Subscribe to Updates
Get the latest creative news from FooBar about art, design and business.
Author: kannadanewsnow05
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ತಾವರೆ ಮಾಲೆ 108 ಮಣಿಗಳು : ಈ ಕಮಲದ ಮಣಿಗಳು ಪ್ರಕೃತಿಯ ಅದ್ಭುತ ಕೊಡುಗೆಗಳಲ್ಲಿ ಒಂದಾಗಿದೆ, ಈ ಕಮಲದ ಬೀಜಗಳನ್ನು ಕುಬೇರ ಬೀಜಗಳು ಎಂದು ಕರೆಯಲಾಗುತ್ತದೆ. ಈ ಕಮಲದ ಬೀಜಗಳಲ್ಲಿ ಮಹಾಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂಬ ಪ್ರತೀತಿ ಇದೆ. ತಾವರೆ ಮಾಲೆಯನ್ನು ಕಮಲ ಕಟ್ಟ ಮಾಲಾ, ಪದ್ಮ ಮಾಲಾ, ಲಕ್ಷ್ಮೀದೇವಿ ಅನುಗ್ರಹ ಮಾಲಾ ಎಂದು ಕರೆಯಲಾಗುತ್ತದೆ. ಕೈಯಲ್ಲಿ ಹಣನಿಲ್ಲದೆ ಇರುವವರು ತಾವರೆ ಮಾಲೆಯೊಂದಿಗೆ ಜಪಮಾಡಿ ಅದನ್ನು ಧರಿಸುವುದರಿಂದ ಸಂಪತ್ತು, ಧನ ಅಭಿವೃದ್ಧಿ ಪಡೆಯಬಹುದು.ಕಮಲದ ಮಣಿ ಧನಾತ್ಮಕ ಶಕ್ತಿಯನ್ನು ಹೊಂದಿದೆ. ಕಮಲದ ಮಣಿ ಧನವನ್ನು ಆಕರ್ಷಿಸುತ್ತದೆ.ತಾವರೆ ಮಾಲೆಯನ್ನು ಧರಿಸುವವರು ಮಾನಸಿಕ ಸಂಯಮ, ಏಕಾಗ್ರತೆ ಮತ್ತು ಒಳ್ಳೆ ವಿವೇಚನ ಶಕ್ತಿ, ಸಾತ್ವಿಕ ಗುಣಗಳನ್ನು ಹೊಂದಿರುತ್ತಾರೆ. ಮಾಲೆಯನ್ನು ಧರಿಸುವುದರಿಂದ ದೇಹದಲ್ಲಿ ವಿದ್ಯುತ್ ಶಕ್ತಿಯು ನೆಲೆಗೊಳ್ಳುತ್ತದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆಧ್ಯಾತ್ಮಿಕ ಚಿಂತಕರು ಪ್ರಧಾನ್…
ಯಾದಗಿರಿ : ವೇಗವಾಗಿ ಬಂದಂತಹ ಕಾರೊಂದು ಹಿಂದಿನಿಂದ ಬೈಕಿಗೆ ಗುದ್ದಿದ್ದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಮದ್ರಕಿ ಎಂಬಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರನ್ನು ಅಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಹಳ್ಳಪ್ಪ ದೊಡ್ಡನಂದಪ್ಪ, ಹಾಗೂ ಮಲ್ಲಯ್ಯ ಹನುಮಂತ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್ ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ. ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಪದವಿ ಓದುತ್ತಿರುವ ಯುವತಿ ಒಬ್ಬಳು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ. ಮನೆಯ ಟೆರೆಸ್ ನಲ್ಲಿ ಪ್ರಿಯಾಂಕ (19) ಎನ್ನುವ ಯುವತಿ ನೇಣಿಗೆ ಶರಣಾಗಿದ್ದಾಳೆ. ಎಂ ಇ ಎಸ್ ಕಾಲೇಜಿನಲ್ಲಿ ಪ್ರಿಯಾಂಕ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದಳು. ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾಜಿನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ತಲಾ ಒಂದು ವಾಹನಕ್ಕೆ 50 ಸಾವಿರ ರೂ ಪಡೆದು, ನಕಲಿ ಬೋನ್ ಪೈಡ್ ನೀಡಿ ಸರ್ಕಾರಕ್ಕೆ ನೂರಾರು ಕೋಟಿ ವಂಚನೆ ಎಸಗಿದ್ದ ಆರೋಪದ ಮೇಲೆ, ತುಮಕೂರಿನ ಆರ್ ಟಿ ಓ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ಮುಂದುವರೆಸಿದ್ದಾರೆ. ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ನಿರಂತರವಾಗಿ ಲೋಕಾಯುಕ್ತ ಅಧಿಕಾರಿಗಳು ಆರ್ಟಿಓ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಆರ್ಟಿಒ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ಮುಂದುವರೆಸಿದ್ದಾರೆ. ಕಚೇರಿಯಲ್ಲಿನ ಸುಮಾರು 2500 ಫೈಲ್ ಗಳ ಹುಡುಕಾಟಕ್ಕೆ ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ. ನಕಲಿ ಬೋನ್ ಫೈಡ್ ಸರ್ಟಿಫಿಕೇಟ್ ಸೃಷ್ಟಿಸಿ ವಂಚನೆ ಎಸಗುತ್ತಿದ್ದರು. ದಾಳಿಯ ವೇಳೆ ಸರ್ಕಾರಕ್ಕೆ ನೂರಾರು ಕೋಟಿ ತೆರಿಗೆ ವಂಚನೆ ಬೆಳಕಿಗೆ ಬಂದಿದೆ. ಬ್ರೋಕರ್, ಏಜೆಂಟ್ ಗಳು, ಡೀಲರ್ಗಳು ಹಾಗೂ ಡ್ರೈವಿಂಗ್ ಸ್ಕೂಲ್ ಮೂಲಕ ವಂಚನೆ ಎಸಲಾಗಿದೆ. ಲಂಚ ಪಡೆದು ನಕಲಿ ಬೋನ್ ಪೈಡ್ ಸರ್ಟಿಫಿಕೇಟ್ ಸೃಷ್ಟಿಸಿ ವಂಚಿಸುತ್ತಿದ್ದರು. ಒಂದು ನಕಲಿ ಬೋನ್ ಪೈಡ್…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಪ್ರಬಲವಾಗಿ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾ.ವಿಶ್ವಜೀತ್ ಶೆಟ್ಟಿ ಅವರು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಆರು ಜನ ಪ್ರತ್ಯಕ್ಷ ಸಾಕ್ಷಿಗಳೆಂದು ಪ್ರಾಸಿಕ್ಯೂಷನ್ ಅವರು ಹೇಳಿದ್ದಾರೆ. ಸಾಕ್ಷಿ ನರೇಂದ್ರ ಸಿಂಗ್, ಮಲ್ಲಿಕಾರ್ಜುನ್, ವಿಜಯ್ ಕುಮಾರ್ ಸೇರಿದಂತೆ ಆರು ಜನರು ಪ್ರತ್ಯಕ್ಷದರ್ಶಿಗಳೆಂದು ಹೆಸರಿಸಿದ್ದಾರೆ. ನರೇಂದ್ರ ಸಿಂಗ್ ನ ಸಿಆರ್ಪಿಸಿ 164 ಹೇಳಿಕೆಯನ್ನು ದಾಖಲಿಸಿದ್ದಾರೆ. ಈತ ರೇಣುಕಾ ಸ್ವಾಮಿ ಮೇಲೆ ಹಲ್ಲೆಯ ಬಗ್ಗೆ ಏನನ್ನು ಹೇಳಿಲ್ಲ ಎಂದು ವಾದಿಸಿದರು. ಸಿಆರ್ಪಿಸಿ 164 ಹೇಳಿಕೆಗೆ 161 ಹೇಳಿಕೆಗಿಂತ ಹೆಚ್ಚಿನ ಮೌಲ್ಯವಿದೆ. ಹೀಗಾಗಿ ಅದನ್ನು ಓದಿದಾಗ ಹಲ್ಲೆಯನ್ನು ನೋಡಿದ್ದಾಗಿ ಹೇಳಿಲ್ಲ. ಯಾವುದೇ ಆರೋಪಿಗಳನ್ನು ನೋಡಿರುವುದಾಗಿಯೂ…
ಬೆಂಗಳೂರು : ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಒಂದು ತಂಡ ಈಗಾಗಲೇ ಬೀದರ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಿವೈ ವಿಜಯೆಂದ್ರ ವಿರುದ್ಧ ಹೊಸದೊಂದು ಬಾಂಬ್ ಸಿಡಿಸಿದ್ದು, ಡಿಕೆ ಶಿವಕುಮಾರ್ ಬಳಿಗೆ ಹೋಗಿ ವಿಜಯೇಂದ್ರ 20 ಪತ್ರಕ್ಕೆ ಸಹಿ ಹಾಕಿಸಿಕೊಂಡು ಬಂದಿರುವ ವಿಡಿಯೋ ನನ್ನ ಬಳಿ ಇದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ವಿಜಯಪುರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಆ ವಿಡಿಯೋ ನನ್ನ ಬಳಿ ಇದೆ. ನಾನು ಕಾಂಗ್ರೆಸ್ ಜೊತೆಗೆ ಕೈ ಜೋಡಿಸುವ ಕೆಲಸ ಮಾಡಲ್ಲ. ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ಕೆಲವರೆಲ್ಲ ರಾತ್ರಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾನು ಯಾರ ಮನೆಗೆ ಹೋಗಿ ಕೆಲಸ ಮಾಡಿಕೊಡಿ ಎಂದು ಕೇಳುವ ವ್ಯಕ್ತಿಯಲ್ಲ. ಅದಕ್ಕೆ ನನ್ನ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಮೂತ್ರ ವಿಸರ್ಜನೆ ಮಾಡಲು ತೆರಳಿದ್ದ ವೇಳೆ, ತುಂಡಾದಂತಹ ಸರ್ವಿಸ್ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ನಡೆದಿದೆ. ಮೃತ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿ. ಬೋರ್ವೆಲ್ ಅಳವಡಿಸಲು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದ್ದು, ವೈರ್ ತುಂಡಾಗಿ ಶಾಲೆಯ ಶೌಚಾಲಯ ಒಳಗೆ ಬಿದ್ದಿತ್ತು. ಆದ್ರೆ, ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಾನ್ವಿ, ಆ ತುಂಡಾಗಿ ಸರ್ವಿಸ್ ವಿದ್ಯುತ್ ವೈರ್ ತಗುಲಿ ಸಾವನ್ನಪ್ಪಿದ್ದಾಳೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ಎಂದಿನಂತೆ ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜನೆಗೆ ಶಾಲೆಯ ಶೌಚಾಲಯದೊಳಗೆ ಹೋಗಿದ್ದಾಳೆ. ಈ ವೇಳೆ ಹೊರಗಡೆ ಶೌಚಾಲಯದ ಬಳಿಯೇ ಬೋರ್ವೆಲ್ಗೆ ಹಾಕಿದ್ದ ಅನಧಿಕೃತ ವಿದ್ಯುತ್ ಸಂಪರ್ಕ ಮಾಡಲಾಗಿದ್ದ ವೈರ್ ಶೌಚಾಲಯದೊಳಗೆ ಬಿದ್ದಿದೆ. ಅದನ್ನು ಗಮನಿಸದ ಮಗು ಹಾಗೆ ಒಳ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ದರ್ಶನ್ ಪರ ವಕೀಲ ಸಿವಿ ನಾಗೇಶ್ ಪ್ರಬಲವಾಗಿ ವಾದ ಮಂಡಿಸಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಸಲ್ಲಿಸಲಾಗಿರುವ ಫೋಟೋದಲ್ಲಿ ಪ್ಯಾಂಟ್ ಹಾಗೂ ಟಿ-ಶರ್ಟ್ ಗಳನ್ನೇ ಪೊಲೀಸರು ತಿರುಚಿದ್ದಾರೆ. ರಿಟ್ರಿವ್ ಮಾಡಿದ ಫೋಟೋಗೆ ಬಟ್ಟೆ ಮ್ಯಾಚ್ ಮಾಡಲು ಯತ್ನಿಸಿದ್ದಾರೆ ಎಂದು ವಾದಿಸಿದರು. ಪೊಲೀಸರು ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸುವ ವೇಳೆ ಆರೋಪಿಯೊಬ್ಬನ ವೈಟ್ ಶರ್ಟ್, ಬ್ಲೂ ಜೀನ್ಸ್ ಹಾಕಿರುವ ಫೋಟೋ ಇದೆ. ಈ ಬಟ್ಟೆಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ.ಪ್ಯಾಂಟನ್ನೇ ಬದಲಿಸಿದ್ದಾರೆ ಎಂದರೆ ತಿರುಚಿರುವುದು ಬಹಳ ಚೆನ್ನಾಗಿದೆ. ಎಂದು ಹೆಚ್ಚುವರಿ ಆರೋಪ ಪಟ್ಟಿಯಲ್ಲಿ ಸಲ್ಲಿಸಿರುವ ಫೋಟೋ ತೋರಿಸಿ ರೇಣುಕಾ ಸ್ವಾಮಿಯನ್ನು ಕರೆತಂದ ಆರೋಪಿಯ ಫೋಟೋ ತೋರಿಸಿ ವಾದ ಮಂಡಿಸಿದರು. ಕೃತ್ಯದ ದಿನ ಬಟ್ಟೆಗಳನ್ನು ತೋರಿಸುತ್ತೇನೆ ಎಂದು ಆರೋಪಿ ಹೇಳಿದ್ದ ಜೂನ್ 15ರಂದು ಪೊಲೀಸರು ರಿಕವರಿ…
BREAKING : ‘ನಗ್ನ’ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ : ಬೆಂಗಳೂರಲ್ಲಿ ಖಾಸಗಿ ಚಾನೆಲ್ ‘ಕ್ಯಾಮರಾ ಮ್ಯಾನ್’ ಆತ್ಮಹತ್ಯೆ!
ಬೆಂಗಳೂರು : ಆಪ್ ಮೂಲಕ ಸಾಲ ಪಡೆದಿದ್ದ ವ್ಯಕ್ತಿಗೆ ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ ಚಿತ್ರ ವೈರಲ್ ಮಾಡುವುದಾಗಿ ಕರೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು. ಕಿರುಕುಳದಿಂದ ಬೇಸತ್ತು ಖಾಸಗಿ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಮೆರಾ ಮ್ಯಾನ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಿರಣ್ (32) ಎಂದು ತಿಳಿದುಬಂದಿದೆ. ಆಪ್ ಒಂದರ ಮೂಲಕ ಕಿರಣ್ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ ಚಿತ್ರ ವೈರಲ್ ಮಾಡುವುದಾಗಿ ಕರೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು. ಸಾಲದ ಹಣ ವಾಪಸ್ ನೀಡದಿದ್ದರೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕಿರಣ್ ಫೋಟೋ ಎಡಿಟ್ ಮಾಡಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಕಿರಣ್ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಅವರ ಮೃತ ದೇಹವನ್ನು ನೆಲಮಂಗಲದ ಆಸ್ಪತ್ರೆಗೆ…














