Author: kannadanewsnow05

ತುಮಕೂರು : ಇತ್ತೀಚಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಗ್ಯಾರಂಟಿಗಳಲ್ಲಿ ಯಾವುದಾದರೂ ಎರಡು ಯೋಜನೆಗಳನ್ನು ನಿಲ್ಲಿಸಿ, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಹೇಳಿಕೆ ನೀಡಿದ್ದರು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಿಗೆ 25 ಕೋಟಿ ಹಾಗೂ ವಿಪಕ್ಷಗಳ ಶಾಸಕರಿಗೆ 10 ರಿಂದ 15 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಕೆಲ ಶಾಸಕರಿಗೆ ಅನುದಾನವೇ ಕೊಡುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ವಿಪಕ್ಷ ಶಾಸಕರಿಗೆ 10 ರಿಂದ 15 ಕೋಟಿ ಹಣ ಕೊಡುತ್ತೇವೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ಆತಂಕ ಬೇಡ ಅನುದಾನ ಕೊಡುತ್ತೇವೆ ನಾನು ಮತ್ತು ಕೆ.ಎನ್ ರಾಜಣ್ಣ ಈ ಒಂದು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಆದಾಗ ಮಾತ್ರ ರಾಜ್ಯದ ಅಭಿವೃದ್ಧಿ ಆಗಲಿದೆ. ಬಿಜೆಪಿ ಜೆಡಿಎಸ್ ಶಾಸಕರು ಸಿಎಂ ಗೆ ಕಪ್ಪು ಬಾವುಟ ತೋರಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷದ…

Read More

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಂದು ಬೆಳ್ಳಂ ಬೆಳಿಗ್ಗೆ ಇಡಿ ಶಾಕ್ ನೀಡಿದ್ದು, ಅಶ್ಲೀಲ ಚಿತ್ರಗಳ ವಿತರಣೆ ಆರೋಪ ಪ್ರಕರಣಕ್ಕೇ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಅಶ್ಲೀಲ ಜಾಲಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಉದ್ಯಮಿ ರಾಜ್ ಕುಂದ್ರಾ, ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ದಾಳಿ ನಡೆಸಿತು. ಅಧಿಕಾರಿಗಳ ಪ್ರಕಾರ ಕುಂದ್ರಾ ಅವರ ಸಹಚರರ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪದ ಮೇಲೆ ಕುಂದ್ರಾ ಅವರನ್ನು ಜೂನ್ 2021 ರಲ್ಲಿ ಬಂಧಿಸಲಾಯಿತು. ಎರಡು ತಿಂಗಳು ಜೈಲಿನಲ್ಲಿ ಕಳೆದ ನಂತರ ಅವರಿಗೆ ಸೆಪ್ಟೆಂಬರ್ 2021 ರಲ್ಲಿ ಜಾಮೀನು ನೀಡಲಾಯಿತು. ಇದೀಗ ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು…

Read More

ಬೆಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಹರಕು ಬಾಯಿ ಕಾರಣ. ಹಾಗಾಗಿ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರು ಕುರುಡುಮಲೆಯ ವಿನಾಯಕನ ದರ್ಶನ ಪಡೆಯುತ್ತೇವೆ. ಪಕ್ಷದ ಕಾರ್ಯಕರ್ತರು ಮುಖಂಡರಿಗೆ ವಿಶ್ವಾಸ ಹೆಚ್ಚಿಸಲು ಪ್ರವಾಸ ಕೈಗೊಳ್ಳಲಾಗಿದೆ. ರಾಜ್ಯದ ಬಿಜೆಪಿಯಲ್ಲಿ ಕೆಲವರು ಗೊಂದಲವನ್ನು ಸೃಷ್ಟಿ ಮಾಡುತ್ತಿದ್ದಾರೆ. ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದರು. ನಿನ್ನೆ ಮೊನ್ನೆ ಬಂದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ವಯಂ ಘೋಷಿತವಾಗಿ ಯತ್ನಾಳ್ ಅವರು ಹಿಂದೂ ಹುಲಿ ಎಂದು ಹೇಳುತ್ತಾರೆ. ನಿನ್ನೆ ಮಾಜಿ ಸಿಎಂ ಪ್ರಧಾನಿ ಗೌಡರ ಬಗ್ಗೆ ಏನೇನೋ ಹೇಳಿದ್ದಾರೆ. ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ. ಯತ್ನಾಳ್ ಬಣ ಕಾಂಗ್ರೆಸ್ ಏಜೆಂಟರು. ಬೀದಿಯಲ್ಲಿ ತಮಟೆ ಹೊಡೆಯುತ್ತಿದ್ದಾರೆ. ಇದನ್ನು ಸಹಿಸುವುದಿಲ್ಲ ಎಂದರು. ಪ್ರಧಾನಿ ಮೋದಿಗೆ ಸಲಹೆ ಕೊಡುವಷ್ಟು ದೊಡ್ಡವರಾಗಿದ್ದಾರಾ? ವಕ್ಫ್ ವಿರುದ್ಧದ ಹೋರಾಟಕ್ಕಾಗಿ…

Read More

ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ವಿರುದ್ಧ ಇದೀಗ ಶಿವಮೊಗ್ಗ ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ಸಾಮಾಜಿಕ ಜಾಲತಾಣಗಳದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಮೋಹಿತ್ ಎನ್ನುವ ವ್ಯಕ್ತಿ ಸಚಿವ ಮಧು ಬಂಗಾರಪ್ಪ ಅವರ ಬಗ್ಗೆ ಎಕ್ಸ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದವನ ವಿರುದ್ಧ ವಿನೋಬ ನಗರ ಪೊಲೀಸ್‌ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಸಚಿವ ಮಧು ಬಂಗಾರಪ್ಪರವರ ಹೇಳಿಕೆಯೊಂದನ್ನ ಆಧರಿಸಿ, ಅವರ ವಿರುದ್ದ ವೈಯಕ್ತಿಕ ನಿಂದನೆ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದರು. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯ ಕುರಿತು ಏಕವಚನದಲ್ಲಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹಾಗೂ ಸರ್ಕಾರದ ಯೋಜನೆಯ ವಿರುದ್ಧವಾಗಿ ಸುಳ್ಳು ಮಾಹಿತಿ ಪ್ರಸಾರ ಮಾಡಿ ಸಾರ್ವಜನಿಕರನ್ನು ಸರ್ಕಾರದ ವಿರುದ್ಧ…

Read More

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳ ಆಪ್ತ ಸಲಹೆಗಾರ ಹಾಗೂ ಆಳಂದ್ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವಂತಹ ಬಿ ಆರ್ ಪಾಟೀಲ್ ಸ್ಫೋಟಕ ವಾದಂತಹ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು 5 ವರ್ಷ ಇರಬೇಕು ಅಂತಾ ಬಯಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ? ಎಂದು ಅವರು ತಿಳಿಸಿದರು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಆದರೆ ಹೈಕಮಾಂಡ್ ಸೂಚನೆ ಬಂದರೆ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಎನ್ನುವುದು ಗೊತ್ತಿಲ್ಲ ಎಂದು ಬಿ.ಆರ್ ಪಾಟೀಲ್ ತಿಳಿಸಿದರು. ಐದು ಗ್ಯಾರಂಟಿಗಳು ಬಹಳಷ್ಟು ಯಶಸ್ವಿಯಾಗಿ ಅನುಷ್ಠಾನ…

Read More

ಮಹಾರಾಷ್ಟ್ರ : ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಆಗೋದೆಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ. ಹೌದು ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದೆ. 10 ಕೋಟಿ ರೂಪಾಯಿ ಅನುದಾನ ನೀಡಲು ಮಹಾಯುತಿ ನಿರ್ಧಾರಿಸಿದೆ. ಇತ್ತ ಕರ್ನಾಟಕ ದೆಹಲಿ ಸೇರಿದಂತೆ ಹಲವಡೆ ವಕ್ಫ್ ವಿರುದ್ಧ ಪ್ರತಿಭಟಿಸುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅನುದಾನ ಘೋಷಣೆ ಮಾಡಲಾಗಿದೆ. ಬಿಜೆಪಿಯ ನೇತೃತ್ವದ ಮಹಾಯುತಿ ಅನುದಾನ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಈ ಒಂದು ನಿರ್ಧಾರವು ಕಾಂಗ್ರೆಸ್ ಗೆ ಪ್ರಬಲ ಅಸ್ತ್ರ ವಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಏಕೆಂದರೆ ಕರ್ನಾಟಕ ಸಿರಿದಂತೆ ದೆಹಲಿ ಮಟ್ಟದವರೆಗೂ ಬಿಜೆಪಿ…

Read More

ಮಂಡ್ಯ : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಚಿರತೆಯ ಕಾಟದಿಂದ ಜನರು ಭಯಭರಿತರಾಗಿದ್ದರು. ಕೂಡಲೆ ಅರಣ್ಯ ಅಧಿಕಾರಿಗಳು ಮೂರು ಚಿರತೆಗಳನ್ನು ಸೆರೆ ಹಿಡಿದು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ದಿಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾಧರ ನಗರದಲ್ಲಿ ಚಿರತೆಯೊಂದು ರಾತ್ರಿಯ ವೇಳೆ ನಾಯಿಯನ್ನು ಹೊತ್ತೊಯ್ದು ಕೊಂಡಿರುವ ಘಟನೆ ನಡೆದಿದೆ. ಹೌದು ಮನೆ ಕಾಯುತ್ತಿದ್ದ ನಾಯಿಯನ್ನೇ ಹೊತ್ತುಕೊಂಡು ಹೋದ ಚಿರತೆ ಮಂಡ್ಯದ ಗಂಗಾಧರ ನಗರದ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿರತೆ ದಾಳಿ ಮಾಡಿರುವಂತಹ ಸಿಸಿಟಿವಿಯಲ್ಲಿ ಸೆರಿಯಾಗಿದೆ. ಮಂಡ್ಯದ ನಾಗಮಂಗಲ ತಾಲೂಕಿನ ಗಂಗಾಧರ ನಗರದಲ್ಲಿ ನಡೆದಿದೆ. ಪದೇ ಪದೇ ಈ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಹಸು, ನಾಯಿಗಳ ಮೇಲೆ ಈಗಾಗಲೇ ಚಿರತೆ ಹಲವು ಬಾರಿ ದಾಳಿ ಮಾಡಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಕೂಡ ಅವರು ನಿರ್ಲಕ್ಷ ತೋರಿದ್ದಾರೆ. ನಿನ್ನೆ ಮತ್ತೆ ಗ್ರಾಮಕ್ಕೆ ನುಗ್ಗಿ ನಾಯಿಯನ್ನು ಹೊತ್ತೋಯ್ದುಕೊಂಡಿದೆ. ರಾಮದಾಸ ಎನ್ನುವವರ ಮನೆಯ ನಾಯಿಯನ್ನು ಚಿರತೆ ಎಳೆದೋಯಿದಿದೆ.

Read More

ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎರಡು ವರ್ಷಗಳ ಬಳಿಕ ಹುದ್ದೆ ತ್ಯಾಗ ಮಾಡಬೇಕಾಗುತ್ತದೆ ಎಂದು ಸಂಪುಟ ಪುನಾರಚನೆ ಕುರಿತಂತೆ ಸುಳಿವು ನೀಡಿದ್ದರು. ಇದೀಗ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಕುರಿತಂತೆ ಸದ್ಯಕ್ಕೆ ಯಾವುದೇ ಚರ್ಚೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಇಂದು ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಚಿವ ಸಂಪುಟ ಪುನರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಸಂಪುಟ ಪುನಾರಚನೆ ಸಂದರ್ಭ ಬಂದಿಲ್ಲ. ಕಾಂಗ್ರೆಸ್ ಅಧಿವೇಶನದ ಬಗ್ಗೆ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಕು ಎಂಬ ಮನವಿ ಮಾಡಿದ್ದೇವೆ. ಅಲ್ಲದೆ ಇವತ್ತು CWC ಸಭೆಯಲ್ಲಿ ಚರ್ಚೆ ಆಗಲಿದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ವಿಚಾರವಾಗಿ ಮಾಧ್ಯಮದ ಮೂಲಕ ರಾಜಕೀಯ ನಡೆಯಲ್ಲ ಎಂದು ತಿಳಿಸಿದರು. ಇನ್ನು ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದಾರೆ.ಈ ಕುರಿತು ರಾಜ್ಯದ ಕೆಲ…

Read More

ಬೆಂಗಳೂರು : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಒಂದು ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದಾರೆ. ಹೌದು AICC ನಾಯಕರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ದೂರು ನೀಡಿದ್ದಾರೆ. ಪತ್ರದಲ್ಲಿ ಹೆಸರನ್ನು ಮರೆಮಾಚಿಸಿ ನಾಯಕರಿಗೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು, ಮುಖಂಡರೆ ಇದ್ದಾರೆ. ಆದರೂ ಯಾಕೆ ಕಾಂಗ್ರೆಸ್ ಪಕ್ಷದ ಚಿನ್ಹೆಯ ಮೇಲೆ ಸಮಾವೇಶ ಮಾಡುತ್ತಿಲ್ಲ. ವೈಯಕ್ತಿಕ ಬಲಪ್ರದರ್ಶನಕ್ಕೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದ್ದು,ಅಧಿಕಾರ ಕೊಟ್ಟ ಪಕ್ಷ ದೂರ ಬಿಟ್ಟು ಸಮಾವೇಶ ಮಾಡುವ ಉದ್ದೇಶವೇನು? ಸ್ವಾಭಿಮಾನ ಸಮಾವೇಶವನ್ನು ಪಕ್ಷದ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ವಾರಾಹಿ ದೇವಿಯ ಶಕ್ತಿ ತುಂಬಿದ ತಾಯಿತ ಬೇಕಾದಲ್ಲಿ ಸಂಪರ್ಕಿಸಿ ಪ್ರಯೋಜನಗಳು 1. ಶತ್ರುಗಳು, ದುಷ್ಟ ಕಣ್ಣು, ಬೂತ್ ಪ್ರೇತ್ ಇತ್ಯಾದಿಗಳಿಂದ ಸಂಪೂರ್ಣ ರಕ್ಷಣೆ. 2. ಭೂಮಿ, ಮನೆ ಮತ್ತು ಪೂರ್ವಜರ ಆಸ್ತಿಗಳಿಗೆ ಸಂಬಂಧಿಸಿದ ವಿವಾದಗಳು ಕೊನೆಗೊಳ್ಳುತ್ತವೆ 3. ವಾಹನಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗುವುದು 4. ಕುಟುಂಬ ಸದಸ್ಯರ ನಡುವಿನ ಜಗಳಗಳು ಬಗೆಹರಿಯಲಿವೆ 4. ಪೊಲೀಸ್ ಕೋರ್ಟ್/ನ್ಯಾಯಾಲಯದ ಪ್ರಕರಣಗಳು ಕೊನೆಗೊಳ್ಳುವಾದಕ್ಕೆ ವಾರಾಹಿ ಯಂತ್ರ ವರಾಹಿ ಮಾತೃಕೆಗಳಲ್ಲಿ ಒಂದಾಗಿದೆ, ಹಿಂದೂ ಪುರಾಣಗಳಲ್ಲಿ ಉಗ್ರ ದೇವತೆಗಳ ಗುಂಪು. ರಕ್ಷಣೆ, ಶಕ್ತಿ ಮತ್ತು ಸಮೃದ್ಧಿಗೆ ಸಂಬಂಧಿಸಿದ ಪ್ರಬಲ ದೇವತೆ ಎಂದು ಪರಿಗಣಿಸಲಾಗಿದೆ.ಇದನ್ನು ಸಾಮಾನ್ಯವಾಗಿ ತಾಮ್ರದ ಲೋಹದಿಂದ ತಯಾರಿಸಲಾಗಿದೆ.  ಶ್ರೀಗಂಧದ ಪೇಸ್ಟ್ , ಅರಿಶಿನ ಪುಡಿಯಂತಹ ವಿವಿಧ 108 ಗಿಡಮೂಲಿಕೆ ವಸ್ತುಗಳನ್ನು ಬಳಸಿ ಲೇಪನ ಮಾಡಿ ಪ್ರಾಣ ಪ್ರತಿಷ್ಟಾಪನೆ ಮತ್ತು ಜೀವಕಳೆ ನೀಡಲಾಗಿದೆ. ವರಾಹಿಯ ಭಕ್ತರು ವರಾಹಿ ಯಂತ್ರವನ್ನು…

Read More