Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ನಿಯಂತ್ರಣ ತಪ್ಪಿ ಕಾರು ಒಂದು ಸೇತುವೆ ಮೇಲಿಂದ ಕೃಷ್ಣಾ ನದಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನಪ್ಪಿದ್ದರೆ, ಉಳಿದ ಮೂವರಿಗೆ ಗಾಯಗಳಾಗಿರುವ ಘಟನೆ ಕೊಲ್ಹಾಪುರ-ಸಾಂಗ್ಲಿ ಹೆದ್ದಾರಿಯ ಅಂಕಲಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಈ ಒಂದು ಅಪಘಾತದಲ್ಲಿ ಮೃತಪಟ್ಟವರನ್ನು ಪ್ರಸಾದ್ ಭಾಲಚಂದ್ರ ಖೇಡೇಕರ್ (35) ಅವರ ಪತ್ನಿ ಪ್ರೇರಣಾ ಪ್ರಸಾದ್ ಖೇಡೇಕರ್ ಹಾಗೂ ವೈಷ್ಣವಿ, ಸಂತೋಷ್ ನಾರ್ವೇಕರ್ ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಉಳಿದವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸಮರ್ಜಿತ್ ಪ್ರಸಾದ ಖೇಡೇಕರ್ (7) ವರದ ಸಂತೋಷ್ ನಾರ್ವೇಕರ್ (19) ಮತ್ತು ಸಾಕ್ಷಿ ಸಂತೋಷ್ ನಾರ್ವೇಕರ್ (42) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜೈಸಿಂಗ್ ಪುರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯನ್ನು, ಯುವತಿಯ ಮನೆಯ ಸುಮಾರು 20 ಜನರು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಚಿತ್ರದುರ್ಗದ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ 6 ಆರೋಪಿಗಳ ಬಂಧನವಾಗಿದೆ. ಕಾವ್ಯ, ದಿವ್ಯ, ಶಂಕರಮ್ಮ, ಬಸವರಾಜ,ಪ್ರಸನ್ನ ಮತ್ತು ಹರ್ಷ ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಭರಮಸಾಗರ ಠಾಣೆಯ ಪೊಲೀಸರಿಂದ ಇದೀಗ 6 ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆಯಾದ ಮಂಜುನಾಥ ತಂದೆ ಚಂದ್ರಪ್ಪ ಅವರು ದೂರು ನೀಡಿದ್ದರು. ಜಗದೀಶ್ ಸೇರಿದಂತೆ 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 7 ರಂದು ಯುವತಿಯನ್ನು ಕರೆದುಕೊಂಡು ಹೋಗಿ ಮಂಜುನಾಥ್ ವಿವಾಹವಾಗಿದ್ದಾನೆ. ಅಕ್ಟೋಬರ್ 7ರಂದು ಯುವತಿ ನಾಪತ್ತೆ ಆಗಿರುವ ಕುರಿತಂತೆ ಪೋಷಕರು ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ…
ಮಂಡ್ಯ : ವಕ್ಫ್ ವಿರುದ್ಧ ಬಿಜೆಪಿಯ ಇನ್ನೊಂದು ತಂಡವು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದೆ. ಈ ಒಂದು ಪ್ರತಿಭಟನೆ ನೇತೃತ್ವವನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದು, ಈ ತಂಡದಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಸಿರಿದಂತೆ ಬಿಜೆಪಿಯ ಅಸಮಾಧಾನದ ಹಲವು ಭಾಗಿಯಾಗಿದ್ದಾರೆ. ಪ್ರತಿಭಟನೆಯ ವೇಳೆ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಕೂಡ ವಾಗ್ದಾಳಿ ನಟಿಸಿದ್ದಾರೆ. ಇದೆ ವೇಳೆ ಮಂಡ್ಯದಲ್ಲಿ ಬಿಜೆಪಿಯ ಮುಖಂಡರೊಬ್ಬರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರದಲ್ಲಿ ರಕ್ತದಲ್ಲಿ ಸಹಿ ಮಾಡುವ ಮೂಲಕ ಶಾಸಕ ಯತ್ನಾಳ ಹೇಳಿಕೆಗೆ ಕಡಿವಾಣ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮಂಡ್ಯದ ಅಂಚೆ ಕಚೇರಿ ಮೂಲಕ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಶಾಸಕ ಯತ್ನಾಳ್ ಮಾತಿನಿಂದ ಪಕ್ಷಕ್ಕೆ ಬಹಳ ಡ್ಯಾಮೇಜ್ ಆಗುತ್ತಿದೆ ಎಂದು ಪತ್ರದ ಮೂಲಕ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಪತ್ರ ಬರೆದಿದ್ದಾರೆ. ಬಸನಗೌಡ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿಂದೆ ಕಂಬಾಳು ಗೊಲ್ಲರಹಟ್ಟಿ ಬಳಿ ಮೂರು ಚಿರತೆಗಳು ಕಾಣಿಸಿಕೊಂಡಿದ್ದವು. ಮೂರು ಚಿರತೆಗಳನ್ನು ಸೆರೆ ಹಿಡಿದು ಅರಣ್ಯ ಅಧಿಕಾರಿಗಳು ಬನ್ನೆರುಘಟ್ಟ ಉದ್ಯಾನವನಕ್ಕೆ ಬಿಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕಂಬಾಳು ಗೊಲ್ಲರಹಟ್ಟಿ ಗ್ರಾಮದಲ್ಲಿ ಕರೆಮ್ಮ ಎನ್ನುವ ಮಹಿಳೆಯನ್ನು ಚಿರತೆ ಬಳಿ ಪಡೆದಿತ್ತು. ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಅರಣ್ಯ ಇಲಾಖೆ 2 ಚಿರತೆಗಳನ್ನು ಸೆರೆ ಹಿಡಿದಿತ್ತು. ಈ ಬೆನ್ನಲ್ಲೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲಬುರ್ಗಿ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಸುರಿದು ಒಂದು ಇಡಿ ಕುಟುಂಬವನ್ನು ಸಾಮೂಹಿಕ ಹತ್ಯೆಗೆ ಯತ್ನಿಸಿರುವ ಘಟನೆ ಕಲ್ಬುರ್ಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಕುಟುಂಬದ ಸುಮಾರು 6 ಜನರು ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು 4 ಜಮೀನು ವ್ಯಾಜ್ಯವಾಗಿ ಸಾಮೂಹಿಕ ಹತ್ಯೆಗೆ ಯತ್ನಿಸಲಾಗಿದೆ. ಶಿವಲಿಂಗಪ್ಪ ಕರಿಕಲ್ ಎಂಬಾತನಿಂದ ಗುಂಡೆರಾವ್ ಎನ್ನುವವರ ಕುಟುಂಬದ ಹತ್ಯೆಗೆ ಯತ್ನಿಸಲಾಗಿದೆ. ಬಟ್ಟೆಯ ಉಂಡೆಗಳನ್ನು ಪೆಟ್ರೋಲ್ ನಲ್ಲಿ ತೊಯಿಸಿ ಮನೆಗೆ ನುಗ್ಗಿ ಕೀಟನಾಶಕದ ಸ್ಪ್ರೇಯಿಂದ ಪೆಟ್ರೋಲ್ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ್ದಾನೆ. ಸಾಮೂಹಿಕ ಸಾಯಿಸಬೇಕು ಎಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಶಿವಲಿಂಗಪ್ಪ ಎಂಬಾತ ಗುಂಡೆರಾವ್ ಎನ್ನುವವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಯತ್ನ ಮಾಡಿದ್ದಾರೆ. ಗ್ರಾಮಸ್ಥರ ಒಂದು ಜಾಗೃತೆಯಿಂದ ಇಡಿ ಕುಟುಂಬ ಇದೀಗ ಪ್ರಾಣಾಪಾಯದಿಂದ ಪಾರಾಗಿದೆ. ಶಿವಲಿಂಗಪ್ಪ 4 ಎಕರೆ…
ಬೆಂಗಳೂರು : ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಪಾದಲ್ಲಿ ಸೋನಿಯಾ (24) ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಬಾಗಲಕುಂಟೆಯಲ್ಲಿ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸೋನಿಯಾ ಮೂಲತಃ ದೆಹಲಿಯವಳು ಎಂದು ತಿಳಿದುಬಂದಿದೆ.ಸೋನಿಯಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಕುರಿತಂತೆ ತನಿಖೆ ವೇಳೆ ತಿಳಿದುಬರಲಿದೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಒಂದು ಪ್ರಕಾರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ. ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ.
ದಕ್ಷಿಣಕನ್ನಡ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಬಾಲಕಿಯ ಮೇಲೆ ಸಂಬಂಧಿಕ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗುವುದಿಲ್ಲ ಎಂದಾಗ ಮನನೊಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬ ಗ್ರಾಮದಲ್ಲಿ ನವೆಂಬರ್ 20ರಂದು ವಿಷ ಸೇವಿಸಿ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇದೀಗ ಬಾಲಕಿ ಸಾವನ್ನಪ್ಪಿದ್ದಾಳೆ. ಸಂಬಂಧಿ ಪ್ರವೀಣ್ ಚಾರ್ಮಾಡಿ ಯನ್ನು ಅಪ್ರಾಪ್ತೆ ಬಾಲಕಿ ಪ್ರೀತಿಸುತ್ತಿದ್ದಳು. ಈ ವೇಳೆ ಮದುವೆಯಾಗುವುದಾಗಿ ಪ್ರವೀಣ್ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಬಳಿಕ ಮದುವೆ ಆಗುವುದಿಲ್ಲ ಅಂತ ಪ್ರವೀಣ್ ವಂಚನೆ ಎಸಗಿದ್ದಾನೆ. ಇದರಿಂದ ಮನನೊಂದು ಅಪ್ರಾಪ್ತ ಬಾಲಗೆ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.ಹಾಗಾಗಿ ಪ್ರವೀಣ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪ್ರವೀಣ್ ತಲೆಮರಿಸಿಕೊಂಡಿದ್ದಾನೆ.
ಬೆಂಗಳೂರು : ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂಪುಟ ಪುನಾರಚನೆ ಕುರಿತಂತೆ ಸುಳಿವು ನೀಡಿದ್ದರು. ಇದೇ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದು, ಸಂಪುಟ ಪುನಾರಚನೆ ಕುರಿತಂತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಎಂದು ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಇವತ್ತು ದೆಹಲಿಗೆ ತೆರಳುತ್ತಿದ್ದಾರೆ. ಏಕೆಂದರೆ ನಾಳೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ಇದೆ. ವರ್ಕಿಂಗ್ ಕಮಿಟಿಗೆ ಸಾಮಾನ್ಯವಾಗಿ ಮುಖ್ಯಮಂತ್ರಿಗಳನ್ನು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನ ಕರೆಯುತ್ತಾರೆ. ನಾನು ಕೂಡ ಅನೇಕ ಸಂದರ್ಭ ದಲ್ಲಿ ಹೋಗಿ ಭಾಗಿಯಾಗಿದ್ದೇನೆ ಅದಕ್ಕೆ ತೆರಳುತ್ತಿದ್ದಾರೆ. ಅದಾದ್ಮೇಲೆ ಅವರು ಏನಾದರೂ ಹೈಕಮಾಂಡೊಂದಿಗೆ ಚರ್ಚೆ ಮಾಡಿ ಸಂಪುಟ ಪುನ ರಚನೆ ಕುರಿತು ಚರ್ಚೆ ಮಾಡುತ್ತಾರೋ ಎಂಬುದು ಗೊತ್ತಿಲ್ಲ. ಅದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕು ಎನ್ನುವುದು ಕೂಗು ಕೇಳಿ ಬರುತ್ತಿದೆ. ಅಲ್ಲಲ್ಲಿ ಮಾತನಾಡುತ್ತಿರುವುದು ತಿಳಿಬಂದಿದೆ.ಹಾಗಾಗಿ ಈ ಎರಡು ವಿಚಾರದಲ್ಲಿ ಏನು ತೀರ್ಮಾನ ಮಾಡಿಕೊಂಡು ಬರುತ್ತಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು.
ರಾಮನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ತಾಯಿ ಒಬ್ಬಳು ಕ್ರೂರವಾಗಿ ವರ್ತಿಸಿದ್ದು ಎರಡು ದಿನದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಒತ್ತಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ರಾಮನಗರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹೆತ್ತ ತಾಯಿ ಕ್ರೂರಿಯಾಗಿ ವರ್ತಿಸಿದ ಘಟನೆ ನಡೆದಿದೆ. ಹುಟ್ಟಿದ ಮಗುವನ್ನೇ ಟಾಯ್ಲೆಟ್ ಗೆ ಹಾಕಿ ಫ್ಲೆಶ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಗಂಡು ಶಿಶು ಪತ್ತೆಯಾಗಿದೆ. ಎರಡು ದಿನದ ನವಜಾತ ಕಂಡು ಶಿಶು ಪತ್ತೆಯಾಗಿದೆ. ಪತ್ತೆಯಾದ ನವಜಾತ ಶಿಶುವಿನ ನೋಡಿ ಆಸ್ಪತ್ರೆಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ. ರಾಮನಗರ ಜಿಲ್ಲೆಯ ದನ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಆದರೆ ಈ ಒಂದು ನವಜಾತ ಶಿಶು ಯಾರದ್ದು, ಯಾರು ಈ…













