Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಯಾದಗಿರಿಯ ಸೈಬರ್ ಠಾಣೆಯ ಪಿಎಸ್ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಠಾಣೆಯಲ್ಲಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಜಾತಿನಿಂದನೆ ಆರೋಪದ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಹೌದು ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್, ಹಾಗೂ A 2 ಆರೋಪಿಯಾಗಿ ಪುತ್ರ ಪಂಪನಗೌಡ ವಿರುದ್ಧ FIR ದಾಖಲಾಗಿದೆ. ವರ್ಗಾವಣೆಗೆ ಸಂಬಂಧಪಟ್ಟಂತೆ ಶಾಸಕ ಚೆನ್ನಾರೆಡ್ಡಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಪರಶುರಾಮ್ ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಾತಿನಿಂದನೆ ಆರೋಪದ ಅಡಿ ಇದೀಗ FIR ದಾಖಲಾಗಿದೆ. ಘಟನೆ ನಡೆದು 17 ಗಂಟೆಗಳ ಬಳಿಕ ಪೊಲೀಸರು ಪಿಎಸ್ಐ ಪರಶುರಾಮ್ ಪತ್ನಿ ಶ್ವೇತ ಅವರ ದೂರು ಆಧರಿಸಿ ಇದೀಗ ಕೇಸ್ ದಾಖಲಿಸಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರು, ವರ್ಗಾವಣೆಗೆ…
ಮೈಸೂರು : ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣ ಸದ್ಯ ಭಾರಿ ಸದ್ದು ಮಾಡುತ್ತಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಹಗರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ವಿಚಾರವಾಗಿ ಅವರ ಅಭಿಮಾನಿ ಒಬ್ಬರು ಸಿದ್ದರಾಮಯ್ಯನವರಿಗೆ ಇದೀಗ ಕಂಟಕ ಎದುರಾಗಿದ್ದು ಕಂಬಳಿಯನ್ನು ಹೊದ್ದುಕೊಂಡರೆ ಅವರೆಲ್ಲ ಕಷ್ಟಗಳು ನಿವಾರಣೆಯಾಗುತ್ತವೆ ಎಂದು ತಮ್ಮ ಮನದಾಳದ ಮಾತು ತಿಳಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ ಎನ್ನುವ ಅಭಿಮಾನಿ ಇಂದು ಮುಖ್ಯಮಂತ್ರಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅವರಿಗೆ ಕಂಬಳಿ ಹೊಂದಿಸಲು ತೆರಳಿದ್ದರು. ಸಿದ್ದರಾಮಯ್ಯ ಸಾಹೇಬರ ಹುಟ್ಟುಹಬ್ಬ ಇದೆ ಕಂಬಳಿ ಹಾಕೋಕೆ ಹೋದಾಗ ಪೊಲೀಸರು ಯಾರು ಬಿಡಲಿಲ್ಲ. ಶಾಸಕರ ಬಳಿ ಕಂಬಳಿ ಹಾಕುತ್ತೇನೆ ಎಂದಾಗ ಬಿಟ್ಟಿದ್ದರು. ಸಾಹೇಬರು ಬೇರೆ ಟೆನ್ಶನ್ ನಲ್ಲಿದ್ದಾಗ ಬೇಡ ಸರಿಯೋ ಅಂತ ಅಂದರು ಎಂದು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿ ಸಂತೋಷ್ ತಿಳಿಸಿದರು. ಸಾಹೇಬರು ನನ್ನ ಮೇಲೆ ಸಿಟ್ಟು ಮಾಡಿಕೊಂಡರು ಅವರು ಎಷ್ಟು ಕೋಪಗೊಳ್ಳುತ್ತರೆ ಅಷ್ಟು ನನಗೆ…
ಬೆಂಗಳೂರು : ಮುಡಾ ಸೈಟ್ ಹಂಚಿಕೆ ಖಂಡಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಮೈಸೂರು ಜಿಲ್ಲಾ ಪಾದಯಾತ್ರೆಗೆ ಚಾಲನೆ ನೀಡಿದರು. ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಹುಶಹ ಸಿದ್ದರಾಮಯ್ಯ ಪಾದಯಾತ್ರೆ ಅರ್ಧದಲ್ಲಿ ಇರುವಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗುವುದು ನಿಶ್ಚಿತ ಎಂದು ತಿಳಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಬಿಜೆಪಿ ಜೆಡಿಎಸ್ ಮೈಸೂರು ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ಕೊಡಬೇಕು. ಸಿಎಂ ಸಿದ್ದರಾಮಯ್ಯ ಮಾಡಿದ ಭ್ರಷ್ಟಾಚಾರ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಸದ್ಯ ಸಿದ್ದರಾಮಯ್ಯ ಹಗಲುದರೊಡೆ, ಭ್ರಷ್ಟಾಚಾರದಲ್ಲಿ ನಿರತರಗಿದ್ದು, ಗೌರವತವಾಗಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸ್ನೇಹಿತರುಗಳು ವಿಶೇಷವಾಗಿ ಕೇಂದ್ರ ಸಚಿವರಾಗಿ ಇಡೀ ರಾಜಕ್ಕೆ ಮಾರ್ಗದರ್ಶನ ಮಾಡುತ್ತಿರುವಂತಹ ಕುಮಾರಸ್ವಾಮಿ ಬಂದಿರುವಂತಹ ನಮಗೆ ದೊಡ್ಡ ಶಕ್ತಿ ತಂದಂತಾಗಿದೆ. ಬಿಜೆಪಿ ಜೆಡಿಎಸ್ ನೇತೃತ್ವದಲ್ಲಿ ಈ ಪಾದಯಾತ್ರೆ ಯಶಸ್ವಿಯಾಗುವುದರ…
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೆಂಗೇರಿಯಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಮೈಸೂರು ಜಿಲ್ಲಾ ಪಾದಯಾತ್ರೆಗೆ ಚಾಲನೆ ನೀಡಿದರು. ಇನ್ನು ಈ ಒಂದು ವಿಚಾರವಾಗಿ ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕ್ರಿಯೆ ನೀಡಿದ್ದು,ಭ್ರಷ್ಟಾಚಾರದಲ್ಲಿ ‘ರ್ಯಾಂಕ್’ ಕೊಟ್ಟರೆ ಬಿವೈ ವಿಜಯೇಂದ್ರನೇ ನಂಬರ್ ಒನ್ ಸ್ಥಾನ ಪಡೆಯಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ರ್ಯಾಂಕ್ ಕೊಟ್ಟರೆ ಬಿ ವೈ ವಿಜಯೇಂದ್ರರೇ ನಂಬರ್ ಒನ್ ಸ್ಥಾನ ಪಡೆಯಲಿದ್ದಾರೆ. ಹಿಂದುಳಿದ ವರ್ಗದ ನಾಯಕನನ್ನು ತುಳಿಸುವ ಕೆಲಸ ಮಾಡುತ್ತಿದ್ದೀರಾ ಎಂದು ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ದೆಹಲಿ ಸಿಎಂ ಕೇಜ್ರಿವಾಲ್ ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿತ್ತು. ಕೇಜ್ರಿವಾಲ್ ಈಗ ಜೈಲಿನಲ್ಲಿ ಇದ್ದಾರೆ. ಆದರೂ ಒಳ್ಳೆಯ ಆಡಳಿತ ನಡೆಯುತ್ತಿದೆ. ಜೈಲಿಗೆ ಕಳುಹಿಸುವುದು ಅಂದರೆ ಬಿಜೆಪಿಯವರಿಗೆ ಬಹಳ ಖುಷಿ. ವಿಜಯೇಂದ್ರ ಬಗ್ಗೆ ಶಾಸಕ ಯತ್ನಾಳ್ ಹಿಗ್ಗ ಮುಗ್ಗಾ ಬೈಯುತ್ತಿದ್ದಾರೆ. ನಾಯಿ ತರಹ ಬೈಯುತ್ತಿದ್ದಾರೆ. ಅದರ…
ಬೆಂಗಳೂರು : ಯಾದಗಿರಿಯಲ್ಲಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಗೆ ಸೂಚಿಸಿದ್ದೇನೆ. ಈ ಒಂದು ಪ್ರಕರಣದಲ್ಲಿ ಶಾಸಕರಾಗಲಿ ಬೇರೆ ಯಾರೇ ಭಾಗಿಯಾಗಿದ್ದರು, ಕೂಡಲೇ FIR ದಾಖಲಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಕುರಿತಂತೆ ಈಗಾಗಲೇ ತನಿಖೆಗೆ ಸೂಚನೆ ನೀಡಿದ್ದೇನೆ. ಪಿಎಸ್ಐ ನ್ಯಾಚುರಲ್ ಆಗಿ ಮೃತಪಟ್ಟಿದ್ದಾಗಿ ಸುದ್ದಿ ಬರುತ್ತದೆ. ಪಿಎಸ್ಐ ಸೂಸೈಡ್ ಮಾಡಿಕೊಂಡಿಲ್ಲ, ಡೆತ್ ನೋಟ್ ಬರೆದಿಟ್ಟಿಲ್ಲ. ಅವರನ್ನು ವರ್ಗಾವಣೆ ಮಾಡಿದ್ದಾರೆ ಅನ್ನೋ ಕಾರಣ ಕೊಟ್ಟಿದ್ದಾರೆ. ಇದನ್ನೆಲ್ಲಾ ತನಿಖೆ ಮಾಡಿ ಅಂತ ನಾನು ಸೂಚನೆ ಕೊಟ್ಟಿದ್ದೇನೆ. ತನಿಖಾ ವರದಿ ಬಂದ ಮೇಲೆ ನೋಡೋಣ. ಪಿಎಸ್ಐ ಪರಶುರಾಮ್ ಪತ್ನಿ ಆರೋಪವನ್ನು ಪರಿಗಣಿಸುತ್ತೇನೆ. ಪ್ರಾಥಮಿಕವಾಗಿ ಕೆಲವೊಂದಿಷ್ಟು ಮಾಹಿತಿಯನ್ನು ಕಲೆ ಹಾಕಬೇಕಾಗುತ್ತದೆ. ಪರಿಶೀಲನೆ ಮಾಡಿ ಶ್ರೀಘ್ರದಲ್ಲಿ ಎಫ್ಐಆರ್ ದಾಖಲಿಸುತ್ತಾರೆ. ಶಾಸಕರು ಇದ್ದರೂ ಅಥವಾ ಬೇರೆಯವರಿದ್ದರು ಹಾಕುತ್ತಾರೆ ಎಂದು ಬೆಂಗಳೂರಿನಲ್ಲಿ…
ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಎಂದು ಪಾದಯಾತ್ರೆ ಹಮ್ಮಿಕೊಂಡಿವೆ. ಈ ಕುರಿತು ಇಂದು ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಬಿಎಸ್ ಯಡಿಯೂರಪ್ಪ, ಸಂಸದರಾದ ಬಸವರಾಜ ಬೊಮ್ಮಾಯಿ, ಯದುವೀರ್ ಒಡೆಯರ್ಬಿ, ಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಎಂಎಲ್ಸಿ ಎಸ್ ಆರ್ ವಿಶ್ವನಾಥ್ ಸರಿದಂತೆ ಎಲ್ಲ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು. ಪಾದಯಾತ್ರೆಗೆ ಚಾಲನೆ ನೀಡಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ,…
ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಬ್ಯಾನರ್ ಹಾಕಿದರೆ ಭಾರಿ ದಂಡ ವಿಧಿಸಲಾಗುತ್ತದೆ ಎಂದು ಇತ್ತೀಚಿಗೆ ಬಿಬಿಎಂಪಿ ಕಟ್ಟುನಿಟ್ಟಿನ ಆದೇಶ ಹೊರಡಿಸಿತ್ತು. ಇದರ ಬೆನ್ನೆಲ್ಲೆ ಎಂದು ಗ್ರಹ ಸಚಿವ ಜಿ ಪರಮೇಶ್ವರ್ ಅವರ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ಸದಾಶಿವ ನಗರದ ಅವರ ಮನೆಯ ಮುಂದೆನೆ ಅವರ ಅಭಿಮಾನಿಗಳು ಬ್ಯಾನರ್ ಫ್ಲೆಕ್ಸ್ ಅಳವಡಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಫ್ಲೆಕ್ಸ್ ಬ್ಯಾನರ್ ಹಾವಳಿ ಮುಂದುವರೆದಿದ್ದು, ಕಾನೂನು ಮಾಡೋರಿಂದಲೇ ಇದೀಗ ರೂಲ್ಸ್ ಬ್ರೇಕ್ ಹಾಕಲಾಗಿದೆ. ಗೃಹ ಸಚಿವರ ಮನೆ ಮುಂದೆನೆ ಫ್ಲೇಕ್ಸ್, ಬ್ಯಾನರ್ ಹಾಕಲಾಗಿದೆ. ಬೆಂಗಳೂರಿನ ಸದಾಶಿವನಗರದ ಗೃಹ ಸಚಿವ ಡಾ. ಜಿ ಪರಮೇಶ್ವರ್ ನಿವಾಸದಲ್ಲಿ ಬ್ಯಾನರ್ ಹಾವಳಿ ಕಂಡುಬಂದಿದೆ. ಗೃಹ ಸಚಿವ ಪರಮೇಶ್ವರ್ ಅವರ ಬರ್ತ್ ಡೇ ಹಿನ್ನೆಲೆ ಸದಾಶಿವನಗರದ ನಿವಾಸದ ಸುತ್ತಮುತ್ತ ಫ್ಲೆಕ್ಸ, ಬ್ಯಾನರ್ ಹಾಕಲಾಗಿದೆ. ಅತ್ತ ಫ್ಲೆಕ್ಸ್ ಕಂಟ್ರೋಲ್ ಗೆ ರಾತ್ರಿ ವೇಳೆ ಗಸ್ತು ತಿರುಗಲು ಪಾಲಿಕೆ ಜೊತೆ ಖಾಕಿ ಪಡೆ ಕೈ ಜೋಡಿಸಿತ್ತು. ಆದರೆ ಇದೀಗ ಅದೇ ಪೊಲೀಸ್ ಇಲಾಖೆ…
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಜೆಡಿಎಸ್ ಹಾಗೂ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿವೆ. ಇನ್ನು ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ದರು ಇದೀಗ ಅವರಿಗೆ ಕರ್ಮ ರಿಟರ್ನ್ ಆಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಿದರು. ಅವರು ಮಾಡಿದ ಕರ್ಮ ಈಗ ರಿಟರ್ನ್ ಆಗಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು. ಅಂದು ಅವರು ಅಧಿಕಾರಕ್ಕಾಗಿ ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ದರು.ಇವತ್ತು ಅವರ ಕುಟುಂಬ ಹಗರಣದಲ್ಲಿ ಸಿಲುಕಿಕೊಂಡಿದೆ ದೇವರು ಎಲ್ಲವನ್ನು ನೋಡುತ್ತಿರುತ್ತಾನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು. ವಾಲ್ಮೀಕಿ ಹಗರಣ ಆಗಿರಬಹುದು ಮುಡಾ ಹಗರಣ ಆಗಿರಬಹುದು ನೇರವಾಗಿ ಇವತ್ತು ರಾಜ್ಯದ ಮುಖ್ಯಮಂತ್ರಿಗಳು ಹಗರಣಗಳಲ್ಲಿ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದು, ಇನ್ನೊಂದಡೆ ಇಂದು ಬಿಜೆಪಿ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಇದರ ಮಧ್ಯ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಡೀರ್ ಸಭೆ ನಡೆಸಿದರು. ರಾಜ್ಯಪಾಲರ ನೋಟಿಸ್ ಮತ್ತು ಬಿಜೆಪಿ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ದಿಢೀರ್ ಸಭೆ ನಡೆಸಿದರು. ಮೈಸೂರು ಭಾಗದ ಸಚಿವರು ಮತ್ತು ಶಾಸಕರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಚಿವರಾದ ಎಚ್ ಸಿ ಮಹದೇವಪ್ಪ, ಹಾಗೂ ಕೆ ವೆಂಕಟೇಶ್ ಭಾಗಿಯಾಗಿದ್ದಾರೆ. ಅಲ್ಲದೆ ಶಾಸಕರಾದ ರವಿಶಂಕರ್, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಎಆರ್ ಕೃಷ್ಣಮೂರ್ತಿ, ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ ಸಿಎಂ ಕಾನೂನು ಕಾರ್ಯದರ್ಶಿ ಮತ್ತು ಶಾಸಕ ಪೊನ್ನಣ್ಣ ಕೂಡ ಉಪಸ್ಥಿತಿ ಇದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ದಿಡೀರ್ ಸಭೆಯು ತೀವ್ರ ಕುತೂಹಲ ಕೆರಳಿಸಿದೆ. ಅಲ್ಲದೆ ಇಂದು ಸಿಎಂ ಸಿದ್ದರಾಮಯ್ಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ, ಮೈಸೂರು ಜಿಲ್ಲೆಯ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಒಬ್ಬ ಸ್ನೇಹಿತನನ್ನೇ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸಿದ್ದಾಪುರದ ಅತಿಕ್ ಮಸೀದಿ ಬಳಿ ಈ ಒಂದು ಘಟನೆ ನಡೆದಿದೆ. ರೌಡಿಶೀಟರ್ ಒಂಟಿ ಕೈ ವೆಂಕಟೇಶ್ ಮಚ್ಚಿನಿಂದ ದಾಳಿ ಮಾಡಿ ತನ್ನ ಸ್ನೇಹಿತ ಸಯ್ಯದ್ ಇಸಾಕ್ (31) ಬರ್ಬರವಾಗಿ ಕೊಲೆ ಮಾಡಿದ್ದಾನೆ. ಇಬ್ಬರಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಸಿದ್ದಾಪುರದ ಅತಿಕ್ ಮಸೀದಿ ಬಳಿ ಈ ಒಂದು ಘಟನೆ ನಡೆದಿದೆ. ಗೆಳೆಯನ ಪತ್ನಿ ಜೊತೆ ಸೈಯದ್ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ವಿಚಾರದಲ್ಲಿ ಮಿಸ್ಸಿಂಗ್ ಪ್ರಕರಣ ಸಹ ದಾಖಲಾಗಿತ್ತು. ಈ ವಿಚಾರವಾಗಿ ಒಂಟಿ ಕೈ ವೆಂಕಟೇಶ್ ಆತನಿಗೆ ಬುದ್ಧಿ ಮಾತು ಹೇಳಿದ್ದ. ಅದಾದ ಬಳಿಕ ವೆಂಕಟೇಶನನ್ನೇ ಕೊಲೆ ಮಾಡುತ್ತೇನೆ ಎಂದು ಸೈಯದ್ ಇಸಾಕ್ ಓಡಾಡುತ್ತಿದ್ದ.ಇದೇ ವಿಚಾರವಾಗಿ ವೆಂಕಟೇಶ್ ರಾತ್ರಿ ಇಸಾಕ್ ಬೇಟಿಯಾಗಿದ್ದ. ಈ ವೇಳೆ ಜಗಳ ತಾರಕಕ್ಕೆ ಏರಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ವೆಂಕಟೇಶ್ ಪರಾರಿಯಾಗಿದ್ದಾನೆ.ಘಟನೆ ಸಂಭಂದ…