Author: kannadanewsnow05

ದಾವಣಗೆರೆ : ಕೃಷಿ ಹೊಂಡದ ಬಳಿ ಆಟ ಆಡುತ್ತಿದ್ದ ವೇಳೆ, ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಸಗೋಡು ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗಂಗೋತ್ರಿ (10) ತನುಶ್ರೀ (11) ಮೃತ ಬಾಲಕಿಯರು ಎಂದು ತಿಳಿದುಬಂದಿದೆ. ಶಾಲೆ ಬಿಟ್ಟ ಬಳಿಕ ನಾಲ್ವರು ವಿದ್ಯಾರ್ಥಿಗಳು ಎಂದಿನಂತೆ ಮನೆಗೆ ತೆರಳುತ್ತಿದ್ದರು. ರಸ್ತೆ ಮಾರ್ಗದಲ್ಲಿ ಕೃಷಿ ಹೊಂಡ ನೋಡಿದ್ದಾರೆ. ಈ ಹೊಂಡದ ಮೇಲೆ ಆಟವಾಡುತ್ತಾ ಬರುತ್ತಿದ್ದಾಗ ಈ ವೇಳೆ ಓರ್ವ ಬಾಲಕಿ ಕಾಲು ಜಾರಿ ಬಿದ್ದಿದ್ದಾಳೆ. ತಕ್ಷಣ ಮತ್ತೋರ್ವ ಬಾಲಕಿ ಕಾಪಾಡಲು ಹೋಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ. ಮೃತ ಬಾಲಕಿಯರ ಜೊತೆ ಖುಷಿ ಎಂಬ ಬಾಲಕಿಯೂ ಹೊಂಡದಲ್ಲಿ ಬಿದ್ದಿದ್ದು, ಆಕೆಯನ್ನು ಜಮೀನಿನ ಮಾಲೀಕನ ಮಗ ಕಾಪಾಡಿದ್ದಾನೆ. ಇವರೊಂದಿಗಿದ್ದ ಶೈಲಜಾ ಎಂಬ ಬಾಲಕಿ ಗಾಬರಿಯಿಂದ ಮನೆಗೆ ತೆರಳಿದ್ದಾಳೆ. ಮೃತಪಟ್ಟ ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಮಲೆನಾಡಿಗೆ ಹೋಗಿದ್ದಾರೆ. ಮೃತ ಬಾಲಕಿಯರು ಅಜ್ಜಿಯ ಮನೆಯಲ್ಲಿ ಇದ್ದಾರೆ. ಘಟನೆ ಕುರಿತಂತೆ ಬಿಳಿಚೋಡು…

Read More

ಬೆಳಗಾವಿ : ಕೌಟುಂಬಿಕ ಕಲಹದಿಂದ ಮನನೊಂದು ತಾಯಿಯೊಬ್ಬಳು ತನ್ನ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಹೌದು 17 ತಿಂಗಳ ಮಗುವಿನೊಂದಿಗೆ ಬಾವಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಘಟನೆ ನಡೆದಿದ್ದು, ತನ್ನ 17 ತಿಂಗಳ ಹಸೂಗೂಸಾದ ಕುಶಾಲ್ ನೊಂದಿಗೆ ಗಾಯತ್ರಿ ವಾಗಮೊರೆ (26) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದುಬಂದಿದೆ.ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕದಲ್ಲಿ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ತಾಯಿ ಮತ್ತು ಮಗುವಿನ ಶಿವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಉಡುಪಿ : ಲಾರಿ ಹರಿದು ಪ್ರಥಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಪ್ರದೇಶದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಗೇರಿ ಪ್ರದೇಶ ಕೋಟೇಶ್ವರದ ವರದರಾಜ ಶೆಟ್ಟಿ ಸರ್ಕಾರಿ ಕಾಲೇಜು ವಿದ್ಯಾರ್ಥಿ ಧನುಷ್ (19) ಎಂದು ತಿಳಿದುಬಂದಿದೆ. ಕಾಲೇಜು ಮುಗಿಸಿ ಸ್ನೇಹಿತರ ಜೊತೆಗೆ ಧನುಶ್ ತೆರಳುತ್ತಿದ್ದ, ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಎದುರುನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಲಾರಿ ಚಾಲಕರ ಧನುಷ್ಗೆ ಡಿಕ್ಕಿ ಹೊಡೆದಿದ್ದಾನೆ.ಈ ವೇಳೆ ಲಾರಿ ಹರಿದು ವಿದ್ಯಾರ್ಥಿ ಧನುಷ್ ಸ್ಥಳದಲ್ಲಿ ಸವಣಪ್ಪಿದ್ದಾನೆ ಘಟನೆ ಕೊಡಿತಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಜಪ್ತಿ ಮಾಡಿದ್ದ ವಸ್ತುಗಳನ್ನು ಹಿಂತಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ fir ದಾಖಲಾಗಿದೆ. ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಎಂ ಎಸ್ ಹಿತೇಂದ್ರ ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಸ್ಸು ನೀಡಿರಲಿಲ್ಲ.ಅಲ್ಲದೆ ಹಿಂದಿನ ಇನ್ಸ್ಪೆಕ್ಟರ್ ಹಸ್ತಾಂತರಿಸಿದ ಮಾಲೂ ಸಹ ಹಾಜರುಪಡಿಸಿರಲಿಲ್ಲ. ಜಪ್ತಿ ಮಾಡಿದ್ದ ವಸ್ತುಗಳನ್ನು ವಾಪಸ್ ನೀಡುವಂತೆ ಹಲವು ಬಾರಿ ಸೂಚನೆ ನೀಡಲಾಗಿತ್ತು. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನ ಪತ್ರ ನೀಡಿದರು ಸಹ ಉತ್ತರ ನೀಡಿರಲಿಲ್ಲ. ಜಪ್ತಿ ಮಾಡಿದ್ದ ಮಾಲು ಹಿಂದಿರುಗಿಸದೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಜೆಪಿ ನಗರ ಠಾಣೆಯ ಹಿಂದಿನ ಇನ್ಸ್ಪೆಕ್ಟರ್ ಜಿತೇಂದ್ರ ಎಂಎಸ್ ವಿರುದ್ಧ ಇದೀಗ ಹಾಲಿ ಇನ್ಸ್ಪೆಕ್ಟರ್ ಆಗಿರುವಂತಹ ರಾಧಾಕೃಷ್ಣ ಎಫ್ ಐ ಆರ್…

Read More

ಕೊಪ್ಪಳ : ತಮ್ಮ ಪಾಡಿಗೆ ತಾವು ಮಕ್ಕಳು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ, ಏಕಾಏಕಿ ಬೀದಿ ನಾಯಿಗಳು ಮೂರು ಮಕ್ಕಳ ಮೇಲೆ ದಾಳಿ ಮಾಡಿವೆ. ದೇಹದ ಹಲವೆಡೆ ಕಚ್ಚಿ ಗಾಯಗೊಳಿಸಿವೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿವೆ. ಕೊಪ್ಪಳದ ದಿನ್ಯಾರ್ ಬಡಾವಣೆ ಹಾಗೂ ಕನಕನಗಿರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು ಮೂರು ಮಕ್ಕಳನ್ನು ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಅಬ್ರಾರ್, ಫರ್ಹಾನ್ ಹಾಗೂ ಮಂಜುಗೆ ಬೀದಿ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ಕೂಡಲೇ ಗಾಯಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವೇಳೆ ಸ್ಥಳೀಯರು ಕೊಪ್ಪಳ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಪಡಿಸಿದ್ದಾರೆ.

Read More

ಬೆಂಗಳೂರು : ಹೆಸರು ಬದಲಾಯಿಸಿಕೊಂಡು ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲೇ ಠಿಕಾಣಿ ಹೂಡಿದ್ದ, ಪಾಕಿಸ್ತಾನ ಪ್ರಜೆಗಳನ್ನು ಇದೀಗ ಎನ್ಐಎ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಅಧಿಕಾರಿಗಳು ಬೆಚ್ಚಿ ಬೀಳಿಸುವಂತಹ ಹಲವು ಮಾಹಿತಿಗಳು ಬಹಿರಂಗವಾಗಿವೆ. ಹೌದು ಪ್ರಮುಖ ಆರೋಪಿಯಾಗಿರುವ ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿ ಮತ್ತು ಈತನ ಕುಟುಂಬಸ್ಥರ ಬಳಿ ಭಾರತದ ಪಾಸ್​ಪೋರ್ಟ್​ ಪತ್ತೆಯಾಗಿದೆ. ಆತನ ಕುಟುಂಬ ಭಾರತಕ್ಕೆ ಅಕ್ರಮವಾಗಿ ನುಸುಳಲು, ಭಾರತೀಯ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್​ ಮತ್ತು ಡಿಎಲ್ ಎಲ್ಲವನ್ನು ಹೊಂದಲು ಮೆಹದಿ ಫೌಂಡೇಷನ್​ನ ಪ್ರಮುಖ ವ್ಯಕ್ತಿ ಪರ್ವೇಜ್ ಸಹಾಯ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಪರ್ವೇಜ್​ ಮತ್ತು ಇತನ ಸಂಪರ್ಕದಲ್ಲಿದ್ದವವರಿಗಾಗಿ ಹುಡುಕಾಟ ನಡೆಸಿದ್ದಾರೆ. ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿಗೆ ಮುಂಬೈ ಮತ್ತು ದೆಹಲಿಯಲ್ಲಿ ಹಲವರು ಪರಿಚಯಸ್ಥರಿದ್ದಾರೆ. ಹೀಗಾಗಿ, ಎರಡು ಪೊಲೀಸ್​​ ತಂಡ ಮುಂಬೈ ಮತ್ತು ದೆಹಲಿಗೆ ತೆರಳಿದೆ. ರಶೀದ್ ಕುಟುಂಬದವರ ಸಂಪರ್ಕದಲ್ಲಿರುವವರಿಗಾಗಿ ಶೋಧ ನಡೆಸುತ್ತಿವೆ. ನಿನ್ನೆ ಬೆಂಗಳೂರು ಗ್ರಾಮಾಂತರ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ ಸಾಕಷ್ಟು ಬೇಸರವಾಗಿತ್ತು. ಜೊತೆಯಲ್ಲಿ ಉಂಡು ತಿಂದವರೇ ಸಿಎಂ ಸಿದ್ದರಾಮಯ್ಯ ಇಂದಿನ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಅಲ್ಲದೆ ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು. ಯಾವುದೇ ಕಾರಣಕ್ಕೂ ಸಿಎಂ ಪತ್ನಿ ನಿವೇಶನಗಳನ್ನು ಹಿಂತಿರುಗಿಸಬಾರದಾಗಿತ್ತು ಎಂದು ಅವರು ತಿಳಿಸಿದರು. ಮರಿಗೌಡ ನಮ್ಮ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಆತನಿಂದಲೇ ಇಷ್ಟೆಲ್ಲಾ ಆಗಿರುವುದು ವಿಶ್ವನಾಥ ಮಾತನ್ನು ಸಿಎಂ ಕೇಳಿದ್ದರೆ ಈ ಆರೋಪ ಬರುತ್ತಿರಲಿಲ್ಲ ಆದರೆ…

Read More

ಕಲಬುರ್ಗಿ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತೇ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್​ಸ್ಟಾಗ್ರಾಮ್​ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ ಮೊಬೈಲ್​ ನಂಬರ್​ ಬದಲಾಯಿಸಿಕೊಂಡಿದ್ದಾರೆ. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಆರೋಪಿ ಯಲ್ಲಾಲಿಂಗ ಸಂತ್ರಸ್ತೆಗೆ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆರೋಪಿ ಯಲ್ಲಾಲಿಂಗನ ಮಾತನ್ನು ಸಂತ್ರಸ್ತೆ ನಂಬಿದ್ದಾಳೆ. ಯಲ್ಲಾಲಿಂಗನ ಮಾತು ನಂಬಿ ಯುವತಿ ಹೈದರಾಬಾದ್ ನಿಂದ ಕಲಬುರ್ಗಿ ಬಂದಿದ್ದಾಳೆ.ಈ ವೇಳೆ ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಇರುವ ಲಾಡ್ಜ್ ನಲ್ಲಿ ಇಡೀ ರಾತ್ರಿ ಇವತ್ತು ಮೇಲೆ ಅತ್ಯಾಚಾರ ಗೆಸ್ಸಿದ್ದಾನೆ ಬಳಿಕ ನನಗೆ ಬೇರೆ ಕಡೆ ಡ್ಯೂಟಿ ಇದೆ ಅಲ್ಲಿ ಹೋಗಿ ಬಂದು ನಾಳೆ ಮದುವೆ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಒಬ್ಬರಿಗೇ ಸೈಟ್ ಕೊಟ್ಟಿಲ್ಲ. ಇನ್ನೂ ಹಲವರಿಗೆ ಕೊಟ್ಟ ನಿದರ್ಶನ ಇದೆ. ನಮ್ಮ‌ಬಿಜೆಪಿ ಸರ್ಕಾರ ಇದ್ದಾಗಲೇ ಕೊಟ್ಟಿದ್ದು. ಕಾನೂನಿನ ಪ್ರಕಾರವೇ ಸೈಟು ನೀಡಲಾಗಿದೆ, ಬಿಜೆಪಿ ಈಗ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ತಮ್ಮ ಸ್ವಪಕ್ಷದ ವಿರುದ್ಧವೆ ಬೆಂಗಳೂರು ನಗರ ಯಶವಂತಪುರ ವಿಧಾನಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕಿಡಿಕಾರಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸೈಟುಗಳು ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿದ್ದಾಗಲೇ ಬಿಜೆಪಿ ಸರ್ಕಾರವೇ ನೀಡಿತ್ತು.ಈ ಸಂದರ್ಭದಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮಾತ್ರವಲ್ಲ, ಅನೇಕ ಬೇರೆ ಮುಖಂಡರಿಗೆ ಸೈಟ್ ವಿತರಿಸಲಾಗಿದೆ, ಅದನ್ನೂ ಕೂಡ ತನಿಖೆ ನಡೆಸಬೇಕು ಎಂದು ಸೋಮಶೇಖರ್ ಲೋಕಾಯುಕ್ತವನ್ನು ಆಗ್ರಹಿಸಿದ್ದಾರೆ. ಸೈಟ್ ವಾಪಸ್ ಕೊಡಲು ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸೈಟ್ ಅಲಾಟ್ ಆಗಿತ್ತು. ಅಂದಿನ ರಾಜ್ಯ ಸರ್ಕಾರವೇ ಸೈಟ್ ಅಲಾಟ್ ಮಾಡಿದೆ. ಡೆವಲಪ್ಮೆಂಟ್…

Read More

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಅವರ ಮುಖಂಡರಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಕರೆತರುವಂತೆ ಹೇಳಿಸುತ್ತಿದ್ದಾರೆ ಎಂದು ತಿಳಿಸಿದರು. ಇಂದು ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಯೋಗೇಶ್ವರ್‌ ಬಂದಿದ್ದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೆವು. ಅವರಿಗೆ ಗೌರವ ನೀಡುತ್ತಿದ್ದೆವು. ಈಗ ಎಚ್‌.ಡಿ ಕುಮಾರಸ್ವಾಮಿ ಜೊತೆ ಸೇರಿಸಿಕೊಂಡಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ನೋಡೋಣ. ನಮ್ಮ ಹಣೆ ಬರಹ ಏನಿತ್ತೋ ಗೊತ್ತಿಲ್ಲ. ಬಂದಿದ್ದರೆ ಗೌರವವಾಗಿ ನಡೆಸಿಕೊಳ್ಳುತ್ತಿದ್ದೇವು ಎಂದರು. ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿ ಮುಖಂಡರ ಜೊತೆ ಚರ್ಚೆ ಮಾಡಿ ದ್ದೇವೆ. ಅಂತಿಮವಾಗಿ ನಮ್ಮ ವಿರೋಧಿ ಯಾರು ಅಂತಾ ಗೊತ್ತಾದ ಮೇಲೆ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹಿಂದೆ ಸಿ ಪಿ ಯೋಗೇಶ್ವರ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡದೆ ಹೋದರೆ…

Read More