Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಕಳೆದ ಎರಡು ದಿನಗಳ ಹಿಂದೆ ಅಷ್ಟೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೌದು 15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದಾವಣಗೆರೆ : ಶಿವಾಜಿ, ಅಫ್ಜಲ್ ಖಾನ್ ಆಕ್ಷೇಪಾರ್ಹ ಫ್ಲೇಕ್ಸ್ ಅಳವಡಿಕೆ ಪ್ರಕರಣ : PSI, ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್
ದಾವಣಗೆರೆ : ಕೋಮು ಭಾವನೆಗೆ ಧಕ್ಕೆ ತರುವ ಫ್ಲೆಕ್ಸ್ ಅಡವಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದ ಆರೋಪದ ಅಡಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ದಾವಣಗೆರೆಯ ಆರ್ಎಂಸಿ ಯಾರ್ಡ್ PSI ಸಚಿನ್ ಬಿರಾದಾರ್ ಪೊಲೀಸ್ ಕಾನ್ಸ್ಟೇಬಲ್ ಆದ ಷಣ್ಮುಗ ಹಾಗು ವತ್ಸಲ ಅಮಾನತುಗೊಳಗಾದ ಸಿಬ್ಬಂದಿಗಳಾಗಿದ್ದಾರೆ. ಮೂವರನ್ನು ಅಮಾನತುಗೊಳಿಸಿ ಎಸ್ ಪಿ ಉಮಾ ಪ್ರಶಾಂತ ಆದೇಶ ಹೊರಡಿಸಿದ್ದಾರೆ ದಾವಣಗೆರೆಯ ಮಟ್ಟಿಕಲ್ಲ ಪ್ರದೇಶದಲ್ಲಿ ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಲಾಗಿತ್ತು ಶಿವಾಜಿ ಮತ್ತು ಅಫ್ಜಲ್ ಖಾನ್ ಸನ್ನಿವೇಶದ ಅಳವಡಿಸಲಾಗಿತ್ತು. ಸಾವರ್ಕರ್ ಯುವಕರ ಸಂಘ ಈ ಒಂದು ಆಕ್ಷೇಪಾರ್ಹ ಫ್ಲೆಕ್ಸ್ ಅಳವಡಿಸಿತ್ತು. ಕೋಮು ಭಾವನೆಗೆ ಧಕ್ಕೆ ತರುವ ರೀತಿಯ ಫ್ಲೆಕ್ಸ್ ಅಳವಡಿಸಿದ್ದರು. ಆಕ್ಷೇಪರಹ ಫ್ಲೆಕ್ಸ್ ಅಳವಡಿಕೆಗೆ ಬಗ್ಗೆ ಮಾಹಿತಿ ನೀಡದ ಆರೋಪದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಪಿಎಸ್ಐ ಹಾಗೂ ಇಬ್ಬರು ಕಾಂಸ್ಟೇಬಲ್ ಅಮಾನತುಗೊಳಿಸಿ ಎಸ್ ಪಿ ಉ ಮಹಾಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ : ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧರೊಬ್ಬರನ್ನು ತಲ್ವಾರ್ ಇಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲೂಕಿನ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ. ಇಂದು ಬೆಳಿಗ್ಗೆ ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳಿಂದ ಶಿವರಾಯ ಮಾಲಿಪಾಟೀಲ್ (65) ಕೊಲೆಯಾಗಿದೆ. ಬೆಳಿಗ್ಗೆ ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಕೃತ್ಯ ನಡೆದಿದೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಶಿವರಾಯ ಮಾಲಿಪಾಟೀಲ್ ಅನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಸೆಪ್ಟೆಂಬರ್ 1 ರಿಂದ, ಅನೇಕ ಪ್ರಮುಖ ಬದಲಾವಣೆಗಳು ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಈ ಬದಲಾವಣೆಗಳು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಯಾವ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ. ಸೆಪ್ಟೆಂಬರ್ 1, 2025 ರಿಂದ ಜಾರಿಗೆ ಬರಲಿರುವ ಐದು ಪ್ರಮುಖ ಬದಲಾವಣೆಗಳು ಹೀಗಿವೆ ಬೆಳ್ಳಿಯ ಮೇಲೆ ಹಾಲ್ಮಾರ್ಕ್ ಕಡ್ಡಾಯ ಈ ಹಿಂದೆ ಚಿನ್ನದ ಆಭರಣಗಳ ಮೇಲೆ ಮಾತ್ರ ಹಾಲ್ಮಾರ್ಕ್ ಮಾಡಬೇಕಾಗಿತ್ತು, ಆದರೆ ಈಗ ಸೆಪ್ಟೆಂಬರ್ 1 ರಿಂದ ಈ ನಿಯಮ ಬೆಳ್ಳಿಗೂ ಅನ್ವಯಿಸುತ್ತದೆ. ಇದರರ್ಥ ಮಾರುಕಟ್ಟೆಯಲ್ಲಿ ಮಾರಾಟವಾಗುವ ಬೆಳ್ಳಿ ಆಭರಣಗಳು ಮತ್ತು ಇತರ ವಸ್ತುಗಳು ಪ್ರಮಾಣೀಕರಿಸಲ್ಪಡುತ್ತವೆ ಮತ್ತು ಶುದ್ಧತೆಯ ಪುರಾವೆಯೊಂದಿಗೆ ಲಭ್ಯವಿರುತ್ತವೆ. ಇದು ನಕಲಿ ಬೆಳ್ಳಿಯ ಮಾರಾಟವನ್ನು ನಿಲ್ಲಿಸುತ್ತದೆ. ಬೆಳ್ಳಿಯ ಬೆಲೆಗಳಲ್ಲಿ ಕೆಲವು ಬದಲಾವಣೆಗಳಿರಬಹುದು, ಆದ್ದರಿಂದ ಹೂಡಿಕೆ ಮಾಡುವ ಮೊದಲು ಬೆಲೆಗಳನ್ನು ಪರಿಶೀಲಿಸುವುದು ಮುಖ್ಯವಾಗಿದೆ. SBI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಹೊಸ ಶುಲ್ಕಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ…
ಚಾಮರಾಜನಗರ : ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪುರುಷ ಮತ್ತು ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ಒಂದು ಘಟನೆ ನಡೆದಿದೆ. ಮೂರು ಮಕ್ಕಳ ತಾಯಿಯಾದ ಮೀನಾಕ್ಷಿ (38) ಹಾಗೂ ಅವಿವಾಹಿದ ರವಿ (40) ಎನ್ನುವ ಪುರುಷನ ಶವ ಪತ್ತೆಯಾಗಿದೆ. ಬೇರೆ ಬೇರೆ ಜಾತಿಯವರಾಗಿದ್ದ ಮೀನಾಕ್ಷಿ ಮತ್ತು ರವಿ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ, ಆ.30 : “ಬಿಜೆಪಿ ಮತ್ತು ಜೆಡಿಎಸ್ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು ಬಂದಿದ್ದೇನೆ. ನಿಮ್ಮದು ಸೇರಿದಂತೆ ಎಲ್ಲರ ಆಶೀರ್ವಾದ ಬೇಕು” ಎಂದು ಚಟಾಕಿ ಹಾರಿಸಿದರು. ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಚರ್ಚೆಯಾಗುತ್ತಿರುವಾಗ ಪ್ರಾರ್ಥನೆಗೆ ಇದು ಸೂಕ್ತ ಕಾಲವೇ ಎಂದು ಕೇಳಿದಾಗ, “ಅದೆಲ್ಲಾ ಏನಿಲ್ಲ. ಪ್ರಾರ್ಥನೆ ನನ್ನ ಸಹಜ ಪದ್ಧತಿ. ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ” ಎಂದು ತಿಳಿಸಿದರು.
ಉಡುಪಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಡುಪಿಗೆ ಭೇಟಿ ನೀಡಿದ್ದು ಉಡುಪಿಯ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಶ್ರೀಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಡಿಕೆ ಶಿವಕುಮಾರ್ ಅವರ ಸೇವೆ ದೊರಕಲಿ ಎಂದು ಪರೋಕ್ಷವಾಗಿ ಸಿಎಂ ಆಗಲಿ ಎಂದು ತಿಳಿಸಿದರು. ಡಿ.ಕೆ ಶಿವಕುಮಾರ್ ಓಪನ್ ಆಗಿ ಭಗವದ್ಗೀತೆ ಪಠಿಸುವ ಏಕೈಕ ರಾಜಕಾರಣಿ. ರಾಕ್ ಸ್ಟಾರ್ ರಾಜಕಾರಣಿ. ರಾಜ್ಯಕ್ಕೆ ದೇಶಕ್ಕೆ ಅವರ ಸೇವೆ ದೊರಕಲಿ. ಭಗವದ್ಗೀತೆ ಪುಸ್ತಕ ಪಡೆದಿದ್ದಾರೆ, ಅವರ ಮನಸ್ಸಿನ ಇಚ್ಛೆ ಫಲಿಸಲಿ ಎಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ. ಡಿಕೆಶಿ ಜೊತೆ ಪುತ್ತಿಗೆ ಮಠಕ್ಕೆ 35 ವರ್ಷದ ಸಂಬಂಧವಿದೆ. ಡಿಕೆ ಜೈಲ್ ಮಂತ್ರಿ ಆಗಿದ್ದರು, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ. ಅವರು ಶ್ರೀಕೃಷ್ಣನ ದೊಡ್ಡ ಭಕ್ತ, ಭಗವದ್ಗೀತೆಯನ್ನು ಬಹಳ ಅನುಸರಿಸುತ್ತಾರೆ ಎಂದು ಮಠದ ರಾಜಾಂಗಣದಲ್ಲಿ ನಡೆದ ತಮ್ಮ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಡಿ.ಕೆ…
ಕಲಬುರ್ಗಿ : ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನ ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ತಂದೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಮೃತಳ ತಂದೆ ಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಕೊಂದಿರುವುದಾಗಿ ಹೇಳಿದ್ದಾರೆ.ಹೀಗಾಗಿ, ಪ್ರಕರಣ ದಾಖಲಿಸಿಕೊಂಡು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಸ್ಥಳಕ್ಕೆ ಸೊಕೋ ತಂಡವನ್ನು ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ? ಮೃತಪಟ್ಟ ಯುವತಿ ಕವಿತಾ ಎಂಬುದು ಗೊತ್ತಾಗಿದೆ. ಗ್ರಾಮದಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ತಂದೆ ಶಂಕರ್ ಕೊಳ್ಳೂರ್ ಕೃಷಿಕ. ಶಂಕರ್ಗೆ ಐವರು ಹೆಣ್ಣು ಮಕ್ಕಳಿದ್ದು, ಇಬ್ಬರಿಗೆ ಮದುವೆ ಮಾಡಿ ಕೊಟ್ಟಿದ್ದಾರೆ. ಕೊಲೆಯಾದ 18 ವರ್ಷದ ಕವಿತಾ ನಾಲ್ಕನೆಯವಳು. ಪಿಯುಸಿ ಮುಗಿಸಿ ನರ್ಸಿಂಗ್ ಓದುತಿದ್ದಳು. ಕವಿತಾ ತನ್ನ ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಲವ್ ವಿಚಾರ ಮನೆಯವರಿಗೆ ಕಳೆದ ಮೂರು ತಿಂಗಳ ಹಿಂದೆ…
ಬೆಂಗಳೂರು : ನಗರದಲ್ಲಿ ನಾಳೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ದಿನಾಂಕ 31-08-2025 ರಂದು ಭಾನುವಾರ ರಜಾ ದಿನ ಆಗಿರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೆಲವರು ಮದ್ಯಪಾನ ಮಾಡಿ ಅನುಚಿತ ವರ್ತನೆ ಮಾಡುವ ಸಾಧ್ಯತೆ ಇರುತ್ತದೆಂದು ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲ್ಲೂಕಿನಲ್ಲಿರುವ ಎಲ್ಲಾ ಬಾರ್ ಗಳನ್ನು ದಿನಾಂಕ 31-08-2025 ರಂದು ಮುಚ್ಚಿಸಬೇಕೆಂದು ಕೋರಿರುತ್ತಾರೆ. ಅದರಂತೆ ಅಬಕಾರಿ ಉಪ ಆಯುಕ್ತರು…
ಚಾಮರಾಜನಗರ : ಕುರುಕಲು ತಿಂಡಿ ಪ್ರಿಯರನ್ನು ನೋಡಿರುತ್ತೀರಿ, ಹೆಚ್ಚು ತಿನ್ನುವ ತಿಂಡಿಪೋತರನ್ನು ಕಂಡಿರುತ್ತೀರಿ. ಆದರೆ, ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾ ಗುವಂತೆ ಮಾಡಿದ ಘಟನೆ ಚಾಮರಾಜನಗರ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೈಸೂರಿನ ಕುಮಾರ್ಎಂಬ ಅಯ್ಯಪ್ಪಸ್ವಾಮಿ ಭಕ್ತ ಕೊಳ್ಳೇಗಾಲದ ಮೂಲಕ ಶಬರಿಮಲೆ ಯಾತ್ರೆಗೆ ತೆರಳುವಾಗ ಕೊಳ್ಳೇಗಾಲದಲ್ಲಿ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಅನ್ನು ಗಟಗಟನೇ ಕುಡಿದು ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ಕುಮಾರ್ ಮಾತನಾಡಿ, ಕಳೆದ 29 ವರ್ಷದಿಂದ ಇದನ್ನೇ ಕುಡಿದು ಜೀವಿಸುತ್ತಿದ್ದೇನೆ. ಊಟ-ತಿಂಡಿ ಯಾವುದೂ ಸೇರುವುದಿಲ್ಲ. ಕುಡಿದರೇ ಟೀ-ಕಾಫಿ ಹಾಗೂ ಎಂಜಿನ್ ಆಯಿಲ್ ಅಷ್ಟೇ. ಕಾಪಾಡಲು ದೇವರು ಇದ್ದಾಗ ಯಾಕೆ ಚಿಂತೆ. ಕಳೆದ 29 ವರ್ಷದಿಂದ ಇದೇ ನನಗೆ ಆಹಾರ ಎಂದರು. ಕುಮಾರ್ ಅವರನ್ನು ಕಂಡ ಸ್ಥಳೀಯರು ಅಚ್ಚರಿಗೆ ಒಳಗಾದರು.