Author: kannadanewsnow05

ಹಾವೇರಿ : ನದಿಯಲ್ಲಿ ಮುಳುಗುತ್ತಿದ್ದ ವೃದ್ಧೆಯನ್ನು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನೊಬ್ಬ ತನ್ನ ಜೀವದ ಹಂಗನ್ನು ತೊರೆದು ರಕ್ಷಣೆ ಮಾಡಿದ ಆದರೆ ಆಕೆಯನ್ನು ನದಿಯ ದಡದಲ್ಲಿ ತರುವಷ್ಟರಲ್ಲಿ ಪ್ರಾಣ ಹಾರಿ ಹೋಗಿತ್ತು. ಹೌದು ಕುಮದ್ವತಿ ನದಿಯಲ್ಲಿ ಮುಳುಗಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ‌ಜಿಲ್ಲೆ ರಟ್ಟಿಹಳ್ಳಿ ತಾಲೂಕು ಮಾಸೂರು, ತಿಪ್ಪಾಯಿಕೊಪ್ಪ ಸೇತುವೆ ಬಳಿ ಇಂದು ನಡೆದಿದೆ. ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ವಯೋವೃದ್ಧೆಯನ್ನು ಬಸ್ ಚಾಲಕ ಜೀವದ ಹಂಗು ತೊರೆದು ರಕ್ಷಿಸಲು ಮುಂದಾದರು. ಆದರೆ ನೀರು‌ ಕುಡಿದು ಉಸಿರುಗಟ್ಟಿ ಮೃತಪಟ್ಟ ವಯೋವೃದ್ಧೆ ಮೃತಪಟ್ಟಿದ್ದಾರೆ. ನೀರಲ್ಲಿ ಕೊಚ್ಚಿ ಹೋಗ್ತಿದ್ದ ವೃದ್ಧೆಯನ್ನ ನೋಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ರಕ್ಷಿಸಲು ನೀರಿಗೆ ಹಾರಿದ್ದರು. ವಯೋವೃದ್ಧೆಯನ್ನ ರಕ್ಷಿಸಿ ದಡಕ್ಕೆ ತರುವಷ್ಟರಲ್ಲಿ ವೃದ್ಧೆಯ ಜೀವ ಹಾರಿ ಹೋಗಿತ್ತು. ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ಬಸ್ ಚಾಲಕ ಮಜೀದ್ ಗೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ರಟ್ಟಿಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಳ್ಳ ಕೊಳ್ಳ, ನದಿಗಳು ಸೇರಿದಂತೆ ಎಲ್ಲಾ ಡ್ಯಾಮ್ ಗಳು ಕೂಡ ಸಂಪೂರ್ಣವಾಗಿ ಭರ್ತಿಯಾಗಿವೆ. ಇದೀಗ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ರೈತನೊಬ್ಬ ಮೇವು ತರಲು ಹೋದಾಗ ಕೃಷ್ಣಾ ನದಿಯ ಹಿನ್ನೀರಿನಲ್ಲಿ ನೀರು ಪಾಲಾಗಿರುವ ಘಟನೆ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಬಳಿ ಈ ಒಂದು ಘಟನೆ ನಡೆದಿದೆ. ಅಲಗೂರು ಗ್ರಾಮದ ನಿವಾಸಿಯಾಗಿರುವ ವೃದ್ಧ ಸಿದ್ದಪ್ಪ ಆಡೋಳಿ ನಾಪತ್ತೆಯಾಗಿದ್ದಾರೆ. ಕೃಷ್ಣಾ ನದಿಯ ಹಿನ್ನೀರು ಪ್ರದೇಶದ ಬಳಿ ರೈತನ ಸೈಕಲ್ ಮಾತ್ರ ಪತ್ತೆಯಾಗಿದ್ದು. ನದಿಯಲ್ಲಿ ರೈತ ಸಿದ್ದಪ್ಪ ಅಡೊಳ್ಳಿ ಕೊಚ್ಚಿ ಹೋಗಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದರಿಂದ ಪ್ರವಾಹದ ಭೀತಿ ಇದೆ. ಹಾಗಾಗಿ ನದಿ ತಟದಲ್ಲಿ ಯಾರು ಹೋಗಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದರೂ ಸಹ ಇದೀಗ…

Read More

ಬೆಳಗಾವಿ : ರಾಜ್ಯಾದ್ಯಂತ ವರುಣ ಅಬ್ಬರಿಸಿತ್ತಿದ್ದು ಇದೀಗ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಸುಮಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲಿ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮನೆಯ ಮಾಲಿಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಹೌದು ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮಾಲೀಕ ಸಾವನ್ನಾಪ್ಪಿದ್ದರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ದಶರಥ ಬಂಡಿ (80) ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಈ ವೇಳೆ ಮನೆಯ ಸದಸ್ಯರೆಲ್ಲರೂ ಅವರ ಅಂತ್ಯ ಸಂಸ್ಕಾರ ಮುಗಿಸಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ರಾತ್ರೋರಾತ್ರಿ ಉಟ್ಟ ಬಟ್ಟೆಯಲ್ಲಿ ಮನೆಯಿಂದ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಆಗಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿಯ ನಿವಾಸಿ ಲಕ್ಷ್ಮಿ ಇದೀಗ ಅಳಲು ತೋಡಿಕೊಂಡಿದ್ದಾರೆ. ಮಕ್ಕಳು ನಾಯಿಮರಿಗಳ ಜೊತೆ ಕಾಳಜಿ ಕೇಂದ್ರಕ್ಕೆ ಇದೀಗ ಕುಟುಂಬ ಶಿಫ್ಟ್ ಆಗಿದೆ.

Read More

ಹಾಸನ : ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು ಈಗಾಗಲೇ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಶಿರೂರು ಗುಡ್ಡ ಕುಸಿತದಲ್ಲಿ ಹಲವರು ಮೃತಪಟ್ಟಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದೆ. ಹಾಗಾಗಿ ಇದೀಗ ಮತ್ತೆ ಶಿರಾಡಿ ಘಾಟ್​ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್​ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್​ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್​​ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಮರುದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜಿ.ಟಿ.ದೇವೇಗೌಡರು ಕಾಂಗ್ರೆಸ್ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ. ನನ್ನಂತಹ ರಾಜಕಾರಣಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲೇ ಯಾರು ಇಲ್ಲ ಎಂದು ತಮ್ಮ ವಿರುದ್ಧ ಬಂದ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಜಿ.ಟಿ.ದೇವೇಗೌಡರಿಗೆ ಮಾದಗಳ್ಳಿಯಲ್ಲಿ 1 ಎಕರೆ ಜಾಗ ಕೊಟ್ಟಿದ್ದೇವೆ ಅಂತ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹೇಳಿದ್ದಾರೆ. ನನ್ನ ರಾಜಕೀಯ ಜೀವನ ನಿಮಗೆ ಗೊತ್ತಿಲ್ಲ. ನಾನು ಯಾವುದೇ ಒಂದು ಚೌಲ್ಟ್ರಿ, ಪೆಟ್ರೋಲ್ ಬಂಕ್, ಸ್ಕೂಲ್, ಕಮರ್ಷಿಯಲ್ ಬಿಲ್ಡಿಂಗ್ ಮಾಡಿಲ್ಲ ಎಂದು ಕಿಡಿ ಕಾರಿದರು. ನನ್ನ ತಂದೆ 15 ಎಕರೆ ಜಾಗ ಮಾಡಿದ್ದರು. ಪ್ರಗತಿಪರ ರೈತನಾಗಿ ದುಡಿದು ಪಕ್ಕದಲ್ಲಿ ಜಮೀನು ಖರೀದಿ ಮಾಡಿದ್ದೇನೆ. ಸಾಲಗಾರನಾಗಿ ರಾಜಕಾರಣ ಮಾಡುತ್ತಿದ್ದೇನೆ.‌ ಮುಡಾದ ಶೇ.90ರಷ್ಟು ಜಾಗ ಇರೋದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ. ಗೋವಿಂದರಾಜು…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಕುರಿತು ತನಿಖೆ ಚುರುಕುಗೊಳಿಸಿರುವ ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಚಿನ್ನದ ಬಿಸ್ಕೆಟ್ ವಶಕ್ಕೆ‌ ಪಡೆದಿದೆ. ಆರೋಪಿಯ ಹೈದರಾಬಾದ್ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ‌.ಚಿನ್ನದ ಬಿಸ್ಕೆಟ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಐಟಿಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ಆರೋಪಿ ಸತ್ಯನಾರಾಯಣ ವರ್ಮಾ, ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಮಾಹಿತಿಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ವಾಲ್ಮೀಕಿ ನಿಗಮದಲ್ಲಿ ನಡೆದಿರುವಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಈ ಕುರಿತು ಇತ್ತೀಚೆಗೆ ಸದನದಲ್ಲೂ ಕೂಡ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು.

Read More

ಬೆಂಗಳೂರು : ಕರ್ನಾಟಕದಲ್ಲಿ ನಾಪತ್ತೆಯಾಗುತ್ತಿರುವ ಮಹಿಳೆಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆಗೂ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. 2021ರಿಂದ ಈವರೆಗೆ 3 ವರ್ಷಗಳಲ್ಲಿ ಒಟ್ಟು 42,237 ಮಹಿಳೆಯರು ನಾಪತ್ತೆಯಾಗಿರುವ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದು, ಅವರಲ್ಲಿ 39389 ಮಹಿಳೆಯರಷ್ಟೇ ಪತ್ತೆಯಾಗಿದ್ದಾರೆ ಎಂದು ಗೃಹ ಇಲಾಖೆ ಸ್ಪೋಟಕ ಮಾಹಿತಿ ಬಹಿರಂಗಗೊಳಿಸಿದೆ. ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಕೇಳಿರುವ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಇಲಾಖೆ ಈ ಆತಂಕಕಾರಿ ಮಾಹಿತಿಯನ್ನು ಒದಗಿಸಿದೆ. ಗೃಹ ಇಲಾಖೆ ನೀಡುವ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಇನ್ನೂ ಅಧಿಕೃತವಾಗಿ ಸುಮಾರು 2848 ಮಹಿಳೆಯರು ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿಲ್ಲ. ನಾಪತ್ತೆ ಆಗಿರುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮಾನವ ಕಳ್ಳ ಸಾಗಣೆ ದಂಧೆ ಮೇಲೂ ನಿಗಾ ಇಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.ಕಳೆದ ಮೂರುವರೆ ವರ್ಷದಲ್ಲಿ ಒಟ್ಟು 42,237 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 39389 ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ. ಉಳಿದ ಮಹಿಳೆಯರು ಎಲ್ಲಿದ್ದಾರೆ…

Read More

ದಾವಣಗೆರೆ : ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಕಳೆದ ಕೆಲವು ದಿನಗಳಿಂದ ದಾವಣಗೆರೆ ಜಿಲ್ಲೆಯ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿದ್ದು, ತುಂಗಾಭದ್ರಾ ನದಿ ತುಂಬಿ ಹರಿಯುತ್ತಿದೆ. ನದಿ ದಡದಲ್ಲಿರುವ ಗ್ರಾಮವೊಂದರ ಸ್ಮಶಾನವೂ ಜಲಾವೃತಗೊಂಡಿದೆ. ಜನರು ನದಿಯಲ್ಲೇ ಮೃತದೇಹ ಹೊತ್ತು ಸಾಗಿ ಅಂತ್ಯಸಂಸ್ಕಾರ ಮಾಡಿದರು. ಗುತ್ತೂರು ಗ್ರಾಮದ ಎಚ್​.ಎಂ.ಸಿ.ಮಂಜಪ್ಪ (70) ಎಂಬವರು ಗುರುವಾರ ಅಕಾಲಿಕವಾಗಿ ಸಾವನ್ನಪ್ಪಿದ್ದರು. ನದಿ ದಡದಲ್ಲೇ ಸ್ಮಶಾನವಿದೆ. ಆದರೆ ನದಿ ನೀರು ಇಡೀ ಸ್ಮಶಾನವನ್ನು ಆವರಿಸಿಕೊಂಡಿದೆ.ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಶವಸಂಸ್ಕಾರಕ್ಕೂ ಸ್ಥಳವಿಲ್ಲದ ಪರಿಸ್ಥಿತಿ ಇದೆ. ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗ್ರಾಮದ ಸ್ಮಶಾನ ಜಲಾವೃತವಾಗಿದೆ. ಇದರ ನಡುವೆ, ಗ್ರಾಮಸ್ಥರು ನೀರಿನಲ್ಲೇ ಶವ ಹೊತ್ತು ಸಾಗಿ ಹರಸಾಹಸಪಟ್ಟು ಶವಸಂಸ್ಕಾರ ಮಾಡಿದರು. ಮಳೆಗಾಲದಲ್ಲಿ ಈ ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದರೆ ಅಂತ್ಯಸಂಸ್ಕಾರ ಮಾಡುವುದು ಜನರಿಗೆ ದೊಡ್ಡ ತಲೆನೋವು. ಗುರುವಾರ ಜಲಾವೃತವಾದ ಸ್ಮಶಾನದಲ್ಲೇ ತೆರಳಿ ಅಂತ್ಯಸಂಸ್ಕಾರ ಮಾಡುವ ಮೂಲಕ ಗುತ್ತೂರು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಟರಿ ಧರಣಿ ನಡೆಸಿ ವಿರೋಧ ಪಕ್ಷದ ನಾಯಕರು ತಾವೇ ತೋಡಿದ ಬಾವಿಯಲ್ಲಿ ಬೀಳಲು ಅಣಿಯಾಗುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಅಧಿಕಾರಿಗಳಿಂದ ಅವ್ಯವಹಾರ ನಡೆದಿದ್ದು ₹89 ಕೋಟಿಗಳಷ್ಟಾದರೆ ಸದನದಲ್ಲಿ ವಿರೋಧ ಪಕ್ಷದ ನಾಯಕರು ₹187 ಕೋಟಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿದ ದುರುಪಯೋಗಪಡಿಸಿಕೊಳ್ಳಲಾಗಿದ್ದ ಹಣವನ್ನು ವಾಪಸ್ಸು ಪಡೆಯಲಾಗಿದೆ. ಎಸ್ಐಟಿ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದರೂ ಈಡಿ ಮತ್ತು ಸಿಬಿಐಗೆ ದೂರು ನೀಡಿದ್ದಾರೆ. ಸದನದಲ್ಲಿ ಪ್ರಕರಣದ ಚರ್ಚೆಯಾಗುವಾಗ, ಅರ್ ಅಶೋಕ ಮತ್ತು ಪರಿಷತ್ ನಲ್ಲಿ ಸಿಟಿರವಿ ಅವರಿಗೆ ಮುಕ್ತವಾಗಿ ಮಾತಾಡುವ ಅವಕಾಶ ಕಲ್ಪಿಸಲಾಗಿದೆ ಎಂದರು. ಆದರೆ ಮುಖ್ಯಮಂತ್ರಿಯವರು ಮಾತಾಡಲು ಎದ್ದು ನಿಂತಾಗ ಅವರ ಪ್ರತಿಮಾತಿಗೆ ಕೊಕ್ಕೆ ಹಾಕುತ್ತಿದ್ದಾರೆ…

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಗಳ ಸಮೇತ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರ್ಗೀಟು ನೀಡಿದ್ದು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಇದೆ ವೇಳೆ ಆಗ್ರಹಿಸಿದರು. ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಬಡವರಿಗೆ ಕೊಡಬೇಕಿದ್ದ ನೀವೇಶನವನ್ನು ಬೇಕಾದವರಿಗೆ ಕೊಟ್ಟಿದ್ದಾರೆ. ಮುಡಾ ನಿವೇಶನವನ್ನು ತಮ್ಮ ಕುಟುಂಬದವರಿಗೆ ಹಂಚಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರಾಜಕೀಯ ಮುಖಂಡರಿಗೆ ಸೈಟ್ ಹಂಚಿಕೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 1931 ಇದರಲ್ಲಿ ಹರಾಜಿನಲ್ಲಿ ನಿಂಗ ಎಂಬ ಕುಟುಂಬ ಜಮೀನು ಪಡೆದಿದ್ದರು. ನಿಂಗ ಎಂಬುವವರಿಗೆ ಮೂವರು ಮಕ್ಕಳು ಇದ್ದಾರೆ. ನಿಂಗ ಎಂಬುವವರ ಮೂರನೇ ಮಗ ದೇವರಾಜನಿಂದ ಜಮೀನು ಖರೀದಿಸಿದ್ದಾರೆ. ಸಿಎಂ ಬಾಮೈದ ನಿಂಗ ಎಂಬುವವರ ಮೂರನೇ ಮಗನಿಂದ…

Read More