Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಸಚಿವ ಸಂಪುಟ ಪುನಾರಚನೆ ಕುರಿತಂತೆ ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದರು. ಈ ವಿಚಾರವಾಗಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಯಾವುದೇ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತಂತೆ ಮಧ್ಯಮಗಳಲ್ಲಿ ನೀವೇ ಆ ಕುರಿತು ಬರೆದಿದ್ದು, ಹಾಗಾಗಿ ನೀವೇ ಉತ್ತರ ಕಂಡುಕೊಳ್ಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ. ಇನ್ನು ಮಾಜಿ ಸಚಿವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೇವೆ ಆದರೆ ತಕ್ಷಣಕ್ಕೆ ಅಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಹಾಸನದಲ್ಲಿ ಸ್ವಾಭಿಮಾನ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾಗು ಹೇಳಿದ್ದೇನೆ. ಸಮಾವೇಶದ…
ಮುಂಬೈ : ಆತನೊಬ್ಬ ಸದೃಢ ಕ್ರಿಕೆಟ್ ಆಟಗಾರ ಆದರೆ, ಕ್ರೀಡಾಂಗಣದಲ್ಲಿ ಮ್ಯಾಚ್ ಆಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತವಾಗಿ ಮೈದಾನದಲ್ಲೇ ಕುಸಿದು ಸಾವನ್ನಪ್ಪಿರುವ ಘಟನೆ ಪುಣೆಯ ಗರ್ವಾರೆ ಕ್ರೀಡಾಂಗಣದಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ಕ್ರಿಕೆಟರ್ ಅನ್ನು ಇಮ್ರಾನ್ ಪಟೇಲ್ (35) ಎಂದು ತಿಳಿದುಬಂದಿದೆ. ಕ್ರಿಕೆಟ್ ಮ್ಯಾಚ್ ನಡೆಯುತ್ತಿದ್ದ ವೇಳೆ ಆರಂಭಿಕ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ಪಿಚ್ನಲ್ಲಿ ಸ್ವಲ್ಪ ಸಮಯ ಕಳೆದ ನಂತರ ಎದೆ ಮತ್ತು ತೋಳಿನ ನೋವಿನ ಬಗ್ಗೆ ಹೇಳಿಕೊಂಡರು. ಅಂಪೈರ್ಗಳು ಮೈದಾನದಿಂದ ಹೊರಹೋಗಲು ಅನುಮತಿ ನೀಡಿದರು. ಆದರೆ, ಪೆವಿಲಿಯನ್ಗೆ ಹಿಂತಿರುಗುವಾಗ ಇಮ್ರಾನ್ ಕುಸಿದು ಬಿದ್ದರು. ಇಮ್ರಾನ್ ಕುಸಿದು ಬೀಳುತ್ತಿದ್ದಂತೆ ಮೈದಾನದಲ್ಲಿದ್ದ ಇತರ ಆಟಗಾರರು ಅವರತ್ತ ಧಾವಿಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಪರೀಕ್ಷಿಸಿದ ಬಳಿಕ ಇಮ್ರಾನ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಒಂದು ಕ್ರಿಕೆಟ್ ಆಟದ ನೇರಪ್ರಸಾರವಾಗುತ್ತಿದ್ದ ಪಂದ್ಯಾವಳಿಯ ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು : ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ತಂಡ ವಕ್ಫ್ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಬಣ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಪರವಾಗಿ ನಿಂತಿದೆ. ಹಾಗಾಗಿ ಈ ಒಂದು ಬಣ ಬಡಿದಾಟ ಬಿಜೆಪಿ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಹೌದು ಹೈಕಮಾಂಡ್ ಅಂಗಳಕ್ಕೆ ಇದೀಗ ಬಿಜೆಪಿ ಬಣ ಬಡಿದಾಟ ತಲುಪಿದೆ. ಹಾಗಾಗಿ ಮತ್ತೆ ಹೈಕಮಾಂಡ್ ಭೇಟಿಯಾಗಲು ಬಿವೈ ವಿಜಯೆಂದ್ರ ನಿರ್ಧಾರ ಮಾಡಿದ್ದಾರೆ. ಒಂದು ವಾರದಲ್ಲಿ ವಿಜಯೇಂದ್ರ ಇದು ಎರಡನೇ ಬಾರಿಗೆ ಹೈಕಮಾಂಡ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಇಂದು ದೆಹಲಿಗೆ ತೆರಳಲಿದ್ದಾರೆ. ನಾಳೆ ಹೈಕಮಾಂಡ್ ಅವರನ್ನು ಬಿವೈ ವಿಜಯೇಂದ್ರ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಮೊನ್ನೆ ಅಷ್ಟೇ ಬಿವೈ ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಬಣ ಬಡಿದಾಟ ಜೋರಾದ ಹಿನ್ನೆಲೆ ವಿಜಯೇಂದ್ರ ಅವರ ಹೈಕಮಾಂಡ್…
ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ತನಿಖೆಯ ವೇಳೆ ಸ್ಪೋಟಕವಾದಂತ ಅಂಶ ಬಯಲಾಗಿದ್ದು, ಸಿಸೇರಿಯನ್ ವೇಳೆ ನೀಡಿದ್ದ ‘IV ಗ್ಲೂಕೋಸ್’ ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. IV ಗ್ಲುಕೋಸ್ ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ IV ಗ್ಲುಕೋಸ್ ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, ಇಂಟ್ರಾವೆನಸ್ ದ್ರಾವಣ (IV ಗ್ಲುಕೋಸ್) ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕಳೆದ ನವೆಂಬರ್ 9 ರಂದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು ಏಳು ಜನರು ಬಾಣಂತಿಯರು ದಾಖಲಾಗಿದ್ದಾರೆ ಈ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬಳಿಕ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ.ಬಾಣಂತಿಯರ ಸಾವಿಗೆ ಕಾರಣವೇನು ಎಂಬುವುದನ್ನು ತಿಳಿಯಲು ಸರ್ಕಾರ ತಜ್ಞರ…
ಹಾಸನ : ಮದ್ಯದ ಅಮಲಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ಒಬ್ಬರು ಚರಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಗೆ ತೆರಳುವಾಗ ಚರಂಡಿಗೆ ಬಿದ್ದು ಓಂಕಾರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಂಪೂರ್ಣ ಕೊಳಚೆಯಿಂದ ತುಂಬಿದ್ದ ಚರಂಡಿಗೆ ಬಿದ್ದು ಓಂಕಾರ್ ಸಾವನ್ನಪ್ಪಿದ್ದಾರೆ. ಚರಂಡಿಯನ್ನು ಸ್ವಚ್ಛ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಅ ಘಟನೆ ಕುರಿತಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ರಾಜ್ಯ ರಾಜಕಾರಣದಲ್ಲಿ ಸದ್ಯ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗು ಕೇಳಿ ಬರುತ್ತಿದ್ದು, ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ರೀತಿಯಾದಂತಹ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಅವರು ನನಗೂ ಸಿಎಂ ಆಗುವ ಆಸೆ ಇದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಇದೆ ಆದರೆ ಹೈಕಮಾಂಡ್ ತೀರ್ಮಾನ ಅಂತಿಮ ಆಗಿರುತ್ತದೆ ಎಂದು ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೂ ಸಿಎಂ ಆಗಲು ಹಾಗೂ ಕೆಪಿಸಿಸಿ ಅಧ್ಯಕ್ಷನಾಗಲು ಆಸೆ ಇದೆ. ಆದರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡುತ್ತದೆ. ಹಿಂದೆ ಸಿಎಂ ಆಗುತ್ತಾರೆ ಅಂತ ನನ್ನ ಹೆಸರು ಓಡಾಡುತ್ತಿತ್ತು. ಈಗ ಅಧ್ಯಕ್ಷ ಆಗುತ್ತಾರೆ ಅಂತ ನನ್ನ ಹೆಸರು ಓಡಾಡುತ್ತಿದೆ. ಎಷ್ಟೇ ಹೆಸರು ಓಡಾಡಿದರು ಸಹ ನಮ್ಮ ಉತ್ಸಾಹ ಅಷ್ಟೇ. ಇದಕ್ಕೆಲ್ಲ ಆದರೆ ಪಕ್ಷದ ತೀರ್ಮಾನ ಅಂತಿಮವಾಗಿರುತ್ತದೆ. ನಾವೆಲ್ಲರೂ ಕಾದು ನೋಡಬೇಕು ಅಷ್ಟೇ.…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಹಗರಣ ನಡೆದಿದೆ.ಮೇಲ್ನೋಟಕ್ಕೆ ಹಗರಣ ನಡೆದಿದೆ ಎಂದು ಹೇಳುತ್ತಿದ್ದೂ, ಹಾಗಾಗಿ ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ. ಇನ್ನೂ ನನ್ನ ತಂದೆ, ತಾಯಿ, ಮಾವನ ವಿರುದ್ಧ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ಇದು ತನಿಖಾ ಸಂಸ್ಥೆಗೂ ಸಹ ಗೊತ್ತಿದೆ. ಇಡಿಯಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ. ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ. ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು…
ತುಮಕೂರು: ತುಮಕೂರಿನ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಅಕ್ರಮವಾಗಿ ನೊಂದಣಿ ಪ್ರಕ್ರಿಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬುಧವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ತನಿಖೆಯನ್ನು ಮುಂದುವರೆಸಿದ್ದು, ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ.ಈ ವೇಳೆ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನೋಂದಣಿ ಪ್ರಕ್ರಿಯೆಯಿಂದ ಸರ್ಕಾರಕ್ಕೆ ಸುಮಾರು 300 ಕೋಟಿ ರೂಪಾಯಿ ತೆರಿಗೆ ನಷ್ಟವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಹೌದು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿಯಾಗಿರುವ ಸುಮಾರು 6 ಸಾವಿರಕ್ಕೂ ಹೆಚ್ಚಿನ ಟ್ರ್ಯಾಕ್ಟರ್ಗಳಲ್ಲಿ 2,500 ಕೃಷಿ ದೃಢೀಕರಣ ಪತ್ರ (ಬೋನಾಫೈಡ್) ನೀಡಿ ಮಧ್ಯವರ್ತಿಯೊಬ್ಬ ಟ್ರ್ಯಾಕ್ಟರ್ ಗಳನ್ನು ನೋಂದಣಿ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.ಸಾರಿಗೆ ಅಧಿಕಾರಿಗಳು ಹಾಗೂ ಮಧ್ಯವರ್ತಿಯಿಂದ ನಡೆದಿರುವ ಈ ಅಕ್ರಮದಲ್ಲಿ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ತೆರಿಗೆ ನಷ್ಟವಾಗಿದೆ ಎನ್ನಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ನಕಲಿ ಕೃಷಿ ದೃಢೀಕರಣ ಪತ್ರ ನೀಡಿ ನೋಂದಣಿ ಮಾಡಿಸಿರುವ ಕಡತಗಳ ಬೆನ್ನತ್ತಿದ್ದಾರೆ. 2,500 ಟ್ರ್ಯಾಕ್ಟರ್, 500ಕ್ಕೂ ಹೆಚ್ಚು ಜೆಸಿಬಿಗಳನ್ನು ನಕಲಿ ಕೃಷಿ ದೃಢೀಕರಣ ಪತ್ರವನ್ನು…
ಬೆಂಗಳೂರು : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು, ಸಾರ್ವಜನಿಕರ ಯಾವುದೇ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎನ್ನುವುದು ತಿಳಿದಿರುವ ಸಂಗತಿ. ಆದರೆ ಇದೀಗ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲೂ ಕೂಡ ಅಲ್ಲಿನ ಕೆಲ ಡಿ ಗ್ರೂಪ್ ಸಿಬ್ಬಂದಿಗಳು ಸೇರಿದಂತೆ ಹಲವರು ರೋಗಿಗಳ ಸಂಬಂಧಿಕರ ಬಳಿ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎನ್ನುವ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆಯ ಮೇಲೆ ದಾಳಿ ಮಾಡಿದ್ದಾರೆ. ಹೌದು ಕೆ ಸಿ ಜನರಲ್ ಆಸ್ಪತ್ರೆಯ ವಿರುದ್ಧ ಲೋಕಾಯುಕ್ತಕ್ಕೆ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಕೆ ಸಿ ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೆರಿಗೆ ವಾರ್ಡ್ ನಲ್ಲಿ ಇದ್ದಂತಹ ಮಂಜುಳಾ ಎಂಬ ಮಹಿಳೆಯೊಬ್ಬರು ಕಳೆದ ತಿಂಗಳು ನಮ್ಮ ಮಗಳನ್ನು ಹೆರಿಗೆಗೆ ಅಂತ ಕರೆದುಕೊಂಡು ಬಂದಿದ್ದೇವೆ.…
ಬೆಂಗಳೂರು : ನಾಳೆ ರೋಮ್ ನಗರದ ವ್ಯಾಟಿಕನ್ ಸಿಟಿಯಲ್ಲಿ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕದ ವಿಧಾನಸಭೆಯ ಸ್ಪೀಕರ್ ಆಗಿರುವಂತಹ ಯುಟಿ ಖಾದರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ನವೆಂಬರ್ 30ರಂದು ಅಂದರೆ ನಾಳೆ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ಈ ಒಂದು ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮ ಸಮ್ಮೇಳನದ ಅತಿಥಿಯಾಗಿ ಸ್ಪೀಕರ್ ಯು ಟಿ ಖಾದರ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಯು ಟಿ ಖಾದರ್ ಭಾಷಣ ಮಾಡಲಿದ್ದಾರೆ. ಮಾನವೀಯತೆಗಾಗಿ ಧರ್ಮಗಳ ಬಗ್ಗಟ್ಟು ಎಂಬ ವಿಷಯದಲ್ಲಿ ಭಾಷಣ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ ಈ ವೇಳೆ ಖಾದರ್ ಅವರು ಕ್ರೈಸ್ತ ಧರ್ಮ ಗುರುಗಳಾದಂತಹ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಲಿದ್ದಾರೆ.












