Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು, ಮಾತೃ ಭಾಷೆ ಕನ್ನಡ ಹಾಗೂ ಇಂಗ್ಲಿಷ್ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವ ಶಿಫಾರಸಿನೊಂದಿಗೆ ಒಟ್ಟು 97 ಶಿಫಾರಸುಗಳನ್ನು ಮಾಡಿದೆ. ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಅಕ್ಟೋಬರ್ 11, 2023ರಂದು ಆದೇಶ ಹೊರಡಿಸಿ ಶಿಕ್ಷಣ ನೀತಿಯನ್ನು ರೂಪಿಸಲು ನೇಮಿಸಿತು. ಪ್ರೊ. ಸುಖದೇವ್ ಥೋರಾಟ್ ಅವರ ಅಧ್ಯಕ್ಷತೆಯಲ್ಲಿ 17 ಸದಸ್ಯರು, 6 ವಿಷಯ ತಜ್ಞರು/ಸಲಹೆಗಾರರು ಮತ್ತು ಒಬ್ಬ ಸದಸ್ಯ ಕಾರ್ಯದರ್ಶಿಯೊಂದಿಗೆ ಈ ಆಯೋಗ ಕಾರ್ಯಾರಂಭ ಮಾಡಿತು. ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿರುವ ಆಯೋಗ ಶುಕ್ರವಾರ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದೆ. ಶಾಲಾ ಶಿಕ್ಷಣದ ಶಿಫಾರಸುಗಳು: * 2+8+4 ರಚನೆಯನ್ನು ಅಳವಡಿಸಿಕೊಳ್ಳಲು ಶಿಫಾರಸು: 2 ವರ್ಷ ಪೂರ್ವ-ಪ್ರಾಥಮಿಕ, 8 ವರ್ಷ ಪ್ರಾಥಮಿಕ, ಮತ್ತು 4 ವರ್ಷ ಮಾಧ್ಯಮಿಕ ಶಿಕ್ಷಣ. * ವಲಸೆ ಹೋಗುವ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. * ರಾಜ್ಯದಾದ್ಯಂತ ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸಬೇಕು.…
ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆ ನಡೆದಿದ್ದು, ರ್ಯಾಗಿಂಗ್ ಗೆ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಂಜಲಿ ಮುಂಡಾಸ್ ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹಪಾಠಿ ವರ್ಷ ಮತ್ತು ಪ್ರದೀಪ್ ನಿಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಗುಳೇದಗುಡ್ಡದ ಬಂಡಾರಿ ಕಾಲೇಜ್ ವಿದ್ಯಾರ್ಥಿ ಅಂಜಲಿ ಮುಂಡಾಸ್ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಆಗಿದ್ದಾಳೆ. ಡೆತ್ ನೋಟ್ ಅಲ್ಲಿ ನನ್ನನ್ನು ಮಾನಸಿಕವಾಗಿ ಇವರು ಕುಗ್ಗಿ ಸಿದ್ದಾರೆ. ಮತ್ತು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು ಇವರೇ ಮೂವರು ನನ್ನ ಸಾವಿಗೆ ಕಾರಣರಾಗಿದ್ದಾರೆ ಎಂದು ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ.
ಚಿಕ್ಕಮಗಳೂರು : ಸಹೋದರಿಯ ಹತ್ಯೆಯ ಪ್ರತಿಕಾರವಾಗಿ ಭಾವನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ತರೀಕೆರೆ ತಾಲೂಕಿನ ಕರಕುಚಿ ಗ್ರಾಮದ ಬಳಿ ಈ ಒಂದು ಭೀಕರ ಕೊಲೆ ನಡೆದಿತ್ತು. ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ಕರಕೋಚಿ ಗ್ರಾಮ ಚರಣ್ (23) ಹತ್ಯೆಗೈದ ಬಾಮೈದ ಸಂತೋಷ ಮತ್ತು ಸಚಿನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 2024ರ ಏಪ್ರಿಲ್ 29ರಂದು ಪತ್ನಿ ಮೇಘನಾಳನ್ನು ಪತಿ ಚರಣ್ ಕೊಂದಿದ್ದ. ಗ್ರಾಮದ ಮೇಘನಾ ಮತ್ತು ಚರಣ್ ಪ್ರೀತಿಸಿ ಮದುವೆಯಾಗಿದ್ದರು. ತನ್ನ ಮನೆ ಬಿಟ್ಟು ತವರು ಮನೆಗೆ ಊರಿಗೆ ಹೋಗಿದ್ದಕ್ಕೆ ಚರಣ್ ಮೇಘನಾಳನ್ನು ಕೊಂದಿದ್ದ. ಬಟ್ಟೆ ತೊಳೆಯಲು ಹೋದಾಗ ಪತ್ನಿಕೊಂದು ಶವ ಕಾಲುವೆಗೆ ಎಸೆದಿದ್ದ. ಚರಣ್ 2024 ಏಪ್ರಿಲ್ 29ರಂದು ಮೊಳಕಟ್ಟಮ್ಮ ಜಾತ್ರೆಯ ದಿನ ಮೇಘನಾ ಕೊಲೆ ನಡೆದಿತ್ತು. ಬಳಿಕ ಮೂರು ತಿಂಗಳ ಹಿಂದೆ ಚರಣ್ ಜಾಮೀನಿನಿಂದ ಹೊರಗಡೆ ಬಂದಿದ್ದನ್ನು ನೋಡಿ ಮೇಘನಾ ಸಹೋದರ ಕೊಲೆ ಮಾಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಭಾವನನ್ನು ಕೊಲೆಗೈದ…
ಮಂಡ್ಯ : ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಜರುಗಿದೆ. ಅರುಣ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಎಂ.ಟಿ.ಆರ್ ಬಾರ್ ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್ ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿದ್ದಾರೆ. ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆಸ್ತೂರು ಪೋಲೀಸರು ಶವವನ್ನು ಮಂಡ್ಯ ಮಿಮ್ಸ್ ಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ :…
ಯಾದಗಿರಿ : ರಾಜ್ಯದಲ್ಲಿ ಗುಡುಗು-ಸಿಡಿಲು ಸಮೇತ ಶುಕ್ರವಾರ ಭರ್ಜರಿ ಮಳೆ ಸುರಿದಿದ್ದು, ಸಿಡಿಲು ಬಡಿದು ಓರ್ವ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ವರ್ಷಧಾರೆಗೆ ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದ ಹೊರವಲಯದಲ್ಲಿ ಪರಮಣ್ಣ ಕಕ್ಕೇರಾ (26) ಎಂಬ ಯುವಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಪರಮಣ್ಣ ತಮ್ಮ ಜಮೀನು ಕೆಲಸಕ್ಕೆ ಅಣ್ಣನ ಜತೆಗೆ ಹೋಗಿದ್ದ. ಗುಡುಗು ಸಹಿತ ಮಳೆ ಬರ್ತಿದ್ದಂತೆ ಅಣ್ಣ-ತಮ್ಮಂದಿರು ಗಿಡದ ಕೆಳಗೆ ನಿಂತಿದ್ದರು. ಆಗ ಸಿಡಿಲು ಬಡಿದಿದ್ದು, ಪರಮಣ್ಣ ಸ್ಥಳದಲ್ಲಯೇ ಮೃತಪಟ್ಟಿದ್ದಾನೆ. ಅಣ್ಣನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 5 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಬಲಪಡಿಸಲು ಸರ್ಕಾರ 12,060 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಇದರ ಜೊತೆಗೆ, ದೇಶೀಯ ಅಡುಗೆ ಅನಿಲವನ್ನು ಅಗ್ಗವಾಗಿಸಲು 30000 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ, 52,667 ಕೋಟಿ ರೂ.ಗಳ ಪ್ಯಾಕೇಜ್ಗೆ ಅನುಮೋದನೆ ನೀಡಲಾಯಿತು. ಇದರಲ್ಲಿ ಎಲ್ಪಿಜಿ, ಶಿಕ್ಷಣ, ಮೂಲಸೌಕರ್ಯ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಇದರ ಜೊತೆಗೆ, ದೇಶೀಯ ಅಡುಗೆ ಅನಿಲವನ್ನು ಅಗ್ಗವಾಗಿಸಲು 30000 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಸಂಸ್ಥೆಗಳ ಮೂಲಸೌಕರ್ಯವನ್ನು ಬಲಪಡಿಸಲು 4200 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಸಭೆಯಲ್ಲಿ, ದೇಶೀಯ ಎಲ್ಪಿಜಿ ಮಾರಾಟದಲ್ಲಿನ ನಷ್ಟವನ್ನು ಸರಿದೂಗಿಸಲು ಮೂರು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್)…
ಬೆಂಗಳೂರು : ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಮಾಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದರು. ರಾಹುಲ್ ಗಾಂಧಿ ಆರೋಪಗಳಿಗೆ ಅರವಿಂದ ಲಿಂಬಾವಳಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ಹೇಳಿಕೆ ಸ್ವಾಗತಿಸಬೇಕು ಏನು ಮಾತಾಡಬೇಕು ಗೊತ್ತಾಗುತ್ತಿಲ್ಲ. 2008ರಿಂದ ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಒಟ್ಟು ನಾಲ್ಕು ಬಾರಿ ಗೆದ್ದಿದೆ. ಮಹದೇವಪುರದಲ್ಲಿ ವಲಸಿಗೆರೆ ಹೆಚ್ಚು ಇದ್ದಾರೆ, ಹೀಗಾಗಿ ಮತದಾರರ ಸಂಖ್ಯೆ ಹೆಚ್ಚಳ ಆಗಿದೆ. ಮಹಾದೇವಪುರ ಕ್ಷೇತ್ರದಲ್ಲಿ ಒಂದೇ ಕಟ್ಟಡದಲ್ಲಿ 80 ಜನ ವೋಟರ್ಸ್ ವಾಸ ಮಾಡುತ್ತೀದ್ದಾರೆ. ರಾಹುಲ್ ಗಾಂಧಿ ಆರೋಪಕ್ಕೆ ಲಿಂಬಾವಳಿ ಇದೀಗ ತಿರುಗೇಟು ನೀಡಿದ್ದು, ಚುನಾವಣೆಯಲ್ಲಿ ಮತದಾನ ಮಾಡಿರುವವರೇ 6 ಜನ. ಆ ಕಟ್ಟಡದಲ್ಲಿ ವಾಸವಿರುವುದು ಹೋಟೆಲ್ ಸಿಬ್ಬಂದಿಗಳು ಉದ್ದಕ್ಕೂ ರೂಂಗಗಳಿವೆ ಅಲ್ಲಿ ವಾಸ ಮಾಡುತ್ತಿದ್ದಾರೆ. ಹೋಟೆಲ್ ಮಾಲೀಕರು ಅವರಿಗೆ ರೂಮ್ ಕೊಟ್ಟಿದ್ದಾರೆ. ಹೋಟೆಲ್ನಲ್ಲಿ ಕೆಲಸ ಮಾಡುವವರು ಮತ ಹಾಕಬಾರದು. ನಮ್ಮ ಬಳಿ ಇರುವ…
ಮಂತ್ರ ನಮ್ಮ ಕುಟುಂಬವು ಯಾವುದೇ ನ್ಯೂನತೆಗಳಿಂದ ಮುಕ್ತವಾಗಿರಲು ಮತ್ತು ಉತ್ತಮವಾಗಿರಲು ನಾವು ಪ್ರತಿಯೊಬ್ಬರೂ ಶ್ರಮಿಸುತ್ತಿದ್ದೇವೆ. ನಾವು ಎಷ್ಟೇ ಕಷ್ಟಪಟ್ಟು ದುಡಿದು ಸಂಪಾದಿಸಿದರೂ, ಕುಟುಂಬದಲ್ಲಿರುವ ಜನರು ಆರೋಗ್ಯವಾಗಿದ್ದರೆ ಮಾತ್ರ ನಾವು ಗಳಿಸುವ ಹಣವನ್ನು ಉತ್ತಮ ರೀತಿಯಲ್ಲಿ ಖರ್ಚು ಮಾಡಬಹುದು. ಇಲ್ಲದಿದ್ದರೆ, ನಾವು ಗಳಿಸುವ ಹಣದ ಅರ್ಧಕ್ಕಿಂತ ಹೆಚ್ಚು ವೈದ್ಯಕೀಯ ವೆಚ್ಚಗಳಿಗೆ ಹೋಗುತ್ತದೆ. ಈ ಪೋಸ್ಟ್ನಲ್ಲಿ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ವೈದ್ಯಕೀಯ ವೆಚ್ಚಗಳಿಂದಾಗಿ ಗಳಿಸಿದ ಹಣವನ್ನು ಹೆಚ್ಚಾಗಿ ಕಳೆದುಕೊಳ್ಳುವವರು ವರಲಕ್ಷ್ಮಿ ವ್ರತದ ದಿನದಂದು ಪಠಿಸಬೇಕಾದ ಮಂತ್ರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…
ಬೆಂಗಳೂರು : ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಸಂಪುಟ ಉಪ ಸಮಿತಿ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ವರ್ಷ 6.11 ಲಕ್ಷ ರೈತರಿಗೆ 135 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಈ ಬಾರಿ 7 ಲಕ್ಷ ರೈತರಿಂದ ಖರೀದಿ ಮಾಡಲಿದ್ದೇವೆ. ಸೆಪ್ಟೆಂಬರ್ ನಿಂದ ನೊಂದಣಿ ಕಾರ್ಯ ಪ್ರಾರಂಭ ಮಾಡಲಿದ್ದೇವೆ. ಮುಂದಿನ ಮಾರ್ಚ್ ವರೆಗೂ ಉತ್ಪನ್ನಗಳ ಖರೀದಿ ಮಾಡಲಿದ್ದೇವೆ. 4846 ರೂಪಾಯಿಗೆ ಕ್ವಿಂಟಾಲ ರಾಗಿ ಖರೀದಿ ಮಾಡಲಿದ್ದೇವೆ ಈ ಬಾರಿ 596 ರೂಪಾಯಿ ಹೆಚ್ಚಳ ಮಾಡಿದ್ದೇವೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.