Subscribe to Updates
Get the latest creative news from FooBar about art, design and business.
Author: kannadanewsnow05
GOOD NEWS : ಯಜಮಾನಿಯರಿಗೆ ಸಿಹಿಸುದ್ದಿ : 2 ತಿಂಗಳ ‘ಗೃಹಲಕ್ಷ್ಮಿ’ ಬಾಕಿ ಹಣ ಶೀಘ್ರ ಖಾತೆಗೆ : ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಮಹಿಳೆಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಇದೇ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ರಾಜ ಭವನವನ್ನು ಪ್ರವೇಶಿಸಿದ ಕೂಡಲೇ ಪೊಲೀಸರು ಕನ್ನಡ ಪರ ಹೋರಾಟಗಾರ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ರಾಜ ಭವನಕ್ಕೆ ಕನ್ನಡಪರ ಹೋರಾಟಗಾರರಿಂದ ಮುತ್ತಿಗೆ ಯತ್ನಿಸಲಾಯಿತು. ಕನ್ನಡ ಪರ ಹೋರಾಟಗಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಮನವಿ ಕೊಡಲು ಬಂದಿದ್ದೇವೆ ಹೊರತು ಪ್ರತಿಭಟಿಸಲು ಅಲ್ಲವೆಂದು ವಿರೋಧ ವ್ಯಕ್ತಪಡಿಸಿದರು. ರಾಜಭವನಕ್ಕೆ ಪ್ರವೇಶ ಮಾಡುತ್ತಿದ್ದಂತೆ ಪ್ರತಿಭಟನಾಕಾರರು ವಶಕ್ಕೆ ಪಡೆಯಲಾಯಿತು. ರಾಜಭವನದ ಬಳಿ 2 ಕೆಎಸ್ಆರ್ಪಿ ತುಕಡಿ ಎರಡು ಬಿಎಂಟಿಸಿ ಬಸ್ ನಿಯೋಜನೆ ಮಾಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು. ಈ ವೇಳೆ ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು.ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು. ಉತ್ತಮ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು ಈ ವೇಳೆ ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು. ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ…
ಬೆಂಗಳೂರು : ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಡಿಸಿಎಂ ಸಭೆ ನಡೆಸಲಿದ್ದಾರೆ. ಸರ್ಕಾರಕ್ಕೆ ಮಗ್ಗುಲ ಮುಳ್ಳಾದ ರಾಜ್ಯ ಗುತ್ತಿಗೆದಾರರ ಸಂಘವು ಇದೀಗ ಕಮಿಷನ್ ನಿಲ್ಲಿಸಿ ಬಾಕಿ ಬಿಲ್ ಪಾವತಿ ಮಾಡಿ, ಅಕಸ್ಮಾತ್ ಬಿಲ್ ಪಾವತಿಸದಿದ್ದರೆ ಹೈಕಮಾಂಡ್ಗೆ ದೂರು ಕೊಡುತ್ತೇವೆ ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರರ ಎಚ್ಚರಿಕೆ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಗೆ ಶಿವಕುಮಾರ್ ಸಭೆ ಕರೆದಿದ್ದಾರೆ. ಹಾಗಾಗಿ ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ನಿನ್ನೆ ತಾನೆ ರಾಜ್ಯ ಗುತ್ತಿಗೆದಾರರ ಸಂಘವು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿತ್ತು ಈ ಹಿಂದಿನ ಬಿಜೆಪಿ ಸರ್ಕಾರ ಕೇವಲ 40% ಮಾತ್ರ ಕಮಿಷನ್ ಕೇಳುತ್ತಿದ್ದರೆ ಈಗಿದಿಕ ಕಾಂಗ್ರೆಸ್ ಅದಕ್ಕಿಂತಲೂ ಹೆಚ್ಚಿನ ಕಮಿಷನ್ ಕೇಳುತ್ತಿದೆ ಎಂದು ಗಂಭೀರವಾದ ಆರೋಪ ರಾಜ್ಯ ಗುತ್ತಿಗೆದಾರರ ಸಂಘ ಮಾಡಿತು ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತರಾತುರಿಯಲ್ಲಿ ಸಭೆ ಕರೆದಿದ್ದಾರೆ.
ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಈ ನೆಲೆಯಲ್ಲಿ ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅಧಿವೇಶನದ ಕುರಿತು ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬೀಳಲು ಪಕ್ಷಗಳು ತುದಿಗಾಲಲ್ಲಿ ನಿಂತಿದ್ದು, ಇದೆ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಗ್ಯಾರಂಟಿಗಳಿಂದ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿದೆ. ಈಗ ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ.ಹಲವು ಮಸೂದೆಗಳ ವಿಚಾರದಲ್ಲಿ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ. ರಾಜ್ಯಪಾಲರ ಪ್ರಶ್ನೆಗೆ ಸ್ಪಷ್ಟನೆ ಕೊಡದೆ ಬೊಬ್ಬೆ ಹೊಡೆಯುತ್ತಿದ್ದಾರೆ. ಗ್ಯಾರಂಟಿಗಳಿಂದ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಯಾವ ಮುಖ ಇಟ್ಕೊಂಡು ಸರ್ಕಾರದ ಸಾಧನೆ ಹೇಳಿಕೊಳುತ್ತೀರಿ? ನಾವು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ. ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಕುಡಿದ ಮತ್ತಿನಲ್ಲಿ ಪತಿ-ಪತ್ನಿಯ ಮೇಲೆ ರಾಡ್ ನಿಂದ ಹಲ್ಲೆ ಮಾಡಿ ಬಳಿಕ ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಗುಡ್ನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಲೆಯನ್ನು ನೂಕಲಮ್ಮ ಎಂದು ತಿಳಿದುಬಂದಿದ್ದು, ಒಡಿಶಾ ಮೂಲದ ದಂಪತಿಗಳಾದ ಗೌರಿ ಹಾಗು ಆತನ ಪತ್ನಿ ನೂಕಲಮ್ಮ ಕೃಷ್ಣಾರೆಡ್ಡಿ ಎಂಬುವವರ ಇಟ್ಟಿಗೆ ಕಾರ್ಖಾನೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ಪ್ರತಿದಿನ ಕುಡಿದು ಪತ್ನಿ ಜೊತೆಗೆ ಪತಿ ಗೌರಿ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ ಕಬ್ಬಿಣದ ರಾಡ್ ಇಂದ ಹೊಡೆದು ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿದ್ದಾನೆ.ಇದೀಗ ನೂಕಲಮ್ಮ ಶವವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಡಿಕೆ ಬ್ರದರ್ಸ್ ಹಾಗೂ ಆರ್ ಆರ್ ನಗರದ ಶಾಸಕ ಮುನಿರತ್ನ ನಡುವೆ ಇದೀಗ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಕುರಿತಾಗಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಂಕಿ ಅಂಶಗಳ ಪ್ರತಿಗಳನ್ನು ಹಂಚಿ ಅಭಿಯಾನ ನಡೆಸುತ್ತಿದ್ದಾರೆ. ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಭಿಯಾನ ನಡೆಸಿದ್ದಾರೆ. ಲಗ್ಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ, ಕೊಟ್ಟಿಗೆಪಾಳ್ಯ ವಾರ್ಡ್ ಅಧ್ಯಕ್ಷ ಸುಂಕದಕಟ್ಟೆ ನವೀನ್ ಕುಶಾಲ್, ಹರವೇಗೌಡ ಸೇರಿದೆ ಹಲವು ಕಾರ್ಯಕರ್ತರು ಇದೀಗ ಶಾಸಕ ಮುನಿರತ್ನ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ.ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಅಂಕಿ ಅಂಶಗಳ ಪ್ರತಿ ವಿತರಣೆ ಮಾಡುತ್ತಿದ್ದಾರೆ. ಅನುದಾನದ ಅಂಕಿ ಅಂಶಗಳ ಪ್ರತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಇದೀಗ ಹಂಚುತ್ತಿದ್ದಾರೆ. ಮಲ್ಲತಹಳ್ಳಿ ಕೆರೆಯ ಕುವೆಂಪು ಪಾರ್ಕಿನಲ್ಲಿ ಪ್ರತಿಗಳನ್ನು ಹಂಚಿ ಪ್ರತಿಭಟನೆ ಮಾಡುತ್ತಿದ್ದಾರೆ.ಮುನಿರತ್ನ ಕಾಲ್ಗುಣದಿಂದ ಮಲ್ಲತಹಳ್ಳಿ ಕೆರೆಗೆ ಬಂದಿದ್ದು 84 ಕೋಟಿ. ಕೆರೆ ಹಾಳು ಮಾಡಲು…
ಬೆಳಗಾವಿ : ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ. ಘಟಪ್ರಭಾ ಪೊಲೀಸರು ಗೋಕಾಕ್ನ ಕಾಂಗ್ರೆಸ್ ಘಟಕದ ಬ್ಲಾಕ್ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅವರನ್ನು ಬಂಧಿಸಿದ್ದಾರೆ. ಫೆಬ್ರವರಿ 4ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು. ಕಿಡ್ನಾಪ್ ಕೇಸ್ ನಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅಪ್ತೆ ಅರೆಸ್ಟ್ ಮಂಜುಳಾ ರಾಮನಗಟ್ಟಿಳನ್ನು ಅರೆಸ್ಟ್ ಮಾಡಿದ್ದು ಈಕೆ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಳೆ. ಫೆಬ್ರವರಿ 14ರಂದು ಉದ್ಯಮಿ ಬಸವರಾಜ ಅಂಬಿ ಅಪಹರಣ ಬಸವರಾಜ್ ಅಂಬಿ ಕಿಡ್ನಾಪ್ ಆಗಿತ್ತು. ಕಿಡ್ಯಾಪ್ ಮಾಡಿ 5 ಕೋಟಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು.…
ಬೆಂಗಳೂರು : ಕಳೆದ ಬಿಜೆಪಿ ಅವಧಿಯಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳಲಾಗುತ್ತಿತ್ತು ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪ ಮಾಡಿತ್ತು. ಆದರೆ ಇದೀಗ ಬಿಜೆಪಿಗಿಂತಲೂ ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಇದೀಗ ಗಂಭೀರವಾದ ಆರೋಪ ಮಾಡುತ್ತಿದೆ. ಹೌದು ಡಿ. ಕೆಂಪಣ್ಣ ಅವರ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆದ ಹೋರಾಟದ ಪ್ರತಿಫಲವಾಗಿ ನಿಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ನಿಮ್ಮ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ, ಭ್ರಷ್ಟಾಚಾರದ ಬಗ್ಗೆ ಗಮನಕ್ಕೆ ತಂದರೂ, ಕಮಿಷನ್ ಹೆಚ್ಚಾಗುತ್ತಿದೆಯೇ ವಿನಹ ಕಡಿಮೆಯಾಗುತ್ತಿಲ್ಲ ಎಂದು ಸಂಘ ದೂರಿದೆ. ಕಾಮಗಾರಿ ಮುಕ್ತಾಯಗೊಂಡಿರುವ ಬಿಲ್ಗಳ ಪಾವತಿ ಮೂರು ವರ್ಷಗಳಿಂದ ಬಾಕಿ ಉಳಿದಿದೆ. ಗುತ್ತಿಗೆದಾರರ ಸಂಕಷ್ಟಗಳನ್ನು ಸಾಕಷ್ಟು ಬಾರಿ ತಮ್ಮಲ್ಲಿ ಹೇಳಿಕೊಂಡಿದ್ದೇವೆ. ಆದರೂ ತಾವು ಗಂಭೀರವಾಗಿ ಪರಿಗಣಿಸಿಲ್ಲ. ತುರ್ತಾಗಿ ನಮ್ಮ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ಇಲ್ಲದಿದ್ದರೆ, ರಾಜ್ಯಪಾಲರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,…