Author: kannadanewsnow05

ಬೆಳಗಾವಿ : ರಾಜ್ಯದಲ್ಲಿ ರಣಭೀಕರ ಮಳೆಯಾಗುತ್ತಿದ್ದು ಎಲ್ಲೆಡೆ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗುತ್ತಿವೆ. ಇದರಿಂದ ಸಾವು ನೋವುಗಳು ಸಂಭವಿಸುತ್ತಿವೆ. ಇದೀಗ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ, ಗ್ರಾಮಸ್ಥರು ಶವವನ್ನು 6 ಕಿ.ಮೀ ವರೆಗೂ ಹೊತ್ತುಕೊಂಡು ಸಾಗಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೃಷ್ಣಪುರದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಖಾನಾಪುರದ ಭೀಮಗಡ ಅಭಯಾರಣ್ಯದಲ್ಲಿರುವ ಕೃಷ್ಣಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಗ್ರಾಮದ ಸದಾನಂದ ನಾಯಕ ಎಂಬವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗಾಗಿ ಪಕ್ಕದ ವಾಳ್​ಪೈ ಗ್ರಾಮಕ್ಕೆ ಕುಟುಂಬದವರು ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ಸದಾನಂದ ನಾಯಕ ಮೃತಪಟ್ಟಿದ್ದರು. ನಂತರ, ಅಂತ್ಯಸಂಸ್ಕಾರಕ್ಕಾಗಿ ಶವವನ್ನು ಹೊತ್ತುಕೊಂಡು ಗ್ರಾಮಸ್ಥರು 6 ಕಿಮೀ ನಡೆದುಕೊಂಡು ಹೋಗಿದ್ದಾರೆ.ಶವವನ್ನು ಹೊತ್ತುಕೊಂಡು ತೆರಳುವಾಗ ಬಂಡೂರಿ ನಾಲಾಗೆ ಅಡ್ಡಲಾಗಿ ನಿರ್ಮಿಸಿರುವ ಕಟ್ಟಿಗೆಯ ತೂಗುಸೇತುವೆ ಮೇಲೆ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಶವ ಸಾಗಾಟ ಮಾಡಬೇಕಾಯಿತು. ರಸ್ತೆ…

Read More

ಬೆಂಗಳೂರು : ರಾಜ್ಯದ ರಾಜಕೀಯ ಬೆಳವಣಿಗೆಗೆ ಕುರಿತಂತೆ ಹಾಗೂ ಇತರೆ ವಿಷಯಗಗಳ ಕುರಿತು ಚರ್ಚಿಸಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೌದು ನಾಳೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಲಿದ್ದಾರೆ. ಇನ್ನೂ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಮನದಟ್ಟು ಮಾಡಲಿದ್ದಾರೆ.ಬಳಿಕ ನಾಳೆ ರಾತ್ರಿಯೆ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಗೌರ ದುರಂತ ಒಂದು ಸಂಭವಿಸಿದ್ದು ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಹಳ್ಳಿಯಲ್ಲಿ ನಡೆದಿದೆ. ಹೌದು ಪತಿಯ ಕಿರುಕುಳಕ್ಕೆ ಬೇಸತ್ತು ಮಾನಸ (25) ಸಾವನ್ನಪ್ಪಿದ್ದರೆ. ತಾನುಪತಿಯ ಕಿರುಕುಳದಿಂದ ಬೀಸುತ್ತಿದ್ದೇನೆ ಎಂದು ಆತ್ಮಹತ್ಯೆಗೆ ಮುನ್ನ ಅವರು ವಿಡಿಯೋ ಮಾಡಿದ್ದಾರೆ.6 ವರ್ಷದ ಹಿಂದೆ ದಿಲೀಪ್ ಜೊತೆಗೆ ಮಾನಸ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗುವಿದೆ.ಕಳೆದ ಒಂದೂವರೆ ವರ್ಷದಿಂದ ಆತ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಪತಿ ದಿಲೀಪ್ ಆಗಗ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಬಿಜೆಪಿಯವರಿಗೆ ಕೇವಲ ಸುಳ್ಳು ಹೇಳಿಕೊಂಡೆ ಬಂದಿರುವಂತಹ ಚಾಳಿ ಇದೆ. ಬಿಜೆಪಿಗರು ಸುಳ್ಳನ್ನ 100 ಸಾರಿ ಹೇಳಿ ಸತ್ಯ ಮಾಡಬೇಕು ಅನ್ನೋವಂತ ‘ಹಿಟ್ಲರ್’ ವಂಶಸ್ಥರು ಇವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆ ಆರ್ ಎಸ್ ಡ್ಯಾಮ್ ಗೆ ಬಾಗಿನ ಅರ್ಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿಯವರಿಗೆ ಜೆಡಿಎಸ್ ನವರಿಗೆ ತಾಕತ್ತಿದ್ದರೆ ಬಡವರ ವಿರುದ್ಧ ಹೇಳಿಕೆ ಕೊಡಲಿ ನೋಡೋಣ. ಗ್ಯಾರಂಟಿಗಳನ್ನು ನಿಲ್ಲಿಸಿ ಅಂತ ನೇರವಾಗಿ ಹೇಳಲಿ ನೋಡೋಣ. ನಿಮಗೆ ದಮ್ ಇಲ್ಲ. ಈ ವರ್ಷದ ಬಜೆಟ್ಟು 3,71,000 ಕೋಟಿ ರೂಪಾಯಿ. ಯಾವ ಇಲಾಖೆಗೆ ದುಡ್ಡು ಕೊಟ್ಟಿಲ್ಲ ಹೇಳಿ ನೀರಾವರಿ ಕೊಟ್ಟಿಲ್ವಾ? ಸಮಾಜ ಕಲ್ಯಾಣ ಇಲಾಖೆ ಕೊಟ್ಟಿಲ್ವಾ? ಎಲ್ಲರಿಗೂ ಕೊಟ್ಟಿದ್ದೇವೆ ಸುಮ್ಮನೆ ಪ್ರಚಾರ ಮಾಡುವುದು ಸಿದ್ದರಾಮಯ್ಯ ದಲಿತರ ಬಗ್ಗೆ ಮಾತನಾಡುತ್ತಾರೆ ಆದರೆ ದಲಿತರ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ ಅಂತ ಅಪಪ್ರಚಾರ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾವು ದಲಿತರಿಗೆ ಮಾಡಿರುವ ಕೆಲಸ ಬಿಜೆಪಿ…

Read More

ದಾವಣಗೆರೆ : ನನ್ನ ಪುತ್ರ ಸಂಸದ ಸುನೀಲ್ ಭೋಸ್ ಮಹಿಳಾ ಕೆಎಎಸ್ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿದ್ದಾರೆ. ಇದರಲ್ಲಿ ಏನು ಸಮಸ್ಯೆ? ತಪ್ಪು ಏನಿದೆ? ಎಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ಸಿ ಮಹದೇವಪ್ಪ ಕೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಹಾಗೂ ಹಿಂದೂ ಸಂಪ್ರದಾಯದಲ್ಲಿ ಎಲ್ಲರೂ ಸಮಾನರಾಗಿದ್ದಾರೆ. ಯಾವುದೇ ಲಿಂಗಭೇದ ಅಥವಾ ತಾರತಮ್ಯಕ್ಕೆ ಅವಕಾಶವಿಲ್ಲ. ಯಾರು ಯಾರಿಗೆ ಬೇಕಾದ್ರು ಕುಂಕುಮ ಇಡಬಹುದು. ಹೀಗಿರುವಾಗ ನನ್ನ ಪುತ್ರ ಸಂಸದ ಸುನೀಲ್ ಭೋಸ್ ಮಹಿಳಾ ಕೆಎಎಸ್ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿದ್ದರಲ್ಲಿ ತಪ್ಪೇನಿಲ್ಲ ಎಂದರು. ಘಟನೆ ಹಿನ್ನೆಲೆ? ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಂದು ಸಂಸದ ಸುನೀಲ್ ಭೋಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಕೂಡ ಹೋಗಿದ್ದರು. ಸಂಸದರಾಗಿದ್ದರಿಂದ ಹೆಚ್ಚಿನ ಆದ್ಯತೆ ನೀಡಿ ಗರ್ಭಗುಡಿಯೊಳಗೆ ಕರೆದುಕೊಂಡು ವಿಶೇಷ ಪೂಜೆ ಮಾಡಲು ಅವಕಾಶ ನೀಡಿದ್ದರು. ಈ ವೇಳೆ ಇಬ್ಬರೂ ವಿಶೃಷವಾಗಿ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ…

Read More

ಬೆಂಗಳೂರು : ಇಂದು ಬಿಜೆಪಿ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲೆ ಕೇಂದ್ರ ಸಚಿವರಾದಂತಹ ಹೆಚ್‍ಡಿ ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವ ಆಯಿತು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಚ್ ಡಿ ಕುಮಾರಸ್ವಾಮಿ ಅವರು ಚೆನ್ನಾಗಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಬಿ ವೈ ವಿಜಯೇಂದ್ರ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್ ಡಿ ಕುಮಾರಸ್ವಾಮಿ ಆರಾಮವಾಗಿದ್ದಾರೆ. ಎಚ್ ಡಿ ಕುಮಾರಸ್ವಾಮಿಗೆ ಸ್ವಲ್ಪ ಆಯಾಸವಾಗಿದೆ. ಅವರಿಗೆ ಕೆಲಸದ ಒತ್ತಡ ಇತ್ತು ಎಂದರು. ಸದ್ಯ ವೈದ್ಯರು ಸ್ಕ್ಯಾನಿಂಗ್ ಗೆ ಕರೆದುಕೊಂಡು ಹೋಗಿದ್ದಾರೆ. ಯಾರು ಗಾಬರಿ ಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿಯವರನ್ನು ಇದೀಗ ಮಾತಾಡಿಸಿಕೊಂಡು ಬಂದಿದ್ದೇನೆ. ಕುಮಾರಸ್ವಾಮಿಯವರು ಕಾಫಿ ಕುಡಿಯುತ್ತಾ ಕುಳಿತಿದ್ದರು.ಸದ್ಯ ಕುಮಾರಸ್ವಾಮಿ ಚೆನ್ನಾಗಿದ್ದಾರೆ ಎಂದು ಕುಮಾರಸ್ವಾಮಿ ಭೇಟಿ ಬಳಿಕ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು. ಆತಂಕ ಪಡುವ ಅಗತ್ಯವಿಲ್ಲ : ನಿಖಿಲ್ ಎಚ್ ಡಿ ಕುಮಾರಸ್ವಾಮಿ…

Read More

ಬೆಂಗಳೂರು : ನಗರದಲ್ಲಿ ಇಂದು ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ತ್ರಾವ ಆಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು, ಈ ವೇಳೆ ಆಸ್ಪತ್ರೆಯ ವೈದ್ಯರು, ಸ್ಟ್ರೋಕ್ ಆಗಿದ್ದರಿಂದ ರಕ್ತ ಹೆಪ್ಪು ಕಟ್ಟದಂತೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಹಾಗಾಗಿ ರಕ್ತಸ್ರಾವವಾಗಿದೆ ಎಂದು ಮಾಹಿತಿ ನೀಡಿದರು. ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿದ ನಂತರ ವೈದ್ಯರು ಅವರನ್ನು ತಕ್ಷಣ ಚಿಕಿತ್ಸೆಗೆ ಒಳಪಡಿಸಿದರು. ಈ ವೇಳೆ ಸುದ್ದಿಗಾರರು ಮಾತನಾಡಿದ ವೈದ್ಯರು, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಪೂರ್ಣ ಪರೀಕ್ಷೆಗೆ ಒಳಪಡಿಸಿದ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದರು. ಹಿಂದೆ ಎಚ್‍ಡಿ ಕುಮಾರಸ್ವಾಮಿಗೆ ಮೈಂಡ್ ಸ್ಟ್ರೋಕ್, ಹಾರ್ಟ್ ಸರ್ಜರಿ ಹಿನ್ನೆಲೆಯಲ್ಲಿ ರಕ್ತ ಹೆಪ್ಪುಗಟ್ಟದಂತೆ ಮಾಡುವ ಚಿಕಿತ್ಸೆ ಪಡೆದಿರಬಹುದು. ಅಥವಾ ಔಷಧಿಗೆ ಒಳಪಟ್ಟಿರುವ ಸಾಧ್ಯತೆ ಇದೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿಗೆ ಮೂಗಿನಿಂದ ರಕ್ತಸ್ತ್ರಾವ ಆಗಿದೆ ಎಂದು ಜಯನಗರದ ಅಪೋಲೋ ಆಸ್ಪತ್ರೆಯ ವೈದ್ಯರು…

Read More

ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾವುದೇ ರೀತಿಯಾಗಿ ಆತಂಕ ಪಡುವ ಅಗತ್ಯವಿಲ್ಲ ಅವರಿಗೆ ತಂದೆ ತಾಯಿಯ ಆಶೀರ್ವಾದವಿದೆ ಎಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆದುಕೊಳ್ಳಲು ಅವರಿಗೆ ಆಗಲಿಲ್ಲ. ಆ ರೀತಿ ಆದಂಗ ಪಡುವ ಯಾವುದೇ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ ಇದೆ. ಕುಮಾರಣ್ಣಗೆ ಏನು ಆಗಿಲ್ಲ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೆಚ್.ಡಿ ಕುಮಾರಸ್ವಾಮಿ ಪ್ರಾರಂಭಿಸಿದಾಗ ಅವರ ಮುಗಿನಲ್ಲಿ ರಕ್ತ ಸೋರುವುದಕ್ಕೆ ಶರುವಾಯ್ತು. ಕೂಡಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿ, ಅವರ ಪುತ್ರ ನಿಖಿಲ್…

Read More

ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದ ಎಲ್ಲಾ ಡ್ಯಾಮ್ ಗಳು ಭರ್ತಿಯಾಗಿವೆ ಈ ನೆಲೆಯಲ್ಲಿ ಹಲವು ಕಡೆ ಪ್ರವಾಹದ ಭೀತಿ ಕೂಡ ಎದುರಾಗಿದೆ. ಇದೀಗ ಬಾಗಲಕೋಟೆಯಲ್ಲಿ ಕೃಷ್ಣಾ ನದಿಯ ಹಿನ್ನೀರಿನಲ್ಲಿ ಐದು ವರ್ಷದ ಬಾಲಕಿ ಒಬ್ಬಳು ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹೌದು ಕೃಷ್ಣಾ ನದಿಯ ಹಿನ್ನೀರಿನಲ್ಲಿ ಮುಳುಗಿ ಬಾಲಕಿ ದುರ್ಮರಣ ಹೊಂದಿದ್ದಾಳೆ.ಕಡಕೋಳ ಗ್ರಾಮದಲ್ಲಿ ಸಮೃದ್ಧಿ ತಿಮ್ಮಕ್ಕನವರ್ (5) ಸಾವನ್ನಪ್ಪಿದ್ದಾಳೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ತಾಯಿ ಜೊತೆಗೆ ಬಟ್ಟೆ ತೊಳೆಯಲು ತೆರಳಿದ್ದಳು. ಬಟ್ಟೆ ತೊಳೆದ ನಂತರ ಸಮೃದ್ಧಿ ತಾಯಿ ಜೊತೆ ವಾಪಸ್ ಮನೆಗೆ ಬಂದಿದ್ದಳು. ಆ ಬಳಿಕ  ಕೃಷ್ಣಾ ನದಿ ಹಿನ್ನೀರು ಕಡೆಗೆ ಬಾಲಕಿ ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಇದೀಗ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ರಾಮನಗರ : ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರಿಗೆ ಪಿತೃ ವಿಯೋಗವಾಗಿದ್ದು,ಇಂದು ಅವರ ತಂದೆ ಪುಟ್ಟಮಾದೇಗೌಡ(89) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪುಟ್ಟ ಮಾದೇಗೌಡರು ಅನಾರೋಗ್ಯ ಹಾಗೂ ಅಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರಿಗೆ 89 ವರ್ಷ ವಯಸ್ಸು ಕೂಡ ಆಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ. ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

Read More