Subscribe to Updates
Get the latest creative news from FooBar about art, design and business.
Author: kannadanewsnow05
ನಿಮ್ಮ ಕಾರ್ಯ ವೈಖರಿ ತೃಪ್ತಿದಾಯಕವಾಗಿಲ್ಲ : ಖಾತೆ ಉಳಿಸಿಕೊಳ್ಳಲು ಸಚಿವರಿಗೆ 2 ತಿಂಗಳು ಗಡವು ಕೊಟ್ಟ ಕೆಸಿ ವೇಣುಗೋಪಾಲ್
ಬೆಂಗಳೂರು : ಇಂದು ರಾಜ್ಯಕ್ಕೆ ಆಗಮಿಸಿದ್ದ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ಸಿಎಂ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಕೆಸಿ ವೇಣುಗೋಪಾಲ್ ಅವರು ಸಚಿವರಿಗೆ ಎರಡು ತಿಂಗಳ ಗಡವು ಕೊಟ್ಟು ಕಾರ್ಯವೈಖರಿ ಬದಲಾಯಿಸಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ. ಸಚಿವರ ಜೊತೆ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ ಸಭೆ ವಿಚಾರವಾಗಿ ಸಭೆಯಲ್ಲಿ ಸಚಿವರಿಗೆ ಕೆ ಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಕಾರ್ಯವೈಖರಿ ತವರು ಉಸ್ತುವಾರಿ ಜಿಲ್ಲೆಗೆ ಮಾತ್ರ ಸೀಮಿತವಾಗಿದೆ.ರಾಜ್ಯ ಪ್ರವಾಸ ಮಾಡಿ ಇಲಾಖೆಯಲ್ಲಿ ಸುಧಾರಣೆ ತರಬೇಕು.ಉಸ್ತುವಾರಿ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳಿಗೂ ಪ್ರವಾಸ ಮಾಡಬೇಕು. ನಿಮ್ಮ ಕಾರ್ಯ ವೈಖರಿ ನಮಗೆ ತೃಪ್ತಿದಾಯಕವಾಗಿಲ್ಲ ಎಂದರು. ಸರಿಯಾಗಿ ಕೆಲಸ ಮಾಡಿದ್ರೆ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠಪಕ್ಷ 15 ಸ್ಥಾನಗಳನ್ನಾದರೂ ಗೆಲ್ಲುತ್ತಿದ್ದೆವು. ಬಿಜೆಪಿ ಅವಧಿಯ ಹಗರಣಗಳ…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಮರ್ಡರ್ ಒಂದು ಆಗಿದ್ದು, ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಹತ್ಯೆಗೈದ ಘಟನೆ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮಹಾದೇವಿ ಗುರಪ್ಪ ತೋಲಗಿ (70) ಕೊಲೆಯಾದ ದುರ್ದೈವಿ. ಈರಣ್ಣ ಗುರಪ್ಪ ತೋಲಗಿ (34) ಕೊಲೆ ಆರೋಪಿ ಎಂದು ತಿಳಿದುಬಂದಿದೆ.ತನ್ನ ತಾಯಿ ಹೆಸರಿನಲ್ಲಿದ್ದ ಒಂದು ಎಕರೆ ಜಮೀನು ವಿಚಾರವಾಗಿ ಪ್ರತಿದಿನ ಈರಣ್ಣ ಸಾರಾಯಿ ಕುಡಿದು ಬಂದು ತಾಯಿಯ ಜೊತೆ ಜಗಳ ಮಾಡುತ್ತಿದ್ದ. ಇದೇ ವಿಚಾರವಾಗಿ ಶನಿವಾರ ತಡರಾತ್ರಿ ಮಧ್ಯದ ಅಮಲಿನಲ್ಲಿದ್ದ ಈರಣ್ಣ ತೋಲಗಿ ತಾಯಿಯ ಜೊತೆ ಗಲಾಟೆ ಮಾಡಿದ್ದಾನೆ. ಮನೆಯಲ್ಲಿನ ನೀರು ಕಾಯಿಸುವ ಒಲೆಯಲ್ಲಿದ್ದ ಅರ್ಧ ಸುಟ್ಟಿದ್ದ ಕಟ್ಟಿಗೆ ತೆಗೆದುಕೊಂಡು ತಾಯಿಯ ತಲೆಗೆ ಬಲವಾಗಿ ಹೊಡೆದು, ಗೋಡೆಗೆ ತಲೆ ಗುದ್ದಿಸಿದ್ದರಿಂದ ಗಂಭೀರ ಗಾಯಗೊಂಡಿದ್ದ ಮಹಾದೇವಿ ಸ್ಥಳದಲ್ಲೇ ಅಸುನೀಗಿದ್ದಾರೆ.ಘಟನಾ ಸ್ಥಳಕ್ಕೆ ಬೈಲಹೊಂಗಲ ಡಿವೈಎಸ್ಪಿ ರವಿ ನಾಯಕ್, ದೊಡವಾಡ ಪೊಲೀಸ್ ಠಾಣೆ ಪಿಎಸ್ಐಗಳಾದ ನಂದೀಶ್ ಹಾಗೂ ಪ್ರವೀಣ್ ಕೋಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬೆಂಗಳೂರು : ನೋ ರೀ ಶಫಲ್. ಯಾವುದೇ ಶಫಲ್ ಇಲ್ಲ. ನಾನೇ ಚೀಫ್ ಮಿನಿಸ್ಟರ್ ಹೇಳುತ್ತಿದ್ದೇನೆ. ನಿಮಗೆ ಚೀಫ್ ಮಿನಿಸ್ಟರ್ ಮೇಲೆ ನಂಬಿಕೆ ಇಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅನೌಪಚಾರಿಕವಾಗಿ ಮಾತನಾಡಿದ ಅವರು, ಎಐಸಿಸಿ ವರಿಷ್ಠರ ಜೊತೆ ಸಭೆ ರೀ ಶಫಲ್ ಬಗ್ಗೆ ಏನಾದರು ಚರ್ಚೆ ಆಗೆದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಮೇಲಿನಂತೆ ಉತ್ತರಿಸಿದರು. ರಾಜ್ಯದ 12 ಕ್ರೀಡಾಪಟುಗಳಿಗೆ ಆಫರ್ ಲೆಟರ್ ನೀಡಿದ ಸಿಎಂ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ಆಫರ್ ಲೆಟರ್ ನೀಡಿದ್ದಾರೆ. ಕ್ರೀಡಾಪಟುಗಳಿಗೆ ಆಫರ್ ಲೆಟರ್ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ರಾಜ್ಯ ಸರ್ಕಾರ ನೆರವಾಗಲಿದೆ. ಅದರಂತೆ…
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಲಾರಿ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿದ್ದ ಪತಿ ಸಾವನಪ್ಪಿದ್ದು ಪತ್ನಿಯ ಎರಡು ಕಾಲ್ ಕಟ್ ಆಗಿದೆ. ಅದೃಷ್ಟವಶಾತ್ ಬೈಕ್ ಮೇಲಿದ್ದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಹೌದು ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆಗಿವೆ. ಸಣ್ಣಪುಟ್ಟ ಗಾಯಗಳೊಂದಿಗೆ ಬೈಕ್ ಮೇಲಿದ್ದ ಮಗು ಪಾರಾಗಿದೆ. ಸದ್ಯ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಯಚೂರು : ರಾಯಚೂರಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಹಳ್ಳದ ಸೇತುವೆ ತಡೆಗೋಡೆಗೆ ಸರ್ಕಾರಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಇಳಿದಿದೆ. ಇನ್ನು ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
BREAKING : ‘PSI’ ಪರಶುರಾಮ್ ಸಾವು ಕೇಸ್ : ಶಾಸಕ ಸ್ಥಾನದಿಂದ ಚೆನ್ನಾರೆಡ್ಡಿಯನ್ನು ವಜಾಗೊಳಿಸುವಂತೆ ಸ್ಪೀಕರ್ ಗೆ ಪತ್ರ
ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಸ್ಥಾನದಿಂದ ಚನ್ನರೆಡ್ಡಿ ಪಾಟೀಲ್ ಅವರನ್ನು ವಜಾಗೊಳಿಸಬೇಕು ಎಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಕಾರ್ಯಕರ್ತರು ಒಬ್ಬರು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಹೌದು ಪಿಎಸ್ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್ ನ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರೇ ಕಾರಣ ಎಂದು ಅವರ ಪತ್ನಿ ಶ್ವೇತ ಆರೋಪಿಸಿದ್ದಾರೆ. ಹೀಗಾಗಿ ಶಾಸಕ ಸ್ಥಾನದಿಂದ ಚೆನ್ನ ರೆಡ್ಡಿ ಪಾಟೀಲ್ ಅವರನ್ನು ಕೂಡಲೇ ವಜಾ ಗೊಳಿಸಬೇಕು ಎಂದು ಸ್ಪೀಕರ್ ಯುಟಿ ಖಾದರ್ ಗೆ ಸಾಮಾಜಿಕ ಕಾರ್ಯಕರ್ತ ಮಾನಪ್ಪ ಹಡಪದ ಎಂಬುವವರು ಪತ್ರ ಬರೆದಿದ್ದಾರೆ. ಪರಶುರಾಮ ಸಾವಿನ ಆರೋಪ ಶಾಸಕರ ಮೇಲೆ ಇದ್ದು, ಸೂಕ್ತ ತನಿಖೆ ಆಗಬೇಕು, ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಆಗಬೇಕು. ಹೀಗಾಗಿ ಸೂಕ್ತ ಹಾಗೂ ನ್ಯಾಯಬದ್ಧ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ. ಜೊತೆಗೆ ಶಾಸಕರು ಹಾಗೂ ಪುತ್ರನ ಮೇಲೆ ಕಮೀಷನ್ ಆರೋಪಿವಿದೆ. ಉದ್ಯೋಗ ಖಾತ್ರಿ…
ರಾಮನಗರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದರೆ, ಇತ್ತ ಕಾಂಗ್ರೆಸ್ ಕೂಡ ವಿಪಕ್ಷಗಳಿಗೆ ಕೌಂಟರ್ ನೀಡಲು ಜನಾಲಂದನ ಕಾರ್ಯಕ್ರಮ ಅನ್ಕೊಂಡಿದ್ದು ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಏಕವಚನದಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಜನಾಲೊಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಲಾಕ್ ಮೇಲ್ ಕುಮಾರಸ್ವಾಮಿ, ನೀನು ಹಿಟ್ ಆಂಡ್ ರನ್ ಕುಮಾರಸ್ವಾಮಿ ನೀನು. ಪಾದಯಾತ್ರೆಗೆ ಬರಲ್ಲ ಅಂದಲ್ಲ ಯಾಕೆ ನಡೀತಿದೆಯಾ? ಎಲ್ಲವೂ ಅಧಿಕಾರಕ್ಕೋಸ್ಕರ. ನಿನ್ನ ಪಕ್ಷ ಮುಳುಗಿ ನಿಮ್ಮ ಪಾಪದ ಕೊಡ ಮುಳುಗಿ ಪಾಪ ವಿಮೋಚನೆಗಾಗಿ ಈ ಒಂದು ಪಾದಯಾತ್ರೆಯಲ್ಲಿ ನಡಿತಿದಿಯಾ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿಯವರೇ ನಿಮ್ಮ ಬಳಿ ಎಷ್ಟೆಲ್ಲ ಜಮೀನು ಇದೆ ಎಂದು ಹೇಳಿ. ಕುಮಾರಸ್ವಾಮಿ ನಿನ್ನ ಆಸ್ತಿ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ. ನಿನ್ನ ಸೋದರ ಕುಟುಂಬದ ಆಸ್ತಿ ಪಟ್ಟಿ ಬಿಡುಗಡೆ ಮಾಡಿಲ್ಲ.…
ರಾಮನಗರ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ಯಾಂಟ್ ನಲ್ಲಿ ಖಾಕಿ ಚೆಡ್ಡಿ ಇದೆ. ಬಿಜೆಪಿಗಿಂತ ಬಿಗಿಯಾದ ಖಾಕಿ ಚೆಡ್ಡಿ ಕುಮಾರಸ್ವಾಮಿ ಹಾಕಿದ್ದಾರೆ. ಅವರ ಆಸ್ತಿಯನ್ನು ತೆಗೆದರೆ ರಾಜ್ಯಕ್ಕೆ 3 ಬಜೆಟ್ ಮಂಡಿಸಬಹುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಮಾಡ್ತಾರೆ. ಕೇವಲ 37 ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರನ್ನ ನಂಬಬೇಡಿ ಅಂತ ಕಾಂಗ್ರೆಸ್ ನವರಿಗೆ ಅವಾಗ್ಲೆ ಹೇಳಿದ್ದೇ.ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರ 1 ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗೂರ ಹೊಡೆದುಕೊಂಡು ಬರ್ತಾರೆ ಎಂದು ವಾಗ್ದಾಳಿ ಮಾಡಿದರು. ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದುಮನೆ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್ ಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಕುಮಾರಸ್ವಾಮಿ ಅವರೇ ರಾಮನಗರದ ಜನ್ಮಕೊಟ್ಟ ಕ್ಷೇತ್ರ ಅಂತಿರಿ. ರಾಮನಗರದಲ್ಲಿ ಎಷ್ಟು ಮನೆ ಕೊಟ್ಟಿದ್ದೀರಿ.? ನಿಮಗೆ ಓಪನ್ ಚಾಲೆಂಜ್ ಹಾಕ್ತೀನಿ ಕೇವಲ 330…
ಬೆಳಗಾವಿ : ರಾಜ್ಯದಲ್ಲಿ ಇದೀಗ ವರುಣ ಅಬ್ಬರಿಸುತ್ತಿದ್ದು, ಈ ಒಂದು ವೇಳೆಯಲ್ಲಿ ಜನರು ತಮ್ಮ ಹುಚ್ಚುತನದಿಂದ ಪ್ರಾಣ ಕಳೆದುಕೊಳ್ಳುತ್ತಾರೆ. ಎಷ್ಟೇ ಜಾಗೃತಿ ಮೂಡಿಸಿದರು ಸಹ ಹುಚ್ಚಾಟ ಬಿಡುವುದಿಲ್ಲ. ಇದೀಗ ಬೆಳಗಾವಿಯಲ್ಲಿ ಯುವಕರಿಬ್ಬರೂ ರಸ್ತೆಯ ಮೇಲೆ ತೆರಳಿದ್ದು, ನಿಯಂತ್ರಣ ತಪ್ಪಿದ್ದರಿಂದ ಈ ವೇಳೆ ಯುವಕನೋರ್ವ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಬೆಳಗಾವಿ.ನಗರದ ಹೊರವಲಯದಲ್ಲಿ ಹರಿದು ಹೋಗಿರುವ ಮಾರ್ಕಂಡೇಯ ನದಿಯಲ್ಲಿ ಬೈಕ್ ಸವಾರ ಕೊಚ್ಚಿಕೊಂಡು ಹೋಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಅಲತಗಾ ಗ್ರಾಮದ ಓಂಕಾರ ಪಾಟೀಲ(23) ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ. ಓಂಕಾರನ ಬೈಕ್ ಮೇಲೆ ಜ್ಯೋತಿನಾಥ ಪಾಟೀಲ ಜೊತೆಗೆ ಕಂಗ್ರಾಳಿಗೆ ಹೋಗುತ್ತಿದ್ದರು. ಈ ವೇಳೆ ಸವಾರನ ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿ ಪಕ್ಕದ ಕಾಲುವೆ ಮೇಲೆ ಬಿದ್ದಿದ್ದಾರೆ. ನದಿಯಲ್ಲಿ ಓಂಕಾರ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಶಾತ್ ಜ್ಯೋತಿನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಕಾಕತಿ ಠಾಣೆ ಪೊಲೀಸರ ಜೊತೆಗೆ ಡಿಸಿಪಿ ಪಿ.ವ್ಹಿ.ಸ್ನೇಹಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಎಸ್ಡಿಆರ್ಎಫ್ ತಂಡ…
ಹಾವೇರಿ : ರಾಜ್ಯದಲ್ಲಿ ಇದೀಗ ಅಪಾರ ಪ್ರಮಾಣದ ಮಳೆಯಿಂದ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಅಲ್ಲದೆ ಜನರಲ್ಲಿ ವಿವಿಧ ರೋಗಗಳ ಲಕ್ಷಣಗಳು ಕಂಡುಬರುತ್ತಿದ್ದು ಅದರಲ್ಲೂ ಡೆಂಗಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರ ಮಧ್ಯ ಹಾವೇರಿಯಲ್ಲಿ ಸರ್ಕಾರಿ ವಸತಿ ನಿಲಯದ 32 ಮಕ್ಕಳಲ್ಲಿ ಫಂಗಸ್ ರೋಗ ಕಂಡುಬಂದಿದೆ. ಹೌದು ಹಾವೇರಿ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಫಂಗಸ್ನಿಂದ ಬಳಲುತ್ತಿದ್ದಾರೆ. 32 ಜನ ವಿದ್ಯಾರ್ಥಿಗಳಲ್ಲಿ ಫಂಗಸ್ ಲಕ್ಷಣಗಳು ಕಂಡು ಬಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ಕಳೆದ 20 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಬಟ್ಟೆ ಒಣಗದೆ ವಸತಿ ನಿಲಯದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹಸಿಯಾದ ಬಟ್ಟೆ ತೊಟ್ಟು ಶಾಲೆಗೆ ತೆರಳುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಮೈಮೇಲೆ ಗುಳ್ಳೆಗಳು ಏಳುತ್ತಿದ್ದು, ಫಂಗಸ್ ಕಾಣಿಸಿಕೊಂಡಿದೆ.ಈ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳಲ್ಲಿ ಗಂಭೀರವಾದ ಫಂಗಸ್ ಲಕ್ಷಣಗಳು ಕಂಡುಬಂದಿವೆ. ಓರ್ವ ವಿದ್ಯಾರ್ಥಿಯನ್ನು ಊರಿಗೆ ಕಳುಹಿಸಲಾಗಿದೆ.…