Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಗೆ ಇದೀಗ ಹೈಕೋರ್ಟ್ ಮತ್ತೊಂದು ಬಿಗ್ ರಿಲೀಫ್ ನೀಡಿದೆ. ದರ್ಶನ್ ಎಲ್ಲಿಂದ ಬಿಡುಗಡೆಗೆ ಮುನ್ನ ಹೈಕೋರ್ಟ್ ಹಲವು ಶರತ್ತುಗಳನ್ನು ವಿಧಿಸಿತ್ತು ಆದರೆ ಇದೀಗ ಹೈಕೋರ್ಟ್ ಈ ಒಂದು ವಿಚಾರಗಳಲ್ಲಿ ಹಲವು ಶರತುಗಳನ್ನು ಸರಿಸಿ ಹೈಕೋರ್ಟ್ ದರ್ಶನ್ ಅವರಿಗೆ ರಿಲೀಫ್ ನೀಡಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಜಾಮೀನು ಷರತ್ತು ಗಳನ್ನು ಇದೀಗ ಹೈಕೋರ್ಟ್ ಸಡಿಲಿಸಿದೆ . ಕೋರ್ಟ್ ಅನುಮತಿ ಇಲ್ಲದೆ ನಟ ದರ್ಶನ್ ವಿದೇಶಕ್ಕೆ ತೆರಳುವಂತಿಲ್ಲ ಎಂದು ಹೇಳಿ ಹಲವು ಶರತ್ತುಗಳನ್ನು ಇದೀಗ ಹೈಕೋರ್ಟ್ ಸಲ್ಲಿಸಿದೆ ಈ ಮೂಲಕ ನಟ ದರ್ಶನ್ ಅವರಿಗೆ ಈ ಒಂದು ಪ್ರಕರಣದಲ್ಲಿ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ ಶಿವಸೇನೆ ಮತ್ತು ಎಂಇಎಸ್ ಪುಂಡರಿಂದ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಸೇನೆ ವಿರುದ್ಧ ಇದೀಗ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಶಿವಸೇನೆ ಮತ್ತು ಎಂಇಎಸ್ ವಿರುದ್ಧ ಕನ್ನಡಪ್ರ ಸಂಘಟನೆಗಳು ಸಿಡಿದೆದ್ದಿದ್ದು, ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಈ ಒಂದು ಸಭೆಯಲ್ಲಿ ಕರ್ನಾಟಕ ಬಂದ್ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರಾಜ್ಯದ ಕನ್ನಡ ಪರ ಸಂಘಟನೆಗಳ ಸಭೆ ಕರೆದ ವಾಟಾಳ್ ನಾಗರಾಜ್, ಕರವೇ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ ಬಣ, ಕನ್ನಡ ಜಾಗೃತಿ ಮಂಜುನಾಥ್ ಕೆ. ಗಿರೀಶ್ ಗೌಡ ಕನ್ನಡ ಸೇನೆ ಅಧ್ಯಕ್ಷ ಕುಮಾರ ಸೇರಿ ವಿವಿಧ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ಹೋರಾಟದ ರೂಪರೇಷಗಳ ಬಗ್ಗೆ ನಿರ್ಧರಿಸಲಾಗುತ್ತದೆ.
ಬೆಂಗಳೂರು : ಆತ ಬೆಂಗಳೂರಿನ ಪ್ರತಿಷ್ಠಿತ ಉದ್ಯಮಿ, ಮನೆಯಲ್ಲಿ ಕುಟುಂಬದ ಸಮೇತ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳಕ್ಕೆ ತೆರಳಿದ್ದಾನೆ. ಆದರೆ ಇತ್ತ ಮನೆಯಲ್ಲಿ ಕೆಲಸಕ್ಕೆಂದು ಇದ್ದ ನೇಪಾಳಿ ದಂಪತಿಗಳಿಬ್ಬರು ಒಂದು ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಉದ್ಯಮಿ ಪ್ರಶಾಂತ್ ಮನೆಯಲ್ಲಿ ಈ ಒಂದು ದರೋಡೆ ನಡೆದಿದ್ದು, ಪ್ರಶಾಂತವರು ಕುಟುಂಬದ ಸಮೇತ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಕೆಲಸಕ್ಕೆ ಇದ್ದಂತಹ ನೇಪಾಳ ಮೂಲದ ದಂಪತಿಗಳಿಬ್ಬರು 2 ಕೆಜಿ ಚಿನ್ನ ಹಾಗೂ 50 ಕೆಜಿ ಬೆಳ್ಳಿ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 22ರಂದು ಅವರು ಪ್ರಯಾಗ್ ರಾಜ್ ಗೆ ತೆರಳಿದ್ದ ವೇಳೆ ಮನೆಯಲ್ಲಿದ್ದ ಎರಡು ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಕದ್ದು ನೇಪಾಳ ಮೂಲದ ದಂಪತಿ ಪರಾರಿಯಾಗಿದ್ದಾರೆ. ಪ್ರಶಾಂತ್ ಅವರ ದೂರು ಆಧರಿಸಿ ಜಯನಗರ ಠಾಣೆಯಲ್ಲಿ…
ಚಿತ್ರದುರ್ಗ : ಉರುಸ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಓರ್ವನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ಈ ಬೆಳೆ ಗಲಾಟೆಯನ್ನು ತಡೆಯಲು ಹೋಗಿದ್ದ ಇಬ್ಬರು ಕಾನ್ಸ್ಟೇಬಲ್ ಸೇರಿದಂತೆ ಒಟ್ಟು ನಾಲ್ವರಿಗೆ ಈ ಒಂದು ಘರ್ಷಣೆಯಲ್ಲಿ ಗಾಯಗಳಾಗಿರುವ ಘಟನೆ ವರದಿಯಾಗಿದೆ. ದೊಡ್ಡೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಗರಿಬಿಸಾವೇ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದೊಡ್ಡೇರಿ ಗ್ರಾಮದಿಂದ ಚಳ್ಳಕೆರೆ ಪಟ್ಟಣದವರೆಗೆ ಈ ಒಂದು ಮೆರವಣಿಗೆ ನಡೆದಿದೆ. ಮೆರವಣಿಗೆ ಸಂದರ್ಭದಲ್ಲಿ ನಿನ್ನೆ ರಾತ್ರಿ ಉರುಸ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಮೆರವಣಿಗೆ ವೇಳೆ ಯುವಕರಿಗೆ ಬ್ಲೆಡ್ ನಿಂದ ಇರಿದು ಹಲ್ಲೆ ನಡೆಸಲಾಗಿದೆ. ಗಾಯಾಳು ಅಜ್ಗರ್ ಗೆ ಚಿತ್ರದುರ್ಗದ ಜಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಗಾಯಾಳು ಮುಸ್ತಫಾ ಚಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘರ್ಷಣೆ ತಡೆಯಲು ಹೋದಾಗ…
ತುಮಕೂರು : ಇತ್ತೀಚಿಗೆ ಯುವಜನತೆ ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೆರೆಗೆ ಸಾಫ್ಟ್ವೇರ್ ಎಂಜಿನಿಯರ್ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಸುಮಾ ಎಂದು ಗುರುತಿಸಲಾಗಿದೆ. ಸುಮಾ ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಆಗಿದ್ದಾಳೆ. ಬಸ್ ಬಂದು ಸುಮಾರು ಹೊತ್ತು ಕಳೆದರೂ ಮಗಳು ಇನ್ನು ಬರಲಿಲ್ಲ ಎಂದು ಪೋಷಕರು ಗಾಬರಿಗೆ ಒಳಗಾಗಿದ್ದಾರೆ.ಈ ವೇಳೆ ಹುಡುಕಾಟ ನಡೆಸಿದಾಗ ಗ್ರಾಮದ ಕೆರೆಯ ಬಳಿ ಸುಮಾಳ ಬ್ಯಾಗ್ ಮೊಬೈಲ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ. ಸದ್ಯ ಸುಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆ ದೊಡ್ಡಕೆರೆಯಲ್ಲಿ…
ದಕ್ಷಿಣಕನ್ನಡ : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಳೆದ ಫೆಬ್ರವರಿ 26ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಖಾಸಗಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ತಿಳಿದುಬಂದಿದೆ.ಕಳೆದ ಫೆಬ್ರವರಿ 26 ರಂದು ರಾತ್ರಿ 7 ಗಂಟೆ ಸುಮಾರಿಗೆ ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ ಮೊದಲು ಹೇಳುತ್ತಿದ್ದಳು ಎನ್ನಲಾಗಿದೆ. ರಾತ್ರಿ 7.10ರಿಂದ 7.30ರ ಅವಧಿಯಲ್ಲಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ತಾನೆ ಇಡ್ಲಿಯಲ್ಲಿ ಆರೋಗ್ಯದ ಮೇಲೆ ಮರಣಾಂತಿಕ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹುಣಿಸಿ ರಾಜ್ಯ ಸರ್ಕಾರ ಆದೇಶ ನೀಡಿತು ಇದೀಗ ಟ್ಯಾಟು ಹಾಕಿಸಿಕೊಳ್ಳುವುದರಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಆಗುವ ಆತಂಕದಿಂದ ಇದೀಗ ರಾಜ್ಯ ಸರ್ಕಾರ ರಾಜ್ಯದಲ್ಲಿ ಟ್ಯಾಟೂ ನಿಷೇಧ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಟ್ಯಾಟು ಪ್ರಿಯರಿಗೆ ಇದೀಗ ರಾಣಿ ಸರಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಟ್ಯಾಟೂನಿಂದ ಎಚ್ಐವಿ ಚರ್ಮದ ಕ್ಯಾನ್ಸರ್ ಆಗುವ ಸಂಭವವಿದೆ ಎನ್ನಲಾಗಿದ್ದು, ಟ್ಯಾಟು ಪ್ರಿಯರಿಗೂ ಆರೋಗ್ಯ ಇಲಾಖೆ ಇದೀಗ ಶಾಕ್ ನೀಡಿದೆ. ಟ್ಯಾಟೂ ಕಡಿವಾಣಕ್ಕೆ ಇದೀಗ ರಾಜ್ಯ ಸರ್ಕಾರ ಕಾನೂನು ಜಾರಿ ಮಾಡಲು ಚಿಂತೆನೇ ನಡೆಸಿದೆ. ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಇದ್ದಾಗ ಮುಂದಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಟ್ಯಾಟುಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೊಸ ಕಾನೂನು ತರಲು ಆರೋಗ್ಯ ಇಲಾಖೆ ಇದೀಗ ಮುಂದಾಗಿದ್ದು, ಟ್ಯಾಟೂ ಕಡಿವಾಣಕ್ಕೆ ಕಾನೂನು ತರಲು ಸರ್ಕಾರಕ್ಕೆ…
ಯಾದಗಿರಿ : ಕುಡಿದ ಮತ್ತಿನಲ್ಲಿ ರಾಂಗ್ ಸೈಡ್ ಬಂದು ಸಾರಿಗೆ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾಳನೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ತಾಳಿಕೋಟೆಯಿಂದ ಹುಣಸಗಿ ಮಾರ್ಗವಾಗಿ ಬಸ್ ಶಹಾಪುರಕ್ಕೆ ಹೊರಟಿತ್ತು. ಪ್ರಯಾಣಿಕರು ಇಳಿಯುತ್ತಿದ್ದರಿಂದ ಮಾಳನೂರಿನಲ್ಲಿ ಬಸ್ ಅನ್ನು ನಿಲ್ಲಿಸಲಾಗಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ಸವಾರ ಮದನಪ್ಪ ರಾಂಗ್ ಸೈಡ್ ಬಂದಿದ್ದಾನೆ. ಅಶ್ಲೀಲ ಪದಗಳಿಂದ ನಿಂದಿಸಿ ಕಂಡಕ್ಟರ್ ಕಪಾಳಕ್ಕೆ ಬೈಕ್ ಸವಾರ ಹೊಡೆದಿದ್ದಾನೆ. ಗ್ರಾಮದ ಮದನಪ್ಪ ಎಂಬಾತನಿಂದ ಸಾರಿಗೆ ಸಿಬ್ಬಂದಿಗಳ ಮೇಲೆ ಇದೀಗ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಚಾಲಕ ಮತ್ತು ಕಂಡಕ್ಟರ್ ಗೆ ಹುಣಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆರೋಪಿಯ ಮದನಪ್ಪ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೊಪ್ಪಳ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ರೆಸಾರ್ಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನುಕೊಪ್ಪಳ ನಿವಾಸಿ ಶಾಮಿಯಾನ ಕೆಲಸ ಮಾಡುತ್ತಿದ್ದ ಹಳೇಬಂಡಿ ಹರ್ಲಾಪುರದ ವಸೀಮ್ (28) ಎಂದು ತಿಳಿದುಬಂದಿದೆ. ಕಳೆದ ಬುಧವಾರ ವಸೀಂ ವೈಯಕ್ತಿಕ ಕೆಲಸಕ್ಕೆ ಪಟ್ಟಣಕ್ಕೆ ಆಗಮಿಸಿ ಕಲಕೇರಿ ರಸ್ತೆಯಲ್ಲಿನ ಜಂಗಲ್ ರೆಸಾರ್ಟ್ ನಲ್ಲಿ ರೂಂ ಪಡೆದ್ದಾನೆ. ಜೀವನದಲ್ಲಿ ಜಿಗುಪ್ಸೆ ಕಾರಣ ಬಟ್ಟೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಪ್ರೀತಿಸಿ ಮದುವೆಯಾಗಿದ್ದ ಮಗಳ ನಡೆಗೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳು ಹಾಗು ಅಳಿಯನಿಗೆ ಚಾಕು ಇರಿದು ಹತ್ಯೆಗೆ ಯತ್ನಾಸಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂದು ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ಆದರೆ, ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಗಳು ಹೆಸರು ಹೇಳದೇ ಇದ್ದುದಕ್ಕೆ ಹತ್ಯೆಗೆ ಯತ್ನಿಸಿದ್ದಾನೆ. ತಡೆಯಲು ಬಂದ ಅಳಿಯನಿಗೂ ಎದೆ ಹಾಗೂ ಕೈಗೆ ಚಾಕುವಿನಿಂದ ಇರಿದಿದ್ದಾನೆ.ನಂತರ ಅಲ್ಲಿಂದ ತಪ್ಪಿಸಿಕೊಂಡು ತನ್ನೂರಿಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಲ್ಲೆಗೆ ಒಳಗಾದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಮೂವರೂ ಬದುಕುಳಿದಿದ್ದು, ಇರಿತಕ್ಕೊಳಗಾದ ಇಬ್ಬರೂ…












