Author: kannadanewsnow05

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸರ್ಕಾರಿ ಶಾಲೆಯ ಶಿಕ್ಷಕಿಯ ಭೀಕರವಾಗಿ ಕೊಲೆಯಾಗಿದ್ದು, ಶಿಕ್ಷಕಿಯ ಕತ್ತು ಕೊಯ್ದು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ. ಮುಳಬಾಗಿಲಿನ ಮುತ್ಯಾಲಪೇಟ್ ಲೇಔಟ್ ನಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ. ಕತ್ತು ಕೊಯ್ದು ಶಿಕ್ಷಕಿಯನ್ನು ಮೂವರು ಹಂತಕರು ಕೊಲೆ ಮಾಡಿದ್ದಾರೆ, ಮುಳಬಾಗಿಲಿನ ಮುತ್ಯಾಲಪೇಟ್ ಲೇಔಟ್ ನಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ. ಕತ್ತು ಕೊಯ್ದು ಶಿಕ್ಷಕಿ ದೇವಿಶ್ರೀ (42) ಬರ್ಬರವಾಗಿ ಕೊಲೆಯಾಗಿದ್ದಾರೆ. ಮನೆಯಲ್ಲಿ ಮಗಳ ಜೊತೆ ಇದ್ದಾಗಲೇ ಶಿಕ್ಷಕಿಯ ಕೊಲೆಯಾಗಿದೆ. ಈ ವೇಳೆ ಹಂತಕರು ಮಗಳನ್ನು ಕೂಡ ಹತ್ಯೆಗೈಯಲು ಪ್ರಯತ್ನಿಸಿದ್ದು ಆದರೆ ಅದೃಷ್ಟವಶಾತ್ ಆಕೆ ಬಚಾವಾಗಿದ್ದಾಳೆ. ಕೊಲೆಯಾದ ದಿವ್ಯಶ್ರೀ ಮುಡಿಯನೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಉದ್ಯಮಿ ಪದ್ಮನಾಭ ಪತ್ನಿ ಕೂಡ ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ಕೋಲಾರ ಎಸ್ಪಿ ನಿಖಿಲ್ ಬಿ ಭೇಟಿ ನೀಡಿದ್ದಾರೆ. FSL ತಂಡದ ಅಧಿಕಾರಿಗಳು ಕೂಡ ಸ್ಥಳದಲ್ಲಿ…

Read More

ಕೋಲಾರ : ಸದ್ಯ ರಾಜ್ಯ ರಾಜಕೀಯದಲ್ಲಿ ಹಗರಣಗಳ ಕುರಿತು ಭಾರಿ ಚರ್ಚೆ ಆಗುತ್ತಿದ್ದೂ, ಅಲ್ಲದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜೆಡಿಎಸ್ ಈಗಾಗಲೇ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಿವೆ.ಇದರ ಮಧ್ಯ ಇಂತ ಪರಿಸ್ಥಿತಿಯಲ್ಲಿ ಸಿಎಂ ಬದಲಾದರು ಅಚ್ಚರಿ ಇಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲ ಮಯವಾಗಿದೆ. ಕಾಂಗ್ರೆಸ್ ಪಕ್ಷ ಇದೀಗ ಮನೆ ಒಂದು ಮೂರು ಬಾಗಿಲು ಆಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಗುಂಪುಗಾರಿಕೆ ಇದೆ. ಇಂಥ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾದರೂ ಅಚ್ಚರಿ ಇಲ್ಲ ಎಂದು ಕೋಲಾರದಲ್ಲಿ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದರು. ಗ್ಯಾರಂಟಿಗಳನ್ನು ತೊಲಗಿಸಿ ಅಭಿವೃದ್ಧಿ ಕಡೆಗೆ ಗಮನ ಕೊಡಿ.ಅನುದಾನ ಇಲ್ಲದೆ ಬರಿಗೈನಲ್ಲಿ ಸಂಸಾರ ಮಾಡುವಂತಾಗಿದೆ.ಈ ಕೆಟ್ಟ ಸರ್ಕಾರ ತೊಲಗಿ ಒಳ್ಳೆಯ ಸರ್ಕಾರ ಬರಬೇಕು. ಐದು ಗ್ಯಾರಂಟಿ ಘೋಷಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಜನರ ಕಿವಿಗೆ ದಾಸವಾಳ ಹೂವು…

Read More

ಮಂಡ್ಯ : ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯಾಗಿ ಸಂಪುಟ ಪುನರಚನೆ ಇಲ್ಲ ಎಂದು ಕೃಷಿ ಇಲಾಖೆಯ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಅಧಿಕಾರ, ಸಚಿವ ಸ್ಥಾನ ಪಡೆದುಕೊಳ್ಳಲು ಹಕ್ಕಿದೆ.ಪಕ್ಷದಲ್ಲಿ ಎಲ್ಲರೂ ಅಧಿಕಾರ ಕೊಡಬೇಕು. ಹೀಗಾಗಿ ಸಂಪುಟ ಪುನಾರಚನೆ ಅಥವಾ ಖಾತೆ ಬದಲಾವಣೆ ಮಾಡೋದು ಸಹಜ. ಆದರೆ, ಈಗ ಆ ವಿಚಾರ ಚರ್ಚೆಯಲ್ಲಿ ಇಲ್ಲ ಎಂದು ತಿಳಿಸಿದರು. ಇನ್ನೂ HDK ವಿರುದ್ಧ ವಾಗ್ದಾಳಿ ನಡೆಸಿದ ಅವರು,ಕುಮಾರಸ್ವಾಮಿ ಬೆಳಗ್ಗೆ ಎದ್ದರೆ ಸಾಕು ಸರ್ಕಾರ ತೆಗೀತೀವಿ ಅಂತಾರೆ. ಅದೇನು ಮಕ್ಕಳ ಆಟನಾ?. ಡಿ.ಕೆ.ಶಿವಕುಮಾರ್ ನಿಂದಿಸುವುದೇ ಕೆಲಸ ಅಂದುಕೊಂಡಿದ್ದಾರಾ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದಾಗ ಅವರ ಜೊತೆ ನಿಂತಿದ್ದು ಒಕ್ಕಲಿಗರೇ. ಮೊದಲ ಬಾರಿಗೆ ಸಿಎಂ ಆದಾಗ ಒಕ್ಕಲಿಗ ಚಲುವರಾಯಸ್ವಾಮಿ ಅವರ ಜೊತೆ ನಿಂತಿದ್ದರು. ಎರಡನೇ ಬಾರಿಗೆ ಸಿಎಂ ಮಾಡಿದ್ದು ಡಿ.ಕೆ.ಶಿವಕುಮಾರ್. ಇದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದರು. ನಿನ್ನೆ ಭತ್ತದ ನಾಟಿ ಮಾಡಿದ್ದಾರೆ. ನಾನು ನಾಟಿ…

Read More

ಮಂಡ್ಯ : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಇದೀಗ ದ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಅವರು ಧ್ವಜಾರೋಹಣ ಮಾಡಬಾರದು ಒಂದು ವೇಳೆ ಮಾಡಿದರೆ ಗ್ರಾಮದಲ್ಲಿ ಶಾಂತಿ ಹದಗೆಡುತ್ತೆ ಎಂದು ಕೇರಗೋಡು ಗ್ರಾಮಸ್ಥರು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಈ ಹಿಂದೆ ಹನುಮ ಧ್ವಜ ಹಾರಿಸಿದ್ದರಿಂದ 108 ಅಡಿ ಎತ್ತರದ ಅರ್ಜುನ ಸ್ತಂಭ ವಿವಾದಕ್ಕೆ ಕಾರಣವಾಗಿತ್ತು. ಇದೀಗ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದೆ. ನಾಳೆ ಆ.15 ಸ್ವತಂತ್ರ ದಿನಾಚರಣೆಯ ಹಿನ್ನೆಲೆಯಲ್ಲಿ ವಿವಾದಿತ ಅರ್ಜುನ ಸ್ತಂಭದಲ್ಲಿ ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇಂದು ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಶಾಸಕರು ಧ್ವಜಾರೋಹಣ ಮಾಡದಂತೆ ಆಗ್ರಹಿಸಿ, ಗ್ರಾಮಸ್ಥರೇ ಧ್ವಜಾರೋಹಣ ನೆರವೇರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

Read More

ಮೈಸೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಿ ಯಶಸ್ವಿಯಾಗಿವೆ. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ವಿರುದ್ಧವು ಕೂಡ ಬಿಜೆಪಿ ಪಾದಯಾತ್ರೆ ಹಮ್ಕಿಕೊಳ್ಳಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ವಾಲ್ಮೀಕಿ ಹಗರಣದ ಕುರಿತಂತೆ ಮೈಸೂರಿನಲ್ಲಿ ಇಂದು ಪ್ರತಾಪ್ ಸಿಂಹ ಮಾಧ್ಯಮಗಳೊಂದಿಗೆ ಮಾತನಾಡಿ, ಸೆ.17ಕ್ಕೆ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡಲು ನಿರ್ಧಾರವಾಗಿದೆ. ಬೆಳಗಾವಿಯಲ್ಲಿ ನಡೆದದ್ದು ಬಿಜೆಪಿ ಅತೃಪ್ತರ ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ ಎಂದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಒಂದು ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕbಆರ್ ಅಶೋಕ್, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಜೆಡಿಎಸ್ ಪಕ್ಷದ ಎಲ್ಲಾ ನಾಯಕರು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು. ಆದರೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಮೇಶ್…

Read More

ಬೆಂಗಳೂರು : ಅಡುಗೆ ಮಾಡಲು ಸ್ಟವ್ ಮೇಲೆ ಇಟ್ಟಿದ್ದ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಸಿನ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಜೆಪಿ ನಗರದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು, ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅದರಲ್ಲಿ ಮೋಸಿನ ಎನ್ನುವ ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನೊರ್ವ ಗಾಯಾಳು ಸಮೀರ್ ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಬೆಂಗಳೂರಿನ ಜೆಪಿ ನಗರದಲ್ಲಿ ಈ ಒಂದು ಅವಘಡ ಸಂಭವಿಸಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಈ ಸ್ಪೋಟ ಸಂಭವಿಸಿದೆ. ಇಬ್ಬರೂ ಯುವಕರು ಉತ್ತರ ಪ್ರದೇಶದ ಮೂಲದವರು ಎನ್ನಲಾಗಿದೆ. ಸ್ಪೋಟದ ತೀವ್ರತೆಗೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಕುಕ್ಕರ್ ನಿಂದ ಸ್ಪೋಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಹೊಟೇಲ್‌ನಲ್ಲಿ ಸುಟ್ಟ ವಯರ್‌ಗಳು…

Read More

ಬೆಂಗಳೂರು : ಹಬ್ಬಕ್ಕೆಂದು ತಾವರೆ ಹೂವು ತರಲು ತೆರಳಿದ್ದ ವ್ಯಕ್ತಿ ಒಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹೊಸ ಹಳ್ಳಿ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಹೂ ಕೀಳಲು ಹೋಗಿ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗೋವಿನ ಹಳ್ಳಿಯ ಸಿದ್ದಲಿಂಗಯ್ಯ (45) ದುರ್ಮರಣ ಹೊಂದಿದ್ದಾರೆ. ಹಬ್ಬಕ್ಕೆಂದು ತಾವರೆ ಹೂವು ತರಲು ಕೆರೆಗೆ ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಈ ವೇಳೆ ಕೆರೆಯಲ್ಲಿ ಮುಳುಗಿ ಸಿದ್ದಲಿಂಗಯ್ಯ ಸಾವನಪ್ಪಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹವನ್ನು ಹೊರಗಡೆ ತೆಗೆದಿದ್ದಾರೆ.ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ತುಮಕೂರು : ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳ ಉಂಟಾಗಿದ್ದು, ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮಗ ಮಚ್ಚಿನಿಂದ ತಂದೆಯನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಸಿದ್ದಪ್ಪ (45) ಎನ್ನುವ ಮಗ, ವೆಂಕಟಪ್ಪ (75) ವಯಸ್ಸಿನ ತಂದೆಯನ್ನು ಮಚ್ಚಿನಿಂದ ಹೊಡೆದು ಭೀಕರ ಕೊಲೆ ಮಾಡಿದ್ದಾನೆ.ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಹಾಗಿದ್ದರೂ ಮಗನಿಗೆ ಆಸ್ತಿ ಕೊಡದ ಕಾರಣ ಈ ಕೊಲೆ ನಡೆದಿದೆ.ಇತ್ತೀಚೆಗೆ ವೆಂಕಟಪ್ಪ ಜಮೀನು ಮಾರಾಟ ಮಾಡಿದ್ದ. ಮಾರಾಟ ಮಾಡಿ ಬಂದ ಜಮೀನಿನ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದ. ಜಮೀನನ್ನು ಸಹ ಮಗಳ ಹೆಸರಿಗೆ ಬರೆದುಕೊಟ್ಟಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ…

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಗ್ಗೆ ಹಬ್ಬಿರುವ ಊಹಾಪೋಹದ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯಗಳನ್ನ ನಿಲ್ಲಿಸಲ್ಲ. ಬಿಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ತಿಳಿಸಿದರು. ಇಂದು ಪದ್ಮನಾಭನಗರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ, ಯಾವುದೆ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಕೆಲವು ಕಡೆ ಅನುಕೂಲ ಇದ್ದವರು ಕೂಡ ಯೋಜನೆ ಪಡೆಯುತ್ತಿದ್ದಾರೆ. ತೆರಿಗೆ ಪಾವತಿಸುವವರು, ಉಳ್ಳವರು ಪಡೆಯುತ್ತಿದ್ದಾರೆ ಎಂಬ ದೂರು ಬಂದಿದೆ.ಆ ಕುರಿತು ಪರಿಶೀಲನೆ ಮಾಡುತ್ತೇವೆ ಆದರೆ ಯೋಜನೆಗಳನ್ನು ಮಾತ್ರ ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದರು. ಹಿಂದೆ ನಾವು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದಾಗ ಇದರಿಂದ ಕುಟುಂಬಗಳಲ್ಲಿ ಅತ್ತೆ-ಸೊಸೆ ನಡುವೆ…

Read More

ಹಾವೇರಿ : ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವತಿ ಸಾವನ್ನಪ್ಪದ್ದು ಐದು ಜನರಿಗೆ ಗಾಯವಾದ ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ಹೊರವಲಯದ ಗೊಂದಿ – ತಡಸ ರಸ್ತೆಯಲ್ಲಿ ಈ ಒಂದು ಅಪಘಾತ ನಡೆದಿದೆ. ಹಾನಗಲ್​ ತಾಲೂಕಿನ ಮೂಡುರು ಗ್ರಾಮದ ಕೀರ್ತಿ ಮಣ್ಣಮ್ಮನವರ್(21) ಮೃತ ಯುವತಿ. ಹನುಮಂತಪ್ಪ (55), ರಕ್ಷಿತಾ (12), ಅಶ್ವಿತಾ (10), ವಿಜಯ (24), ಸುಮಾ (23) ಎಂಬುವವರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಗೆಜ್ಜೆಹಳ್ಳಿ ಗ್ರಾಮದಿಂದ ಹಾನಗಲ್ ಕಡೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಹಾನಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More