Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್…
ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಿಎಸ್ಐ ಪರಶುರಾಮ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕೂಡಲೇ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿದರು. ಮೃತ ಪರಶುರಾಮ್ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕುವ ಸಾಧ್ಯತೆ ಇದೆ. ಈ ಘಟನೆಯಲ್ಲಿ ಆಡಳಿತ ಪಕ್ಷದ ಶಾಸಕರದ್ದೇ ಕೈವಾಡ ಇರುವುದರಿಂದ ಸರ್ಕಾರ ಕ್ರಮ ಜರುಗಿಸಲು ಹಿಂದುಮುಂದು ನೋಡುತ್ತದೆ. ಸಂವಿಧಾನ, ಅಂಬೇಡ್ಕರ್ ಬಗ್ಗೆ ಸಿಎಂ ಭಾಷಣ ಮಾಡುತ್ತಾರೆ. ಅವರಿಗೇಕೆ ಈ ಕುಟುಂಬದ ರೋದನೆ ಅರ್ಥವಾಗುತ್ತಿಲ್ಲ ಎಂದು ಕಿಡಿ ಕಾರಿದರು. ಪರುಶುರಾಮ್ ಸಾವನ್ನಪ್ಪಿ ಇಂದಿಗೆ 11 ದಿನಗಳು ಕಳೆದಿವೆ. ಈ ಘಟನೆಗೆ ಕಾರಣರಾದ ಅಪರಾಧಿಗಳು ಯಾರೆಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಅವರ ಬಂಧನವಾಗಿಲ್ಲ.…
ಹಾಸನ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಆದರೆ ಯುವಕ ಎದೆಗುಂದದೆ ಚಿರತೆಯೊಂದಿಗೆ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ ನವೀನ್ ಎಂಬ ಯುವಕನ ಮೇಲೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ. ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ ಚಿರತೆ ವಿರುದ್ಧ ಸೆಣೆಸಾಡಿದ್ದಾನೆ. ಬಳಿಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿದ್ದಾರೆ. ಜನರನ್ನ ನೋಡಿದ ಚಿರತೆ ಕಾಡಿನೊಳಗೆ ಓಡಿ ಹೋಗಿದೆ. ಗಾಯಗೊಂಡ ನವೀನ್ ಅನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ನವೀನ್ ದಾಖಲಾಗಿರುವ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಗೋಪನಹಳ್ಳಿ ಕೆರಗೋಡು ಭಾಗದಲ್ಲಿ ಚಿರತೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೂಡಲೇ ಬೋನು ಇಟ್ಟು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ. ಹೌದು ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್ಐ ಸುನಿಲ್ ಗುಂಡು ಹೊಡೆದಿದ್ದಾರೆ. ಆರೋಪಿ ಭವಿತ್ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಭವಿತ್ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದ್ದು, ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಭವಿತ್ ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಹಲ್ಲೆಗೆ ಒಳಗದ ಕಾನ್ಸ್ಟೇಬಲ್ ಪ್ರಶಾಂತ್ ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು. ಈ ಹಿಂದೆ ನಮ್ಮ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಸಾಮೂಹಿಕ ನಾಯಕತ್ವದಲ್ಲಿಯೇ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದೂತ್ವವೇ ಹೊರಟು ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ 12 ಜನ ಬಿಜೆಪಿ ನಾಯಕರು ಸಭೆ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಸಭೆ ನಡೆಸಿದವರು ಸಂಘಟನೆಯಲ್ಲಿದ್ದು,…
ಬೆಂಗಳೂರು : ಅನಧಿಕೃತ ಫ್ಲೈಕ್ಸ್ ಬ್ಯಾನರ್ ಅಳವಡಿಕೆ ಸಂಬಂಧ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು, ಜನದಟ್ಟಣೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಫ್ಲೇಕ್ಸ್ ಬ್ಯಾನರ್ ಅಳವಡಿಸದಂತೆ ನಿರ್ದೇಶನ ನೀಡಿದೆ. ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ ಅಳವಡಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಇದೇ ವಿಚಾರವಾಗಿ ಮಾಧ್ಯಮಗಳ ವರದಿಯನ್ನು ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಆರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಪ್ರತಿಮಾ ಹೊನ್ನಾಪುರ, ನಗರದಲ್ಲಿ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್ಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಬೈಲಾ ಕರಡು ಸಿದ್ಧಪಡಿಸಲಾಗಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಎಲ್ಲ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು. ವಕೀಲ ಜಿ.ಆರ್.ಮೋಹನ್ ವಾದಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್ಗಳ…
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ತನಿಖೆ ಸಮ್ಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಮ್ಮತಿಯನ್ನು ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಹಿಂಪಡೆದಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈ ಕೋರ್ಟಿನ ನ್ಯಾಯಧೀಶರಾದ ನ್ಯಾ. ಸೋಮಶೇಖರ್ ಹಾಗೂ ನ್ಯಾ. ಉಮೇಶ್ ಎಂ. ಅಡಿಗರಿದ್ದ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಇದೀಗ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಏನಿದು ಪ್ರಕರಣ? ಡಿಕೆ ಶಿವಕುಮಾರ್…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಮುಗಿಸಿದವು. ಆದರೆ ಪಾದಯಾತ್ರೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಭಾಗವಹಿಸಿರಲಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿತ್ತು. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷ ಟಿಕೆಟ್ ನೀಡದಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಬಹುದಾಗಿ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಹೈಕಮಾಂಡ್ ಬುಲಾವ್ ಹಿನ್ನೆಲೆ ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದರು. ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್ಡಿಎ ವಶಕ್ಕೆ…
ಯಾದಗಿರಿ : ಬಡವರಿಗಾಗಿಯೇ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಬಡವರಿಗೆ ಎಷ್ಟರ ಮಟ್ಟಿಗೆ ಅಕ್ಕಿ ತಲುಪುತ್ತದೆಯೋ ಗೊತ್ತಿಲ್ಲ. ಆದರೆ ಅಕ್ಕಿ ಕಳ್ಳರು ಅಕ್ರಮವಾಗಿ ಈಗಲೂ ಸಹ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಬೇರೆ ರಾಜ್ಯಗಳಿಗೆ ಸಾಗಿಸುತ್ತಿದ್ದು, ಇದೀಗ ಯಾದಗಿರಿಯಲ್ಲಿ 5 ಲಕ್ಷ ಮೌಲ್ಯದ 280 ಅನ್ನಭಾಗ್ಯ ಅಕ್ಕಿ ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೌದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಬಳಿ ಲಾರಿ ಸಮೇತ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಭೀಮರಾಯನ ಗುಡಿ ಬಳಿ ಸುಮಾರು 5 ಲಕ್ಷ ಮೌಲ್ಯದ 280 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಲ್ಬುರ್ಗಿಯಿಂದ ಲಾರಿಯು ಹೈದರಾಬಾದ್ ಕಡೆಗೆ ತೆರಳುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು, ಲಾರಿ ವಶಕ್ಕೆ ಪಡೆದು ಆಹಾರ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲದೆ ಲಾರಿ ಚಾಲಕ ರಾಜು ರಾಥೋಡ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ನೂತನವಾಗಿ ಜನೌಷಧಿ ಕೇಂದ್ರ ಆರಂಭಿಸಲು ಅನುಮತಿ ನೀಡಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸ್ಪಷ್ಟನೆ ನೀಡಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ.ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಸಿಗುವಾಗ ಜನೌಷಧಿ ಕೇಂದ್ರ ಯಾಕೆ ಬೇಕು? ಇದರಿಂದ ಆಸ್ಪತ್ರೆಯ ಒಳಗಡೆ ವರ್ತುಲ ಸೃಷ್ಟಿಯಾಗುತ್ತದೆ. ಹಿಂದೆ ಯಾರು ಅನುಮತಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಹೊಸ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದರು. ಸರ್ಕಾರದಿಂದ ಔಷಧಿಗಳು, ಮಾತ್ರೆಗಳು ಉಚಿತ ಬರುತ್ತದೆ ಹೌದು. ಆದರೆ ಎಲ್ಲಾ ಮಾತ್ರೆಗಳು ಸಿಗುವುದಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬಳಿ ಜನೌಷಧಿ ಕೇಂದ್ರ ತೆರೆದರೆ ನಿಮಗೆ ಏನು ಕಷ್ಟ ಎಂದು ಜನರು ಈಗ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಮಾತ್ರೆ ಕೊಡುತ್ತೇವೆ. ಹೀಗಾಗಿ ಜನರು ದುಡ್ಡು ನೀಡಿ ಮಾತ್ರೆ ಖರೀದಿ…