Author: kannadanewsnow05

ಉಡುಪಿ : ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ತಿಳಿದುಬಂದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಎರಡು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಇಂದು ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಅವರ ಖಾತೆಗೆ ಇಂದು ವರ್ಗಾಯಿಸಲಾಗುತ್ತಿದೆ. ಹೌದು ಗೃಹಲಕ್ಷ್ಮಿ ಹಣ ಖಾತೆಗೆ ಸೇರಲು ಯಾಕೆ ವಿಳಂಬ ವಾಗುತ್ತಿದೆ ಎನ್ನುವುದರ ಕುರಿತು ಕೆಲವು ದಿನಗಳ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ದೊರೆಯಬೇಕಿದೆ. ಬ್ಯಾಂಕ್​​​ಗಳಿಗೆ ಹಣ ಕಳುಹಿಸಿರುತ್ತೇವೆ. ಸ್ಥಳೀಯ ಮಟ್ಟವಾಗಿ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಬೇಕು. ದೊಡ್ಡ ಮೊತ್ತದ ಹಣ ಆಗಿರುವ ಕಾರಣ ವಿಳಂಬ ಆಗುತ್ತಿರುತ್ತದೆ ಎಂದರು. ಜೂನ್ ತಿಂಗಳ ಹಣ ವರ್ಗಾವಣೆಯಾಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನಗಳಲ್ಲಿ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಆಗಸ್ಟ್ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ…

Read More

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರವಾಗಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಗೌರಮ್ಮ ರೀತಿ ಇದ್ದವರು,ಅವರ ಮೇಲೆ ಆಪಾದನೆ ಬಾರದಿರಲಿ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಅವರು ಕೂಡ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ. ಆದರೆ ಅವರ ಶ್ರೀಮತಿಯವರನ್ನು ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು. ಹಾಗಾಗಿ ಈ ಒಂದು ಹಗರಣದಿಂದ ಸಿಎಂ ಸಿದ್ದರಾಮಯ್ಯ ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್‌ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ.ಸಿಎಂ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು…

Read More

ರಾಮನಗರ : ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ. ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಶನಿವಾರ) ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನ ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿ ಅವರು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಕಮಲ ನಾಯಕರ ವಿರುದ್ಧ ಶಾಸಕ ಹೆಚ್.ಸಿ.ಬಾಲಕೃಷ್ಣ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಆಗದೇ ಇರೋ ವಿಚಾರವನ್ನ ಅವರ ಹಣೆಗೆ ಕಟ್ಟುವ ಕೆಲಸ ಆಗ್ತಿದೆ. ಬಿಜೆಪಿಯವ್ರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ರು ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ. ಬಹುಶಃ ಇದರಿಂದ ಬಿಜೆಪಿಯವರಿಗೆ ಯಾವುದೇ ಅನುಕೂಲ ಆಗಲ್ಲ ಎಂದು ಹೇಳಿದ್ದಾರೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಕ್ರೀಪ್ ರೈಟರ್ ಆಗಿದ್ದಾರೆ.ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಆಕ್ಟರ್ ಆಗಿದ್ದು ಕೇಂದ್ರ ಸರ್ಕಾರದ ಕೈಗೊಂಬೆ ಆಗಿದ್ದಾರೆ.ಅವರು ಹೇಳಿದಂತೆ ಇವರು ನಡೆದುಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾವೆಲ್ಲರೂ ಸಿಎಂ ಜೊತೆ ಇದ್ದೇವೆ. ಇದೊಂದು ರಾಜಕೀಯ ದುರುದ್ದೇಶ ಹುನ್ನಾರವಾಗಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ಯಾವ ಅಧಿಕಾರಿಗಳು ಪ್ರಾಜಿಕ್ಯೂಷನ್ ಗೆ ಅನುಮತಿ ಕೇಳಿಲ್ಲ. ಸಿದ್ದರಾಮಯ್ಯನವರು ಕಾನೂನು ಹೋರಾಟ ಮಾಡುತ್ತಾರೆ. ನಾವೆಲ್ಲರೂ ಸಿಎಂ ಜೊತೆಗೆ ಇದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪರವಾಗಿ ಸಂಪುಟ ಇದೆ. ಅಲ್ಲದೆ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ಇದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ನಾವು ಹೋರಾಟ ಮಾಡುತ್ತೇವೆ.ಕಾನೂನು ಬಗ್ಗೆ ನಮಗೆ ಗೌರವಿದೆ. ನಮಗೆ ರಕ್ಷಣೆ ಸಿಗುವ ನಂಬಿಕೆ ಇದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ಸರ್ಕಾರ, ಸಚಿವ ಸಂಪುಟ ಹಾಗೂ ಕಾಂಗ್ರೆಸ್ ಪಕ್ಷ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ಇದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡಿದ್ದಾರೆ. ಪಿತೂರಿ ವಿರುದ್ಧ ಹೋರಾಟ ನಡೆಸುತ್ತೇವೆ. ನಮ್ಮ ಸರ್ಕಾರದ ವಿರುದ್ಧ ದೊಡ್ಡ ಷಡ್ಯಂತರ ನಡಿತಿದೆ. ಪ್ರಜಾಪ್ರಭುತ್ವ ಉಳಿಸಬೇಕಾಗಿದೆ. ಸಂವಿಧಾನ ರಕ್ಷಣೆ ಮಾಡಬೇಕಾಗಿದೆ ಎಂದರು. ಕಾನೂನಿನ ಸಮರ ಕೈಗೊಳ್ಳಲು…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ನಿರೀಕ್ಷೆ ಮಾಡಿದ್ದೆ. ದೂರು ನೀಡಿದ ದಿನವೇ ನನಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದರು. ನನ್ನ ವಿರುದ್ಧ ದೊಡ್ಡ ಷಡ್ಯಂತರ ಮಾಡುತ್ತಿದ್ದಾರೆ. ದೊಡ್ಡ ಷಡ್ಯಂತರದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹಾಗಾಗಿ ಪ್ರಾಜಿಕ್ಯೂಷನ್ ಗ್ರೂಪ್ ಅನುಮತಿ ನೀಡಿದನು ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇನೆ ಎಂದರು. ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜಿಲ್ಲೆ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಇಷ್ಟೆಲ್ಲಾ ಅದು ಇದ್ದರೂ ನನ್ನ ವಿರುದ್ಧ ರಾಜ ಟ್ಯೂಷನ್ ಗೆ ಅನುಮತಿ ಕೋರಿ ದೂರು ಸಲ್ಲಿಸಲಾಗಿತ್ತು ಅವರೆಲ್ಲರನ್ನೂ ಬಿಟ್ಟು ನನ್ನ ವಿರುದ್ಧ ಏಕೆ ಅನುಮತಿ ಕೊಟ್ಟಿದ್ದಾರೆ? ನನ್ನ ವಿರುದ್ಧ ದೊಡ್ಡ…

Read More

ಕಲಬುರ್ಗಿ : ಪತ್ನಿ ತವರು ಸೇರಿದ್ದಕ್ಕೆ ಮನನೊಂದ ಪತಿಯೊಬ್ಬ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಹೇಶ್ ನಾಗೇಂದ್ರಕರ್ (27) ಎಂದು ತಿಳಿದುಬಂದಿದೆ. ಈತ ಬೀದರ್ ಜಿಲ್ಲೆಯ ಮನ್ನಾಖೆಳಿಯ ರೇಕುಳಗಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.ಪತ್ನಿ ತವರು ಸೇರಿದ್ದಕ್ಕೆ ಮಹೇಶ್ ಬಹಳ ನೊಂದುಕೊಂಡಿದ್ದ. ಮಾನಸಿಕವಾಗಿ ಮನನೊಂದು ಡೀಸೆಲ್ ಸುಳೆದುಕೊಂಡು ಮಹೇಶ್ ಬೆಂಕಿ ಹಚ್ಚಿಕೊಂಡಿದ್ದಾನೆ.ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ (PNB) ನೊಂದಿಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಬ್ಯಾಂಕಿನ ಮ್ಯಾನೇಜರ್ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾತೆ ಮುಚ್ಚಲು ತಾತ್ಕಾಲಿಕ ತಡೆ ನೀಡಿದೆ. ಇಂದು ಸಿಎಂ ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಎಸ್ ಬಿ ಐ ಮುಖ್ಯ ಪ್ರಧಾನ ವ್ಯವಸ್ಥಾಪಕ ವಿನೋದ್ ಜೈಸ್ವಾಲ್ ಮನವಿ ಮಾಡಿದ್ದಾರೆ. ಅಲ್ಲದೆ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೆಐಎಡಿಬಿ ಸಂಸ್ಥೆ ಠೇವಣಿ ಮರುಪಾವತಿ ಬಗ್ಗೆ ಸಮಾವಕಾಶ ನೀಡಬೇಕು ಸಿಎಂ ಸಿದ್ದರಾಮಯ್ಯಗೆ ಎಸ್ ಬಿ ಐ ಪಿ ಏನ್ ಬಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಮುಚ್ಚುವ ನಿರ್ಧಾರಕ್ಕೆ ಸರ್ಕಾರದಿಂದ…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಬೆಂಗಳೂರಿನ ವಿಧಾನಸೌಧ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಇದೀಗ ವಿಜಯನಗರದ ಎಂ.ಸಿ ಲೇಔಟ್ ನಲ್ಲಿ ಬೃಹತ್ ಮರ ಧರೆಗೆ ಉರುಳಿದೆ. ಹೌದು ವಿಜಯನಗರದಲ್ಲಿ ಬೃಹತ್ ಮರ ಧರೆಗೆ ಉರುಳಿ ಬಿದ್ದಿದೆ. ಈ ವೇಳೆ ಆಟೋ ಒಂದು ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಚಾಲಕ, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.ಇದೀಗ ಉರುಳಿ ಬಿದ್ದ ಮರವನ್ನು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇನ್ನೂ ಕಳೆದ ಆಗಸ್ಟ್ 13 ರಂದು ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿ 6 ಮಂದಿ ಗಾಯಗೊಂಡಿದ್ದರು.ಘಟನೆಯಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿತ್ತು. ಓರ್ವ ವ್ಯಕ್ತಿಯ ಎದೆಗೆ ಪೆಟ್ಟಾಗಿದ್ದು ಬೆನ್ನುಮೂಳೆ ಮುರಿದಿದೆ. ಈ ವೇಳೆ ಗಾಯಳುಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ…

Read More