದ್ದಾರೆ. ಹೌದು ಬೆಂಗಳೂರಿನ ರಾಜನುಕುಂಟೆ ಏರ್ಪೋಟ್ ರಸ್ತೆ ಸಾದರಹಳ್ಳಿ ಬಳಿ ಆರೋಪಿಗಳಾದ ಮೋಹನ್, ಆನಂದ್ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೆಲೆ ಬಾಳುವ 8.5 ಮತ್ತು 9 ಕೆ.ಜಿ ಎರಡು ಆನೆ ದಂತವನ್ನು ಜೊತೆಗೆ ಕೃತ್ಯಕ್ಕೆ ಬಳಸಲಾದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ. ಆನೆಯ ದಂತಗಳನ್ನು ಮಾರಾಟಕ್ಕಾಗಿ ತೆಗೆದುಕೊಂಡು ಹೋಗುತ್ತಿರುವ ಕುರಿತು ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಖಚಿತ ಮಾಹಿತಿ ಬರುತ್ತದೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಬೆಂಗಳೂರು ವಲಯ ವ್ಯಾಪ್ತಿಯಲ್ಲಿ ವಾಹನವನ್ನ ತಡೆದು, ಪರೀಕ್ಷಿಸಲಾಗುತ್ತದೆ. ಈ ವೇಳೆ ವಾಹನದಲ್ಲಿ ಎರಡು ಆನೆ ದಂತಗಳು ಕಂಡುಬರುತ್ತವೆ. ಕೂಡಲೇ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳಾದ ಮೋಹನ್​, ಆನಂದ್​ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಲಾಗಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಂದು ನಡೆದ ಸಂಪುಟ ಸಭೆ ಅಂತ್ಯವಾದ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಪಾಲರು ತೆಗೆದು ಕೊಂಡಿರುವಂತ ತೀರ್ಮಾನ ಕಾನೂನುಬಾಹಿರ ಹಾಗೂ ಸಂವಿಧಾನಕವಾದದ್ದು. ಸಚಿವ ಸಂಪುಟ ಸಂಪೂರ್ಣವಾಗಿ ಅದನ್ನ ತೀವ್ರವಾಗಿ ಖಂಡಿಸಿದೆ. ಯಾವ ದೃಷ್ಟಿಕೋನದಿಂದಲೂ ಇದು ಸರಿಯಾದ ನಿರ್ಧಾರವಲ್ಲ. ಇಡೀ ಸಚಿವ ಸಂಪುಟ ಇದನ್ನು ವಿರೋಧಿಸಿದೆ.ಇದಕ್ಕೆ ಯಾವುದೇ ಕಾನೂನಿನ ಬಲ ಇಲ್ಲ. ಸಂವಿಧಾನದ ಬಲ ಇಲ್ಲ ಅಂತ ಹೇಳಿ ತೀರ್ಮಾನ ಮಾಡಿದ್ದಾರೆ ಎಂದರು. ರಾಜ್ಯಪಾಲರು ಈ ದೇಶದ ರಾಷ್ಟ್ರಾಧ್ಯಕ್ಷರ ಪ್ರತಿನಿಧಿಗಳು. ಸಂವಿಧಾನದ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕು. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಬಿಜೆಪಿಯ ಪ್ರತಿನಿಧಿಗಳಾಗಿ ಕೆಲಸ ಮಾಡಬಾರದು. ಈ ಒಂದು ಪ್ರಕರಣದಲ್ಲಿ ಅವರು ಕಾನೂನು ರೀತಿಯಲ್ಲಿ ನಡೆದುಕೊಳ್ಳದೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಈ ನಡವಳಿಕೆಯನ್ನ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಡೀ ಸಂಪುಟದ ಸಚಿವರು ನೀವು ಎದೆಗುಂದಬೇಡಿ ನಾವೆಲ್ಲ ನಿಮ್ಮ ಜೊತೆಗೆ ಇದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಲ್ಲ ಸಚಿವರು ರಾಜ್ಯಪಾಲರ ನಿರ್ಧಾರಕ್ಕೆ ಅಸಮಾಧಾನ ಹೊರ ಹಾಕಿದರು. ಈ ವೇಳೆ ನೀವು ಎದೆಗುಂದಬೇಡಿ ನಾವೆಲ್ಲ ನಿಮ್ಮ ಜೊತೆಗೆ ಇದ್ದೇವೆ ಎಂದು ಸಂಪುಟದ ಸಹೋದ್ಯೋಗಿಗಳು ನೈತಿಕ ಸ್ಥೈರ್ಯ ತುಂಬಿದರು. ಇಂದು ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲ ಸಚಿವರು ಆತ್ಮಸ್ಥೈರ್ಯ ತುಂಬಿದ್ದರು.ನೀವು ಯಾವುದೇ ಕಾರಣಕ್ಕೂ ರಾಜೀನಾಮೆಯನ್ನು ಕೊಡಬೇಡಿ. ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ಕೊಡುವುದು ಬೇಡ.ಅಂತಹ ಯಾವ ಕಾನೂನುಬಾಹಿರ ಕೆಲಸವನ್ನು ನೀವು ಮಾಡಿಲ್ಲ. ಈ ಪ್ರಕರಣದಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ನಿಮ್ಮ ಪಾತ್ರ ಇಲ್ಲ ಎಂದು ಧೈರ್ಯ ತುಂಬಿದರು. ನೀವು ತಪ್ಪು ಮಾಡದಿದ್ದರೂ ಅಪರಾಧಿಯ ಮುಂದೆ ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ನೀವು ಯಾವುದೇ…

Read More

ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ PSI ಪರಶುರಾಮ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು CID ಗೆ ವಹಿಸಿ ಅದೇಶಿಸಿತ್ತು. ಇದೀಗ ತನಿಖೆ ಚುರುಕುಗೊಳಿಸಿದ CID ತಂಡ ಯಾದಗಿರಿಗೆ ಎಂಟ್ರಿ ಕೊಟ್ಟಿದೆ. ಹೌದು ಪಿಎಸ್ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ ಕೊಣೆ ಪರಿಶೀಲನೆ ಮಾಡಿದ್ದಾರೆ. ನಂತರ ಎಸ್​​​ಪಿ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಸಾಯುವ ಮುನ್ನ ಪರಶುರಾಮ ಯಾರನ್ನು ಭೇಟಿ ಮಾಡಿದ್ದರು ಎಂಬ ಹಲವು ವಿಚಾರಗಳ ಬಗ್ಗೆ ಸಿಐಡಿ ತನಿಖಾಧಿಕಾರಿಗಳು…

Read More

ಬೆಂಗಳೂರು : ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಹಾಡು ಅನುಮತಿ ಪಡೆಯದೇ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೌದು ರಕ್ಷಿತ್ ಶೆಟ್ಟಿ ಅವರು ತಮ್ಮ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಹಾಡು ಬಳಕೆ ಮಾಡಿದ್ದರು. ಅನುಪತಿ ಪಡೆಯದೇ ಬಳಸಿದ್ದನ್ನೂ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಹಾಗಾಗಿ ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು. ಕಾಪಿ ರೈಟ್ ಉಲ್ಲಂಘನೆ ಆಗಿರೋ ವಿಚಾರವನ್ನು ಉಲ್ಲೇಖಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ರಕ್ಷಿತ್…

Read More

ಕೊಪ್ಪಳ : ಕೊಚ್ಚಿ ಹೋಗಿದ್ದಂತ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ರಿಪೇರಿ ಕಾರ್ಯ ಆರಂಭಗೊಂಡಿತ್ತು. ಮೊನ್ನೆ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ವಿಫಲವಾಗಿತ್ತು. ಸತತ ಎರಡು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಇದೀಗ ಸ್ಟಾಪ್​ ಲಾಗ್ ಗೇಟ್ ನ ಮೂರನೇ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ. ಹೌದು ನಿನ್ನೆ ಮೊದಲ ಹಂತದ ಎಲಿಮೆಂಟ್ ಅಳವಡಿಕೆಯಲ್ಲಿ ತಂತ್ರಜ್ಞರು ತುಂಗಭದ್ರಾ ಡ್ಯಾಂನ 19ನೇ ಗೇಟ್ ನಲ್ಲಿ ತೊಡಗಿದ್ದರು. ಅದು ಯಶಸ್ವಿಯಾಗಿದ್ದು, ಇಂದು ಕೂಡ ಮೂರನೇ ಎಲಿಮೆಂಟ್ ಅಳವಡಿಸಿಲು ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇಂದು ಮೂರನೇ ಎಲಿಮೆಂಟ್ ಯಶಸ್ವಿಯಾಗಿ ಅಳವಡಿಸಿದ ಸಿಬ್ಬಂದಿಗಳು, ನೀರು ಹರಿಯುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೂರನೇ ಎಲಿಮೆಂಟ್ ಅಳವಡಿಕೆ ಮೂಲಕ ನೀರು ಹರಿಯುವುದನ್ನು ತಡೆಯಲಾಗಿದೆ.ಜಲಾಶಯದಿಂದ ನೀರು ಹರಿಯುವುದನ್ನು ತಡೆಯುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಒಟ್ಟಾರೆಯಾಗಿ ಇಂದು ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ…

Read More

ಕಲಬುರ್ಗಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇದೀಗ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.ಅದರಂತೆ ಕಲಬುರ್ಗಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಕಲಬುರ್ಗಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕುರುಬ ಸಂಘ ಹಾಗೂ ಹಿಂದುಳಿದ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ಟೈರ್ ಗೆ ಬೆಂಕಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಇದೀಗ ಕುರುಬ, ಹಿಂದುಳಿದ ಸಂಘಟನೆಗಳಿಂದ ರಸ್ತೆ ತಡೆ ಹಿಡಿದು ಮಾನವ ಸರಪಳಿ ಮೂಲಕ ಪ್ರತಿಭಟನೆ ಮಾಡಿತ್ತಿದ್ದಾರೆ.

Read More