Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಬ್ಬು ತುಂಬಿದ ಟ್ರಾಕ್ಟರ್ ಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದು, ಕಾರು ಮೂವರು ಗಾಯಗೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಚೌಡಾಪುರ ತಾಂಡ ಬಳಿ ನಡೆದಿದೆ. ಕಲಬುರಗಿ ನಗರ ಪ್ರಶಾಂತ ನಗರ ನಿವಾಸಿ ವಿದ್ಯಾ (40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ, ನಿತಿನ್ ಕುಮಾರ್ (42) ಮಕ್ಕಲಾದ್ ವೈಷ್ಣವಿ (15) ಗಂಭೀರ ಗಾಯಗೊಂಡಿದ್ದು, ವೇದಾಂತ (10) ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಿಗೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೌಡಾಪುರ ತಾಂಡಾ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್ ಗೆ ಕಲಬುರ್ಗಿ ಕಡೆಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಹಾಗಾಗಿ ಈ ಒಂದು ದುರಂತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲಿಸಿದರು. ಅಪಘಾತದ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾ. ಎಂ. ನಾಗಪ್ರಸನ್ನ ಅವರು ತೀರ್ಪು ಪ್ರಕಟಿಸಲಿದ್ದಾರೆ. ಇಂದು ಯಡಿಯೂರಪ್ಪ ವಿರುದ್ಧ ಪ್ರಕರಣದ ಬಗ್ಗೆ ತೀರ್ಪು ಹೊರಬೀಳಲಿದೆ.ಕೇಸ್ ರದ್ದು ಕೋರಿ ಅರ್ಜಿ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.ನ್ಯಾ ಎಂ ನಾಗಪ್ರಸನ್ನ ಅವರ ಪೀಠ ಈ ಒಂದು ತೀರ್ಪು ಪ್ರಕಟಿಸಲಿದೆ. ಪ್ರಕರಣದ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದರು ಬೆಳಗ್ಗೆ 10:30ಕ್ಕೆ ನ್ಯಾಯ ನಾಗಪ್ರಸನ್ ಅವರ ಪೀಠ ತೀರ್ಪು ನೀಡಲಿದೆ ಧಾರವಾಡ ಹೈಕೋರ್ಟ್ ಪೀಠದಿಂದ ಇಂದು ತೀರ್ಪು ಪ್ರಕಟವಾಗಲಿದೆ. ಪ್ರಕರಣ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ನಿರೀಕ್ಷಣಾ ಜಾಮೀನು ಬಗ್ಗೆಯೂ ತೀರ್ಮಾನಿಸಲಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಿಎಂ ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣದ ದೋಷಾರೋಪ…
ನವದೆಹಲಿ : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಹಾಕಲು ಆದಾಯ ತೆರಿಗೆ (IT) ಇಲಾಖೆಯು ಆಹಾರ ಸಚಿವಾಲಯಕ್ಕೆ ವಿವರಗಳನ್ನು ಒದಗಿಸಲಿದ್ದು, ಇನ್ಮುಂದೆ ಅನರ್ಹ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸಿಗಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಪಾವತಿಸದ ಬಡ ಕುಟುಂಬಗಳಿಗೆ ಸರ್ಕಾರ PMGKAY ಅಡಿಯಲ್ಲಿ ಉಚಿತ ಪಡಿತರವನ್ನು ನೀಡುತ್ತಿದೆ. 2026 ರ ಆರ್ಥಿಕ ವರ್ಷದಲ್ಲಿ PMGKAY ಗಾಗಿ ರೂ. ಕೇಂದ್ರ ಬಜೆಟ್ನಲ್ಲಿ 2.03 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಆದಾಯ ತೆರಿಗೆ (ವ್ಯವಸ್ಥೆಗಳು) ಮಹಾನಿರ್ದೇಶಕರು (ಡಿಜಿಐಟಿ) ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಜಂಟಿ ಕಾರ್ಯದರ್ಶಿಗೆ (ಡಿಎಫ್ಪಿಡಿ) ಮಾಹಿತಿಯನ್ನು ಒದಗಿಸುತ್ತಾರೆ ಎಂದು ಸಿಬಿಡಿಟಿ ತಿಳಿಸಿದೆ. ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆ ಅಥವಾ ಪ್ಯಾನ್ ಅನ್ನು ಮೌಲ್ಯಮಾಪನ ವರ್ಷದ ವಿವರಗಳೊಂದಿಗೆ ಸಲ್ಲಿಸಿದರೆ, ಡಿಜಿಐಟಿ ವ್ಯವಸ್ಥೆಗಳು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರ ಡೇಟಾವನ್ನು ಒದಗಿಸುತ್ತವೆ. ಅನರ್ಹರ ವಿವರಗಳನ್ನು ಗುರುತಿಸುವಲ್ಲಿ ಈ ದತ್ತಾಂಶವು ನಿರ್ಣಾಯಕವಾಗಿರುತ್ತದೆ.
ಧಾರವಾಡ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು ಹಾಗಾಗಿ ಇಂದು ಧಾರವಾಡ ಪೀಠ ಆದೇಶ ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಕೊರತೆಯಾಗಿರುವ ರೂ.6732.51ಲಕ್ಷಗಳನ್ನು ಪುನರ್ವಿನಿಯೋಗದ ಮೂಲಕ ಹೆಚ್ಚುವರಿಯಾಗಿ ಒದಿಸಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.8697.09 ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕ 2202-01-197-1-01-300 (2202-00-101-0-61-324)ರಡಿ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರೂ.6732.51ಲಕ್ಷಗಳನ್ನು ಲೆಕ್ಕ…
ಕಲಬುರ್ಗಿ : ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಆರೋಪದಲ್ಲಿ ಐವರು ಪುಂಡರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಹೌದು ಕಲಬುರಗಿ ನಗರದ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಝಾದಪುರದ ಉಮರ್ ಕಾಲನಿ ನಿವಾಸಿಗಳಾದ ಗುಲಾಮ್ ನಬಿ ಅಲಿಯಾಸ್ ಬಿಲಾಲ್(21), ಮುಹಮ್ಮದ್ ಪರ್ವೇಶ್(27), ಶೇಕ್ ಶೋಯೆಬ್(22), ಸೈಯದ್ ಕದೀರ್(24), ಗರೀಬ್ ನವಾಝ್ ಕಾಲನಿ ನಿವಾಸಿ ಅಸ್ಲಂ (24) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಮೊದಲ ಆರೋಪಿಯಾಗಿರುವ ಗುಲಾಮ್ ನಬಿ ವಿರುದ್ಧ ಇಲ್ಲಿನ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ಕಲಂ 28 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿರುದ್ಧ ಕಲಂ 129 BNSS (PAR)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಾರಕಾಸ್ತ್ರಗಳನ್ನ ಹಿಡಿದು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಗ್ಯಾಂಗ್ ಇದಾಗಿತ್ತು. ಬಂಧಿತರಿಂದ ಪಿಸ್ತೂಲ್, ತಲವಾರ್, ಚಾಕು ಸೇರಿದಂತೆ ಇನ್ನಿತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ವಿಶ್ವವಿದ್ಯಾಲಯ…
ಮಂಡ್ಯ : 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಹೌದು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿ ಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದು, 1 ಲಕ್ಷ ಪಡೆಯುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಗನೂರು ಗ್ರಾಮದ ನಿವಾಸಿ ಶಂಕರ್ ನಿಂದ 8 ಲಕ್ಷ ಲಂಚಕ್ಕೆ ಮನೋಹರ್ ಬೇಡಿಕೆ ಇಟ್ಟಿದ್ದ. ದೂರದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದಕ್ಕೆ ಈ ವಿಚಾರವಾಗಿ ಮಧ್ಯಪ್ರವೇಶ ಮಾಡದಿರಲು 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಈ ವೇಳೆ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾನೆ. ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್…
ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಇದೀಗ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು , ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಹೌದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವಂತಹ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಒಂದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭವಿಷ್ಯವಾಣಿಗೆ ಯಾವುದೇ ಬೆಲೆ ಇಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಕಾವೇರಿ ಆಸ್ಪತ್ರೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಜಗಳ ಹಾದಿ, ಬೀದಿಗೆ ಬಂದಿದ್ದು, ಅವಾಚ್ಯ ಶಬ್ದಗಳಲ್ಲಿ ಬೈದಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. ಮತಗಟ್ಟೆ ಸಮೀಕ್ಷೆ ಸುಳ್ಳಾಗಿದೆ ದೆಹಲಿ ಚುನಾವಣೆ ಕುರಿತಂತೆ ಮತಗಟ್ಟೆ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆಯೂ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕಾಗಿ ರಚನೆಯಾದ ಪಕ್ಷವಲ್ಲ. ಅದು ಜನಸೇವೆಗಾಗಿ, ಸ್ವಾತಂತ್ರ್ಯಕ್ಕಾಗಿ ರೂಪುಗೊಂಡ ಆಂದೋಲನ. ನಾನು ಅಧಿಕಾರದಲ್ಲಿದ್ದರೂ ಜನ ಸೇವೆ ಮಾಡುತ್ತೇವೆ. ಪ್ರತಿಪಕ್ಷದಲ್ಲಿದ್ದರೂ ಜನರಿಗಾಗಿ ಹೋರಾಟ ಮಾಡುತ್ತೇವೆ ಎಂದರು.
ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ತುರ್ತು ಆರೋಗ್ಯ ಸಂದರ್ಭದಲ್ಲಿ ಸ್ಥಳೀಯ ಪಂಚಾಯ್ತಿ ವ್ಯಾಪ್ತಿಯ ನಿವಾಸಿಗಳಿಗೆ, ಉದ್ಯಾನದ ಸಿಬ್ಬಂದಿಗೆ ಮತ್ತು ಪ್ರವಾಸಿಗರಿಗೆ ಈ ಆಂಬ್ಯುಲೆನ್ಸ್ ನೆರವು ಲಭಿಸುವಂತಾಗಬೇಕು ಎಂದರು. ಬನ್ನೇರುಘಟ್ಟ ಬೆಂಗಳೂರು ಬಳಿಯೇ ಇರುವ ದೊಡ್ಡ ಕಾನನ ಪ್ರದೇಶವಾಗಿದ್ದು, 1970ರಲ್ಲಿ ಉದ್ಯಾನ ಸ್ಥಾಪಿಸಲಾಯಿತು, 1974ರಲ್ಲಿ ರಾಷ್ಟ್ರೀಯ ಉದ್ಯಾನ ಎಂದು ಘೋಷಿಸಲಾಯಿತು. ಪ್ರಸ್ತುತ ಇಲ್ಲಿ ಮೃಗಾಲಯ, ಚಿಟ್ಟೆ ಪಾರ್ಕ್, ಕರಡಿ ಸಫಾರಿ, ಹುಲಿ ಸಫಾರಿ, ಸಿಂಹ ಸಫಾರಿ ಇದ್ದು, ಇತ್ತೀಚೆಗೆ ತಾವೇ ಚಿರತೆ ಸಫಾರಿಯನ್ನೂ ಉದ್ಘಾಟಿಸಿದ್ದು, ಇದು ಪ್ರವಾಸಿಗರಿಗೆ…













