Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸ್ಕೂಲ್ ಬಸ್ ಭೀಕರವಾಗಿ ಅಪಘಾತಕ್ಕೆ ಈಡಾಗಿದೆ. ಓವರ್ ಸ್ಪೀಡ್ ನಲ್ಲಿ ಚಾಲಕ ಸ್ಕೂಲ್ ಬಸ್ ಚಲಾಯಿಸಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಹೋಟೆಲ್ ಗೆ ನುಗ್ಗಿರುವ ಘಟನೆ ಮಾದನಾಯಕನಹಳ್ಳಿ ಲಕ್ಷ್ಮಿಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಹೌದು ಇಂದು ಮಕ್ಕಳನ್ನು ಕರೆದುಕೊಂಡು ಚಾಲಕ ಶಾಲಾ ಬಸ್ ಓವರ್ ಸ್ಪೀಡ್ ಆಗಿ ಚಲಾಯಿಸುತ್ತಿದ್ದ ಈ ವೇಳೆ ನಿಯಂತ್ರಣ ಕಳೆದುಕೊಂಡು ಎದುರುಗಡೆ ಇದ್ದ ಐಷರ್ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ಬಸ್ ಹೋಟೆಲ್ ಗೆ ನುಗ್ಗಿದೆ. ಇವಳೆ ಬಸ್ ನಲ್ಲಿ ಇದ್ದ ಹಲೋ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಬಸ್ನಲ್ಲಿದ್ದ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆ ಸುತ್ತಿಕೊಂಡಿದ್ದು, ಇನ್ನೊಂದು ಕಡೆ ರಾಜ್ಯ ಬಿಜೆಪಿಯಲ್ಲಿ ಹಲವು ಬೆಳವಣಿಗೆ ಆಗಿವೆ. ಇತ್ತೀಚಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಒಂದೇ ದಿನ ದೆಹಲಿಗೆ ಭೇಟಿ ನೀಡಿದ್ದರು. ಅಲ್ಲದೆ ಮುಂದಿನ ಜುಲೈ ಮೊದಲನೇ ವಾರದಲ್ಲಿ ರಾಜ್ಯಕ್ಕೆ ಬಿಜೆಪಿಯ ನೂತನ ಅಧ್ಯಕ್ಷ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ನೇಮಕ ವಿಚಾರವಾಗಿ ವಿ.ಸೋಮಣ್ಣಗೆ ರಾಜ್ಯಾಧ್ಯಕ್ಷ ಸ್ಥಾನಪಟ ಕಟ್ಟಲು ಪ್ರಯತ್ನ ನಡೆದಿತ್ತು ಎನ್ನಲಾಗುತ್ತಿದೆ. ವಿ. ಸೋಮಣ್ಣ ಮನವೊಲಿಸಲು ಒಂದು ಬಣ ಪ್ರಯತ್ನ ಮಾಡಿತ್ತು. ಎರಡು ಜವಾಬ್ದಾರಿ ನಿರ್ವಹಿಸಲು ಸಚಿವ ವಿ.ಸೋಮಣ್ಣ ಮನಸ್ಸು ಮಾಡಿದ್ದರು. ಸಚಿವ ಸ್ಥಾನದ ಜೊತೆಗೆ ರಾಜ್ಯಾಧ್ಯಕ್ಷ ಜವಾಬ್ದಾರಿವ ಹೆಸರು ವಿ.ಸೋಮಣ್ಣ ಮನಸ್ಸು ಮಾಡಿದ್ದರು.ಆದರೆ ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸೂಚನೆ ನೀಡಲಾಗಿದ್ದು ವರಿಷ್ಠರು ಕೇಂದ್ರ ಸಚಿವ ವಿ.ಸೋಮಣ್ಣಗೆ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ…
ಹುಬ್ಬಳ್ಳಿ/ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಾದೇಶಿಕ ಆಯುಕ್ತ ಎಸ್ಬಿ ಶೆಟ್ಟೆಣ್ಣವರ್ ಅವರು ಜೂನ್ 30 ರಂದು ಕಾರ್ಪೊರೇಷನ್ನ ಸಭೆಯ ಸಭಾಂಗಣದಲ್ಲಿ ಎಚ್ಡಿಎಂಸಿಯ 24 ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಆ ದಿನ, ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 11.00 ರವರೆಗೆ, ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ಅದರ ನಂತರ, ನಾಮಪತ್ರಗಳ ಪರಿಶೀಲನೆ, ಮಾನ್ಯ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವುದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆ, ಅವಿರೋಧ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶಗಳ ಘೋಷಣೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಮತ್ತು…
ಬೆಂಗಳೂರು : ಚಾಕೊಲೇಟ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ಇತ್ತೀಚಿಗೆ ಕೋಲಾರದಲ್ಲಿ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆಯಾಗಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿಗೆ ಹೊಸ ಮಾದರಿಯ ಚಾಕ್ಲೇಟ್ ಎಂಟ್ರಿ ಆಗಿದ್ದು, ಗಾಂಜಾ ಮಿಶ್ರಿತ ಚಾಕಲೇಟನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಜೆಲ್ಲಿ ಚಾಕೊಲೇಟ್ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಇದೀಗ ಜೆಲ್ಲಿ ಗಾಂಜಾ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಗಾಂಜಾ ಸೊಪ್ಪು, ಹ್ಯಾಶ್ ಆಯಿಕ್ಗಿಂತ ಈ ಜೆಲ್ಲಿ ಗಾಂಜಾ ಕಿಕ್ಕು ಹೆಚ್ಚು ಎನ್ನಲಾಗುತ್ತಿದೆ. ಪಾಕೆಟ್ನಲ್ಲಿಟ್ಟುಕೊಂಡರೂ ಯಾರಿಗೂ ಡೌಟ್ ಬರಲ್ಲ. ಒಂದು ವೇಳೆ ಪೊಲೀಸರೇ…
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೂಡಸಂದ್ರ ಬಳಿ ಈ ಒಂದು ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚೂಡಸಂದ್ರ ಎಂಬಲ್ಲಿ ಆಂಧ್ರಪ್ರದೇಶ ಮೂಲದ ನಂದಿನಿ (23) ಎಂಬ ಯುವತಿ ಸಾವನಪ್ಪಿದ್ದಾಳೆ. ಸ್ನೇಹಿತರ ಜೊತೆ ನಿರ್ಮಾಣ ಹಂತದ ಕಟ್ಟಡದ ಮೇಲೆ ಯುವತಿ ಮದ್ಯಪಾನ ಮಾಡಲು ತೆರಳಿದ್ದಳು. ನಿರ್ಮಾಣ ಹಂತದ ಕಟ್ಟಡದಲ್ಲಿ ತನ್ನ ಸ್ನೇಹಿತರ ಜೊತೆಗೂಡಿ ಮದ್ಯಪಾನ ಮಾಡಲು ಮುಂದಾಗಿದ್ದಳು. ಈ ವೇಳೆ ಸ್ನೇಹಿತರ ಜೊತೆ ನಂದಿನಿ ಕುಡಿದು ರೀಲ್ಸ್ ಮಾಡಿದ್ದಾಳೆ. ನಂತರ ಆಯತಪ್ಪಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳನ್ನು ಆಂಧ್ರಪ್ರದೇಶ ಮೂಲದ ನಂದಿನಿ (23) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಸ್ನೇಹಿತರ ಜೊತೆ ಕಟ್ಟಡದ ಮೇಲೆ ಹೋಗಿದ್ದಳು. ಈ ವೇಳೆ ದುರಂತ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿರುತ್ತದೆ. ಪೋಷಕರು ಸ್ವಲ್ಪ ಏರು ಧ್ವನಿಯಲ್ಲಿ ಮಾತನಾಡಿದರೂ, ಆತ್ಮಹತ್ಯೆ ಹಾಗೂ ಇನ್ಯಾವುದೋ ಕಾರಣಕ್ಕೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ, ಶಿಕ್ಷಕರು ಬೈತಾರೆ ಎಂದು ವಿಷ ಸೇವಿಸಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು ಈ ಒಂದು ಘಟನೆ ಚಿಕ್ಕಮಗಳೂರಿನ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ನಿವೇದಿತಾ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ. ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಅನ್ನು ನೀಡಿದ್ದಾರೆ. ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್ ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗುತ್ತೆ ಶಿಕ್ಷಕರು ಹೊಡೆಯುತ್ತಾರೆ ಎಂದು ಮನೆಯಲ್ಲಿಯೇ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಇದೀಗ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬರೆದಿರುವ ಪತ್ರಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದು, 2025 26ನೇ ಸಾಲಿನ ಮಾವು ಬೆಳೆಗಾರ ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಲ್ ಮಾವಿಗೆ 1,616 ರೂಪಾಯಿ ಘೋಷಣೆ ಮಾಡಿದ್ದಾರೆ. ಹೌದು ರಾಜ್ಯದ ಒಟ್ಟು 2,50,000 ಮೆಟ್ರಿಕ್ ಟನ್ ಮಾವಿಗೆ ಇದೀಗ ಪರಿಹಾರ ಘೋಷಣೆ ಮಾಡಿದ್ದಾರೆ. ಎಂ ಎಸ್ ಐ ಯೋಜನೆಯ ಅಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ.ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ. ಮಾವು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು. ಕಳೆದ 22 ದಿನಗಳಿಂದ ರಾಜ್ಯದಲ್ಲಿ ಮಾವು ಬಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು.ನಾವು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಇಂದು ಕೋಲಾರದಲ್ಲಿ ಚೆನ್ನೈ ಬೆಂಗಳೂರು ರಾಷ್ಟ್ರೀಯ…
ಚಿಕ್ಕಮಗಳೂರು : ಮಲ್ನಾಡು ಭಾಗಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಹಾಸನ ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತೀರ್ಥ ಕೆರೆ ಬಳಿ ಈ ಒಂದು ಗುಡ್ಡ ಕುಸಿದಿರುವ ಘಟನೆ ನಡೆದಿದೆ.ಗುಡ್ಡ ಕುಸಿತದಿಂದ ಶೃಂಗೇರಿ ಮತ್ತು ಹೊರನಾಡು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ರಸ್ತೆಯಲ್ಲಿ ಮಣ್ಣು ಬಿದ್ದ ಹಿನ್ನೆಲೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಪೊಲೀಸರು ಬ್ಯಾರಿಕೆಡ್ ಹಾಕಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿದ್ದು, ವಿಪಕ್ಷಗಳಿಗೆ ಇವೆ ಪ್ರಮುಖ ಅಸ್ತ್ರವಾಗಿವೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ದೆಹಲಿಗೆ ತೆರಳಿದ್ದಾರೆ. ಹೌದು ನವದೆಹಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತೆರಳಿದ್ದಾರರೆ. ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಬೆನ್ನಲ್ಲೇ, ಬಿವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಒಂದೇ ದಿನ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಹಾಗಾಗಿ ಶೀಘ್ರದಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಒಂದೇ ದಿನ ರಾಜ್ಯದ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.