Author: kannadanewsnow05

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಏಳರಂದು ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಮಾಡಿದ್ದು ಈ ಒಂದು ದಾಳಿಯಲ್ಲಿ ಭಾರತೀಯ ಸೇನೆ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ. ಹೌದು ಆಪರೇಷನ್ ಸಿಂಧೂರನಲ್ಲಿ ಹತ್ಯೆಯಾದಂತಹ ಉಗ್ರರ ಹೆಸರು ಇದೀಗ ಬಹಿರಂಗವಾಗಿದೆ. ಲಷ್ಕರ್-ಎ-ತೈಬಾದ ಮರ್ಕಜ್ ಇನ್ ಚಾರ್ಜ್ ಮುದಸೀರ್, ಜೈಶ್ ಎ ಮೊಹಮ್ಮದ್ ಉಗ್ರ ಹಫೀಜ್ ಮೊಹಮ್ಮದ್ ಜಮೀಲ್, ಬಹಾವಲ್ಪುರ್ ಮರ್ಕಜ್ ಸುಭಾನಲ್ಲಾದ ಇನ್ಚಾರ್ಜ್ ಆಗಿದಂತಹ ಜಮೀಲ್, ಜೈಶ್ ಎ ಮೊಹಮ್ಮದ್ ಉಗ್ರ ಮೊಹಮ್ಮದ್ ಯುಸುಫ್ ಕೂಡ ಹತ್ಯೆಯಾಗಿದ್ದಾನೆ. ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರ ಖಾಲಿದ್ ಸಹ ಹತ್ಯೆಯಾಗಿದ್ದಾನೆ. ಮೇ ಏಳರಂದು ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ಈ ಐದು ಮೋಸ್ಟ್ ವಾಂಟೆಡ್ ಉಗ್ರರ ಹತ್ಯೆಯಾಗಿದೆ. ಇನ್ನು ಮುಧಾಸೀರ್ ಖಾದಿಯಾನ್ ಖಾಸ್ ಅಲಿಯಾಸ್ ಅಬು ಜಿಂದಾಲ್, ಮೊಹಮ್ಮದ್ ಯೂಸುಫ್ ಅಜರ್ ಅಲಿಯಾಸ್ ಮೊಹಮ್ಮದ್ ಸಲೀಂ, ಅಬು ಆಕಾಶಾ ಅಲಿಯಾಸ್…

Read More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮೃತರನ್ನು ಗುಂಡಮಗೆರೆ ಗ್ರಾಮದ ವೆಂಕಟೇಶ್ (45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು. ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಒಂದೇ ಬೈಕಿನಲ್ಲಿ ಮೂವರು ಗುಂಡಮಗೆರೆ ಕ್ರಾಸ್​ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯತಪ್ಪಿ ಮರಕ್ಕೆ ಬೈಕ್​ ಡಿಕ್ಕಿ ಹೊಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿರುವ ಸಂದರ್ಭದಲ್ಲಿ ಇದರ ಲಾಭವನ್ನು ಪಡೆದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ್ದಾರೆ. ಈ ವೇಳೆ ಗಡಿ ಭದ್ರತಾ ಪಡೆಗಳು ಭಾರತ ಪ್ರವೇಶಿಸಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ. ಜಮ್ಮು ಗಡಿನಾಡಿನ ಬಿಎಸ್‌ಎಫ್‌ನ ಸಾಂಬಾ ಸೆಕ್ಟರ್‌ನಲ್ಲಿ, ಮೇ 8 ಮತ್ತು 9, 2025 ರ ಮಧ್ಯರಾತ್ರಿ, ಭಯೋತ್ಪಾದಕರ ದೊಡ್ಡ ಗುಂಪಿನಿಂದ ಒಳನುಸುಳುವಿಕೆ ಪ್ರಯತ್ನವನ್ನು ನಡೆಸಲಾಗಿದ್ದು, ಇದನ್ನು ಕಣ್ಗಾವಲು ಗ್ರಿಡ್ ಪತ್ತೆ ಮಾಡಿದೆ. ಈ ಒಳನುಸುಳುವಿಕೆ ಪ್ರಯತ್ನಕ್ಕೆ ಪಾಕ್ ರೇಂಜರ್ಸ್ ಪೋಸ್ಟ್ ಧಂಧರ್‌ನಿಂದ ಗುಂಡಿನ ದಾಳಿ ನಡೆಸಿತು. ಉಗ್ರರು ಭಾರತಕ್ಕೆ ಅಕ್ರಮವಾಗಿ ಒಳ ನುಸುಳಲು ಯತ್ನಿಸುತ್ತಿರುವುದು ಬಿಎಸ್‌ಎಫ್‌ ಯೋಧರಿಗೆ ತಿಳಿದುಬಂದಿದೆ. ತಕ್ಷಣ BSF ಯೋಧರು ಒಳನುಸುಳುವಿಕೆ ಪ್ರಯತ್ನವನ್ನು ತಡೆದಿದ್ದಾರೆ. ಈ ವೇಳೆ BSF ಯೋಧರು ಕನಿಷ್ಠ 7 ಭಯೋತ್ಪಾದಕರನ್ನು ಕೊಂದು ಹತ್ಯೆಗೈದಿದ್ದಾರೆ. ಅಲ್ಲದೇ ಪಾಕ್ ಪೋಸ್ಟ್ ಧಂಧರ್‌ಗೆ…

Read More

ನವದೆಹಲಿ : ಹೊಸದಿಲ್ಲಿ : ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ನಿನ್ನೆ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವ ನಿರ್ಧಾರವನ್ನು ತಿಳಿಸಿದೆ. ಮೇ 25 ರವರೆಗೆ ಐಪಿಎಲ್ ಟೂರ್ನಿ ನಡೆಯಬೇಕಿತ್ತು. ಆದರೆ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಇದೀಗ ಬಿಸಿಸಿಐ ಐಪಿಎಲ್ ಟೂರ್ನಿಯ ಮುಂದಿನ ಎಲ್ಲಾ ಪಂದ್ಯಗಳನ್ನು ರದ್ದು ಮಾಡಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಇದೀಗ ಐಪಿಎಲ್ ಟೂರ್ನಿಯಾ ಮುಂದಿನ ಎಲ್ಲಾ ಪಂದ್ಯಗಳು ರದ್ದು ಮಾಡಿ ಬಿಸಿಸಿಐ ಪ್ರಕಟಣೆ ಹೊರಡಿಸಿದೆ.

Read More

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಇದೀಗ ಇದರ ಪರಿಣಾಮ ಐಪಿಎಲ್ ಟೂರ್ನಿಯ ಮೇಲು ಬಿದ್ದಿದ್ದು ಬಹುತೇಕ ಐಪಿಎಲ್ ಟೂರ್ನಿಯ ಮುಂದಿನ ಎಲ್ಲಾ ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಐಪಿಎಲ್ ಟೂರ್ನಿ ಮುಂದಿನ ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ. ಐಪಿಎಲ್ ಟೂರ್ನಿಗಳ ಪಂದ್ಯಗಳು ರದ್ದತಿಯ ಬಗ್ಗೆ ಶೀಘ್ರವೇ ಬಿಸಿಸಿಐ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೇ 25 ರವರೆಗೆ ನಡೆಯಬೇಕಿರುವ ಐಪಿಎಲ್ ಟೂರ್ನಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ರದ್ದಾಗುವ ಸಾಧ್ಯತೆ ಇದೆ. ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯ ಅರ್ಧಕ್ಕೆ ಸ್ಥಗಿತವಾಗಿದ್ದು. ಪಂಜಾಬ್ ದೆಹಲಿ ನಡುವಿನ ಪಂದ್ಯ ಅರ್ಧಕ್ಕೆ ಸ್ಥಗಿತ ಆಗಿತ್ತು. ಪಂದ್ಯ ಆರಂಭಕ್ಕೂ ಮುನ್ನ ಕೆಲವು ನಿಮಿಷಗಳ ಕಾಲ ಮಳೆ ಸುರಿದಿತ್ತು. ಬಳಿಕ ಪಂದ್ಯ ಆರಂಭವಾದ ನಂತರ ಏಕಾಏಕಿ ಮೈದಾನದಿಂದ ಕ್ರಿಕೆಟ್ ಪ್ರೇಮಿಗಳನ್ನು ಹೊರಗಡೆ ಕಳುಹಿಸಲಾಯಿತು. ಪಂದ್ಯ ಕೂಡ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಸಿಸಿಐ ಶೀಘ್ರವೇ…

Read More

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೋಟಭದ್ರತೆ ಒದಗಿಸಲಾಗಿದೆ. ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಏರ್ಪೋರ್ಟ್ ನಲ್ಲಿ ಇದೀಗ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ಪೋರ್ಟ್ ಭದ್ರತಾ ಪಡೆ CISF ಸಿಬ್ಬಂದಿಯಿಂದ ಸೂಕ್ತ ಭದ್ರತೆ ಒದಗಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಶಸ್ತ್ರ ಸಜ್ಜಿತವಾಗಿ ರೌಂಡ್ಸ್ ಹಾಕುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

Read More

ಜಮ್ಮು ಕಾಶ್ಮೀರ : ಪಾಕಿಸ್ತಾನದ ಮೇಲೆ ಭಾರತ ದಾಳಿ ಮುಂದುವರಿಸಿದ್ದು ಇದೀಗ ಜಮ್ಮು ಕಾಶ್ಮೀರದ ಪಠಾಣ್ ಕೋಟ್ ನಲ್ಲಿ ಪಾಕಿಸ್ತಾನದ JF-17 ಜೆಟ್ ವಿಮಾನವನ್ನು ಭಾರತದ ಆಕಾಶ್ ಮಿಸೈಲ್ ಧ್ವಂಸಗೊಳಿಸಿದೆ. ಹೌದು ಪಠಾಣ್ ಕೋಟ್ ನಲ್ಲಿ ಪಾಕಿಸ್ತಾನ JF-17 ಜೆಟ್ ದ್ವಂಸ ಜೆ ಎಫ್ ಸೆವೆನ್ ಧ್ವಂಸಗೊಳಿಸಿದೆ. ಸ್ವದೇಶಿ ನಿರ್ಮಿತ ಭಾರತದ ಆಕಾಶ್ ಮಿಸೈಲ್ ಪಾಕಿಸ್ತಾನದ ಗೆಟ್ ವಿಮಾನವನ್ನು ಇದೀಗ ಹೊಡೆದುರುಳಿಸಿದೆ. ಇಷ್ಟಾದರೂ ಕೂಡ ಪಾಕಿಸ್ತಾನ ನಿರಂತರವಾಗಿ ಭಾರತದ ಮೇಲೆ ದಾಳಿ ಮಾಡುತ್ತಾರೆ ಆದರೂ ಕೂಡ ಭಾರತ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.

Read More

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.  ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ…

Read More

ಬೆಂಗಳೂರು : ಜಾತಿ ಗಣತಿ ವಿಚಾರವಾಗಿ ಇಂದು ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದ್ದು, ಕೇಂದ್ರ ಸರ್ಕಾರವೂ ಜಾತಿಗಣತಿ ಘೋಷಿಸಿರುವುದರಿಂದ ರಾಜ್ಯದ ಜಾತಿಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆಯಾಗುವ ನಿರೀಕ್ಷೆಯಿದೆ. 2015ರಲ್ಲಿ ನಡೆದಿದ್ದ ಸಮೀಕ್ಷೆಯ ವರದಿಯನ್ನು 2024ರ ಫೆ. 29ರಂದು ರಾಜ್ಯ ಸರಕಾರ ಸ್ವೀಕರಿಸಿತ್ತಲ್ಲದೆ, ಸಂಪುಟ ಸಭೆಯ ಮುಂದೆಯೂ ಪ್ರಸ್ತಾವನೆ ಮಂಡಿಸಿತ್ತು. ವರದಿಯ ಪ್ರತಿಯನ್ನು ಸಚಿವರಿಗೆ ನೀಡಿ ಅಧ್ಯಯನ ಮಾಡಿಕೊಂಡು ಬರಲು ತಿಳಿಸಿತ್ತು. ಆದರೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಲಿಖಿತವಾಗಿ ಅಭಿಪ್ರಾಯ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದರು. ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಕುರಿತು ಈ ಹಿಂದೆ ಏಪ್ರಿಲ್ 17, 2025ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು. ಈ ಆಕ್ಷೇಪಗಳನ್ನು ಪರಿಗಣಿಸಿ, ಸಚಿವರಿಗೆ ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸಲು ಸೂಚಿಸಲಾಗಿತ್ತು.ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಅಭಿಪ್ರಾಯಗಳು…

Read More

ಬೆಂಗಳೂರು : ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟ ಸಭೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಈ ಒಂದು ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಭದ್ರತೆಗಾಗಿ ಸಿಎಂ ಜೊತೆಗೆ ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಜಿ.ಪರಮೇಶ್ವರ್, ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟ ಸೂಚನೆಗಳನ್ನೇ ನಮಗೂ ಕೇಂದ್ರ ಸರ್ಕಾರ ಕೊಟ್ಟಿದೆ. ಎಲ್ಲಾ ಜಿಲ್ಲೆಗಳ ಎಸ್ಪಿ ಗಳಿಗೆ ಮುನ್ನೆಚ್ಚರಿಕೆ ಸೂಚನೆ ಕೊಡಲಾಗಿದೆ. ಮಾಹಿತಿಗಳನ್ನು ಸಂಗ್ರಹಿಸಲು ತಿಳಿಸಲಾಗಿದೆ. ಸ್ಲೀಪರ್ ಸಲ್ಗಳ ಮೇಲು ನಿಗಾ ಇಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಹೆಚ್ಚುವರಿ ಭದ್ರತೆಯ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡುತ್ತೇನೆ. ಸಂಪುಟ ಸಭೆಯಲ್ಲೂ ಭದ್ರತೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಪೊಲೀಸರಿಗೂ ಎಚ್ಚರಿಕೆ ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಲಾಶಯಗಳು ಪ್ರಮುಖ ಸ್ಥಳಗಳಲ್ಲಿ ಪೊಲೀಸ್…

Read More