Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಚಾಪಲಗಡ್ಡದಲ್ಲಿ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ ಗಂಡನಿಂದ ದೂರವಿದ್ದ ವಿವಾಹಿತ ಮಹಿಳೆ ಉಮಾ ಎನ್ನುವವರ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಉಮಾ ಗಂಡನಿಂದ ದೂರವಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ರಘುಮೂರ್ತಿಯಿಂದ ಆರು ವರ್ಷಗಳಿಂದ ದೂರವಿದ್ದರು. ಚಿತ್ತವಾಡಗಿ ಠಾಣೆಯಲ್ಲಿ ಕೊಲೆ ಕುರಿತಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ಘಟನಾ ಸ್ಥಳಕ್ಕೆ SP ACP ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೊಲೆ ಆಗಿದ್ದು ಯಾವ ಕಾರಣಕ್ಕೆ ಉಮಾ ಅವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೈಸೂರು : ಮಹಿಳೆಯನ್ನು ಹಿಂಬಾಲಿಸಿ ಬಂದ ರೌಡಿಶೀಟರ್ ಗೆ ಧರ್ಮದೇಟು ಬಿದ್ದಿದೆ. ಮೈಸೂರಿನ ಹೂಟಗಹಳ್ಳಿಯಲ್ಲಿ ರೌಡಿಶೀಟರ್ ಗೆ ಮಹಿಳೆಯರೇ ಥಳಿಸಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಅಗತ್ತೂರಿನ ರೌಡಿಶೀಟರ್ ರಾಜೇಶ್ ಎಂಬಾತನಿಗೆ ಥಳಿಸಿದ್ದಾರೆ. ಮಹಿಳೆ ಫೋನ್ ನಂಬರ್ ಪಡೆದು ಅಸಭ್ಯವಾಗಿ ರಾಜೇಶ್ ವರ್ತಿಸಿದ್ದಾನೆ. ಹುಣಸೂರು ಮುಖ್ಯ ರಸ್ತೆಯಲ್ಲಿ ಸಿಕ್ಕ ರಾಜೇಶನಿಗೆ ಮಹಿಳೆಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಫೋನ್ ನಂಬರ್ ಪಡೆದು ಅಸಭ್ಯ ವರ್ತನೆ ತೋರಿದ್ದಾನೆ. ಹುಣಸೂರು ಮುಖ್ಯ ರಸ್ತೆಯಲ್ಲಿ ರಾಜೇಶ್ ಸಿಕ್ಕಾಗ ಮಹಿಳೆಯರೇ ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ ಈಗ ಈ ಒಂದು ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೆಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) ಎನ್ನುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿಯಾಗಿರುವ ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಆಗಿದ್ದಾರೆ. ಬೈಕ್ ಮೇಲೆ ಬಂದು ಇಬ್ಬರೂ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತನ ಮೇಲೆ ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಎದೆ ಪೂಜಾ ಸಿರಿಗಂತೆ 4 ಕಡೆ ಚಾಕು ಇರಿದು ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ತಕ್ಷಣ ಬಸವಂತ ನಾನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಬಸವಣ್ಣನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಭೇಟಿ…
ತುಮಕೂರು : ರಾಜ್ಯದ ಇತಿಹಾಸದಲ್ಲಿ ಡಿ. ದೇವರಾಜು ಅರಸು ಅವರ ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದೇವರಾಜ್ ಅರಸು ಅವರ ದಾಖಲೆ ಸರಿಗಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಗಂಭೀರವಾದ ಆರೋಪ ಮಾಡಿದ್ದು ಅಭಿವೃದ್ಧಿಗೆ ಹಣ ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಅಂತ ಸಿಎಂ ಸಿದ್ದರಾಮಯ್ಯ ಅವಾನಿಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಗೆ ಹಣ ಕೇಳಿದರೆ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಕರೆಯುತ್ತಾರೆ. ಕಾಂಗ್ರೆಸ್ ಗೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುತ್ತೇನೆ ಅಂತಾರೆ ತುಮಕೂರಿನಲ್ಲಿ ತುರುವೇಕೆರೆ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಮಾತನಾಡಿ ಬೆಳಗಾವಿ ಅಧಿವೇಶನದಲ್ಲಿ ಚೇಂಬರ್ ಗೆ ಕರೆದು ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದರು. ತುರುವೇಕೆರೆಗೆ ಒಂದು ಲಾ ಕಾಲೇಜು ಹಾಗು ಪಾಲಿಟೆಕ್ನಿಕ್ ಕಾಲೇಜು ಕೇಳಿದ್ದೆ ಆ ಕಾಲೇಜು ಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತ ಹೇಳುತ್ತಾರೆ ಇಂತಹ ಸಿದ್ದರಾಮಯ್ಯ ಈಗ…
ಬೆಂಗಳೂರು : ಬೆಂಗಳೂರಲ್ಲಿ ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತ ಬಾಲಕಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾರೆ. ಪ್ರಕರಣದ ಕಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನದ ವೇಳೆಗೆ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ, ಮೃತ ರಾಜಶೇಖರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿರುವೆ. ಘಟನೆ ಅಗಬಾರದಾಗಿತ್ತು. ಮೃತ ವ್ಯಕ್ತಿಯ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುವೆ. ಕುಟುಂಬ ಜೊತೆಗೆ ಪಕ್ಷ ಇದೆ ಎಂದು ತಿಳಿಸಲು ಬಂದಿದ್ದೇನೆ. ಮೃತ ವ್ಯಕ್ತಿಯ ಕುಟುಂಬ ಸರ್ಕಾರಿ ಉದ್ದೋಗಕ್ಕಾಗಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ವಿಚಾರ ಮಾಡಲಾಗುತ್ತದೆ. ಪ್ರೊಸೀಜರ್ ನೋಡಿಕೊಂಡು ಕಾನೂನು ಚೌಕಟ್ಟಿನ ಅಡಿ ನೌಕರಿ ಕೊಡುವ ಪ್ರಯತ್ನ ಮಾಡುವೆ ಎಂದು ತಿಳಿಸಿದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು : ಡಿ ದೇವರಾಜು ಅರಸು ಅವರ ನಂತರ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ದೇವರಾಜ್ ಅವರ ದಾಖಲೆ ಮುರಿದಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟು ವರ್ಷದ ರಾಜಕಾರಣ ನನಗೆ ತೃಪ್ತಿ ತಂದಿದೆ. ಮುಖ್ಯಮಂತ್ರಿ ಆಗಿ ಪೂರ್ಣಾವಧಿಯಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ. ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ…
ಚಾಮರಾಜನಗರ : ಚಾಮರಾಜನಗರದಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ ಶೀಥಿಲಾವಸ್ಥೆಯಿಂದ ಅಂಗನವಾಡಿಯ ಮೇಲ್ಚಾವಣಿ, ಕುಸಿದು ಬಿದ್ದಿರುವ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜಪುರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಈ ಹಿಂದೆಯೇ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿತ್ತು. ಇದೀಗ ಅಂಗನವಾಡಿಯ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಂಗನವಾಡಿಯಲ್ಲಿ ಮಕ್ಕಳಿಲ್ಲದ ಕಾರಣ ಭಾರಿ ದುರಂತವೊಂದು ತಪ್ಪಿದೆ. ದಿನನಿತ್ಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಮಕ್ಕಳು ಇರುತ್ತಿದ್ದರು. ಇದೀಗ ಇಂದು ಏಕಾಯಕಿ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದಿದೆ.
ಒಂದು ಹೆಣ್ಣು ತನ್ನ ಗಂಡನ ಬಳಿ ಬಯಸುವುದು ಏನೆಂದು ನಿಮಗೆ ಗೊತ್ತಾ..!!! 1. ಪ್ರೀತಿ ಮತ್ತು ಸಂತೋಷ ದಿಂದಿರಬೇಕು. 2. ಮನಸ್ಸಿಗೆ ನೋವಾಗುವಂತೆ ಎಂದಿಗೂ ಮಾತನಾಡಬಾರದು. 3. ಕೋಪ ಮಾಡಿಕೊಳ್ಳ ಬಾರದು. 4. ಊಟದಲ್ಲಿ ಕೊರತೆಯನ್ನು ಹೇಳ ಬಾರದು. 5. ಅನ್ಯರ ಮುಂದೆ ಬಯ್ಯಬಾರದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 6. ಯಾವ ಜಾಗದಲ್ಲಿಯೂ ಬಿಟ್ಟು ಕೊಡಬಾರದು 7. ಮುಖ್ಯವಾದ ಸಮಾರಂಭಗಳಿಗೆ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. 8. ಕುಟುಂಬದ ಮುಖ್ಯವಾದ ವಿಷಯಗಳನ್ನು ಹೆಂಡತಿಯ ಜೊತೆಗೂಡಿ ಆಲೋಚಿಸಬೇಕು. 9. ಹೇಳುವುದನ್ನು ಸಮಾದಾನವಾಗಿ ಕೇಳಬೇಕು. 10. ಹೆಂಡತಿಯ ಮಾತನ್ನು ಅನುಸರಿಸಬೇಕು ಆದರಿಸಬೇಕು. 11. ಹಣವು ಮಾತ್ರ ದ್ಯೇಯವಲ್ಲ ಮಕ್ಕಳು ಮತ್ತು ಕುಟುಂಬಕ್ಕೆ ಮುಖ್ಯ ಒತ್ತನ್ನು ನೀಡಬೇಕು. 12. ವಾರಕ್ಕೆ ಒಂದು ಸಲವಾದರು ಮನಸ್ಸು ಬಿಚ್ಚಿ ಮಾತನಾಡಬೇಕು. 13. ವಷ೯ಕ್ಕೆ ಒಂದು ಸಲವಾದರು ಪ್ರವಾಸಕ್ಕೆ ಕರೆದು ಕೊಂಡು ಹೋಗಬೇಕು. 14. ಮಕ್ಕಳ ಶಿಕ್ಷಣದ…
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಅವru ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 23ಕ್ಕೆ ಮುಂದೂಡಿದೆ. ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ 74 ಅನಾಥ ಶವಗಳನ್ನು ಹೂತು ಹಾಕಿರುವುದಾಗಿ ಆರೋಪಗಳು ಕೇಳಿಬಂದಿವೆ. ಆ ಎಲ್ಲಾ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ಆಗಿ ತನಿಖೆಯಾಗಬೇಕು. ಧರ್ಮಸ್ಥಳದಲ್ಲಿ ಸಿಕ್ಕ ಅನಾಥ ಶವಗಳು, ನಾಪತ್ತೆ ಪ್ರಕರಣಗಳಿಗೆ ಇದರಿಂದ ಸೂಕ್ತ ನ್ಯಾಯ ಸಿಗುವಂತಾಗಬೇಕು ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಸತತವಾಗಿ ಎರಡು ವರ್ಷಗಳವರೆಗೆ ನೂರಾರು ಅನಾಥ ಶವಗಳನ್ನು ಹೂತುಹಾಕಿದ್ದಾಗಿ ಈ ಹಿಂದೆ ಹೇಳಿಕೆ ನೀಡಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರು ಉಲ್ಟಾ ಹೊಡೆದಿದ್ದೇಕೆ ಎಂಬುದರ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಿದ್ದಾರೆ. ಧರ್ಮಸ್ಥಳದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ…














