Author: kannadanewsnow05

ಬೆಳಗಾವಿ : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಇಂದು ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಾಯಂಗೊಳಿಸಿ 17 ಸಂಬಳ ಕೊಟ್ಟಿದ್ದು ನಮ್ಮ ಸರ್ಕಾರ. ಕಸ ರವಾನೆ ಮಾಡುವ ಲಾರಿ ಚಾಲಕರನ್ನು ಕೂಡ ಖಾಯಂಗೊಳಿಸುತ್ತೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ STP ಪ್ಲಾಂಟ್ ಗೆ ಜಮೀನು ಸ್ವಾಧೀನ ಆಗಿದೆ.ಸರ್ಕಾರ ನ್ಯಾಯಾಲಯದಲ್ಲಿ ಹಣವನ್ನು ಡೆಪಾಸಿಟ್ ಮಾಡಿದೆ.ಹೆಚ್ಚಿನ ಪರಿಹಾರ ನೀಡಿ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು. ಹೆಸರು ಹೇಳುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಎದ್ದು ನಿಂತು ಮಾತನಾಡಲು ಮುಂದಾದರು.ಈ ವೇಳೆ ಸಿಎಂ ಸಿದ್ದರಾಮಯ್ಯ ನಾನು ಮಾತನಾಡುತ್ತೇನೆ ಕುಳಿತುಕೊಳ್ಳಮ್ಮ ಎಂದರು. ಸಚಿವೆ ಹೆಬ್ಬಾಳ್ಕರ್ ನನ್ನ ಗಮನಕ್ಕೆ ತಂದಿದ್ದು ಫೈಲ್ ನೋಡುತ್ತೇನೆ. ನೋಡದೆ ಆಶ್ವಾಸನೆ ಕೊಡಬಾರ.ದು ನನಗೆ ಎಲ್ಲಾ ಶಾಸಕರು ಆತ್ಮೀಯರು ನಾನು ರಾಜ್ಯದ ಮುಖ್ಯಮಂತ್ರಿ ಸ್ಮಾರ್ಟ್ ಸಿಟಿ…

Read More

ಬೆಂಗಳೂರು : ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ಆರೋಪ ಕುರಿತಂತೆ ಬಿಜೆಪಿ ಶಾಸಕರಾದಂತಹ ಎಸ್ ಆರ್ ವಿಶ್ವನಾಥ್ ಅವರು ಲೋಕಾಯುಕ್ತ ಎಸ್ ಪಿ ಅವರಿಗೆ ಇಂದು ಸಲ್ಲಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನರ್ಹರಿಗೆ ಟೆಂಡರ್ ಕೊಡುತ್ತಿದೆ. ಹೀಗಾಗಿ ಇವತ್ತು ಲೋಕಾಯುಕ್ತ ಎಸ್ಪಿಗೆ ದೂರು ಕೊಟ್ಟಿದ್ದೇನೆ. ರಾಜ್ಯಪಾಲರಿಗೆ ಅನುಮತಿ ಕೇಳುತ್ತೇವೆ ಅಂತ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹೇಳಿಕೆ ನೀಡಿದರು. ಈ ಹಿಂದೆ ಅಶ್ವಥ್ ನಾರಾಯಣ ಅವರು ಕೂಡ ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಇದೇ ವಿಚಾರವಾಗಿ ಇಂದು ಲೋಕಾಯುಕ್ತ ಎಸ್ ಪಿಗೆ ದೂರು ಸಲ್ಲಿಸಿದ್ದಾರೆ.

Read More

ಚಾಮರಾಜನಗರ : ಕೆಲಸಕ್ಕೆ ಹೋಗಬೇಡ ಎಂದ ಪತಿ : ನೊಂದ ಪತ್ನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಚಾಮರಾಜನಗರ : ಕೆಲಸಕ್ಕೆ ಹೋಗಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂತೂರಿನಲ್ಲಿ ಸೀಮೆಣ್ಣೆ ಸುರಿದುಕೊಂಡು ಪತ್ನಿ ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪತಿ ಗಾರ್ಮೆಂಟ್ ಕೆಲಸಕ್ಕೆ ಹೋಗದಂತೆ ಪತ್ನಿಗೆ ಹೇಳಿದ್ದ ಎನ್ನಲಾಗುತ್ತಿದೆ. ಕೆಲಸದ ವಿಚಾರಕ್ಕೆ ದಂಪತಿಯ ಮಧ್ಯೆ ಜಗಳ ನಡೆದಿದೆ. ಈ ವೇಳೆ ಸೀಮೆಎಣ್ಣೆ ಸುರಿದುಕೊಂಡು ಪತ್ನಿ ಸುಧಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಾಸಿದ್ದಾಳೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. [14:22, 04/04/2025] SDH: ಬಳ್ಳಾರಿ : ವೆಂಕಟೇಶ್ ಹತ್ಯೆ ಮಾಡಿದ ದುಷ್ಕರ್ಮಿಗಳು ರಾಣಿ ತೋಟದ ಜುಮಾ ಮಸೀದಿ ಮುಂಭಾಗದಲ್ಲಿ ಈ ಒಂದು ಹತ್ತೆ ನಡೆದಿದೆ ಎನ್ನಲಾಗಿದೆ ಆರ್ ಜೆ ಕಾಟನ್ ಬಿಲ್ ಇಂಡಸ್ಟ್ರಿ ನಲ್ಲಿ ವೆಂಕಟೇಶ್ ಕೆಲಸ ಮಾಡುತ್ತಿದ್ದ ಸಾವಕಾರದ ಮುಂದೆ ಮೃತನ…

Read More

ಬೆಂಗಳೂರು : ಸಾಮಾನ್ಯವಾಗಿ ಕೌಟುಂಬಿಕ ಕಲಹದಲ್ಲಿ ಯಾರಾದರೂ ಬೇಸತ್ತು ಎಲ್ಲಾದರೂ ಹೋಗಿ ಸಾಯಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೌದು ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಿಂದ ಮೃತಳ ಇಬ್ಬರು ಸಹೋದರರು ಮತ್ತು ಅತ್ತಿಗೆಯನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಜಿ.ಬಸವರಾಜು ಅವರ ಪೀಠ ಈ ಅಭಿಪ್ರಾಯ ವ್ಯಕ್ತಡಿಸಿದೆ. ಪ್ರಕರಣವೇನು? ಹಾವೇರಿಯ ಹಿರೇಕೆರೂರು ತಾಲೂಕಲ್ಲಿ ಮೃತ ಸುಧಾ, ಆಕೆಯ ಪತಿ ನಾಗರಾಜು ಹಾಗೂ ಪ್ರಕರಣದ ಆರೋಪಿಗಳು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. 2014ರ ಜ.8ರಂದು ಬೆಳಗ್ಗೆ 8 ಗಂಟೆಗೆ ಮನೆ ಮುಂದೆ ಕಸ ಹೊಡೆಯುತ್ತಿದ್ದ ಸುಧಾ ಅವರನ್ನು ಉದ್ದೇಶಿಸಿ ಮನೆ ಖಾಲಿ ಮಾಡುವಂತೆ ಆರೋಪಿಗಳು ಹೇಳಿದ್ದರು. ಇದರಿಂದ ಕೆರಳಿದ್ದ ಸುಧಾ, ಈ ಮನೆ ತನ್ನ ಗಂಡನ ತಾತನಿಗೆ ಸೇರಿದೆ. ಮನೆ ಖಾಲಿ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದರು. ಆಗ ಆರೋಪಿಗಳು…

Read More

ಬಾಗಲಕೋಟೆ : ತನ್ನ ಸಹೋದರಿಗೆ ಚುಡಾಯಿಸಿದನೆಂದು ಯುವಕನೋರ್ವನಿಗೆ ಅಪ್ರಾಪ್ತ ಬಾಲಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕ ಮೊಹಮ್ಮದ್‌ ಆಸೀಫ್‌ ನದಾಫ್‌ ಎಂಬ ಯುವಕನಿಗೆ ಚಾಕು ಇರಿದು ಗಾಯಗೋಳಿಸಿದ್ದಾನೆ. ಆಸೀಫ್‌ ಅಪ್ರಾಪ್ತನ ಸಹೋದರಿ ಸೈಕಲ್‌ ಅಡ್ಡಗಟ್ಟಿ ಚುಡಾಯಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆರಂಭದಲ್ಲಿ ಜಗಳ ನಡೆದಿತ್ತು. ಕಿತ್ತಾಟದ ವಿಚಾರ ತಿಳಿದು ಮುಸ್ಲಿಮ್‌ ಸಮಾಜದ ಹಿರಿಯರು ಇಬ್ಬರನ್ನು ಸಂಧಾನ ಮಾತುಕತೆಗೆ ಕರೆದಿದ್ದರು. ಸಂಧಾನ ಮಾತುಕತೆ ವೇಳೆ ಆಸೀಫ್‌ ಹಾಗೂ ಅಪ್ರಾಪ್ತ ಬಾಲಕನ ಮಧ್ಯೆ ಮತ್ತೆ ಜಗಳ ಶುರುವಾಗಿದೆ. ಜಗಳ ಜೋರಾಗುತ್ತಿದ್ದಂತೆ ಬಾಲಕ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಸೀಫ್‌ ತಲೆ, ಮೂಗು,ಕೆನ್ನೆಯ ಭಾಗಗಳಲ್ಲಿ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಆಸೀಫ್‌ನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನವನಗರ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿರುವ 16,500 ಸರಕಾರಿ ಶಾಲೆಗಳಿಗೆ ಮಕ್ಕಳ ಊಟಕ್ಕಾಗಿ ಹೊಸ ಅಡುಗೆ ಪಾತ್ರೆ ವಿತರಣೆ ಮಾಡಲಾಗುತ್ತೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಹಾಗಾಗಿ ಶೀಘ್ರದಲ್ಲಿಯೇ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಹಾಗು ಆಕೆಯ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೈಕ್ ಮೇಲೆ ಕಂಟೇನರ್ ಬಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ತಂದೆ ವೆಂಕಟೇಶ ಹಾಗೂ ಮಗಳು ದೀಕ್ಷಿತ (4) ಸಾವನ್ನಪ್ಪಿದ್ದಾರೆ. ಮೃತ ವೆಂಕಟೇಶ್ ಪತ್ನಿ ರೂಪ ಅವರ ಸ್ಥಿತಿ ಚಿಂತಾ ಜನಕವಾಗಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಮಂಡಳಿಯಿಂದ ನಾಯನ ಹಳ್ಳಿಗೆ ಹೊರಟಿದಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.

Read More

ಹಾವೇರಿ : ಶಿಕ್ಷಕರೊಬ್ಬರ ಅಮಾನತು ಆದೇಶವನ್ನು ಹಿಂಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಒಬ್ಬರು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಪಡೆದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮಾನತುಕೊಂಡಿದ್ದ ನೊಂದ ಶಿಕ್ಷಕರೊಬ್ಬರ ದೂರಿನ ಮೇರೆಗೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ. ಸದ್ಯ ಮೌನೇಶ್ ಬಡಿಗೇರ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಮೌನೇಶ್, ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಶಿಕ್ಷಕರೊಬ್ಬರ ಅಮಾನತು ಆಗಿತ್ತು. ಅಮಾನತು ಆದೇಶ ಹಿಂಪಡೆಯುವಂತೆ ಶಿಕ್ಷಕರು ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಮೌನೇಶ್, ₹ 50 ಸಾವಿರ ಕೊಟ್ಟರೆ ಆದೇಶ ಹಿಂಪಡೆಯುವುದಾಗಿ ಹೇಳಿದ್ದರು ಎಂದು ಲೋಕಾಯುಕ್ತ ಪೊಲೀಸ್…

Read More

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏ.23ರಿಂದ ಪ್ರಕರಣದ ಸಾಕ್ಷಿ ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಸಂಗ್ರಹಿಸಿದ ಡಿಜಿಟಲ್ ಸಾಕ್ಷಿ ವೀಕ್ಷಣೆಗೆ ಬೆಂಗಳೂರಿನ ಜನಪ್ರತಿನಿದಿಗಳ ನ್ಯಾಯಾಲಯ ಅವಕಾಶ ನೀಡಿತು. ಪ್ರಕರಣ ಸಂಬಂಧ ಇಂದು ಜನಪ್ರತಿನಿದಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಐಟಿ ತಜ್ಞ ಶುಭಂಗೆ ವಿಡಿಯೋ ನೋಡಲು ಇದೀಗ ಕೋರ್ಟ್ ಅವಕಾಶ ನೀಡಿದ್ದು, ಈ ಕುರಿತು ಪ್ರಜ್ವಲ್ ರೇವಣ್ಣ ಪರ ವಕೀಲರು ವಿಡಿಯೋ ವೀಕ್ಷಣೆಗೆ ಅವಕಾಶ ಕೋರಿ ಮನವಿ ಮಾಡಿದ್ದರು. ಪ್ರಜ್ವಲ್ ಅವರ ಇಬ್ಬರು ವಕೀಲರು, ಎಸ್ಪಿಪಿ ಅಥವಾ ಸಹಾಯಕರು, ಪ್ರಜ್ವಲ್ ರೇವಣ್ಣ ಪರ ಐಟಿ ತಜ್ಞ, ತನಿಖಾಧಿಕಾರಿ ಹಾಗೂ ಸಹಾಯಕರು ವಿಡಿಯೋ ವೀಕ್ಷಣೆಗೆ ಹಾಜರಿರಬೇಕು. ಇಂದು, ಏಪ್ರಿಲ್ 21 ರಂದು ವಿಡಿಯೋ ಕಾನ್ಫರೆನ್ಸ್ ರೂಮ್ನಲ್ಲಿ ವಿಡಿಯೋ ವೀಕ್ಷಣೆ ನಡೆಯಲಿದೆ. ಖಾಸಗಿ ವಿಡಿಯೋವಾಗಿದ್ದರಿಂದ ಕಾಪಿ ಮಾಡಲು ಅವಕಾಶವಿಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ತನ್ನದೇ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಂದು ಪ್ರಕರಣದ ಜಾಮೀನು ಅರ್ಜಿ ವಜಾಗೊಳಿಸಿದೆ. ಹೌದು ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ. ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

Read More