Author: kannadanewsnow05

ಇಸ್ಲಾಮಾಬಾದ್ : ಪಾಕಿಸ್ತಾನದ ದಾಳಿಗೆ ಭಾರತ ಪ್ರತಿಕಾರವಾಗಿ ಪ್ರತಿದಾಳಿ ಮಾಡಿದೆ. ಇದರಿಂದ ಪಾಕಿಸ್ತಾನ ತತ್ತರಿಸಿ ಹೋಗಿದೆ. ಇದರ ನಡುವೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್(PSL) ನ ಉಳಿದ ಕ್ರಿಕೆಟ್ ಪಂದ್ಯಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಸ್ಥಳಾಂತರಿಸಲಾಗಿದೆ.ಮೇ 8 ರಂದು ರಾವಲ್ಪಿಂಡಿ ಕ್ರೀಡಾಂಗಣವು ಡ್ರೋನ್ ದಾಳಿಯಿಂದ ಹಾನಿಗೊಳಗಾದ ಹಿನ್ನೆಲೆ ಪಿಎಸ್ಎಲ್ ಪಂದ್ಯಗಳು ದುಬೈಗೆ ಶಿಫ್ಟ್ ಆಗಿವೆ. ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಿಗದಿಯಾಗಿದ್ದ ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯವನ್ನು ಭಾರತೀಯ ಸಶಸ್ತ್ರ ಪಡೆಗಳು ರಾವಲ್ಪಿಂಡಿ ಸೇರಿದಂತೆ ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ರದ್ದುಗೊಳಿಸಲಾಯಿತು. PSL ನ ಉಳಿದ ಎಲ್ಲಾ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧಿಕಾರಿಗಳು ದೃಢಪಡಿಸಿದ್ದಾರೆ. ಭಾರತದ ದಾಳಿ ಮತ್ತು ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ PSL ಯೋಜಿಸಿದಂತೆ ಮುಂದುವರಿಯುತ್ತದೆ ಎಂದು PCB ಹೇಳಿದೆ.…

Read More

ನವದೆಹಲಿ : ಪಾಕಿಸ್ತಾನದಿಂದ ಭಾರತದ ಮೇಲೆ ದಾಳಿ ಮುಂದುವರೆದಿದ್ದು ಇದೀಗ ನಿನ್ನೆ ಪಾಕಿಸ್ತಾನ ಅನೇಕ ಶಸ್ತ್ರಾಸ್ತ್ರ ಬಳಸಿಕೊಂಡು ಭಾರತದ ಮೇಲೆ ದಾಳಿ ಮಾಡಿದೆ ಎಂದು ಭಾರತೀಯ ಸೇನೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ ಇದರ ಜೊತೆಗೆ ಪಾಕಿಸ್ತಾನದ ದಾಳಿಯ ವಿಡಿಯೋ ಸಹ ಭಾರತೀಯ ಸೇನೆ ಬಿಡುಗಡೆ ಮಾಡಿದೆ. ನಿನ್ನೆ ಪಾಕಿಸ್ತಾನದಿಂದ ಹಲವು ಬಾರಿ ದಾಳಿಯಾಗಿದೆ ಎಂದು ಭಾರತೀಯ ಸೇನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು, ಅನೇಕ ಶಸ್ತ್ರಾಸ್ತ್ರ ಬಳಸಿಕೊಂಡು ಪಾಕಿಸ್ತಾನ ದಾಳಿ ಮಾಡಿದೆ. ನಾವು ಸಹ ಪಾಕಿಸ್ತಾನದ ದಾಳಿಗಳನ್ನು ಪರಿಣಾಮಕಾರಿಯಾಗಿ ಹೆಮ್ಮೆಟ್ಟಿಸಲಾಗಿದೆ. ಕದನ ವಿರಾಮ ಉಲ್ಲಂಘನೆಗೆ ತಕ್ಕ ಉತ್ತರ ನೀಡಲಾಗಿದೆ ಎಂದು ವಿಡಿಯೋ ಭಾರತೀಯ ಸೇನೆ ವಿಡಿಯೋ ಬಿಡುಗಡೆ ಮಾಡಿದೆ. https://twitter.com/adgpi/status/1920659952630460441?t=b6HHvzaPFVYZdhYl195IXQ&s=19

Read More

ಜಮ್ಮು ಕಾಶ್ಮೀರ : ತಡರಾತ್ರಿ ಜಮ್ಮು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿತ್ತು. ಈ ಒಂದು ದಾಳಿಯಲ್ಲಿ ಭಾರತದ ಮೂಲದ ಮಹಿಳೆಯೋರ್ವರು ಸಾವನಪ್ಪಿದ್ದರು. ಹಾಗೂ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಇದೀಗ ಕೆಲವು ಗಂಟೆಗಳ ನಂತರ ಪಾಕಿಸ್ತಾನ ಮತ್ತೆ ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಶೆಲ್ ದಾಳಿ ಮುಂದುವರೆಸಿದೆ ಹೌದು ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನ್ ಮತ್ತೆ ಶೆಲ್ ದಾಳಿ ಆರಂಭಿಸಿದೆ. ಪಾಕಿಸ್ತಾನದಿಂದ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಕೆಲವು ಗಂಟೆಗಳ ಅಂತರದಲ್ಲಿ ಮತ್ತೆ ಆರಂಭಿಸಿದೆ. ಜಮ್ಮು ಕಾಶ್ಮೀರದ ಏರ್ಪೋರ್ಟ್ ಗುರಿಯಾಗಿಸಿಕೊಂಡು ಇದೀಗ ದಾಳಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

Read More

ನವದೆಹಲಿ : ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಭಾರತದ ಮೇಲೆ ದಾಳಿ ಮಾಡುತ್ತಿದ್ದು ಎಲ್ಲಾ ಡ್ರೋನ್ ಮತ್ತು ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿದೆ. ಇದುವರೆಗೂ ಪಾಕಿಸ್ತಾನದ 50 ಡ್ರೋನ್ ಗಳನ್ನು ಭಾರತ ಹೊಡೆದುರುಳಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ 6 ಮರ್ಮಘಾತ ನೀಡಿದೆ. ಹೌದು ಭಾರತವನ್ನು ಕೆಣಕಿದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು 6 ಮರ್ಮಾಘಾತ ನೀಡಿದ್ದಾರೆ. ಪಾಕಿಸ್ತಾನದ ಕ್ಷಿಪಣಿ ದಾಳಿಗೆ ಭಾರತೀಯ ಸೈನಿಕರು ಕೂಡ ತಕ್ಕ ಪ್ರತ್ಯುತ್ತರ ನೀಡಿದ್ದು, ಇದುವರೆಗೂ ಪಾಕಿಸ್ತಾನ ಭಾರತದ ಮೇಲೆ ಎಲ್ಲಾ ರೀತಿಯಲ್ಲಿ ದಾಳಿ ಮಾಡಿದೆಯೋ, ಅವೆಲ್ಲವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ. 1) ಪಾಕಿಸ್ತಾನದ ಫೈಟರ್ ಜೆಟ್ ಗಳು ಧ್ವಂಸವಾಗಿವೆ. 2) ಪಾರ್ಕ್ ನ AWACS ಸರ್ವೇಕ್ಷಣ ವಿಮಾನ ಧ್ವಂಸವಾಗಿದೆ. 3) ಪಾಕಿಸ್ತಾನದ 4 ಕಡೆಯ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ 4) ಪಾಕಿಸ್ತಾನದ ಡ್ರೋನ್ ಗಳನ್ನು ಸಹ ಭಾರತ ಧ್ವಂಸಗೊಳಿಸಿದೆ. 5) ಲಾಹೋರ್, ಸಿಯಾಲ್ ಕೋಟ್ ಸೇರಿ 4 ಕಡೆ ದಾಳಿ ನಡೆಸಿದೆ. 6)…

Read More

ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಿಂದ ದೇಶ ತೊರೆಯುವಂತೆ ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳಿಗೆ ಗಡುವು ನೀಡಿತ್ತು. ಈ ವಿಚಾರವಾಗಿ ನಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮೈಸೂರು ಮೂಲದ ತಾಯಿಯೊಬ್ಬಳು ತನ್ನ ಮೂವರು ಪಾಕಿಸ್ತಾನ ಮಕ್ಕಳ ಪರವಾಗಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು.ಇದೀಗ ಕೇಂದ್ರ ಸರ್ಕಾರ ದೇಶದ ಪ್ರಜೆಗಳ ರಕ್ಷಣೆಯಿಂದಾಗಿ ಪಾಕಿಸ್ತಾನಿ ನಿವಾಸಿಗಳು ದೇಶ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ. ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕೆಂಬ ಕೇಂದ್ರ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ. ಜೊತೆಗೆ ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಪಾಕಿಸ್ತಾನದ ಬಲೂಚಿಸ್ತಾನದ 8…

Read More

ಇಸ್ಲಾಮಾಬಾದ್ : ಭಾರತ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಸಹ ನಾವು ಭಾರತದ ಹಲವು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿತ್ತು. ಇದೇ ವಿಚಾರವಾಗಿ ಇದೀಗ ಪಾಕಿಸ್ತಾನ ಪ್ರಜೆ ಭಾರತದ ದಾಳಿಯನ್ನು ಶ್ಲಾಘನೆ ಮಾಡಿದ್ದು, ತಮ್ಮ ದೇಶದ ಸುಳ್ಳುಗಳನ್ನು ಬಯಲಿಗೆಳೆದು, ಭಾರತದ ನಿಖರ ದಾಳಿಗಳನ್ನು ಶ್ಲಾಘಿಸಿದ್ದಾನೆ. ವೈರಲ್ ಆಗಿರುವ ವಿಡಿಯೊದಲ್ಲಿ ಈ ಪಾಕಿಸ್ತಾನದ ವ್ಯಕ್ತಿ ಭಾರತವು 24 ಕ್ಷಿಪಣಿಗಳನ್ನು ಉಡಾಯಿಸಿದ್ದು, ಪಾಕಿಸ್ತಾನವು ಒಂದೇ ಒಂದು ಕ್ಷಿಪಣಿಯನ್ನು ತಡೆಯಲು ವಿಫಲವಾಯಿತು ಎಂದು ಹೇಳಿದ್ದಾನೆ . ಪಾಕಿಸ್ತಾನದ ಮಾಧ್ಯಮಗಳು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಹರಡಿದ್ದ ಮಾಹಿತಿಯನ್ನು ಸುಳ್ಳು ಎಂದು ಈ ವ್ಯಕ್ತಿ ಹೇಳಿದ್ದಾನೆ. ಅವೆಲ್ಲವೂ ತಪ್ಪು ವರದಿಗಳು ಎಂದು ಪಾಕಿಸ್ತಾನದ ವ್ಯಕ್ತಿಯೇ ಖಂಡಿಸಿದ್ದಾನೆ. ಭಾರತ ತನ್ನ ಎಲ್ಲ ಗುರಿಗಳನ್ನು ಯಶಸ್ವಿಯಾಗಿ ಹೊಡೆದಿದೆ. ಪಾಕಿಸ್ತಾನದ ರಕ್ಷಣಾ ವ್ಯವಸ್ಥೆ ಒಂದು ಕ್ಷಿಪಣಿಯನ್ನೂ ತಡೆಯಲಿಲ್ಲ. ಭಾರತ ನಮ್ಮ ಮನೆಯೊಳಕ್ಕೆ ಒಳನುಗ್ಗಿ ದಾಳಿ ಮಾಡಿತು, ಇದು ಸತ್ಯ. ಇರಾನ್…

Read More

ನವದೆಹಲಿ : ಭಾರತದ ಮೇಲೆ ಪಾಕಿಸ್ತಾನ ತಡರಾತ್ರಿ ಇಂದಲೂ ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಆದರೆ ಭಾರತ ಮಾತ್ರ ಪಾಕಿಸ್ತಾನದ ಯಾವುದೇ ಡ್ರೋನ್ ಗಳನ್ನು ಗಡಿಯಿಂದ ಒಳಗಡೆ ಪ್ರವೇಶಕ್ಕೆ ಬಿಡದೆ, ಎಲ್ಲ ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆಯಿಂದ ಮಾಹಿತಿ ಲಭ್ಯವಾಗಿದೆ. ಹೌದು ಭಾರತದ ಮೇಲೆ ಪಾಕಿಸ್ತಾನ ಇದುವರೆಗೂ 50 ಡ್ರೋನ್ ಗಳ ಮೂಲಕ ದಾಳಿ ಮಾಡಿತ್ತು. ಇದೀಗ ಎಲ್ಲಾ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನಾಪಡೆ ತಕ್ಕ ಪ್ರತ್ಯುತ್ತರ ನೀಡಿ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನದ ಡ್ರೋನ್ ಗಳು ಕಂಪ್ಲೀಟ್ ಆಗಿ ನಿಷ್ಕ್ರಿಯಗೊಂಡಿವೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಪಹಲ್ಗಾಮ್ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಕೆ.ಆರ್.ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್‌ಸ್ಟ್‌ರ್‌ವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ. ಈ ವೇಳೆ ಎಲ್ಲಾ ಸಚಿವರು, ಶಾಸಕರು, ಕೆಪಿಸಿಸಿ ಮುಂಚೂಣಿ ಘಟಕಗಳ ಪದಾಧಿಕಾರಿ ಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪಕ್ಷ ಸೂಚಿಸಿದೆ. ಸಾರ್ವಜನಿಕರಿಗೂ ಕರೆ  ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರ ಜೊತೆಗೆ ‘ದೇಶಪ್ರೇಮ ಮೆರೆಯೋಣ, ಐಕ್ಯತೆ ಸಾರೋಣ’ ಎಂಬ ಘೋಷವ್ಯಾಕ್ಯ ದಡಿ ಸರ್ಕಾರಿ, ಖಾಸಗಿ ನೌಕರರು, ಚಿತ್ರರಂಗದವರು, ಪಕ್ಷ ಭೇದ ಮರೆತು ಎಲ್ಲಾ ಸಾರ್ವಜನಿಕರು ಭಾಗವಹಿಸ ಬೇಕೆಂದು ಕರೆ ನೀಡಿದೆ. ಪಕ್ಷದ ಕಾಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಡ್ಡಾಯವಾಗಿ ಭಾರತದ ಧ್ವಜ ಮಾತ್ರ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿದೆ. ಬೆಂಬಲ…

Read More

ನವದೆಹಲಿ : ಕಳೆದ ಎರಡು ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಮೀಸಲ್ ದಾಳಿಗೆ ಯತ್ನಿಸುತ್ತಿದ್ದು ಎಲ್ಲಾ ಕ್ಷಿಪಣಿಗಳನ್ನು ಭಾರತದ ಸೇನಾಪಡೆ ಹೊಡೆದರು ಉಳಿಸಿದೆ ಇದೀಗ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿಗೆ ಯತ್ನಿಸಿದ್ದು, ಶಿರಾ ಪಡೆ ಮತ್ತೆ ಅವುಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಹೌದು ಪಾಕಿಸ್ತಾನ ಡ್ರೋನ್ ಕ್ಷಿಪಣಿ ದಾಳಿ ವಿಫಲಗೊಳಿಸಿದ ಭಾರತ. ಜಮ್ಮು-ಕಾಶ್ಮೀರ್, ಪಠಾನ್ ಕೋಟ್, ಉಧಂಪುರ್ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ದಾಳಿಗೆ ಯತ್ನಿಸಿದೆ ಪಾಕಿಸ್ತಾನದ ಡ್ರೋನ್ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.

Read More

ನವದೆಹಲಿ : ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧದ ಉದ್ಭಗ್ನತೆ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೂಡ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಭಾರತ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ಹಿನ್ನೆಲೆ ಧೈರ್ಯಲಿ ಘೋಷಣೆ ಮಾಡಲಾಗಿದ್ದು, ಹಾಗಾಗಿ

Read More