Author: kannadanewsnow05

ದಾವಣಗೆರೆ : ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್ ತಗುಲಿ ಅಲ್ಲೇ ಕೆಲಸ ಮಾಡುತ್ತಿದ್ದ ದಂಪತಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಲತಾ ಹಾಗೂ ನಾಗರಾಜ್ ಎಂದು ತಿಳಿದುಬಂದಿದೆ. ನಾಗರಾಜ್ ಹಾಗೂ ಲತಾ ಇಬ್ಬರೂ ರೈತರಾಗಿದ್ದು, ದಿನನಿತ್ಯ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಮಳೆ ಹೆಚ್ಚಾಗಿದ್ದರಿಂದ ಬೆಳೆಯ ಆರೈಕೆ ಮಾಡುತ್ತಿದ್ದರು. ಮಳೆಯಿಂದ ಇಡೀ ಟ್ರಾನ್ಸ್‌ಫಾರ್ಮರ್ ಒದ್ದೆಯಾಗಿದ್ದು, ವಿದ್ಯುತ್ ಗ್ರೌಂಡ್ ಆಗಿದೆ‌. ಇದನ್ನು ಗಮನಿಸದ ಇಬ್ಬರೂ ಕೆಲಸ ಮಾಡುತ್ತಾ ಟ್ರಾನ್ಸ್‌ಫಾರ್ಮರ್ ಬಳಿ ತೆರಳಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ವಿಷಯ ತಿಳಿದು ಮಾಯಕೊಂಡ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ತಕ್ಷಣ ಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.‌ ಘಟನೆ ಸ್ಥಳಕ್ಕೆ ದಾವಣಗೆರೆ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಹಾವೇರಿ : ಭಾರತದಲ್ಲಿ ಇರುವಂತಹ ಮುಸ್ಲಿಂರು ಕೂಡ ಹಿಂದುಗಳೇ. ಶ್ರೀಲಂಕಾ, ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿರುವವರು ಸಹ ಹಿಂದೂಗಳೇ. ಹಿಂದೂ ಅಂದರೆ ಶುದ್ಧವಾದ ಜೀವನ ಪದ್ಧತಿ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಹಿಂದೂ ಅಂದರೆ ಸತ್ಯ ಹಾಗೂ ಸನಾತನ ಎಂದು ಹರಿಹರದ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ಹಾವೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಪ್ರತಿಯೊಬ್ಬರು ಕೂಡ ಹಿಂದೂಗಳೇ. ದೇಶ ಹಾಗೂ ಸಮುದಾಯ ಅಂತಾ ಬಂದಾಗ ನಾವೆಲ್ಲಾ ಹಿಂದೂಗಳು. ಬೇರೆ ಧರ್ಮಗಳು ಹುಟ್ಟುವ ಮೊದಲೇ ಇದ್ದಿದ್ದೇ ಹಿಂದೂ ಧರ್ಮ. ಜಗತ್ತಿನ ಸಿದ್ಧಾಂತ ತತ್ವಗಳಿಗೆ ಮೂಲವೇ ಹಿಂದೂ ಧರ್ಮವಾಗಿದೆ ಎಂದು ತಿಳಿಸಿದರು. ಇನ್ನೂ ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಮಾತನಾಡಿದ ಅವರು, ನಾವು ಒಂದಾಗದೇ ಪ್ರತ್ಯೇಕ ಧರ್ಮ ಮಾಡಲು ಹೇಗೆ ಸಾಧ್ಯವಿದೆ? ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಯಾಕೆ ಸಿಕ್ಕಿಲ್ಲ? ಕೆಲವು ಸ್ವಾಮೀಜಿಗಳು ನಾವು ಹಿಂದೂಗಳಲ್ಲ ಅಂತ ಹೇಳ್ತಾರಲ್ವಾ? ಹಾಗೇ ಹೇಳುವ ಸ್ವಾಮೀಜಿಗಳಿಗೆ ಸರ್ಟಿಫಿಕೇಟ್ ತೋರಿಸಲು ಹೇಳಿ. ಬಸವಣ್ಣ ಬ್ರಾಹ್ಮಣ,…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗು ಪೊಲೀಸರು ಎಫ್ಎಸ್ಎಲ್ ವರದಿ ಸೇರಿದಂತೆ ಹಲವು ಸಾಕ್ಷಿಗಳನ್ನು ಸಂಗ್ರಹಿಸಿ ತನಿಖೆ ನಡೆಸಿದ್ದಾರೆ. ಇದೀಗ ಎಲ್ಲಾ ವರದಿಗಳು ಸಿಕ್ಕ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿಮ ಘಟ್ಟ ತಲುಪಿದೆ. ಪ್ರಕರಣಕ್ಕೆ ಸಂಬಂಧಿಸಿದ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಮತ್ತು ಅಲ್ಲಿಂದ ಸುಮಾರು ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಹೇಳಿದರು. ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್​ಎಸ್​ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು…

Read More

ಬಿಹಾರ್ : ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ, ಕೊಲೆ ನಡೆದಿರುವ ಘಟನೆ ಮಾಸುವ ಮುನ್ನವೇ ಬಿಹಾರದಲ್ಲಿ ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಮತ್ತೊಂದು ಘಟನೆ ನಡೆದಿದೆ.14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸ್ತನಗಳು ಮತ್ತು ಗುಪ್ತಾಂಗವನ್ನು ಕತ್ತರಿಸಿ ಕೊಲೆ ಮಾಡಿದ್ದಾರೆ. ಹೌದು ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತರಿಸಿದ್ದಾರೆ. ಆಕೆಯ ಅರೆಬೆತ್ತಲೆ ಮೃತದೇಹವು ಸೋಮವಾರ ಕೊಳದಲ್ಲಿ ಪತ್ತೆಯಾಗಿದ್ದು, ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿತ್ತು ಎಂದು ತಿಳಿದುಬಂದಿದೆ. ಸಂತ್ರಸ್ತೆಯ ಪೋಷಕರು ಅದೇ ಗ್ರಾಮದ 41 ವರ್ಷದ ಸಂಜಯ್ ರೈ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪೋಲೀಸರ ಪ್ರಕಾರ, 14 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ದಿನಗೂಲಿಯನ್ನು ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ…

Read More

ವಿಜಯಪುರ : ಅತಿ ವೇಗದಿಂದ ಕಾರು ಚಾಲನೆ ಮಾಡಿದ ಹಿನ್ನೆಲೆಯಲ್ಲಿ 1,000 ದಂಡ ಕಟ್ಟುವ ವಿಚಾರವಾಗಿ ಟ್ರಾಫಿಕ್ ಪಿಎಸ್ಐ ಒಬ್ಬರು ಕಾರು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರ ನಗರದ ಬೇಗಂ ಕಲಾಬ್ ಪ್ರವೇಶ ದ್ವಾರದ ಬಳಿ ನಿನ್ನೆ ನಡೆದಿದೆ. ಹೌದು ವಿಜಯಪುರದಲ್ಲಿ ಕಾರು ಚಾಲಕನ ಮೇಲೆ ಟ್ರಾಫಿಕ್ ಪಿಎಸ್ಐ ಹಲ್ಲೆ ನಡೆಸಿದ್ದಾರೆ. ಬೇಗಂ ತಲಾಬ್ ಪ್ರವೇಶದ್ವಾರದ ಬಳಿ ಈ ಒಂದು ಘಟನೆ ನಿನ್ನೆ ನಡೆದಿದೆ. ಕಾರು ಚಾಲಕನ ಮೇಲೆ ಟ್ರಾಫಿಕ್ ಪಿಎಸ್ಐ ಅವಾಚ್ಯವಾಗಿ ನಿಂದಿಸಿದಲ್ಲದೆ ಹಲ್ಲೆ ಮಾಡಿದ್ದಾರೆ. ಕಾರು ಚಾಲಕನ ಮೇಲೆ ಪಿಎಸ್ಐ ನಿಖಿಲ್ ಕಾಂಬಳೆ ಹಲ್ಲೆ ಮಾಡಿದ್ದಾರೆ. ಅತಿ ವೇಗದ ಚಾಲನೆ ಹಿನ್ನೆಲೆಯಲ್ಲಿ ಕಾರನ್ನು ತಡೆಯಲಾಗಿತ್ತು. ಹಾಗಾಗಿ ಒಂದು ಸಾವಿರ ದಂಡ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿದೆ. ಟ್ರಾಫಿಕ್ ಪಿಎಸ್ಐ ಹಾಗೂ ಕಾರು ಚಾಲಕನ ಮಧ್ಯ ಕಿರಿಕ್ ಆಗಿದೆ. ಆಗ ಯಾಕೆ ಗುಂಡಾಗಿರಿ ಮಾಡುತ್ತೀರಿ ಅಂದಿದ್ದಕ್ಕೆ ಈ ವೇಳೆ ಸಿನಿಮಾ ಸ್ಟೈಲ್ ನಲ್ಲಿ ಟ್ರಾಫಿಕ್ ಪಿಎಸ್ಐ ಹಲ್ಲೆ…

Read More

ಮೈಸೂರು : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಪರಿಷ್ಕರಿಸುವುದಾಗಿ ಹೇಳುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಬಾರದು. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಗೆದ್ದಿರುವ ಕಾಂಗ್ರೆಸ್ ಯೋಜನೆ ಮುಂದುವರಿಸಬೇಕು. ಜನರು ಗ್ಯಾರಂಟಿ ಯೋಜನೆಗಳಿಗಾಗಿ ಅಧಿಕಾರ ನೀಡಿರುವಾಗ ಯೋಜನೆ ನಿಲ್ಲಬಾರದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ನಾಳೆ ಕೆ ಆರ್‌ಎಸ್ ಡ್ಯಾಮ್ ಪರಿಶೀಲಿಸಲು ತೆರಳುತ್ತಿದ್ದೇನೆ. ಪರಿಶೀಲನೆ ಬಳಿಕ ಮಾಹಿತಿ ತಿಳಿಯುತ್ತದೆ. ನೂರಾರು ವರ್ಷದ ಹಳೆಯ ಡ್ಯಾಮ್ ಆಗಿರುವ ಪರಿಶೀಲಿಸಬೇಕು. ರಾಜ್ಯದಲ್ಲಿ ಕಾಲ ಕಾಲಕ್ಕೆ ಜಲಾಶಯಗಳ ಪರಿಶೀಲನೆ ಆಗಬೇಕು. ಇದು ಸರ್ಕಾರಗಳ ಜವಾಬ್ದಾರಿ. ಪರಿಶೀಲನೆ ನಡೆಸಿ ಆಗಾಗ ದುರಸ್ತಿ ಕೆಲಸ ಮಾಡಬೇಕು. ನೂರಾರು ವರ್ಷಗಳ ಹಳೆಯ ಡ್ಯಾಮ್ ಗಳನ್ನು ಪರಿಶೀಲಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದರು. ಇನ್ನೂ ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆ ಕುರಿತು ಮಾತನಾಡಿದ ಅವರು, ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಮತ್ತೆ ಮಾತನಾಡುವುದು ಬೇಡ, ಪ್ರಾಧಿಕಾರ ರಚನೆಗೆ ವಿರೋಧ ಇದೆ.ದೇವಸ್ಥಾನಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದೆ…

Read More

ಕೋಲಾರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ವಿಪಕ್ಷ ನಾಯಕರು ಹೇಳುತ್ತಿದ್ದಾರೆ. ಇದರ ಮಧ್ಯ ಸಚಿವ ಭೈರತಿ ಸುರೇಶ್ 5 ಗ್ಯಾರಂಟಿಗಳಲ್ಲಿ ಯಾವುದೇ ರಿಯಾಯಿತಿನು ಇಲ್ಲ ಪರಿಷ್ಕರಣೆಯು ಇಲ್ಲ ಎಂದು ಸ್ಪಷ್ಟನೆ ನೀಡಿದರು. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿಗಳಲ್ಲಿ ಯಾವುದಕ್ಕೂ ರಿಯಾಯಿತಿ ಇಲ್ಲ. ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ 5 ಗ್ಯಾರಂಟಿಗಳನ್ನು ಮರುಪರಿಶೀಲನೆ ಮಾಡುವುದಿಲ್ಲ ಸಿಎಂ ಸಿದ್ದರಾಮಯ್ಯನವರು ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು. ಇನ್ನೂ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ನಮ್ಮ ಕೆಲವು ಸಚಿವರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಹೇಳಿಕೆ ನೀಡಿದ್ದಾರೆ.ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಹಾಗಾಗಿ ಆರ್ ಅಶೋಕವರು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಬಡವರಿಗಾಗಿಯೇ ಜಾರಿಗೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ…

Read More

ಹಾಸನ : ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಶ್ರೀಕಾಂತ್ (15) ಹಾಗೂ ವಿಜಯ (18) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕೆರೆಗೆ ಬಿದ್ದ ಚಪ್ಪಲಿಯನ್ನು ತೆಗೆದುಕೊಳ್ಳಲು ಶ್ರೀಕಾಂತ್ ನೀರಿಗೆ ಇಳಿದಿದ್ದ. ಈ ವೇಳೆ ಈಜು ಬಾರದೆ ಶ್ರೀಕಾಂತ ಕೆರೆಯಲ್ಲಿ ಮುಳುಗುತ್ತಿದ್ದ. ಕೂಡಲೇ ಶ್ರೀಕಾಂತ್ ನನ್ನು ಕಾಪಾಡಲು ಹೋಗಿ ವಿಜಯ್ ಕೂಡ ಸಾವನ್ನಪ್ಪಿದ್ದಾನೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಬೆಂಗಳೂರು: ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಮೂವರ ಗುಂಪೊಂದನ್ನು ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಜ್ಮಾ ಕೌಸರ್, ಮೊಹಮ್ಮದ್ ಅತೀಕ್ ಹಾಗೂ ಕರೀಂ ಉಲ್ಲಾ ಬಂಧಿತರು. ಹೌದು ಕೇವಲ ಯುವಕರನ್ನೇ ಬಂಧಿತರು ಟಾರ್ಗೆಟ್ ಮಾಡುತ್ತಿದ್ದರು. ಬಂಧಿತರಲ್ಲಿ ನಜ್ಮಾ ಎಂಬಾಕೆ ಬೆಂಗಳೂರಿನ ಯುವಕರನ್ನೇ ಗುರಿಯಾಗಿಸಿಕೊಂಡು,ಅವರೊಂದಿಗೆ ಕಷ್ಟ ಸುಖ ಮಾತನಾಡಿಕೊಂಡು ಆತ್ಮೀಯತೆ ಬೆಳೆಸಿಕೊಳ್ಳುತ್ತಿದ್ದಳು. ಅವರಿಂದ ಸಣ್ಣ ಮೊತ್ತದ ಹಣ ಪಡೆದು ಹಿಂತಿರುಗಿಸುವ ಮೂಲಕ ವಿಶ್ವಾಸ ಗಳಿಸುತ್ತಿದ್ದಳು. ಹಾಗೆಯೇ ಮುಂದುವರೆದು ದಿಢೀರನೆ ಒಮ್ಮೆ ಆ ಯುವಕರನ್ನು ಮನೆಯಲ್ಲಿ ಯಾರೂ ಇಲ್ಲ ಬಾ ಎಂದು ಕರೆಯುತ್ತಿದ್ದಳು. ಮನೆಗೆ ಹೋದವರನ್ನು ಲೈಂಗಿಕವಾಗಿ ಪ್ರಚೋದಿಸಿ ಬೆಡ್ ರೂಂಗೆ ಕರೆದೊಯ್ಯುತ್ತಿದ್ದಳು. ಬೆಡ್​ರೂಂಗೆ ಹೋಗುತ್ತಿದ್ದಂತೆಯೇ ಎಂಟ್ರಿಯಾಗುತ್ತಿದ್ದ ಉಳಿದ ಆರೋಪಿಗಳು ಬೆದರಿಸಿ, ಅತ್ಯಾಚಾರದ ಆರೋಪ ಹೊರಿಸಿ ಕೇಳಿದಷ್ಟು ಹಣ ಕೊಡುವಂತೆ ಪೀಡಿಸುತ್ತಿದ್ದರು. ಹಣ ಕೊಡದಿದ್ದರೆ ಕೇಸ್ ಹಾಕಿಸುತ್ತೇವೆಂದು ಬೆದರಿಸಿ ಸುಲಿಗೆ ಮಾಡುತ್ತಿದ್ದರು. ಇವರ ಒಂದು ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ ಎಂದರೆ ಕಳೆದ ವಾರ ಕೊರಿಯರ್ ಬಾಯ್…

Read More

ಬೆಂಗಳೂರು : ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾಮುಕರಿಂದ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಮಹಿಳೆಯರು ಹಗಲು ಹೊತ್ತಿನಲ್ಲಿ ಕೂಡ ಭಯದಿಂದ ಓಡಾಡುವ ವಾತಾವರಣ ನಿರ್ಮಾಣವಾಗಿದೆ. ಇದೀಗ ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನೊಬ್ಬ ಕಾಟ ನೀಡಿದ್ದು, ಶೌಚಾಲಯಕ್ಕೆ ತೆರಳಿದಾಗ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಮಹಿಳೆಯರ ಹೌಚಾಲಯದ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಆಗಸ್ಟ್ 10 ರಂದು ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ 9:30 ಶೋ ಬಳಿಕ ಇಂಟರ್ವಲ್ ನಲ್ಲಿ ಈ ಒಂದು ಕೃತ್ಯ ನಡೆದಿದೆ. ಶೌಚಾಲಯ ಕಿಟಕಿಯ ಮೇಲೆ ಮೊಬೈಲ್ ಇಟ್ಟು ಕಾಮುಕ ಮಹಿಳೆಯರ ರೆಕಾರ್ಡ್ ಮಾಡಿದ್ದಾನೆ. ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ಇದೀಗ ಯುವತಿಯ ದೂರಿನ ಅನ್ವಯ ಪೊಲೀಸರು ಅಪ್ರಾಪ್ತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕಲಾಸಿಪಾಳ್ಯ…

Read More