Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆ.10ರಿಂದ 5 ದಿನಗಳ ಕಾಲ ‘ಏರೋ ಇಂಡಿಯಾ-2025’ ವೈಮಾನಿಕ ಪ್ರದರ್ಶನ ಆಯೋಜನೆ
ಬೆಂಗಳೂರು: 2 ವರ್ಷಗಳಿಗೊಮ್ಮೆ ಬೆಂಗಳೂರಿನ ಯಲಹಂಕ ಏರ್ಫೋರ್ಸ್ ಸ್ಟೇಷನ್ನಲ್ಲಿ ನಡೆ ಯುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ ಫೆ. 10ರಿಂದ 14ರವರೆಗೆ5 ದಿನಗಳಕಾಲ ನಡೆಯಲಿದೆ ಎಂದು ರಕಣಾ ಇಲಾಖೆ ಗುರುವಾರ ಘೋಷಿಸಿದೆ. 13 ರಕ್ಷಣಾ ಇಲಾಖೆ, ಎಚ್ಎಎಲ್, ಭಾರತೀಯ ವಾಯುಸೇನೆ, ಡಿಆರ್ ಡಿಒ, ನಾಗರಿಕ ವಿಮಾನ ಯಾನ ಸಚಿವಾಲಯಗಳು ಜಂಟಿಯಾಗಿ ಆಯೋ ಜಿಸುವ ಈ ಪ್ರದರ್ಶನದಲ್ಲಿ ದೇಶ-ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸುತ್ತವೆ ಎಂದು ತಿಳಿದುಬಂದಿದೆ. ಯುದ್ಧ ವಿಮಾನ, ಹೆಲಿಕಾಪ್ಟರ್, ನಾಗರಿಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿ ದಂತೆ ರಕ್ಷಣಾ ವಲಯ ಮತ್ತು ನಾಗರಿಕ ವಿಮಾನ ಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ದಿಯ ಉತ್ಪನ್ನಗಳು ಪ್ರದರ್ಶನಕ್ಕೆ ಇರುತ್ತವೆ. ಏರೋ ಇಂಡಿಯಾದಲ್ಲಿ ಕಂಪನಿಗಳು ಭಾಗವಹಿಸಲು ಮತ್ತು ನಾಗರಿಕರು ಪ್ರದರ್ಶನ ವೀಕ್ಷಣೆಗೆ ನೋಂದಣಿ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಆರಂಭವಾಗಲಿದೆ.
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿ ವಿಜಯ್ ತಾತಾ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಇದರ ಬೆನ್ನಲ್ಲೆ ಮಾಜಿ ಎಂಎಲ್ಸಿ ರಮೇಶ್ ಗೌಡ ಉದ್ಯಮಿಯ ವಿರುದ್ಧ ಪ್ರತಿ ದೂರನ್ನು ದಾಖಲಿಸಿದ್ದಾರೆ. ಹೌದು ಕಳೆದ ಆಗಸ್ಟ್ 24ರಂದು ವಿಜಯ್ ತಾತ ತಮ್ಮ ಮನೆಗೆ ಕರೆದಿದ್ದರು. ಊಟಕ್ಕೆ ಎಂದು ಕರೆದಿದ್ದಾಗ ನನಗೆ 100 ಕೋಟಿ ರೂಪಾಯಿ ಹಣ ಬೇಕು ಎಂದು ಹೇಳಿದ್ದರು ಆಗ ನಾನು ನನ್ನ ಹತ್ತಿರ ಇಲ್ಲ ಎಂದಾಗ ನನಗೆ ಧಮ್ಕಿ ಹಾಕಿದ್ದಾರೆ ಎಂದು ರಮೇಶ್ ಗೌಡ ದೂರು ಸಲ್ಲಿಸಿದ್ದಾರೆ. ನಾನು ಈಗ ತುಂಬಾ ಲಾಸ್ ನಲ್ಲಿ ಇದ್ದೇನೆ ನನಗೆ ಈಗ 100 ಕೋಟಿ ರೂಪಾಯಿ ಅವಶ್ಯಕತೆ ಇದೆ. ಒಂದು ವೇಳೆ ನನಗೆ 100 ಕೋಟಿ ರೂಪಾಯಿ ಕೊಡದೆ ಹೋದರೆ ನಿಮ್ಮನ್ನು ಮತ್ತು ಕುಮಾರಸ್ವಾಮಿ ಅವರನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ಹೊಸ ಬಾಂಬ್ ಸಿಡಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೇನೆ. ನಾನು ನೀಡಿದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ನನಗೆ ಸ್ಪಷ್ಟನೆ ಕೇಳಿದ್ದರು.ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ತಿಳಿಸಿದರು. ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ…
ಬಳ್ಳಾರಿ : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು ಇದರ ಮಧ್ಯೆ ಶಾಸಕ ಜನಾರ್ಧನ ರೆಡ್ಡಿ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಸ್ಪೋಟಕವಾದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 5,000 ಕೋಟಿ ರೂಪಾಯಿಯ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಬೇನಾಮಿ ಆಸ್ತಿಯ ಬಾಂಬ್ ಸಿಡಿಸಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಬಹಳ ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ. ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿಯ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು,ಸಿದ್ದರಾಮಯ್ಯ ಹಿಂದೆ ಮಾಡಿದ್ದಕ್ಕೆ ಈಗ ಅನುಭವಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ 14 ಸೈಟು 62 ಕೋಟಿ ರೂಪಾಯಿ ಈ ವಿಚಾರ ಅಲ್ಲ ಸಿದ್ದರಾಮಯ್ಯ, ಅವರ ಕುಟುಂಬಸ್ಥರು ಮತ್ತು ಸಂಬಂಧಿಕರ ಮೂಲಕ 5,000…
ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ರಾಜ್ಯದ ಎಲ್ಲಾ ಜನತೆಗೆ ಒಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾದ ಹಾರ್ದಿಕ ಶುಭಾಶಯಗಳು. ಈ ವರ್ಷ ಅಕ್ಟೋಬರ್ ಮೂರರಿಂದ ಅಕ್ಟೋಬರ್ 12ರವರೆಗೆ ಮೈಸೂರು ದಸರಾ ಹಬ್ಬಕ್ಕೆ ನಿಮ್ಮೆಲ್ಲರಿಗೂ ಆತ್ಮೀಯವಾಗಿ ಸ್ವಾಗತ ಕೋರಲು ಹರ್ಷಿಸುತ್ತೇನೆ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ದಸರಾ ಹಬ್ಬ, ದುಷ್ಟ ಶಕ್ತಿಗಳ ವಿರುದ್ಧ ವಿಜಯ ಸಾಧಿಸಿದ ವಿಜಯದ ಸಂಕೇತವು ಹೌದು. ಸಾಂಪ್ರದಾಯಿಕವಾದ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕಲೆ ಸಾಹಿತ್ಯ ಸಂಗೀತ ಕ್ರೀಡಾಕ್ಷೇತ್ರ ಗಳಲ್ಲಿನ ಸಾಧನೆಗಳ ವಿಜಯೋತ್ಸವವಾಗಿಯೂ ನಾಡಹಬ್ಬವನ್ನು ಆಚರಿಸುತ್ತಾ ಬಂದಿದ್ದೇವೆ.ಕಳೆದ ಬಾರಿ ಅನಿವಾರ್ಯವಾಗಿ ದಸರಾ ಹಬ್ಬದ ಸಾಂಪ್ರದಾಯಕ್ಕೆ ಒಂದಿಷ್ಟು ಚ್ಯುತಿ ಬಾರದಂತೆ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಿದ್ದೆವು. ಈ ಬಾರಿ ನಾಡಿನ ಅಧಿದೇವತೆಯಾದ ಚಾಮುಂಡೇಶ್ವರಿ ತಾಯಿಯ ಆಶೀರ್ವಾದದಿಂದ ಪ್ರಕೃತಿ ಒಲಿದು…
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ ಅಯೋಗ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಾಗಿತ್ತು. ಇಂದು ಹೈಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರದೀಪ್ ಈಶ್ವರ್ ಹೇಳಿದ್ದೇನು? ಅಯೋಧ್ಯಾ ಶ್ರೀ ರಾಮ ದೇವಸ್ಥಾನ ಉದ್ಘಾಟನೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್,…
ಬೆಳಗಾವಿ : ವಾಣಿಜ್ಯ ಮಳಿಗೆಯ ಕುರಿತು ಮಾಹಿತಿ ಪಡೆಯಲು ಪುರಸಭೆಗೆ ಬಂದಿದ್ದ ವಕೀಲರೊಬ್ಬರೂ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯ ಪುರಸಭೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಮುಖ್ಯಾಧಿಕಾರಿ ಅಶೋಕ ಗುಡಿಮನಿ ಮೇಲೆ ವಕೀಲನೆಂದೆ ಹಲ್ಲೆ ನಡೆದಿದೆ. ಪುರಸಭೆ ಮುಖ್ಯ ಅಧಿಕಾರಿ ಮೇಲೆ ವಕೀಲ ಮಿತೇಶ್ ಪಟ್ಟಣ ಹಲ್ಲೆ ಮಾಡಿದ್ದಾರೆ. ಪಟ್ಟಣದ ವಾಣಿಜ್ಯ ಮಳಿಗೆ ಬಗ್ಗೆ ವಕೀಲರು ಮಾಹಿತಿ ಕೇಳಿದ್ದರು. ಮಳಿಗೆ ಬಗ್ಗೆ ಮಾಹಿತಿ ಕೇಳಿ ಮುಖ್ಯ ಅಧಿಕಾರಿ ಜೊತೆಗೆ ವಾಗ್ವಾದ ಮಾಡಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ವಕೀಲರು ಮಾತಿಗೆ ಮಾತು ಬೆಳೆದು ಮುಖ್ಯಾಧಿಕಾರಿ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಅಥಣಿ ಸರಕಾರಿ ಆಸ್ಪತ್ರೆಗೆ ಸದ್ಯ ಪುರಸಭೆಯ ಮುಖ್ಯಾಧಿಕಾರಿ ದಾಖಲಾಗಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಅವರ ಪತ್ನಿ ಪಾರ್ವತಿಯವರು, ಮುಡಾಗೆ 14 ಸೈಟ್ ಗಳನ್ನು ವಾಪಸ್ ನೀಡಿದ್ದಾರೆ. ಆದರೆ ವಿಪಕ್ಷಗಳು ಎಷ್ಟೇ ಒತ್ತಾಯ ಮಾಡಿದರು, ನಾನು ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಈ ವಿಚಾರವಾಗಿ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವರು ಸಿಎಂ ಸಿದ್ದರಾಮಯ್ಯ ನಾನೇ ಜಡ್ಜ್ ಎನ್ನುವ ಮನಸ್ಥಿತಿಯಿಂದ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಆರ್ ಅಶೋಕ್ ಅವರ 11 ವರ್ಷಗಳ ಹಳೆಯ ಪ್ರಕರಣವನ್ನು ಎತ್ತಿದ್ದಾರೆ. ಇವರಿಗೆ ಸಿದ್ದರಾಮಯ್ಯ ರಾಜೀನಾಮೆ ಕೇಳುವ ತಾಕತ್ ಇಲ್ಲ. ಅಶೋಕ ರಾಜೀನಾಮೆ ಕೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಧ್ವನಿ ಎತ್ತಿದ್ದಾರೆ ಎಂದರು. ಆರ್.ಅಶೋಕ ಹೆಗಲ ಮೇಲೆ ಬಂದೂಕಿಟ್ಟು ಸಿದ್ದರಾಮಯ್ಯಗೆ ಗುರಿ ಇಟ್ಟಿದ್ದಾರೆ.ಸಿದ್ದರಾಮಯ್ಯ ಕಡೆ ಬಹಳ ಬಂದೂಕು ಇವೆ ಎಂಬುದು ಸ್ಪಷ್ಟವಾಗಿದೆ. ಸಿದ್ದರಾಮಯ್ಯ ನಾನೆ ಜಡ್ಜ್…
ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಮುಡಾ ಸೈಟ್ ಹಂಚಿಕೆಯಾಗಿದೆ ಹಾಗಾಗಿ ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದರು. ಈ ವಿಚಾರವಾಗಿ ಎಂಎಲ್ಸಿ ಸಿಟಿ ರವಿ ಅವರು ಶಾಸಕ ಎಸ್ ಟಿ ಸೋಮಶೇಖರ್ ಗೆ ಆತ್ಮಸಾಕ್ಷಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನೈತಿಕ ಮೌಲ್ಯ ಎತ್ತಿ ಹಿಡಿಯುವ ಯಾವುದೇ ರಾಜಕಾರಣಿ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ನೀಡುತ್ತಾರೆ. ಜಿ ಟಿ ದೇವೇಗೌಡರ ಹೇಳಿಕೆಗೆ ಉತ್ತರಿಸುವ ಕೆಲಸ ನಂದಲ್ಲ.ಎಸ್ ಟಿ ಸೋಮಶೇಖರ್ ಆತ್ಮಸಾಕ್ಷಿ ಇಲ್ಲದಿರುವ ಕಾರಣಕ್ಕೆ ತಾಂತ್ರಿಕವಾಗಿ ಮಾತ್ರ ಬಿಜೆಪಿಯಲ್ಲಿ ಇದ್ದಾರೆ ಸೋಮಶೇಖರ್ ಜಿ ಟಿ ದೇವೇಗೌಡ ಬಗ್ಗೆ ನಾನು ಮಾತನಾಡುವುದಿಲ್ಲ ನಮ್ಮ ಪಕ್ಷದ ನಿಲುವಿನಲ್ಲಿ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.
ನವದೆಹಲಿ : ತಿರುಪತಿ ಲಡ್ಡು ವಿಚಾರವಾಗಿ ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ರಾಜಕೀಯದಲ್ಲಿ ದೇವರನ್ನು ಎಳೆದು ತರಬೇಡಿ ಎಂದು ಹಿಗ್ಗಾ ಮುಗ್ಗ ಜಾಡಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆ ಮುಂದೂಡಲಾಯಿತು. ಹೌದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಾಳೆಗೆ ಭಾರತದ ಸುಪ್ರೀಂ ಕೋರ್ಟ್ ಮುಂದೂಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಾಳೆಗೆ ಬೆಳಿಗ್ಗೆ 10.30ಕ್ಕೆ ಮುಂದೂಡುವಂತೆ ಕೋರಿದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ…














