Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ ದರ್ಶನವರು ನಿನ್ನೆ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬಳಿಕ ಅವರು ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೆಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪ್ರಕರಣದ ತನಿಖಾಧಿಕಾರಿಗಳ ಜೊತೆಗೆ ನಿನ್ನೆ ಮಹತ್ವದ ಸಭೆ ನಡೆದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಚರ್ಚಿಸಲಾಗಿದೆ. ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುತ್ತದೆ ಅಭಿಪ್ರಾಯ ಪಡೆದು ದರ್ಶನ್ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಚಿಂತಿಸಲಾಗಿದೆ. ದೀಪಾವಳಿ ಹಬ್ಬದ ಕಾರಣ ಸರ್ಕಾರಿ ರಜೆ ಇದೆ. ಈ ಕಾರಣಕ್ಕೆ ಜಾಮೀನಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ…

Read More

ಉಡುಪಿ : ಉಡುಪಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ ಆರತಿ ಶೆಟ್ಟಿ ಎಂಬ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಆರತಿ ಅವರು ತಮ್ಮ ಸ್ಕೂಟರ್ ಮೇಲೆ ರಸ್ತೆಯಲ್ಲಿ ತೆಳ್ಳುತ್ತಿದ್ದ ವೇಳೆ ಪಕ್ಕದಲ್ಲಿ ತೆರಳುತ್ತಿದ್ದ ಮಣ್ಣು ತುಂಬಿದ ಲಾರಿ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಲಾರಿಯು ಮುಗುಚಿ ಬಿದ್ದಿದೆ. ಲಾರಿಯಲ್ಲಿದ್ದ ಮಣ್ಣು ಆರತಿಯವರ ಮೇಲೆ ಬಿದ್ದಿದ್ದರಿಂದ ಅವರು ಮಣ್ಣಿನ ಅಡಿ ಸಿಲುಕಿದ್ದರು. ಈ ವೇಳೆ ಸಮಾಜ ಸೇವಕ ಅಶೋಕ್ ಪೂಜಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ಮಣ್ಣಿನ ಅಡಿ ಮಹಿಳೆ ಬಿದ್ದಿದ್ದನ್ನು ನೋಡಿದ ತಕ್ಷಣ ಅಶೋಕ್ ಪೂಜಾರಿಯವರು ಕೂಡಲೇ ಮಣ್ಣನ್ನು ತೆಗೆದು ಮಹಿಳೆಯನ್ನು ರಕ್ಷಿಸಿ ಸ್ಥಳೀಯರ ಸಹಕಾರದಿಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಶೋಕ್ ಪೂಜಾರಿಯವರ ಈ…

Read More

ಚಿಕ್ಕಮಗಳೂರು : ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ‌ ಬಂದಿದ್ದ ಹತ್ತು ಜನರು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ರಕ್ಷಣೆ ಮಾಡಲಾಗಿದೆ. ಹೌದು ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ‌ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಮೂಲದ ಜಯಮ್ಮ‌ (55) ಅಸ್ವಸ್ಥಗೊಂಡ ಮಹಿಳೆ. ಪೊಲೀಸರು ಹಗ್ಗದ ಮೂಲಕ ಮಹಿಳೆಯನ್ನು ರಕ್ಷಣೆ ಮಾಡಿದರು. ಈವರೆಗೆ ಅಸ್ವಸ್ಥಗೊಂಡಿದ್ದ 10ಕ್ಕೂ ಅಧಿಕ ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಇದಕ್ಕೂ ಮುಂಚೆ ಯುವತಿ ಒಬ್ಬಳು ಅಸ್ವಸ್ಥಳಾಗಿದ್ದು, ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಕೆಯನ್ನು ರಕ್ಷಿಸಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿಸಿದರು. ಅಲ್ಲದೆ ಯುವಕನೋರ್ವ ಬೆಟ್ಟದಿಂದ ಕಾಲು ಜಾರಿ ಬಿದ್ದಿದ್ದ ಪರಿಣಾಮ ಗಂಭೀರವಾಗಿ ಗೊಂಡಿದ್ದಾನೆ. ಕೂಡಲೇ ಆತನನ್ನು 5 ಕಿಲೋಮೀಟರ್ಗಳ…

Read More

ಹಾಸನ : ವರ್ಷಕ್ಕೆ ಒಂದು ಬಾರಿ ಮಾತ್ರ ತೆರೆಯುವ ಹಾಸನ ಜಿಲ್ಲೆಯ ಹಾಸನಾಂಬೆ ದೇವಿಯ ದರ್ಶನಕ್ಕೆ ಅಪಾರ ಸಂಖ್ಯೆಯ ಜನರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಇದೇ ವೇಳೆ ದೇವಿಯ ದರ್ಶನ ಪಡೆಯುವ ಕುರಿತಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹೌದು ಹಾಸನದ ಹಾಸನಾಂಬ ದೇಗುಲದಲ್ಲಿ ಹೊಡೆದಾಟ ನಡೆದಿದ್ದು, ಕಂದಾಯ ಇಲಾಖೆಯ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದ್ದು ದೇವಾಲಯದ ಎಕ್ಸಿಟ್ ಗೇಟ್ ಬಳಿ ಹೊಡೆದಾಡಿಕೊಂಡಿದ್ದಾರೆ. ದೇವಾಲಯಕ್ಕೆ ಕರೆದುಕೊಂಡು ಹೋಗುವ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎನ್ನಲಾಗಿದೆ. ಕಂದಾಯ ಇಲಾಖೆ ಸಿಬ್ಬಂದಿಗಳು ಕುಟುಂಬದವರನ್ನು ಹಾಸನಾಂಬೆ ದರ್ಶನಕ್ಕೆ ಕರೆತಂದಿದ್ದರು ಅವರನ್ನು ಮತ್ತೊಬ್ಬ ಸಿಬ್ಬಂದಿ ತಡೆದು ನಿಲ್ಲಿಸಿದ್ದಾನೆ ಇವಳೆ ಮಾತಿಗೆ ಮಾತು ಬೆಳೆದು ಪರಸ್ಪರ ಬಡಿದಾಟ ನಡೆದಿದೆ ಪರಸ್ಪರ ಬಡಿದಾಡಿಕೊಂಡ ಕಂದಾಯ ಇಲಾಖೆ ಸಿಬ್ಬಂದಿಗಳು ಈ ವೇಳೆ ಪೊಲೀಸರು ಹರಸಾಹಸ ಪಟ್ಟು ಜಗಳ ಬಿಡಿಸಲು ಮುಂದಾಗಿದ್ದಾರೆ.

Read More

ಬೆಂಗಳೂರು : ಅನೇಕ ಜನ ಮಹಿಳೆಯರು ಟ್ವೀಟ್ ಮೂಲಕ ಶಕ್ತಿ ಯೋಜನೆಯ ಕುರಿತು ಮೆಸೇಜ್ ಮಾಡಿದ್ದಾರೆ. ಹಾಗಾಗಿ ಈ ಕುರಿತು ಚಿಂತನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶಕ್ತಿಯೋಜನೆ ಮರು ಪರಿಶೀಲನೆ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ಅಂತಹ ಮರುಪರಿಶೀಲನೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಿಸುವುದು ಸರ್ಕಾರದ ಹಂತದಲ್ಲಿ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವ ಉದ್ದೇಶ ಹಾಗೂ ಪ್ರಸ್ತಾವನೆ ಇಲ್ಲ. ಕೆಲ ಮಹಿಳೆಯರು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಆ ಕಾರ್ಯಕ್ರಮದಲ್ಲಿ ನಾನು ಅಲ್ಲಿ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು? ಈ ವಿಚಾರವಾಗಿ ನಿನ್ನೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕ ಜನರು ನನಗೆ ಮೇಲ್,…

Read More

ಬೆಂಗಳೂರು : ಕಳೆದ ಒಂದು ವಾರಗಳ ಹಿಂದೆ ಇಡೀ ಬೆಂಗಳೂರು ನದಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿತ್ತು ಏಕೆಂದರೆ ಅಷ್ಟು ಪ್ರಮಾಣದಲ್ಲಿ ಬೆಂಗಳೂರಿನ ನಗರದಲ್ಲಿ ಮಳೆಯಾಗಿ ನೀರು ನಿಂತು ಭಾರಿ ಆವಾಂತರ ಸೃಷ್ಟಿಯಾಗಿತ್ತು. ಇದೀಗ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಹೌದುಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆಯಾಗಿದ್ದು, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಮೆಜೆಸ್ಟಿಕ್ ಸೇರಿದಂತೆ ಹಲವಡೆ ಮಳೆಯಾಗಿದೆ. ಈ ವೇಳೆ ಕಂಪನಿಗಳಿಗೆ ಕಚೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವವರು ಕೆಲಕಾಲ ಪರದಾಟ ನಡೆಸಿದರು. ಅಲ್ಲದೆ ಇಂದು ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ತಮಿಳುನಾಡು, ಪುದುಚೇರಿ, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಮೈಸೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪಕರಣದಲ್ಲಿ ನಿನ್ನೆ ಹೈಕೋರ್ಟ್ ನಟ ದರ್ಶನ ಅವರಿಗೆ ಮಧ್ಯಂತರ ಜಾಮೀನು ನೀಡಿದೆ ಹಿನ್ನೆಲೆಯಲ್ಲಿ ನಟ ದರ್ಶನ ಅವರು ನಿನ್ನೆ ಬೆಂಗಳೂರಿನ ಪತ್ನಿ ವಿಜಯಲಕ್ಷ್ಮಿ ಮನೆಗೆ ಆಗಮಿಸಿದ್ದು ರಾತ್ರಿ ಮಗ ವಿನೇಶ್ ಬರ್ತಡೇ ಆಚರಿಸಿ ಇಂದು ಅಥವಾ ನಾಳೆ ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಇದರ ನಡುವೆ ಮೈಸೂರಿನ ಅರ್ಜುನ್ ಅವಧೂತ ಗುರೂಜಿ ಅವರು ದರ್ಶನ್ ರಾಜಕೀಯ ಭವಿಷ್ಯ ಕುರಿತು ಮಾತನಾಡಿದ್ದು, ದರ್ಶನ ರಾಜಕೀಯಕ್ಕೆ ಬರುತ್ತಾರೆ. ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ರಾಜಕೀಯ ಪಕ್ಷಗಳೇ ಅವರ ಬಳಿಗೆ ಹೋಗುತ್ತವೆ ಎಂದು ದರ್ಶನ್ ರಾಜಕೀಯ ಎಂಟ್ರಿ ಕುರಿತು ಮೈಸೂರಿನ ಅರ್ಜುನ್ ಅವಧೂತ ಗುರೂಜಿ ತಿಳಿಸಿದರು. 2025 ನೇ ಇಸವಿಯಲ್ಲಿ ದರ್ಶನವರಿಗೆ ಒಳ್ಳೆಯ ಭವಿಷ್ಯವಿದೆ. ದರ್ಶನ್ ರಿಲೀಸ್ ಆಗಿರುವುದು ಕನ್ನಡಿಗರಿಗೆ ಹಾಗೂ ಅವರ ಅಭಿಮಾನಿಗಳು ತುಂಬಾ ಸಂತಸ ತಂದಿದೆ. ಅದರಲ್ಲೂ ಅಭಿಮಾನಿಗಳ ಪ್ರಾರ್ಥನೆ, ವಿಜಯಲಕ್ಷ್ಮಿ ಅವರ ತಪಸ್ಸು ಹಾಗೂ ದಿನಕರ್ ತೂಗುದೀಪ ಅವರ ಪ್ರಯತ್ನದಿಂದ ಅವರು ದರ್ಶನ್…

Read More

ಹಾವೇರಿ : ರಾಜ್ಯದ ಹಲವೆಡೆ ವಕ್ಫ್ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಬೇರೆ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಮಾಡುತ್ತಿದ್ದರೆ, ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು 32 ಜನರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ನೋಂದಣಿಯಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಾವು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ. ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ. ವಕ್ಸ್ ಹೆಸರಿಗೆ ಆಸ್ತಿ ಮನೆಗಳನ್ನು ವರ್ಗಾಯಿಸಿಕೊಂಡು ಖಾಲಿ ಮಾಡಿಸುತ್ತಾರೆ ಎಂಬ ವದಂತಿಯಿಂದ…

Read More

ಬೆಳಗಾವಿ : ರಾಜ್ಯದಲ್ಲಿ ಇದೀಗ ವಕ್ಫ್ ವಿವಾದ ಭುಗಿಲೆದ್ದಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳ ರೈತರ ಪಹಣಿಗಳಲ್ಲಿ ಅವರ ಜಮೀನು ವಕ್ಫ್ ಅಸ್ತಿಗೆ ಸೇರಿದ್ದು ಎಂದು ನಮೂದಿ ಆಗಿರುವ ಕುರಿತು ರೈತರು ಆತಂಕಕ್ಕೆ ಒಳಗಾಗಿದ್ದರು. ಇದೀಗ ಮಾಜಿ ಸಚಿವರ ಜಮೀನನ್ನೇ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸಿದ್ದು, ದೊಡ್ಡ ಸಂಚನಲ ಸೃಷ್ಟಿಸಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಭುಗೆ ಸೇರಿದ ಸುಮಾರು 2 ಎಕರೆ 13 ಗುಂಟೆ ಜಮೀನಿನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಇದರಿಂದ ಸಹಜವಾಗಿ ಅಣ್ಣಾಸಾಹೇಬ್ ಜಿಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಶಾಕ್ ಗೆ ಒಳಗಾಗಿದ್ದಾರೆ. ಮಾಜಿ ಸಚಿವರ ಕುಟುಂಬಕ್ಕೂ ಇದೀಗ ವಕ್ಫ್ ಶಾಕ್ ನೀಡಿದೆ. ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ತೋರಿಸುತ್ತಿದೆ ಬಸವ ಪ್ರಭುಗೆ ಸೇರಿದ 2 ಎಕರೆ 13 ಗುಂಟೆ ಜಮೀನಿನಲ್ಲಿ ಪಹಣಿಯಲ್ಲಿ ನಮೂದಾಗಿದೆ. ರೈತರ…

Read More

ಚಿಕ್ಕಮಗಳೂರು : ವಿಶೇಷವಾಗಿ ದೀಪವಳಿ ಹಬ್ಬದಂದು ಬಿಂಡಿಗ ಐತಿಹಾಸಿಕ ದೇವಿರಮ್ಮನ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ಬೆಟ್ಟದಲ್ಲಿ ಭಕ್ತರು ಬೆಟ್ಟ ಹತ್ತಲು ಆರಂಭಿಸಿದ್ದಾರೆ. ಸುಮಾರು 3000 ಅಡಿ ಎತ್ತರದಲ್ಲಿ ಈ ಒಂದು ಬೆಟ್ಟ ಇದ್ದು, ಇದೀಗ ಬೆಟ್ಟದಿಂದ ಯುವಕನೊಬ್ಬ ಕಾಲು ಜಾರಿ ಬಿದ್ದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೌದು ದೇವಿರಮ್ಮ ಬೆಟ್ಟದಿಂದ ಯುವಕ ಕಾಲು ಜಾರಿ ಬಿದ್ದಿದ್ದು, ಸ್ಟ್ರೆಕ್ಚರ್ ಮೂಲಕ ಪೊಲೀಸ್ ಸಿಬ್ಬಂದಿಗಳು ಯುವಕನನ್ನು ಸುಮಾರು 5 ಕಿಲೋಮೀಟರ್ ವರೆಗೆ ಹೊತ್ತು ತಂದಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರಿಗೆ ಚಿಕ್ಕಮಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 3000 ಅಡಿ ಎತ್ತರದ ಬೆಟ್ಟದ ಮೇಲೆ ಭಕ್ತರ ದಂಡೆ ಹರಿದುಬಂದಿದೆ. ದೇವಿರಮ್ಮ ದರ್ಶನ ಪಡೆಯಲು ದಾಂಗುಯಿಡಿಟ್ಟ ಜನರು ದುರ್ಗಮ್ಮ ಮಾರ್ಗದ ಬೆಟ್ಟದಿಂದ ಜಾರಿ ಬಿದ್ದ ಯುವಕ.ಈ ವೇಳೆ ಯುವಕನ ಕಾಲಿಗೆ ಗಂಭೀರವಾಗಿ ಗಾಯಗಳಾಗಿದೆ. ತಕ್ಷಣ ಪೊಲೀಸ್ ಸಿಬ್ಬಂದಿ ಸ್ಟ್ರಕ್ಚರ್ ಮೂಲಕ ಯುವಕನನ್ನು ಹೊತ್ತು ತಂದು ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ…

Read More