Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ಒಂದು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಚಿಕ್ಕಪೇಟೆಯ ಅಮಿತ್ (32) ಹಾಗೂ ಅವರ ಮಗು 5 ವರ್ಷದ ಅನ್ವಿತಾ ಎನ್ನುವ ಮಗು ಸಾವನ್ನಪ್ಪಿದ್ದು ಘಟನೆಯಲ್ಲಿ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದಾರೆ.ಡಿವೈಡರ್ಗೆ ಬೈಕು ಡಿಕ್ಕಿ ಹೊಡೆದ ಪರಿಣಾಮವಾಗಿ ತಂದೆ ಮಗು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಕುಸುಮ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನ ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲೀಸಾಲಾಗಿದ್ದು ಅವರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ ಪ್ರಚಾರದಟ್ಟಣೆಯಾಗಿದ್ದು ನೆಲಮಂಗಲ ಸಂಚಾರಿ ಠಾಣೆಹಳ್ಳಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬೆಂಗಳೂರಿನ ಯಲಹಂಕದ LBS ಬಳಿ ನಡೆದಿದೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಚನಕವಾಗಿದೆ ತಕ್ಷಣ ಅವರನ್ನ ಗಾಯಾಳುಗಳಿಗೆ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಡ್ಯಾಮೇಜ್ ಆಗಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಯಲಹಂಕದ LBS ಲೇಔಟ್ ನಲ್ಲಿ ಈ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳು ಡ್ಯಾಮೇಜ್ ಆಗಿವೆ. ಮನೆಗಳು ಗೋಡೆಗಳು ಬಿರುಕು ಬಿಟ್ಟಿದ್ದು ಅನೇಕ ವಸ್ತುಗಳು ಪುಡಿ ಪುಡಿಯಾಗಿ ಬಿದ್ದಿವೆ.ಘಟನೆ ಕುರಿತಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಘಟನೆ ಜರುಗಿದ್ದು ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದ್ದು ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣ…
ಉತ್ತರ ಕನ್ನಡ : ಸಿಎಂ ವಿರುದ್ಧ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯಕ್ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದು ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸಿದ ಅವರು ಕಾಂಗ್ರೆಸ್ ನಾಯಕರುಗಳ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತ್ ಕುಮಾರ್ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಸರ್ಕಾರ ಎದುರಿಸಲು ಬಿಜೆಪಿಯವರಿಗೆ ಆಗುತ್ತಿಲ್ಲ. ಎದುರಿಸಲು ಆಗದಿದ್ದಾಗ ಇಂತಹ ಮಾತುಗಳು ಬರುವುದು ಸಹಜ ಎಂದರು. ಲೋಕಸಭಾ ಚುನಾವಣೆಯ ವೇಳೆ ಇಲ್ಲ ಸಲ್ಲದ ಹೇಳಿಕೆಗಳನ್ನು ಕೊಡುತ್ತಾರೆ. ಮೇಸ್ತ ವಿಷಯ ಇಟ್ಟುಕೊಂಡು ಜಿಲ್ಲೆಯಲ್ಲಿ ದಂಗೆ ಎಬ್ಬಿಸಿದ್ದರು. ಅನೇಕರು ಇಂದಿಗೂ ಕೋರ್ಟ್ ಕಚೇರಿ ಅಂತ ಅಲೆದಾಡುತ್ತಿದ್ದಾರೆ ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಚುನಾವಣೆ ಸಮೀಪವಿದ್ದಾಗ ಹಿಂದುತ್ವದ ಬಗ್ಗೆ ಎಲ್ಲಿಲ್ಲದ ಅಭಿಮಾನ ಮೂಡುತ್ತದೆ. ಹಿಂದೂ ಧರ್ಮ ಕಾಪಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ.…
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ‘MES’ ಪುಂಡರಿಂದ ಬೆದರಿಕೆ ಬಂದಿದ್ದು, ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಅಲ್ಲಿ ಅವಾಚ್ಯವಾಗಿ ನಿಂದಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಜೀವ ಬೆದರಿಕೆ ಬಂದಿದ್ದು, ಅನಿಲ್ ದಡ್ಡಿಮನಿ ಹಾಗೂ ಸಂಪತ್ ಕುಮಾರ್ ಗೆ ಬೆದರಿಕೆ ಬಂದಿದೆ.ಇನ್ಸ್ಟಾಗ್ರಾಮ್ ನಲ್ಲಿ ಎಂ ಇ ಎಸ್ ಪುಂಡರು ಪೋಸ್ಟ್ ಹಾಕುವ ಮೂಲಕ ಬಿದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಲ್ ಬೆಳಗಾವ್ಕರ್ ಎಂಬ ಖಾತೆಯಿಂದ ಬೆದರಿಕೆ ಪೋಸ್ಟ್ ಬಂದಿದೆ ಅವಾಚ್ಯವಾಗಿ ನಿಂದಿಸಿ ಎಂಇಎಸ್ ಪುಂಡರು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ ಕನ್ನಡ ಕಡ್ಡಾಯ ಮಾಡುವಂತೆ ಹೋರಾಡಿದ್ದಕ್ಕೆ ಬೆದರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ವಿಜಯನಗರ : ತನಗೇ ಯಾರು ಹುಡುಗಿ ಕೊಡುತ್ತಿಲ್ಲ ಎಂದು ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಗ್ರಾಮದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆಯ ಗ್ರಾಮದ ಬಿ ಮಧುಸೂದನ್ (26) ಸಾವನ್ನಪ್ಪಿರುವ ಯುವಕನಾಗಿದ್ದಾನೆ.ಹುಡುಗನ ತಂದೆಯ ವರ್ತನೆ ಸರಿ ಇಲ್ಲ ಎಂದು ಹೆಣ್ಣು ಕೊಡುವವರು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಹುಡುಗಿ ಕೊಡಲು ನಿರಾಕರಿಸಿದಕ್ಕೆ ಯುವಕ ಮನನೊಂದಿದ್ದ. ಕನ್ಯೆ ಸಿಗದಿದ್ದಕ್ಕೆ ಬಿ ಮಧುಸೂದನ್ ಕುಡಿತದ ಚಟಕ್ಕೆ ಕೂಡ ಬಿದ್ದಿದ್ದ ಎನ್ನಲಾಗುತ್ತಿದೆ. ನನಗೆ ಮದುವೆನೇ ಆಗಲ್ಲ ಎಂದು ಮಧುಸೂದ ಮನನೊಂದು ವಿಷಯ ಸೇವಿಸಿದ್ದ.ಜನವರಿ 5ರಂದು ಮಧುಸೂದನ್ ವಿಷ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ, ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇದೆ 22ರಂದು ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ವಿಶೇಷ ಏನೆಂದರೆ ಕರುನಾಡಿನಲ್ಲಿ ಶ್ರೀರಾಮದೇವರ ಮೂರ್ತಿ ತಯಾರಿಸಲಾಗಿದ್ದು ರಾಮಮಂದಿರದ ಗರ್ಭಗುಡಿಯಲ್ಲಿ ಇದನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಇದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ‘ರಾಮಲಲ್ಲಾ’ ಮೂರ್ತಿ ಆಯ್ಕೆ ಆಗಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮತೀರ್ಥ್ ಪ್ರಕಟಣೆ ಹೊರಡಿಸುವುದು ಕನ್ನಡಿಗರೆಲ್ಲರ ಪಾಲಿನ ಸಂಕ್ರಾಂತಿ ಸಂಭ್ರಮವನ್ನು ಇಮ್ಮಿಡಿಗೊಳಿಸಿದೆ. ರಾಮಲಲ್ಲಾ ಮೂರ್ತಿ ಅರಳಿರುವುದು ಹೆಚ್.ಡಿ.ಕೋಟೆ ತಾಲೂಕಿನ ಶಿಲೆ ಎನ್ನುವ ಸಂಗತಿ ಮಂದಿರದ ಜತೆ ಕನ್ನಡಿಗರ ಶ್ರದ್ಧೆಯನ್ನು ಗಾಢಗೊಳಿಸಿದೆ.ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಅವರಿಗೆ ಆ ಶ್ರೀರಾಮ ದೇವರ ಅನುಗ್ರಹ ಸದಾ ಇರಲಿ ಹಾಗೂ ಅವರು ಇಂಥ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಘಟನೆ ಜರುಗಿದ್ದು ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದ್ದು ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣ ಬಳಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದರಿಂದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು. ಘಟನೆ ಕುರಿತಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಪ್ರಕರಣಗಳು ಹೆಚ್ಚುತ್ತಿವೆ. ಈ ಅಗ್ನಿ ಅವಘಡಗಳಿಗೆ ಬೇಜವಾಬ್ದಾರಿತನ ಹಾಗೂ ಆಕಸ್ಮಿಕವಾಗಿ ಇಂತಹ ಅಗ್ನಿಯ ಅವಘಡಗಳು ಆಗಾಗ ಸಂಭವಿಸುತ್ತವೆ. ಇಷ್ಟಿದ್ದರೂ ಕೂಡ ಕೆಲವು ಕಡೆಗಳಲ್ಲಿ ಮತ್ತೆ ಅದೇ ಬೇಜವಾಬ್ದಾರಿತನ ಮುಂದುವರೆದಿದ್ದು ಅಗ್ನಿ ಅವಘಡಗಳ ಪ್ರಕರಣಗಳು ಹೆಚ್ಚುತ್ತಿವೆ.
ಹುಬ್ಬಳ್ಳಿ : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿದ್ದು, ಸಂಖ್ಯೆಯಲ್ಲಿ ಅಯೋಧ್ಯೆಗೆ ತೆರಳಲಿದ್ದಾರೆ.ಅವರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ರಾಜ್ಯದ ವಿವಿಧೆಡೆಯಿಂದ 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿ ಸಲು ಚಿಂತನೆ ನಡೆಸಿದೆ. ಶೀಘ್ರದಲ್ಲೇ ರೈಲುಗಳ ಸಮಯ ಹಾಗೂ ದಿನ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಅತ್ತ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ, ಇತ್ತ ನೈಋತ್ಯ ರೈಲ್ವೆ ವಲಯ ರಾಜ್ಯದ ವಿವಿಧೆಡೆಯಿಂದ 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿ ಸಲು ಚಿಂತನೆ ನಡೆಸಿದೆ. ಶೀಘ್ರದಲ್ಲೇ ರೈಲುಗಳ ಸಮಯ ಹಾಗೂ ದಿನ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ. ಸದ್ಯಕ್ಕೆ ಅಯೋಧ್ಯೆ ಯಿಂದ ಬಂದ ಮಂತ್ರಾಕ್ಷತೆಯನ್ನು ಎಲ್ಲ ಭಕ್ತರ ಮನೆಗಳಿಗೆ ಮುಟ್ಟಿಸಲಾಗುತ್ತಿದೆ. ಆದರೆ, ಜ.22ರಂದು ಎಲ್ಲರಿಗೂ ಅಯೋಧ್ಯೆಗೆ ತೆರಳಲು ಅವಕಾಶವಿಲ್ಲ. ಸದ್ಯದ ಮಾಹಿತಿ ಪ್ರಕಾರ ಅತ್ತ ಶ್ರೀರಾಮ ಮೂರ್ತಿಯ…
ಬೆಂಗಳೂರು : ಹಿಂದಿನಿಂದ ವೇಗವಾಗಿ ಬಂದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್ ಸವಾರ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿರುವ ಅಪಘಾತವಾಗಿದೆ. ಫುಡ್ ಡೆಲಿವರಿ ಬಾಯ್ ಬಸವರಾಜ್ ದುರ್ಮರಣ ಹೊಂದಿದ್ದಾರೆ.ಹಿಂದಿನಿಂದ ವೇಗವಾಗಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಪರಿಣಾಮವಾಗಿ ಫುಡ್ ಡೆಲಿವರಿ ಬಸವರಾಜ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಸಾವು ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರಕ್ಕೆ ಡಿಕ್ಕಿಯಾಗಿ ಬಳಿಕ ಕಂಪೌಂಡಿಗೆ ಕಾರು ಗುದ್ದಿದೆ ಕಾರಿನಲ್ಲಿದ್ದ ಮಲ್ವೆನ್ ಜೋಶ್ವ (25)ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ . ತಡರಾತ್ರಿ 2.10ರ ಸುಮಾರು ನಡೆದಿರುವ ಘಟನೆಯಾಗಿದೆ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಪಕ್ಷದ ಪ್ರಮುಖರಿಗೆ ಈ ವಾರದೊಳಗೇ ಅಧಿಕಾರ, ಸ್ಥಾನಮಾನ ಸಿಗುವ ನಿರೀಕ್ಷೆ ಮತ್ತೆ ಗರಿಗೆದರಿದೆ.ಈ ವಾರದಲ್ಲಿ ನಿಗಮ ಮಂಡಳಿಗಳ ನೇಮಕವಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಿಗಮ ಮಂಡಳಿಗಳಿಗೆ ಶಾಸಕರ ನಾಮನಿರ್ದೇಶನದ ಜತೆಗೆ, ಕೆಲವು ಪ್ರಮುಖ ಕಾರ್ಯಕರ್ತರಿಗೂ ಅವಕಾಶ ಸಿಗಲಿದೆ. ಜತೆಗೆ, ರಾಜ್ಯ, ಜಿಲ್ಲೆ ಮತ್ತು ತಾಲೂಕು ಈ 3 ಹಂತದಲ್ಲಿ ‘ಗ್ಯಾರಂಟಿಗಳ ಅನುಷ್ಠಾನ ಸಮಿತಿ’ಗಳಿಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನೇಮಕ ನಡೆಯಲಿದೆ.ಲೋಕಸಭೆ ಚುನಾವಣೆಗೆ ಅಖಾಡ ಫೈನಲ್ ಆಗುವ ಮುನ್ನ ಪಕ್ಷದ ಶಾಸಕರು ಹಾಗೂ ಪ್ರಮುಖರಿಗೆ ಅಧಿಕಾರ ಹಂಚಿ, ಸ್ಥಾನಮಾನದೊಂದಿಗೆ ಉತ್ಸಾಹ ತುಂಬಲು ನಿರ್ಧರಿಸಲಾಗಿದೆ. ಈಗಾಗಲೇ ಅಂತಿಮಗೊಂಡಿರುವ ಶಾಸಕರ ಪಟ್ಟಿಜತೆಗೆ, ಮುಖಂಡರ ಪಟ್ಟಿಯನ್ನೂ ಆಖೈರುಗೊಳಿಸ ಲಾಗಿದೆ. ಗ್ಯಾರಂಟಿ ಸಮಿತಿಗಳಿಗೂ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಈ ವಾರದೊಳಗೆ ಶಾಸಕರ ನಾಮನಿರ್ದೆಶನ ಪ್ರಕ್ರಿಯೆ ನಡೆಯಲಿದ್ದು, ಅದರ ಜತೆಜತೆಗೆ, ಗ್ಯಾರಂಟಿ ಸಮಿತಿಗಳ ನೇಮಕಕ್ಕೂ ಸಿದ್ದತೆಯಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.