Author: kannadanewsnow05

ಬಾಗಲಕೋಟೆ : ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳಿಗೆ ಜಾತಿ ಅಡ್ಡ ಬಂದಿದೆ. ಹೀಗಾಗಿ ತಮ್ಮ ಮದುವೆಗೆ ಮನೆಯವರು ಒಪ್ಪಿಲ್ಲವೆಂದು ಮನನೊಂದು ಪ್ರೇಮಿಗಳೆಬ್ಬರೂ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದ ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದುಬಂದಿದೆ.ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಯೆ ಪರಿಹಾರ ಎಂದು ನೇಣಿಗೆ ಶರಣಾಗಿದ್ದಾರೆ. ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿದ್ದರೆ, ಇನ್ನೊಂದು ಕಡೆ ಇದಕ್ಕೆ ಕೌಂಟರ್ ನೀಡಲು ಕಾಂಗ್ರೆಸ್ ಪಕ್ಷ ಜನಾಲೋಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಮೈಸೂರಿನಲ್ಲಿ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳ ವಿರುದ್ಧ ಗುಡುಗಿದರು. ಈ ಒಂದು ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು,ಈ ಬಂಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಇದೆ. ರಾಜ್ಯದ ಮತದಾರರು ಸಿದ್ದರಾಮಯ್ಯ ಜೊತೆ ಇದ್ದಾರೆ. ಈ ಬಂಡೆಯ ಹಿಂದೆ ರಾಜ್ಯದ 136 ಶಾಸಕರು ಇದ್ದಾರೆ. ನಾವೆಲ್ಲರೂ ಸಿಎಂ ಸಿದ್ದರಾಮಯ್ಯ ಜೊತೆಗೆ ಇರುವುದಾಗಿ ಎಂದು ಮೈಸೂರಿನ ಜನಂದೋಲನ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ತೆಗೆದುಹಾಕಲು ಆಗಲ್ಲ. ಡಿಕೆ ಕುಮಾರಸ್ವಾಮಿ ತಮ್ಮ ಕುಟುಂಬಕ್ಕೆ ಏನು ಬೇಕು ಅದನ್ನು ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಎರಡನೇ ಹಿಂದುಳಿದ ನಾಯಕರು. ಸಂಚಿನಿಂದ ಅಧಿಕಾರಿಂದ ಅವರನ್ನು ಕಳೆಗೊಳಿಸಲು…

Read More

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇದೆ ಆಗಸ್ಟ್​ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ . ಹೌದು 2022ರ ನವೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್​ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್​ನಿಂದ ಬಂದಿದ್ದು. ಭಾರಕ್ಕೂ ಪರ್ಷಿಯನ್​ಗೂ ಏನು ಸಂಬಂಧ? ಎಂದು ಹೇಳಿದ್ದರು. ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್​ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕುದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದಿದ್ದರು. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿತು. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಕಾಲಾವಕಾಶ ಕೋರಿತು. ವಿಚಾರಣೆ ವೇಖೆ ವಿಶೇಷ ತನಿಖಾ ದಳದ (ಎಸ್ಐಟಿ) ವಿಶೇಷ ಸರ್ಕಾರಿ ಅಭಿಯೋಜಕರಾದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ನಮಗೆ ಇನ್ನೂ ಸರ್ಟಿಫೈಡ್ ಆರೋಪ ಪಟ್ಟಿ ಸಿಕ್ಕಿಲ್ಲ. ಹೀಗಾಗಿ, ವಿಚಾರಣೆ ಮುಂದೂಡಬೇಕು ಎಂದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ನ್ಯಾಯಪೀಠ,…

Read More

ಚಿಕ್ಕಬಳ್ಳಾಪುರ : ಮದುವೆಯಾಗಿ 3 ಮುದ್ದಾದ ಹೆಣ್ಣು ಮಕ್ಕಳು ಇದ್ದರು ಸಹ ಆತನಿಗೆ ಪತ್ನಿಯೊಂದಿಗೆ ವಿಕೃತವಾಗಿ ಕಾಮದಾಟವಾಡುವ ಮನಸ್ಥಿತಿ.ಕಟ್ಟಿಕೊಂಡ ಗಂಡನೇ ಪತ್ನಿಯ ಬಳಿ ವಿಕೃತಿ ಮೆರೆದಿರುವ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಪಿಲೇಚರ್ಸ್ ಕ್ವಾಟ್ರಸ್‍ನಲ್ಲಿ ನಡೆದಿದೆ. ಹೌದು ಎಸ್.ಮೊಸಿನ್‍ ಪಾಷ(39) ಎಂಬಾತ ಹೆಂಡತಿಯ ಜೊತೆ ವಿಕೃತವಾಗಿ ವರ್ತಿಸಿದ್ದು, ಆತನ ಕಿರುಕುಳಕ್ಕೆ ಆತನ ತಾಯಿ ಕೂಡ ಸಾಥ್ ನೀಡಿರುವ ಆರೋಪ ಕೇಳಿಬಂದಿದೆ. ಇನ್ನು ಇವರಿಗೆ ಮದುವೆಯಾಗಿ 3 ಮುದ್ದಾದ ಹೆಣ್ಣು ಮಕ್ಕಳಿವೆ. ಆದರೂ ಆತನಿಗೆ ಪತ್ನಿಯ ಜೊತೆ ವಿಕೃತ ಕಾಮದಾಟವಾಡುವ ಹುಚ್ಚುತನ. ಇನ್ನು ಲೈಂಗಿಕ ಜಾಲತಾಣಗಳ ವೀಡಿಯೋ, ಪೋಟೋಗಳನ್ನು ಪತ್ನಿಗೆ ತೋರಿಸಿ ಹಾಗೆ ಮಾಡು, ಹೀಗೆ ಮಾಡು ಎಂದು ವಿಕೃತ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇಷ್ಟಾದರೂ ಸಾಲದೆಂಬಂತೆ ಪತ್ನಿಯ ಏಕಾಂತ ಪೋಟೋ, ವೀಡಿಯೋಗಳನ್ನು ತೆಗೆದು ಅವುಗಳನ್ನು ಮಾರಾಟ ಮಾಡುವುದಾಗಿ ಪತ್ನಿಗೆ ಬ್ಲಾಕ್‍ಮೇಲ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ವಿಕೃತ ಲೈಂಗಿಕ ಕಿರುಕುಳಕ್ಕೆ ಪತ್ನಿ ಸಾಥ್ ನೀಡುತ್ತಿಲ್ಲವೆಂದು ಪತ್ನಿಯ ಎದುರಲ್ಲೆ ಬೇರೆ ಮಹಿಳೆಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಅಡ್ಡಾದಿಡ್ಡಿ ಚಾಲನೆಗೆ ಯಾವಾಗ ಬ್ರೇಕ್ ಬೀಳುತ್ತೋ ಗೊತ್ತಿಲ್ಲ. ಬಿಎಂಟಿಸಿ ಯದ್ವಾತದ್ವ ಚಾಲನೆಗೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಕೂಡ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಒಬ್ಬ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ. ಹೌದು ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದಿದ್ದ ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಬೈಕ್ ನಲ್ಲಿದ್ದ ಸವಾರ ಸಾವನ್ನಪ್ಪಿದ್ದು ಮೃತ ಯುವಕನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಆನೇಕಲ್ ತಾಲೂಕಿನ ಜಿಗಣಿ ಹಳೆ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ. ಈ ವೇಳೆ ಸ್ಥಳೀಯರು ಆಕ್ರೋಶಗೊಂಡು ಬಿಎಂಟಿಸಿ ಬಸ್ಸಿನ ಗಾಜಿನ ಗ್ಲಾಸ್ ಗಳನ್ನು ಹೊಡೆದು ಪುಡಿ ಮಾಡಿದ್ದಾರೆ. ಅಲ್ಲದೆ ಬಿಎಂಟಿಸಿ ಬಸ್ಸಿನ ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆಯ ಅಧಿಕಾರಿಗಳು ಬಂದು ಭೇಟಿ ನೀಡಿ ಪರಿಶೀಲನೆ…

Read More

ಬೆಂಗಳೂರು : ನಗರದಲ್ಲಿ ಖಾಸಗಿ ಡಿಟೆಕ್ಟಿವ್ ಏಜೆನ್ಸಿಗಳ ಹೆಸರಿನಲ್ಲಿ ಅಕ್ರಮವಾಗಿ ಸಾರ್ವಜನಿಕರಿಂದ ಮೊಬೈಲ್‌ ಸಿಡಿಆರ್ (Call Detail Record) ರಹಸ್ಯವಾಗಿ ಆಲಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಹಾಗೂ ಪ್ರಕರಣದ ಕಿಂಗ್ ಪಿನ್ ನಾಗೇಶ್ವರ ರೆಡ್ಡಿ ಬಂಧಿತರು ಎಂದು ತಿಳಿದುಬಂದಿದೆ. ಹೌದು ಮೇ‌ ತಿಂಗಳಲ್ಲಿ ಮಹಾನಗರಿ ಡಿಟೆಕ್ಟಿವ್‌ ಹಾಗೂ ಸೆಕ್ಯೂರಿಟಿ ಸೆಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಎಂಬ ಹೆಸರಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಅನಧಿಕೃತವಾಗಿ ಸಿಡಿಆರ್ ಪಡೆಯುತ್ತಿದ್ದ ಆರೋಪದಡಿ ಮೂರು ಪ್ರಕರಣಗಳನ್ನು ದಾಖಲಿಸಿ ಆರೋಪಿಗಳಾದ ಪುರುಷೋತ್ತಮ, ಸತೀಶ್ ಕುಮಾರ್, ತಿಪ್ಪೇಸ್ವಾಮಿ, ಮಹಾಂತಗೌಡ, ರೇವಂತ, ಗುರುಪಾದಸ್ವಾಮಿ, ಶ್ರೀನಿವಾಸ ಮತ್ತು ಭರತ್ ಎಂಬವರನ್ನು ಬಂಧಿಸಲಾಗಿತ್ತು. ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಹಿರಿಯ ಅಧಿಕಾರಿಗಳು ಕೇಸ್ ಸಂಬಂಧ ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರೊವೈಡರ್​ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್​ಗಳನ್ನು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿರುವ ಬಿಜೆಪಿ ಜೆಡಿಎಸ್ ಪಾದಯಾತ್ರೆ ಇಂದು ಶ್ರೀರಂಗಪಟ್ಟಣ ತಲುಪಿದ್ದು, ಸಾರ್ವಜನಿಕ ಸಭೆಯಲ್ಲಿ ಮಾಡಿ ಸಚಿವ ಸಿಟಿ ರವಿ ಅವರು ರೀಡು ಹೆಸರಿನಲ್ಲಿ 1700 ಕೋಟಿ ಹೊಡೆದಿದ್ದೀರಲ್ಲ ಇದು ನಿಮ್ಮ ರಾಜಕೀಯ ಕಪ್ಪು ಚುಕ್ಕೆ ಅಲ್ಲವೆ ಸಿದ್ದರಾಮಯ್ಯನವರೇ ಎಂದು ವಾಗ್ದಾಳಿ ನಡೆಸಿದರು. 40ವರ್ಷದ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ ಎಂದರು. ಸಿದ್ದರಾಮಯ್ಯ ಅವರ ಶರ್ಟ್, ಪಂಚೆ ಬಗ್ಗೆ ನಮ್ಮ ಕಾಮೆಂಟ್ ಇಲ್ಲ. ವಾಲ್ಮೀಕಿ ನಿಗಮದಲ್ಲಿ ಮಾಡಿದ್ದು ಹಗರಣ ಅಲ್ಲವಾ? ಎಂದು ಪಾದಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿಕೆ ನೀಡಿದರು. ಶ್ರೀರಂಗಪಟ್ಟಣದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅರ್ಕಾವತಿಯಲ್ಲಿ ರೀಡೂ ಅಂತ ಪ್ರಯೋಗ ಮಾಡಿದರು. ರೀಡೂ ಪಿತಾಮಹ ಸಿದ್ದರಾಮಯ್ಯ 800 ಎಕರೆ ಡಿ ನೋಟಿಫೈ ಮಾಡಿದ್ರು ಎಂದು ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ಒಂದು ಎಕರೆಗೆ ಸಿದ್ದರಾಮಯ್ಯ 2 ಕೋಟಿ…

Read More

ಬೆಂಗಳೂರು : ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಬಳಿಕ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನಕ್ಕೆ ತೆರಳಿದ್ದಾರೆ. ಈ ವೇಳೆ ಪವನ್ ಕಲ್ಯಾಣ್ ಜೊತೆಗೆ ಬಂದಿದ್ದ ಆಂಧ್ರ ಪ್ರದೇಶ ಸರ್ಕಾರಿ ಅಧಿಕಾರಿ ಕಾರಿನಲ್ಲಿ ಹೆಬ್ಬಾವಿನ ಮರಿ ಪ್ರತ್ಯಕ್ಷವಾಗಿದೆ. ಹೌದು ಇಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿದ್ದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರ ನಡೆಸಿದರು ಬಳಿಕ ಮಲ್ಲೇಶ್ವರಂ ನಲ್ಲಿರುವ ಅರಣ್ಯ ಭವನಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಜೊತೆಗೆ ಸಭೆಯಲ್ಲಿ ಭಾಗವಹಿಸಲು ತೆರಳಿದರು. ಈ ವೇಳೆ ಸರ್ಕಾರಿ ಅಧಿಕಾರಿಯೊಬ್ಬರ ಕಾರಿನೊಳಗೆ ಹೆಬ್ಬಾವಿನ ಮರಿ ಪ್ರತ್ಯಕ್ಷವಾಗಿದೆ. ಹೌದು….ಪವನ್ ಕಲ್ಯಾಣ್​ ಜೊತೆಗೆ ಆಗಮಿಸಿರುವ ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿ ಕಾರಿನೊಳಗೆ ಸುಮಾರು ಒಂದರಿಂದ ಒಂದೂವರೆ ಅಡಿ ಇರುವ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವನ್ನು ಕಾಣುತ್ತಲೇ…

Read More

ಚಿಕ್ಕಬಳ್ಳಾಪುರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಪಾದಯಾತ್ರೆ ಮುಂದುವರೆಸಿದ್ದು, ಆಗಸ್ಟ್ 10 ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಮಧ್ಯ ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನ ಕೆಲವು ನಾಯಕರು ಅವರ ಪರವಾಗಿ ಬ್ಯಾಟ್ ಬೀಸಿದ್ದು ಇಂಧನ ಸಚಿವ ಕೆಜೆ ಜಾರ್ಜ್ ಕೂಡ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಯಾವುದೇ ಮಾರ್ಗದಿಂದ ಆದರೂ ಅಧಿಕಾರ ಬೇಕಾಗಿದೆ. ಅಧಿಕಾರ ಬಿಟ್ಟು ಬಿಜೆಪಿ ಅವರಿಗೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಇಂಧನ ಇಲಾಖೆಯ ಸಚಿವ ಕೆಜೆ ಜಾರ್ಜ್ ವಾಗ್ದಾಳಿ ನಡೆಸಿದರು. ಕೈ ಸರ್ಕಾರ ಬೀಳುತ್ತೆ ಅಂತ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ಸಿನ 136 ಶಾಸಕರು ಇದ್ದೇವೆ. ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ಏನು ತಪ್ಪು ಇಲ್ಲ. ಸಿದ್ದರಾಮಯ್ಯ ಪಾತ್ರದ ಬಗ್ಗೆ ಇದುವರೆಗೂ ವಿಪಕ್ಷಗಳು ದಾಖಲೆಗಳನ್ನು…

Read More