Author: kannadanewsnow05

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ. ಹೌದು ಬಿಜೆಪಿ ಯುವಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022ರಲ್ಲಿ ಕೊಲೆ ಮಾಡಲಾಗಿತ್ತು. ಈ ಕುರಿತು 2022ರ ಜು.27ರಂದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್‌ಐಎ ಪ್ರಕರಣ ಕೈಗೆತ್ತಿಕೊಂಡ ಬಳಿಕ 2022ರ ಆ.4ರಂದು ಪ್ರಕರಣವನ್ನು ಮರು ದಾಖಲಿಸಿತ್ತು.ನೆಟ್ಟಾರು ಕೊಲೆ ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಮುಸ್ತಫಾ ಪೈಚಾರ್‌ನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮೇ10ರಂದು ಮನ್ಸೂರ್‌ಪಾಷಾ ಎಂಬಾತನ ಜತೆ ಬಂಧಿಸಲಾಗಿತ್ತು. ಮುಸ್ತಫಾ ಪೈಚಾರ್‌ ಪ್ರಕರಣದ ಪ್ರಮುಖ ಸಂಚುಕೋರನಾಗಿದ್ದು, ರಾಜ್ಯ ದಲ್ಲಿ ಪಿಎಫ್‌ಐ ಸೇವಾ ತಂಡದ ಮಾಸ್ಟರ್‌ ಟೈನರ್‌ ಆಗಿದ್ದ ಎಂದು ತಿಳಿದುಬಂದಿದೆ.ಇದೀಗ ಮುಸ್ತಫಾ ಪೈಚಾರ್‌ ಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

Read More

ಬೆಂಗಳೂರು : ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ 30 ವರ್ಷಗಳಲ್ಲೇ ಸುರಿದ ದಾಖಲೆಯ ಮಳೆಯಾಗಿದೆ. ಹೌದು, ಕಳೆದ ವರ್ಷ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.25ರಷ್ಟು, ಹಿಂಗಾರು ಅವಧಿಯಲ್ಲಿ ಶೇ.38ರಷ್ಟು ಮಳೆ ಕೊರತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲಿ ಭೀಕರ ಬರ ಸೃಷ್ಟಿಯಾಗಿತ್ತು. ಹಲವು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿತ್ತು. 1994ರಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಷ್ಟು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿತ್ತು.ಆದರೆ ಈ ಬಾರಿ 28% ಹೆಚ್ಚು ಮಳೆಯಾಗಿದೆ. ಜೂನ್‌ನಲ್ಲಿ ಆಗಿದ್ದ ಮಳೆ ಕೊರತೆಯನ್ನು ಜುಲೈ ಮಳೆ ನೀಗಿಸಿದೆ.ದಕ್ಷಿಣ ಒಳನಾಡಲ್ಲಿ 42%, ಉತ್ತರ ಒಳನಾಡಲ್ಲಿ 31%, ಮಲೆನಾಡಲ್ಲಿ 28%, ಕರಾವಳಿಯಲ್ಲಿ 24% ಅಧಿಕ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 61%, ಬೆಳಗಾವಿಯಲ್ಲಿ 60% ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಹವಾಮಾನ ಇಲಾಖೆಯ…

Read More

ಚಾಮರಾಜನಗರ : ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯಿತು. ಈಗ ಎಚ್ ಡಿ ಕುಮಾರಸ್ವಾಮಿ ಟಾರ್ಗೆಟ್ ಆಗಿದ್ದಾರೆ. ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಪ್ರಹ್ಲಾದ್ ಜೋಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆದು ಎಚ್ ಡಿ ಕುಮಾರಸ್ವಾಮಿ ಸರ್ವನಾಶಕ್ಕೆ ಪ್ಲಾನ್ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ವಾಗ್ದಾಳಿ ನಡೆಸಿದರು. ಜೆಡಿಎಸ್ ಪ್ರಾಬಲ್ಯ ಇರುವ ಸ್ಥಳದಲ್ಲಿ ಪಾದಯಾತ್ರೆ ಮಾಡುತ್ತಿರುವುದು.ರಾಮನಗರ, ಮಂಡ್ಯ, ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಪ್ರಾವಲ್ಯವಿದೆ ಪಾದಯಾತ್ರೆ ಮೂಲಕ ಜೆಡಿಎಸ್ ಕಾರ್ಯಕರ್ತರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಾರೆ ಎಂದು ಕೃಷ್ಣ ಭೈರೇಗೌಡ ಗಂಭೀರ ಆರೋಪ ಮಾಡಿದರು. ರಾಜ್ಯಪಾಲರು ಕರ್ನಾಟಕದ ಹಾಗೂ ಕನ್ನಡಿಗರ ವಿರೋಧಿ. ಈ ಹಿಂದೆ ರೆಡ್ಡಿ, ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಅನುಮತಿ ಕೋರಿದ್ದರು. ಪ್ರಾಸಿಕ್ಯೂಷನ್ ಗೆ ಲೋಕಾಯುಕ್ತ ಮತ್ತು ಎಸಿಬಿ ಅನುಮತಿ ಕೋರಿತ್ತು. ಆಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇ ಇಲ್ಲ ಎಂದು ಅವರು ತಿಳಿಸಿದರು. ಈಗ ಯಾವುದೋ ಖಾಸಗಿ ವ್ಯಕ್ತಿಯಿಂದ ರಾಜ್ಯಪಾಲರಿಗೆ…

Read More

ರಾಮನಗರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭ್ರಷ್ಟಾಚಾರದ ಪಿತಾಮಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಅವರು ಹಾಕಿದ್ದು, ಭ್ರಷ್ಟಾಚಾರದ ಪಿತಾಮಹ ಅಂತ ಅಂದರೆ ಏನು ಅಂತ ಹೇಳಲಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿದರೆ ನಾನು ಈಗಲೂ ಜೈಲಿಗೆ ಹೋಗಲು ರೆಡಿ ಇದ್ದೇನೆ ಎಂದು ಸವಾಲು ಹಾಕಿದರು. ರಾಮನಗರ ತಾಲೂಕಿನ ಬಿಡದಿಯಲ್ಲಿ ಜನಲೋಂದನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮಾಡಿದ್ದ ಹಗರಣಕ್ಕೆ ಜವಾಬ್ದಾರಿ ಯಾರು? ರಾಮನಗರ ತಾಲೂಕಿನ ಬಿಡದಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದ್ದು, ಯಾವ ಬ್ಯಾಂಕಿಗೆ ಹಣ ಹೋಗಿದೆ ಎಂಬ ಮಾಹಿತಿ ಕೊಡಬೇಕು.ಪಾದಯಾತ್ರೆಯಲ್ಲಿ ನಾವು ಪ್ರಶ್ನೆ ಕೇಳಿದ್ದಕ್ಕೆ ಉತ್ತರ ಕೊಡಬೇಕು. ನಮ್ಮನ್ನು ಜೈಲಿಗೆ ಹಾಕಿಸಬೇಕು ಅಂತ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗಬೇಕು ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್ ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು. ಬಿವೈ ವಿಜಯೇಂದ್ರ ವಿರುದ್ಧ ಎಲ್ಲಾ…

Read More

ಬೆಂಗಳೂರು : ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಬ್ಯಾಚುಲರ್ಸ್ ಪಾರ್ಟಿ ಸಿನೆಮಾದಲ್ಲಿ ಎರಡು ಹಾಡುಗಳನ್ನು ಬಳಸಿ ಕಾಪಿರೈಟ್ಸ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದಿದ್ದಾರೆ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ನಟ ಪ್ರಶ್ನಿಸಿದ್ದಾರೆ. ಕೊಟ್ಟಿರುವ ಕಂಪ್ಲೆಂಟ್‌ಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ತಾಯಿಯಿಂದಲೇ ಮಗುವಿನ ಕಿಡ್ನಾಪ್ ಮಾಡಿರುವ ಘಟನೆ ನಡೆದಿದ್ದು, ಮಗುವನ್ನು ಎಳೆದೊಯ್ಯುವ ದೃಶ್ಯ ಇದೀಗ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಘಟನೆಯು ಬೆಂಗಳೂರಿನ ಕೆಆರ್. ಪುರಂ ನಲ್ಲಿ ನಡೆದಿದೆ. ಮಗುವಿನ ತಾಯಿ ಅನುಪಮಾ ಮತ್ತು ಸ್ನೇಹಿತನಿಂದ ಈ ಒಂದು ಕೃತ್ಯ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಕೆಆರ್ ಪುರಂನಲ್ಲಿ ಈ ಒಂದು ಘಟನೆ ನಡೆದಿದೆ. ಶಾಲೆಗೆ ಹೋಗಲು ಅಪಾರ್ಟ್ಮೆಂಟ್ ಒಂದೇ ಮಗು ನಿಂತಿತ್ತು. ಶಾಲೆ ಬಸ್ ಹತ್ತಿಸಲು ಮಗುವಿನ ತಾತ ಕಾಯುತ್ತಾ ಅಪಾರ್ಟ್ಮೆಂಟ್ ಎದುರುಗಡೆ ನಿಂತಿದ್ದರು. ಈ ವೇಳೆ ತಾತನನ್ನು ತಳ್ಳಿ ಅನುಪಮ ಮತ್ತು ಸ್ನೇಹಿತ ಮಗುವನ್ನು ಹೊತ್ತುಕೊಂಡು ಹೋಗಿದ್ದಾರೆ. ಇನ್ನೂ ಈ ಒಂದು ಘಟನೆಗೆ ಅನುಪಮ ಮತ್ತು ಆಕೆಯ ಪತಿ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗುತ್ತಿದೆ. ನ್ಯಾಯಾಲಯದಲ್ಲಿ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರ ಮಗು ತಂದೆಯ ಬಳಿಯೇ ಇರಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅನುಪಮಾ ಹಾಗೂ ಆಕೆಯ ಸ್ನೇಹಿತ ಈ ಕೃತ್ಯ ಮಾಡಿರಬಹುದು…

Read More

ಬಳ್ಳಾರಿ : ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಜಾತಿ ಅಡ್ಡ ಬಂದ ಕಾರಣಕ್ಕೆ ಮನೆಯವರು ಮದುವೆಗೆ ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ. ರಾಜು (23) ಹಾಗೂ ಪವಿತ್ರಾ(20) ಮೃತ ದುರ್ಧೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಹೊರ ಬಂದಿದ್ದಾರೆ. ರಾಜು ಹಾಗೂ ಪವಿತ್ರಾ, ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಮಗನ ಮೃತ ದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ತೆಲಂಗಾಣ : ಇಂದಿನ ಕಾಲದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಹೆರುವುದು ಅಷ್ಟೇ ಮಾಡುತ್ತಾರೆ, ಹೊರತು ಆದರೆ ಪಾಲನೆ ಪೋಷಣೆ ಹಾಗೂ ಮಕ್ಕಳ ಸುರಕ್ಷತೆಯ ಕುರಿತು ಬಹಳ ನಿರ್ಲಕ್ಷ್ಯ ವಹಿಸುತ್ತಾರೆ. ಇದೀಗ ಮೊಬೈಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡು ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ಈ ದುರಂತ ನಡೆದಿದೆ. ಹೌದು ಗ್ರಾಮಸ್ಥರ ಪ್ರಕಾರ ಆರಾಧ್ಯ ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರಿ. ಗುರುವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿದ್ದು ವಿದ್ಯುತ್​​ ಆಘಾತದಿಂದ ಪ್ರಜ್ಞೆ ತಪ್ಪಿದೆ.ಕೂಡಲೇ ಪೋಷಕರು ಆಕೆಯನ್ನು ಖಾನಾಪುರ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಒಂದೂವರೆ ವರ್ಷದ ಬಾಲಕಿ ದುರ್ಗಂ ಆರಾಧ್ಯ ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್‌ಫೋನ್ ಚಾರ್ಜಿಂಗ್…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ ವಿಚಾರವಾಗಿ ಇಂದು ಮೈಸೂರು ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಲ್ಲಾ ಎದುರಿಸುತ್ತೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಸಿಎಂ ಗರಂ ಆಗಿದ್ದು, ಇದಕ್ಕೆಲ್ಲ ನಾನು ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಯಾವುದನ್ನೂ ಪರಿಶೀಲಿಸದೆ ಆತುರಾತುರವಾಗಿ ನೋಟಿಸ್ ಕೊಟ್ಟಿದ್ದಾರೆ ಎಂದರು. ಕೇಂದ್ರ ಸರ್ಕಾರ ರಾಜಭವನವನ್ನು ಈ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದೆ.ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಪ್ರಜಾಪ್ರಭುತ್ವ ಸಂವಿಧಾನ ಕೊಲೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, 136 ಶಾಸಕರ ಬೆಂಬಲದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಪ್ರಜಾಪ್ರಭುತ್ವ ಸಂವಿಧಾನ ಕೊಲೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.ಮುಡಾ ಹಗರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಆಕ್ರೋಶ ಹೊರಹಾಕಿದರು. ಇನ್ನು ಈ ಒಂದು ಪ್ರಕರಣಕ್ಕೆ…

Read More

ಬೆಂಗಳೂರು : ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಕೇರಳದ ವಯನಾಡ್ ನಲ್ಲಿ ಮಳೆ ಪ್ರವಾಹ, ಭೂಕುಸಿತದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ನೆರವು ಮತ್ತು ದಿನಸಿ ಸಾಮಾಗ್ರಿಗಳನ್ನು ತಲುಪಿಸುವ 2 ಟ್ರಕ್‌ಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರು ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳದ ವಯಾನಾಡ್ ನಲ್ಲಿ ಆಗಿರುವ ದುರಂತದಿಂದ ಸಾಕಷ್ಟು ನಷ್ಟವುಂಟಾಗಿದ್ದು, ಆ ಸಮಸ್ಯೆಗೆ ಎಲ್ಲಾ ಕಡೆಯಿಂದ ಸ್ಪಂದಿಸಿ ನೆರವು ನೀಡುತ್ತಿದ್ದಾರೆ ಎಂದರು. ಜನರಿಗೆ ಸಮಸ್ಯೆ ಮತ್ತು ಸಂಕಷ್ಟಗಳು ಎದುರಾದಾಗ ಬಿಬಿಎಂಪಿ ನೌಕರರ ಸಂಘವು ಸಹಾಯ, ಸಹಕಾರ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಯನಾಡ್ ದುರಂತದಲ್ಲಿ ಪಾಲಿಕೆ ನೌಕರರ ಸಂಘವು 2 ಟ್ರಕ್‌ಗಳಲ್ಲಿ 25 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಹೇಳಿದರು.ವಯನಾಡ್ ದುರಂತವು ನೋವಿನ ಸಂಗತಿಯಾಗಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಅಧಿಕಾರಿಗಳ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಹಕಾರ…

Read More