Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಟಕ್ಕಿ ಒಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ, ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ತಿಳಿದುಬಂದಿದೆ. ಸಾಫ್ಟ್ವೇರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್ಕೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಮಾಜಿ ಸಂಸದ ಅಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚೆನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಕೋರ್ಟ್ ಐಶ್ವರ್ಯ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದೇ ದಿವಸ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಇಡಿ ನೋಟಿಸ್ ಜಾರಿ ಮಾಡಿತ್ತು. ಹೌದು ಇತ್ತೀಚಿಗೆ ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಡಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಕಳೆದ ಜೂನ್ 19ರಂದೆ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ಹಾಜರಾಗಿಲ್ಲ. ಹಾಗಾಗಿ ಇಂದು ಇಡಿ ವಿಚಾರಣೆಗೆ ಅವರು ಹಾಜರಾಗಲಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಮಂಡ್ಯ : ನಿನ್ನೆ ತಾನೆ ಚಿತ್ರದುರ್ಗದಲ್ಲಿ 82 ವರ್ಷದ ವೃದ್ಧನನ್ನು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸ್ವಂತ ಮಕ್ಕಳೇ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದ್ದು ಮಗನೊಬ್ಬ ತನ್ನ ಮಾನಸಿಕ ಅಸ್ವಸ್ಥಳಾದ ಹೆತ್ತ ತಾಯಿಯನ್ನೆ ಬೀದಿಗೆ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಹೌದು ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವೃದ್ಧೆಯನ್ನು…
ಮಂಡ್ಯ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಮಧ್ಯ ಸಾಬ್ರ ಹೆಸ್ರರಿಗೆ ಏನಾದ್ರು ಪರಭಾರೆ ಮಾಡಿದ್ರೆ ನೇಣಿಗೆ ಹಾಕುವುದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದಂತಹ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಬ್ರು ಹೆಸರಿಗೆ ನೊಂದಣಿ ಮಾಡದಂತೆ ಜನರ ಮುಂದೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಇದುವರೆಗೂ ಮುಸ್ಲಿಂರ ಪರ ಇದ್ದ ಶಾಸಕ ಇದೀಗ ಸಾಬ್ರು ಎಂದು ಉಲ್ಟಾ ಹೊಡೆದಿದ್ದಾರೆ. ಬಂಡಿಸಿದ್ದೇಗೌಡರ ಈ ಒಂದು ಹೇಳಿಕೆಗೆ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದೆ. ಕಾರ್ಯಕ್ರಮದ ಬಳಿಕ ಅಧಿಕಾರಿಗಳಿಗೆ ಬಹಿರಂಗವಾಗಿ ಧಮ್ಮಿ ಹಾಕಿದ್ದಾರೆ. ಬಗರ್ ಉಕ್ಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ ಖಾತೆ ಮಾಡದಂತೆ ತಾಕೀತು ಮಾಡಿದ್ದಾರೆ. ಸರ್ಕಾರಿ ಜಮೀನು ಸರ್ಕಾರಕ್ಕೆ ಇರಬೇಕು. ಯಾರಾದ್ರು ಅದನ್ನ ಸಾಬ್ರು ಹೆಸ್ರಿಗೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ…
ಮಂಡ್ಯ : ಮಂಡ್ಯದಲ್ಲಿ ಇಂದು ಘೋರವಾದ ದುರಂತ ಒಂದು ನಡೆದಿದ್ದು, ವಿದ್ಯುತ್ ಕಂಬವನ್ನು ಅಳವಡಿಸುವ ವೇಳೆ ತಲೆಯ ಮೇಲೆ ವಿದ್ಯುತ್ ಕಂಬ ಮುರಿದುಬಿದ್ದು ಲೈನ್ ಮ್ಯಾನ್ ಒಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಸಹಳ್ಳಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮಳವಳ್ಳಿ ತಾಲೂಕಿನ ಹಲಸ ಹಳ್ಳಿಯಲ್ಲಿ ಇಂದು ವಿದ್ಯುತ್ ಕಂಬವನ್ನು ಅಳವಡಿಸಲಾಗುತ್ತಿತ್ತು. ವಿದ್ಯುತ್ ಕಂಬ ಅಳವಡಿಸುವ ವೇಳೆ ಕಂಬ ಏಕಾಏಕಿ ಮುರಿದುಬಿದ್ದಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಕುಲುಮೆ ದೊಡ್ಡಿ ಗ್ರಾಮದ ಕುಮಾರ್ (31) ಸಾವನ್ನಪ್ಪಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ನಿನ್ನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದಲ್ಲಿರುವ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯ ಅನಾಚಾರ ಆರೋಪದ ವಿಚಾರವಾಗಿ, ಅಡವಿ ಸಿದ್ದರಾಮ ಶ್ರೀ ಮೇಲೆ ಹಲ್ಲೆ ಮಾಡಿ ಯುವಕರು ಎಳೆದಾಡಿರುವ ಘಟನೆ ನಡೆದಿದೆ. ಹೌದು ಮಠಕ್ಕೆ ಬಂದಿದ್ದ ಬಾಗಲಕೋಟೆ ಮೂಲದ ಮಹಿಳೆ ಮತ್ತು ಆಕೆಯ 15 ವರ್ಷದ ಮಗಳು ಮಠದಲ್ಲೇ ರಾತ್ರಿ ಉಳಿದುಕೊಂಡಿದ್ದರು. ಮಹಿಳೆಯರ ಜೊತೆ ಸ್ವಾಮೀಜಿ ಇದ್ದಾರೆಂದು ಯುವಕರು ಮಠಕ್ಕೆ ನುಗ್ಗಿದ್ದಾರೆ. ಈ ವೇಳೆ ಒಂದೇ ರೂಮ್ನಲ್ಲಿ ಸ್ವಾಮೀಜಿ ಮತ್ತು ಮಹಿಳೆ ಮತ್ತು ಆಕೆ ಮಗಳು ಇದ್ದರು. ಸ್ವಾಮೀಜಿಯನ್ನು ತಳ್ಳಿ ಮಹಿಳೆ ಅಪ್ರಾಪ್ತ ಮಗಳ ಜೊತೆಗೆ ಯುವಕರು ಅಸಭ್ಯ ವರ್ತನೆ ತೋರಿದ್ದಾರೆ. ಬಾಲಕಿ ಬಟ್ಟೆಹರಿದು ಯುವಕರು ಎಳೆದಾಡಿದ್ದಾರೆ. ಈ ವೇಳೆ ರಕ್ಷಣೆಗೆ ನಿಂತ ಸ್ವಾಮೀಜಿಗೆ ಯುವಕರು ಕಪಾಳ ಮೋಕ್ಷ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪೊಲೀಸರು ಈ ವೇಳೆ ಮಹಿಳೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಬಳಿಕ ಗ್ರಾಮಸ್ಥರು ರಾತ್ರಿಯ ಅಡವಿಸಿದ್ದರಾಮ ಸ್ವಾಮೀಜಿಯನ್ನು ಮಠದಿಂದ ಹೊರ…
ಉತ್ತರಕನ್ನಡ : ರಾಜ್ಯದಲ್ಲಿ ಪರಿಸಿದ್ಧವಾದ ಹಿಂದೂ ದೇವಸ್ಥಾನವಾಗಿರುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ದೇವಸ್ಥಾನದಲ್ಲಿ ಇದೀಗ ವಸ್ತ್ರ ಸಂಹಿತೆ ನಿಯಮ ಜಾರಿಗೆ ಮಾಡಿದ್ದು, ಮುರುಡೇಶ್ವರದಲ್ಲಿರುವ ಶಿವನ ದರ್ಶನಕ್ಕೆ ಭೇಟಿ ಕೊಡುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು ಎಂದು ದೇವಸ್ಥಾನದ ಆಡಳಿತ ಸೂಚನೆ ಹೊರಡಿಸಿದೆ. ಈ ಕುರಿತು, ಭಕ್ತರು ವಸ್ತ್ರಸಂಹಿತೆ ಪಾಲಿಸುವಂತೆ ವಿನಂತಿಸಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಬ್ಯಾನರ್ ಹಾಕಲಾಗಿದೆ. ಪುರುಷರು-ಅಂಗಿ ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು-ಸೀರೆ, ಚೂಡಿದಾರ ಧರಿಸಿ ದೇವರ ದರ್ಶನ ಮಾಡಬಹುದೆಂದು ತಿಳಿಸಲಾಗಿದೆ. ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಿ 2022ರ ಡಿಸೆಂಬರ್ ನಲ್ಲಿ ಸನಾತನ ಹಿಂದೂ ಜನಜಾಗೃತಿ ಸಮಿತಿ ಸ್ಥಳೀಯ ಘಟಕ ಮತ್ತು ವಿವಿಧ ಹಿಂದೂ ಪರ ಸಂಘಟನೆ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು.
ಬೆಂಗಳೂರು : ರಾಜ್ಯಕ್ಕೆ ಇಂದು ಕರಾಳ ರವಿವಾರ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ನದಿ ಕೆರೆ ಹಳ್ಳಗಳು ತುಂಬಿ ಹರಿಯುತ್ತಿವೆ. ಇದೇ ಸಂದರ್ಭದಲ್ಲಿ ಜನರು ತಮ್ಮ ಪ್ರಾಣದ ಹಂಗನ್ನು ತೊರೆದು, ಜಲಪಾತ ನದಿಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಇಂದು ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಜಲಸಮಾಧಿಯಾಗಿದ್ದಾರೆ. ಮೊದಲನೇದಾಗಿ ಶಿವಮೊಗ್ಗದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮೃತ ಯುವಕರನ್ನು ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಎಂದು ತಿಳಿದುಬಂದಿದೆ.ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು…
ಹಾಸನ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ಒಂದೇ ದಿನದಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ನಗರದ ಸತ್ಯಮಂಗಲ ಬಡಾವಣೆಯಲ್ಲಿ ಹೃದಯಾಘಾತದಿಂದ 35 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯದ ಕಿಕ್ಕೇರಿ ಮೂಲದ ಚೇತನ್, ಹಾಸನ ನಗರದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ವಾಸವಿದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ಚೇತನ್ ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. “ಎದೆ ನೋಯುತ್ತಿದೆ” ಎಂದು ಪತ್ನಿಗೆ ತಿಳಿಸಿ ತಕ್ಷಣವೇ ಎದ್ದು ನಿಂತು ಕುಸಿದು ಬಿದ್ದಾರೆ. ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದರು. ಅದೇ ರೀತಿಯಾಗಿ ಬೇಲೂರು ಪಟ್ಟಣದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಜೀವನ ನಿರ್ವಹಣೆಗಾಗಿ ಪಟ್ಟಣದಲ್ಲಿ ಟೀ ಕ್ಯಾಂಟೀನ್ ಒಂದನ್ನು ನಡೆಸುತ್ತಿದ್ದರು. ಜೊತೆಗೆ ಸಮಾಜ ಸೇವಕ ಎಂದು…
ಹಾವೇರಿ : ಹಾವೇರಿಯಲ್ಲಿ ಅನುಮಾನಾಸ್ಪದವಾಗಿ CRPF ಕಾನ್ಸ್ಟೇಬಲ್ ಒಬ್ಬರ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ CRPF ಕಾನ್ಸ್ಟೇಬಲ್ ತಾರೇಶ್ ಎನ್ನುವವರ ಮೃತದೇಹ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ಬಳಿ ಇಟ್ಟಿಗೆ ಬಟ್ಟಿಯೊಂದು ಇದ್ದು, ಅದರ ಹಿಂಭಾಗದಲ್ಲಿ ತಾರೇಶ್ ಮೃತ ದೇಹ ಪತ್ತೆಯಾಗಿದೆ. ಮೂಲತಹ ತಾರೇಶ್ ಹಾಸನ ಜಿಲ್ಲೆಯ ತಾಳನಕೋಪ್ಪಲು ಗ್ರಾಮದ ನಿವಾಸಿಯಾಗಿದ್ದಾರೆ. ಸದ್ಯ ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.