Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿಯಲ್ಲಿ ಗೌರವದ ದುರಂತ ಒಂದು ನಡೆದಿದ್ದು ನೀರಿನ ಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಾದಚಾರಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಷಣ್ಮುಖ ಬಣಗಾರ್ (38) ಎನ್ನುವ ಪಾದಚಾರಿಯೊಬ್ಬರು ಸಾವನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಚಾಲಕನ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಹರಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಣಿಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಟ್ರಾಕ್ಟರ್ ಮಾಲೀಕ ಮಾಲತೇಶ್ ಹಾಗೂ ಚಾಲಕ ಮಾರುತಿ ವಿರುದ್ಧ FIR ದಾಖಲಾಗಿದೆ.
ಯಾವುದೇ ಧರ್ಮ ಮತ್ತು ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹೇಳಿದ್ದಾರೆ. ರೋಮಿನ ವ್ಯಾಟಿಕನ್ ನಗರದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯೊಂದಿಗೆ ಆಯೋಜಿಸಲಾದ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದರು. ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು…
ಮೈಸೂರು : ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ನಲ್ಲಿ ಸಂಚರಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಎಚ್ ಡಿ ಕೋಟೆ ಘಟಕಕ್ಕೆ ಸೇರಿದ KSRTC ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಲಾಪುರ ಜಕ್ಕಹಳ್ಳಿ ಗ್ರಾಮದ ಮಾರ್ಗ ಮದ್ಯ ಈ ಘಟನೆ ನಡೆದಿದೆ. ನಡಾಡಿ ಗ್ರಾಮದಿಂದ ಎಚ್ ಡಿ ಕೋಟೆಗೆ ಈ ಒಂದು ಬಸ್ ತೆರಳುತ್ತಿತ್ತು. ಎಚ್ ಡಿ ಕೋಟೆ ಘಟಕಕ್ಕೆ ಸೇರಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.ಬಸ್ ನಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ : ಆ ಯುವತಿಗೆ ಮದುವೆಯಾಗಿತ್ತು. ಆದರೂ ಕೂಡ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಈಕೆಯ ಫೋಟೋ ಹಾಕಿದ್ದಾನೆ. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ, ಮನನೊಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಒಂದು ಘಟನೆಯು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆರತಿ ಕಾಂಬಳೆ (26) ಎಂದು ತಿಳಿದುಬಂದಿದೆ. ಈಕೆ ಮದುವೆಯಾಗಿ ರಾಯಭಾಗ್ ತಾಲೂಕಿನ ಮೊರಬ ಗ್ರಾಮದಲ್ಲಿ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು. ಆರತಿಗೆ ಮದುವೆ ಆಗಿದ್ದರೂ ಇನ್ನೊಬ್ಬನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು.ಆರತಿ ಜೊತೆ ಸ್ನೇಹ ಬೆಳೆಸಿದ್ದ ಸಾಗರ ಕಾಂಬಳೆ ತನ್ನ ವಾಟ್ಸ್ಆಯಪ್ ಸ್ಟೇಟಸ್ನಲ್ಲಿ ಆರತಿಯ ಫೋಟೋ ಹಾಕಿದ್ದಾನೆ. ಸಾಗರ ವಾಟ್ಸಪ್ ಸ್ಟೇಟಸ್ನಲ್ಲಿ ಆರತಿ ಫೋಟೋ ಹಾಕಿದ್ದು ಫುಲ್ ವೈರಲ್ ಆಗಿತ್ತು. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ಮನನೊಂದು ಇಂದು ಆರತಿ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಸಂಬಂಧಿಕರ…
ಮಹಾರಾಷ್ಟ : ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ NDA ಮೈತ್ರಿ ಕೂಟದ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಆದರೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಈ ಒಂದು ಗ್ರಾಮದಲ್ಲಿ ಗ್ರಾಮಸ್ಥರು ಇವಿಎಂ ಮಷೀನ್ಗಳ ಮೇಲೆ ಅಪನಂಬಿಕೆ ಹೊಂದಿದ್ದು ಇಂದು ಅವರು ಬ್ಯಾಲೆಟ್ ಪೇಪರ್ ಮತದಾನ ಮಾಡುವ ಮೂಲಕ ಅಣುಕು ಮತದಾನ ನಡೆಸಿದ್ದಾರೆ. ಹೌದು ಮಹಾರಾಷ್ಟ್ರದ ಗ್ರಾಮ ಒಂದರಲ್ಲಿ ಬ್ಯಾಲೆಟ್ ಪೇಪರ್ ಮತದಾನ ನಡೆದಿದ್ದು, ಸೊಲ್ಲಾಪುರ ಜಿಲ್ಲೆಯ ಮರ್ಕಡ್ವಾಡಿಯಲ್ಲಿ ಅಧಿಕೃತ ಮತದಾನ ಪ್ರಕ್ರಿಯೆ ನಡೆದಿದೆ. ಇವಿಎಂ ಮಷಿನ್ ಮೇಲೆ ನಂಬಿಕೆ ಇಲ್ಲದೆ ಬ್ಯಾಲೆಟ್ ಪೇಪರ್ ಮತದಾನ ನಡೆಸಲಾಗಿದೆ. ಮರ್ಕಡ್ವಾಡಿ ಗ್ರಾಮದವರೇ ಈ ಒಂದು ಅಣುಕು ಮತದಾನ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮರ್ಕಡ್ವಾಡಿ ಗ್ರಾಮದಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಸಿತ್ತು. ಹಾಗಾಗಿ ಇವಿಎಂ ಮೇಲೆ ಮರ್ಕಡ್ವಾಡಿ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಬ್ಯಾಲೆಟ್ ಪೇಪರ್ ಮೂಲಕ ಇದೀಗ ಗ್ರಾಮದಲ್ಲಿ…
ಬೆಂಗಳೂರು : ‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದರೆ. ಬಂಧಿತ ಆರೋಪಿಗಳನ್ನು ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್ ಹಾಗೂ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಹರ್ಷ ಎನ್ನುವ ಆರೋಪಿ ಕೆಇಎ ಸೀಟ್ ಬ್ಲಾಕಿಂಗ್ ಹಗರಣದ ಕಿಂಗ್ ಪಿನ್ ಎಂದು ತಿಳಿದುಬಂದಿದೆ. ಕೌನ್ಸೆಲಿಂಗ್ ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್ ಗಳು, ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು ಹೋಗದ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಸೀಟ್ ಗಳನ್ನು ಬಂಧಿತ ಆರೋಪಿಗಳು ಬ್ಲಾಕ್ ಮಾಡುತ್ತಿದ್ದರು ಎನ್ನಲಾಗಿದೆ. ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ಮೆಂಟ್ ಕೋಟಾದ ಅಡಿ ಬೇರೆಯವರಿಗೆ ಡೀಲ್ ಮಾಡಿಕೊಳ್ಳುತ್ತಿದ್ದರು. ಮಧ್ಯವರ್ತಿಗಳ ಸಹಾಯದಿಂದ ಆರೋಪಿಗಳು ಡಿಲೀಟ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸೀಟ್ ಡೀಲಿಂಗ್ ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಗರಣದ…
ಮಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ ದೋಣಿಗಳು ಕೊಚ್ಚಿ ಹೋಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕೆ ಹಲವು ಬೋಟ್ ಗಳು ಸಹ ಕೊಚ್ಚಿ ಹೋಗಿವೆ. ಅಲ್ಲದೆ ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪ ಆದ್ಯಪಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಭೂ ಕುಸಿತ ಹಿನ್ನೆಲೆಯಲ್ಲಿ ಬಜಪೆ ಮತ್ತು ಆದ್ಯಪಾಡಿಯ ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತವಾಗಿದ್ದು, ಮಾನಾ ಶಾಲಿಯಾನ್ ಎಂಬುವರಿಗೆ ಸೇರಿದ ಮನೆಗೆ ಭೂಕುಸಿತದ ಹಾನಿ ಉಂಟಾಗಿದೆ.
ಹಾಸನ : ಕಿರುತೆರೆ ಖ್ಯಾತ ನಟಿ, ಬ್ರಹ್ಮಗಂಟು ಧಾರಾವಾಹಿಯಿಂದಲೇ ಪ್ರಖ್ಯಾತಿಗಳಿಸಿದ ಶೋಭಿತ ಶಿವಣ್ಣ ಹೈದರಾಬಾದ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಮೃತ ದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು ಗ್ರಾಮಕ್ಕೆ ತಲುಪಿದ್ದು, ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಹೌದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು ಗ್ರಾಮಕ್ಕೆ ಹೈದ್ರಾಬಾದ್ ನಿಂದ ಮೃತದೇಹ ಸ್ಥಳಾಂತರಿಸಲಾಗಿದೆ. ಈ ವೇಳೆ ಮೃತದೇಹವನ್ನು ಕಂಡು ಶೋಭಿತ ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಹೇರೂರು ಗ್ರಾಮದಲ್ಲಿ ಶೋಭಿತ ಅಂತ್ಯಸಂಸ್ಕಾರ ನಡೆಯಲಿದೆ. ಹೈದರಾಬಾದ್ ನಲ್ಲಿ ನಟಿ ಶೋಭಿತ ಆತ್ಮಹತ್ಯೆಗೆ ಶರಣಾಗಿದ್ದರು. ಘಟನೆ ಹಿನ್ನೆಲೆ? ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದ ನಟಿ ಶೋಭಿತಾ ಮತ್ತು ಸುಧೀರ್ ಹೈದರಾಬಾದ್ ನಲ್ಲಿ ನೆಲೆಸಿದ್ದರು. ನವೆಂಬರ್ 30ರ ರಾತ್ರಿ ಶೋಭಿತಾ ತಮ್ಮ ಸಹೋದರಿ ಜೊತೆ ಫೋನ್ ನಲ್ಲಿ ಕೆಲ ಕಾಲ ಮಾತನಾಡಿದ್ದಾರೆ. ಈ ವೇಳೆ ಕೂಡ ಕುಟುಂಬಸ್ಥರುಗೆ ಯಾವುದೇ ಅನುಮಾನ ಬರದಂತೆ ಶೋಭಿತಾ ಮಾತನಾಡಿದ್ದಾರೆ.ಇದಾದ ಬಳಿಕ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ದುರಾದೃಷ್ಟವನ್ನು ದೂರಮಾಡಿ ಅದೃಷ್ಟವನ್ನು ಹೊಂದುವ ಭಾಗ್ಯ ನಿಮ್ಮ ಕೈಯಲ್ಲಿ ಅಡಗಿದೆ ಇನ್ನು ಮುಖ್ಯವಾಗಿ ಜ್ಯೋತಿಷ್ಯದಲ್ಲಿ ಸಾಕಷ್ಟು ವಿಷಯಗಳು ಇದರ ಬಗ್ಗೆ ಚರ್ಚೆಗೆ ಬರುತ್ತವೆ ದೌರ್ಭಾಗ್ಯವನ್ನು ದೂರಮಾಡಿ ಸೌಭಾಗ್ಯವನ್ನು ತರುವ ಸರಳ ವಿಧಾನಗಳು ಇಲ್ಲಿ ತಿಳಿಸಲಾಗುತ್ತದೆ ಅದರಂತೆ ನಾವು ನಡ್ಕೊಂಡ್ರೆ ಸಾಕು ಧನ ಸಂಪತ್ತು ವೃದ್ಧಿಯಾಗಿ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಿ ಮನೆಯಲ್ಲಿ ನೆಮ್ಮದಿಯ ಜೀವನವನ್ನು ಸಾಗಿಸು ವಂತಾಗುತ್ತದೆ ಮುಖ್ಯವಾಗಿ ಶನಿವಾರ ವನ್ನು ನಾವು ಹನುಮಂತನ ವಾರ ಎಂದು ಪೂಜಿಸಲಾಗುತ್ತದೆ ಶನಿವಾರ ರಾತ್ರಿ ಹನುಮಂತನ ಮೂರ್ತಿ ಅಥವಾ ಶಿವಲಿಂಗದ ಮುಂದೆ ದೀಪವನ್ನು ಹಚ್ಚಿನೋಡಿ ಆಗ ನೋಡಿ ಅದರ ಚಮತ್ಕಾರ ನಿಮಗೆ ಅದೃಷ್ಟವನ್ನು ತಂದುಕೊಡುತ್ತದೆ ಪ್ರತಿದಿನ ರಾತ್ರಿ ಈಶ್ವರನ ಮುಂದೆ ದೀಪವನ್ನು ಹಚ್ಚುವುದರಿಂದ ಮಹಾಲಕ್ಷ್ಮಿ ಸ್ಥಿರವಾಗಿ ನಿಮ್ಮ ಮನೆಯಲ್ಲಿ ನಿಲ್ಲುತ್ತಾಳೆ ಅಂತ ಹೇಳುತ್ತಾರೆ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ…
ದಕ್ಷಿಣಕನ್ನಡ : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಅಬ್ಬರ ಕರ್ನಾಟಕದ ಮೇಲು ಭಾರಿ ಪರಿಣಾಮ ಬೀರಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗಿದ್ದ ಪರಿಣಾಮ, ಜಿಲ್ಲೆಯ ಬಜಪೆ ಸಮೀಪ ಭೂಕುಸಿತ ಉಂಟಾಗಿದೆ. ಹೌದು ಭಾರಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಬಜಪೆ ಸಮೀಪದ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಭೂಕಸಿತ ಹಿನ್ನೆಲೆಯಲ್ಲಿ ಬಜಪೆ ಮತ್ತು ಆದ್ಯಪಾಡಿಯ ಸಂಪರ್ಕ ಸಂಪೂರ್ಣವಾಗಿ ಕಡಿತವಾಗಿದೆ. ಮಂಗಳೂರು ವಿಮಾನ ನಿಲ್ದಾಣ ಕೆಲ ಭಾಗದ ಆದ್ಯಪಾಡಿ ಪ್ರದೇಶದಲ್ಲಿ ಈ ಭೂಕುಸಿತ ಸಂಭವಿಸಿದೆ.ಉಮಾನಾಥ ಸಾಲಿಯಾನ್ ಎಂಬುವವರಿಗೆ ಸೇರಿದ ಮನೆಗೂ ಹಾನಿ ಉಂಟಾಗಿದ್ದು, ಮನೆ ಮುಂಭಾಗದ ಅಂಗಳದಲ್ಲಿ ಮಣ್ಣು ಕೆಸರು ಸಂಪೂರ್ಣವಾಗಿ ತುಂಬಿಕೊಂಡಿದೆ.













