Author: kannadanewsnow05

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಕೇರಳ ಮೂಲದ ಐವರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಅಬ್ದುಲ್ ಶಾಕೀರ್ (24), ಹಸನ್ ಆಶೀರ್ (34), ಮೊಹಮ್ಮದ್ ನೌಷಾದ್ (22), ಯಾಸೀನ್ ಇಮ್ರಾಜ್ ಅಲಿಯಾಸ್​ ಇಂಬು (35), ಕೇರಳದ ಕಣ್ಣೂರು ಜಿಲ್ಲೆಯ ರಿಯಾಜ್ ಎ.ಕೆ. (31) ಎಂದು ಗುರುತಿಸಲಾಗಿದೆ. ಮಾಹಿತಿ ಬಂದ ಬಳಿಕ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿ ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್​ಗಳು, 1460 ರೂ. ನಗದು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು : ಇದೆ ಅಕ್ಟೋಬರ್ 23 ರಿಂದ 25 ರವರೆಗೆ ಬೆಳಗಾವಿಯಲ್ಲಿ ಕಿತ್ತೂರು ವಿಜಯೋತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ವಿಧಾನಸೌಧದ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್​ ಬಿಡುಗಡೆ ಮಾಡಿ,ಕಿತ್ತೂರು ರಾಣಿ ಚೆನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು. 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು. ಬೆಳಗಾವಿಯಲ್ಲಿ…

Read More

ವಿಜಯಪುರ : ಸಾಲಭಾದೆ ತಾಳದೆ ರಾಜ್ಯದಲ್ಲಿ ಇಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಂಡಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾದ ಗ್ರಾಮದ ರೈತ ರೇವಣಸಿದ್ದ ಸಂಗಪ್ಪ ಚಿವಟೆ (35) ಇಂದು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಗ್ರಾಮದಲ್ಲಿ ಸ್ಥಳೀಯರಿಂದ ಹಾಗೂ ಸಹಕಾರಿ ಸಂಘದಲ್ಲಿ ಸಂಗಪ್ಪ ಬೆಳೆ ಸಾಲ ಪಡೆದಿದ್ದರು ಎನ್ನಲಾಗಿದೆ. ಘಟನೆ ಕುರಿತಂತೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲಗೂರು ಇನ್ನು ಮಂಡ್ಯ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ನಡೆದಿದ್ದು, ಹಲಗೂರು ಸಮೀಪದ ನಂದೀಪರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ವಿಷ ಕುಡಿದ ರೈತ ಸಿದ್ದೇಗೌಡ (55) ಮೃತಪಟ್ಟ ರೈತ ಎಂದು ತಿಳಿದುಬಂದಿದೆ. ಕೊಳವೆಬಾವಿ ಕೊರೆಸಲು ಸ್ಥಳೀಯರಿಂದ ₹3 ಲಕ್ಷ ಕೈಸಾಲ ಮತ್ತು ದಳವಾಯಿ ಕೋಡಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75 ಸಾವಿರ ಬೆಳೆ ಸಾಲ ಪಡೆದಿದ್ದರು. ಬಹಳ ದಿನಗಳಿಂದ ಸಾಲ ತೀರಿಸಲಾಗದೇ ಬೇಸರದಿಂದ ಕಳೆದ ಸೆ.26 ರಂದು…

Read More

ಬೆಂಗಳೂರು : ಚಿತ್ರದುರ್ಗದ ಹರಿಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದುವರೆದಿದೆ.ಆದರೆ ಇನ್ನೊಂದು ಬದಿಯಲ್ಲಿ ದರ್ಶನ್​ ನಂಬಿ ಕೊಲೆ ಆರೋಪದಲ್ಲಿ ಭಾಗಿ ಆಗಿ ಬೇಲ್​ ಸಿಕ್ಕಿರೋ ಆರೋಪಿಗಳ ಜಾಮೀನು ಅರ್ಜಿಗೆ ಶ್ಯೂರಿಟಿ ಹಾಕೋರು ಯಾರು ಇಲ್ಲದಂತಾಗಿತ್ತು. ಆದರೆ ಇಂದು ಆರೋಪಿಗಳು ಕೋರ್ಟಿಗೆ ಶ್ಯೂರಿಟಿ ಸಲ್ಲಿಸಿದ್ದಾರೆ. ಹೌದು ಇಂದು ಆರೋಪಿಗಳು ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದಾರೆ. ಕಾರ್ತಿಕ್ ಕೇಶವಮೂರ್ತಿ ಹಾಗೂ ನಿಖಿಲ್ ಶ್ಯೂರಿಟಿಯನ್ನು ಇದೀಗ ಕೋರ್ಟ್ ಸ್ವೀಕಾರ ಮಾಡಿದೆ. ಶ್ಯೂರಿಟಿ ಸಲ್ಲಿಕೆ ಬಳಿಕ ತುಮಕೂರು ಜೈಲಿನಿಂದ ನಾಳೆ ಅಥವಾ ನಾಡಿದ್ದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಸೆಪ್ಟೆಂಬರ್ 23 ರಂದು ರೇಣುಕಾ ಸ್ವಾಮಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳಾದ ನಿಖಿಲ್ ನಾಯ್ಕ್ ಮತ್ತು ಕಾರ್ತಿಕ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದೇ ದಿನ ಮುಂಜಾನೆ ಪ್ರಕರಣದ ಮತ್ತೊಬ್ಬ ಆರೋಪಿ ಕೇಶವ…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಜೆಡಿಎಸ್ ನಾಯಕ ಪ್ರಕಾಶ್ ಮುಧೋಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳನಿಂದ ಇದೀಗ ಪೊಲೀಸರು 87 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಬಾಗಲಕೋಟೆ ಎಸ್ ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡ ರಚಿಸಲಾಗಿತ್ತು. ಕೂಡಲೇ ಕ್ರಮ ಕೈಗೊಂಡು ಒಂದೇ ದಿನದಲ್ಲಿ ಪ್ರಕಾಶ್ ಮುಧೋಳ ಬಂಧನ ಮಾಡಲಾಗಿದೆ.ಬಂಧಿತನಿಂದ 87 ಲಕ್ಷ ರೂ.ಹಣ, ಇನ್ನೋವಾ, ಔರಾ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕಾಶ್ ಮುಧೋಳ್ ಹಿನ್ನೆಲೆ? ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಿರ್ಜಿ ಮೂಲದವನಾದ ಆರೋಪಿ ಪ್ರಕಾಶ್ ಎಂಬಾತ 2024 ರಲ್ಲಿ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಲೆಕ್ಷನ್​ಗೆ ನಿಂತಿದ್ದ. ಇತನ ಮೇಲೆ ಈ ಹಿಂದೆ 3 ಕಳ್ಳತನ, 3 ಚೀಟಿಂಗ್, 3 ಸುಲಿಗೆ,…

Read More

ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ…

Read More

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಈ ಹಿಂದೆ ಸಿಎಂ ಸಿದ್ದರಾಮಯ್ಯ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿ ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ನುಂಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾಗಿದ್ದು, ಒಟ್ಟು 18 ಆರೋಪಿಗಳು ಇದ್ದಾರೆ.ನ್ಯಾಯಾಲಯದಿಂದ ಸಿದ್ದರಾಮಯ್ಯ ವಿರುದ್ಧ ತೀರ್ಪು ಕೂಡ ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ ನಿಂದ ರಿಲೀಫ್ ಪಡೆದುಕೊಂಡರು ಎಂದು ತಿಳಿಸಿದರು. ಈ ಒಂದು ಪ್ರಕರಣ 14 ಸೈಟ್ ಗಿಂತಲೂ ದೊಡ್ಡ ಹಗರಣವಾಗಿದೆ. ಊರಿಗೆ ಬುದ್ದಿ ಹೇಳೋರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು…

Read More

ಚಿಕ್ಕಬಳ್ಳಾಪುರ : ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಸಾಮಗ್ರಿ ಮೈ ಮೇಲೆ ಬಿದ್ದು ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಗ್ರಾಮದ ಬಳಿ ಈ ಒಂದು ಅವಘಡ ಸಂಭವಿಸಿದೆ. ಖಾಸಗಿ ಕಂಪನಿಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದರು. ಸಾಮಗ್ರಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸುವಾಗ ಈ ಅವಘಡ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೆಲಸ ಮಾಡುತ್ತಿದ್ದ ಹಿನ್ನಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮುಡಾ ಸೈಟ್ ವಾಪಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ 14 ನಿವೇಶನಗಳನ್ನು ವಾಪಸ್ ಮಾಡುತ್ತಿದ್ದೇನೆ ಎಂದು ಪತ್ರ ಬರೆದಿದ್ದರು. ಹಾಗಾಗಿ ಇದೀಗ 14 ನಿವೇಶನಗಳನ್ನು ಇದೀಗ ರದ್ದು ಮಾಡಲಾಗಿದೆ. ಹೌದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಬಂದು 14 ನಿವೇಶನಗಳ ಖಾತೆಯನ್ನು ರದ್ದು ಪಡಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ನಿನ್ನೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಮುಡಾ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದರು. ಇದೀಗ ಇಂದು ಖುದ್ದು ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಹಾಜರಾಗಿ 14 ನಿಮಿಷಗಳ ಖಾತೆ ರದ್ದುಗೊಳಿಸಿದ್ದಾರೆ.

Read More

ಕೋಲಾರ : ಕೋಲಾರದಲ್ಲಿ ಒಂದೇ ಕುಟುಂಬದ 6 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಈ ವೇಳೆ ಘಟನೆಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದು, ಉಳಿದವರಿಗೆ ಗಂಭೀರವಾದಂತಹ ಗಾಯಗಳಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೌದು ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಜಂಗಾಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಹೆಜ್ಜೇನು ದಾಳಿಯಿಂದಾಗಿ ವೆಂಕಟಸ್ವಾಮಿ (60) ಸಾವನ್ನಪ್ಪಿದ್ದಾರೆ.ಒಂದೇ ಕುಟುಂಬದ 6 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಶಾಮಣ್ಣ, ಸುಂದರ್ ರಾಜ್, ಕಾರ್ತಿಕ್, ಶ್ರೀನಿವಾಸ್ ಹಾಗೂ ವೆಂಕಟ ಗಿರಿಯಪ್ಪ ಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More