Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದಕ್ಕೆ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು ಸಹಿಸಲು ಆಗುತ್ತಿಲ್ಲ. ಮತ್ತೆ ನಾನು ಸಿಎಂ ಆಗಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ ಕುರಿತಂತೆ ದಾಖಲೆಗಳ ಸಮೇತ ಮಾತನಾಡಿದ ಅವರು, 1983 ರಲ್ಲಿ ಶಾಸಕನಾದೆ 1984 ರಲ್ಲಿ ನಾನು ಮಂತ್ರಿಯಾದವನು. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೂ ನನ್ನ ವಿರುದ್ಧ ಒಂದು ಕಪ್ಪು ಚುಕ್ಕೆ ಕೂಡ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಬಿಜೆಪಿ ಜೆಡಿಎಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಜೆಡಿಎಸ್ ನವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು ಎರಡು ವಾರಗಳ ಕಾಲ ಮುಂಗಾರು ಅಧಿವೇಶನವನ್ನು…
ಹುಬ್ಬಳ್ಳಿ : ಕಳ್ಳತನ ಆರೋಪ ಹೊತ್ತಿರುವ ಓರ್ವನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಮಹಿಳಾ PSI ಒಬ್ಬರು ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಕಳ್ಳನನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗಳ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ. ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಫರ್ಹಾನ್ಗೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಬಂಧಿಸಲು ಗಾಮನ ಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೇಬಲ್ ಸುಜಾತ ಹಾಗೂ ಮಹೇಶ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಕವಿತಾ ಅವರು ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.…
ಮೈಸೂರು : ತನ್ನ ಅತ್ತೆಯ ಮಗಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದನ್ನು ನೋಡಿ ಮನನೊಂದು ಯುವಕನೊಬ್ಬ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಮೈಸೂರಿನ ಮಂಡಕಳ್ಳಿಯ ನಿವಾಸಿ ನಾಗರಾಜು ಮತ್ತು ಮಂಜುಳಾ ದಂಪತಿ ಪುತ್ರಿ ಮೋನಿಕಾಳನ್ನು (20) ಜ್ಯೋತಿ ನಗರದ ಎಂಸಿಸಿ ಕಾಲೋನಿಯ ನಿವಾಸಿ ಮನು(22) ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದನು. ಇಬ್ಬರ ಕುಟುಂಬದವರು ಸಹ ಅವರ ಪ್ರೀತಿಗೆ ಒಪ್ಪಿ ಮದುವೆ ಮಾಡಲು ಸಹ ಒಪ್ಪಿಕೊಂಡಿದ್ದರು. ಆದರೆ ಬುಧವಾರ ರಾತ್ರಿ ಮೋನಿಕಾ ಮತ್ತು ಮನು ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳವಾಗಿದ್ದು, ಇದರಿಂದ ಮನನೊಂದ ಮೋನಿಕಾ ಕೆಲಸ ಮಾಡುತ್ತಿದ್ದ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಹೊತ್ತಾದರೂ ಕೋಣೆಯಿಂದ ಮೋನಿಕಾ ಹೊರ ಬಾರದೇ ಇರುವುದನ್ನ ಗಮನಿಸಿ ಮನೆ ಮಾಲೀಕರು ಮೋನಿಕಾ ಅವರ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಮೋನಿಕಾ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಮನು ಕೂಡ ಆಸ್ಪತ್ರೆಗೆ ಬಂದಿದ್ದು, ಅಲ್ಲಿ ವೈದ್ಯರು…
ಹೆಣ್ಣು ಒಂದು ಕುಟುಂಬದ ಕಣ್ಣು ಎನ್ನುತ್ತಾರೆ, ಹೆಣ್ಣನ್ನು ಮನೆಯ ನಂದಾದೀಪ ಎಂದು ಕರೆಯುತ್ತಾರೆ, ಮನೆಯ ಮಹಾಲಕ್ಷ್ಮಿ , ಹೆಣ್ಣು ಜೀವನದಲ್ಲಿ ಬರುವುದೇ ಸೌಭಾಗ್ಯ ಎನ್ನುತ್ತಾರೆ. ಹೆಣ್ಣು ಮಕ್ಕಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ, ಸಹೋದರಿ ರೂಪದಲ್ಲಿ ಬದುಕಿನಲ್ಲಿ ಬರುತ್ತಾರೆ. ಈ ರೀತಿ ಒಂದು ಹೆಣ್ಣು ನಿಮ್ಮ ಜೀವನದಲ್ಲಿ ಬರಬೇಕು ಎಂದರೆ ಅದಕ್ಕೆ ಋಣ ಇರಬೇಕು, ಅದೃಷ್ಟ ಇರಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಚಿತ್ರದುರ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿನೋದ್ ರಾಜ್ ಇಂದು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ರೇಣುಕಾ ಸ್ವಾಮಿ ಅವರ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾರೆ. ಹೌದು ಇಂದು ರೇಣುಕಾ ಸ್ವಾಮಿ ಮನೆಗೆ ವಿನೋದ್ ರಾಜ್ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದ ವಿ ಆರ್ ಎಸ್ ಬಡಾವಣೆಯ ಮನೆಗೆ ಭೇಟಿ ನೀಡಲಿದ್ದಾರೆ.ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ವಿನೋದ್ ರಾಜ್ ಸಾಂತ್ವನ ಹೇಳಲಿದ್ದಾರೆ. ಹಾಗಾಗಿ ಖುದ್ದು ವಿನೋದ್ ಅವರೇ ಕಾರು ಚಾಲನೆ ಮಾಡಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದಾರೆ. ರೇಣುಕಾ ಸ್ವಾಮಿ ಕುಟುಂಬ ಭೇಟಿ ಮಾಡಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದಾರೆ. ಇತ್ತ ನಟ ದರ್ಶನ್ ಜೈಲಿನಿಂದ ಬಿಡುಗಡೆಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.ಇಂದು ಬೆಳಿಗ್ಗೆ ಅವರು ನವಚಂಡಿಕಾ ಹೋಮ, ಪಾರಾಯಣ, ಸೇರಿದಂತೆ ಹಲವು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ಗೆ ಪಂಚೆ ಧರಿಸಿ ಬಂದ ರೈತ ಫಕೀರಪ್ಪರನ್ನು ಒಳಗೆ ಬಿಡದ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಆಸ್ತಿತೆರಿಗೆ ಕೂಡ ಬಾಕಿ ಉಳಿಸಿಕೊಂಡಿದ್ದ ಜಿಟಿ ಮಾಲ್ಗೆ ಬೀಗ ಬಿದ್ದಿತ್ತು. ಇದೀಗ ಈ ಘಟನೆಯಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಹೊಸದೊಂದು ಆದೇಶ ಹೊರಡಿಸಲು ಸಜ್ಜಾಗಿದೆ. ಹೌದು ಪಂಚೆ ಧರಿಸಿದ್ದ ವ್ಯಕ್ತಿಯನ್ನ ಒಳಗೆ ಬಿಡಲು ನಿರಾಕರಿಸಿದ್ದಕ್ಕಾಗಿ ಮಾಲ್ ಮಾಲೀಕರು ರೈತರ ಬಳಿ ಕ್ಷಮೆ ಕೂಡ ಕೇಳಿದ್ದರು. ಇದೀಗ ಈ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ, ಬೆಂಗಳೂರಿನ ಮಾಲ್ಗಳಿಗೆ ಹೊಸ ನಿಯಮ ರೂಪಿಸಲು ಹೊರಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಒಂದಷ್ಟು ನಿಯಮಗಳನ್ನ ರೆಡಿಮಾಡುತ್ತಿರುವ ಬಿಬಿಎಂಪಿ, ಇನ್ಮುಂದೆ ಮಾಲ್ಗಳಲ್ಲಿ ಬಟ್ಟೆ, ಜಾತಿ, ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದರೆ ಬಿಸಿ ಮುಟ್ಟಿಸಲು ಮುಂದಾಗಿದೆ. ಬೆಂಗಳೂರಿನ ಬಹುತೇಕ ಮಾಲ್ಗಳಲ್ಲಿ ಉಡುಗೆ-ತೊಡುಗೆ ನೋಡಿ ಸಿಬ್ಬಂದಿ ವರ್ತನೆ ಬದಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಇನ್ಮುಂದೆ ತಾರತಮ್ಯ ಮಾಡಿದರೆ…
ಮೈಸೂರು : ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹಾಗೂ ರೈತರಿಗೆ ಈ ವರ್ಷ ಭಾರಿ ಮಳೆ ಆಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಹಳ್ಳಕೊಳ್ಳ ನದಿ ಸೇರಿದಂತೆ ಎಲ್ಲಾ ಡ್ಯಾಮ್ ಗಳು ಭರ್ತಿಯಾಗಿ ತುಂಬಿವೆ. ಇದೀಗ ಕಬಿನಿ ಜಲಾಶಯ ಕೂಡ ತುಂಬಿದ್ದು ಇದೇ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಹೌದು ಜುಲೈ 29 ರಂದು ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಬಾಗಿನ ಅರ್ಪಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಬಿನಿ ಡ್ಯಾಮ್ ಗೆ ಸಿದ್ದರಾಮಯ್ಯ ಬಾಗಿನ ಅರ್ಪಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್,ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಬೆಂಗಳೂರು : ಆಗ ತಾನೇ ಜನಿಸಿದ ಮಕ್ಕಳಿಗೆ ಆಹಾರ ತಿನ್ನಿಸಲು ತಾಯಂದಿರು ಸೆರೆಲಾಕ್ ಅನ್ನು ಬಳಸುತ್ತಾರೆ. ಆದರೆ ಈ ಒಂದು ಬಾಕ್ಸ್ ಇದೀಗ ಸಮಾಜದ ಘಾತುಕ ಕೆಲಸಕ್ಕೆ ಬಳಸಿದ್ದು, ಸೆರೆಲ್ಯಾಕ್ ಬಾಕ್ಸ್ ನಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವನ್ನನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸಪುರದ ಬಳಿಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬೆಂಗಳೂರಿನಲ್ಲಿ ಪೊಲೀಸರು ಎಷ್ಟೇ ಕರೀನಾ ಕಮ ಕೈಗೊಂಡರು ಕೂಡ ಶಾಲಾ ಕಾಲೇಜುಗಳಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಲೀಲಾಜಾಲವಾಗಿ ನಡೆಯುತ್ತಿದೆ. ಇದೀಗ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸೆರೆಲಾಕ್ ಬಾಕ್ಸ್ ಇಟ್ಟು ಆರೋಪಿಯೂ ಡ್ರಗ್ಸ್ ಮಾರುತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯಿಂದ 6 ಕೋಟಿ ಮೌಲ್ಯದ ನಾಲ್ಕು ಕೆಜಿ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸಪುರದ ಬಾಡಿಗೆ ಮನೆಯಲ್ಲಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ಸೆರೆಲಾಕ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡಲಾಗಿತ್ತು. ನಂತರ ಆರೋಪಿಯು ಸಣ್ಣ ಸಣ್ಣ ಪ್ಯಾಕ್ ಮಾಡಿ ಆರೋಪಿ…
ಬೆಂಗಳೂರು : ನಾನು 40 ವರ್ಷಗಳ ಕಾಲ ಕಳಂಕರಹಿತ ರಾಜಕೀಯ ಜೀವನ ನಡೆಸಿದಕ್ಕೆ ನನ್ನ ಮೇಲಿನ ಹೊಟ್ಟೆ ಕಿಚ್ಚಿನಿಂದ ವಿರೋಧ ಪಕ್ಷದವರು ವೈಯಕ್ತಿಕ ದಾಳಿ ಮಾಡಿ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮ೦ತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ, ಮುಡಾ ನಿವೇಶನ ಹಂಚಿಕೆ ಹಗರಣ ಮತ್ತು ವಾಲ್ಮೀಕಿ ನಿಗಮ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಪಕ್ಷಗಳು ಘೋಷಣೆಗಳನ್ನು ಕೂಗಿದವು. ಗದ್ದಲದ ನಡುವೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷಗಳ ಕಾಲ ಹಿತ ರಾಜಕೀಯ ಜೀವನ ನಡೆಸಿದ್ದೇನೆ ಇದರಿಂದಾಗಿ ವಿಪಕ್ಷಗಳು ಹೊಟ್ಟೆಕಿಚ್ಚಿನಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಿ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. 2016ರಲ್ಲಿ ನಾನು ಆಗಿದ್ದಾಗಲೂ ಸೈಟ್ ಪಡೆದಿರಲಿಲ್ಲ. 2021ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 50:50 ಹಂಚಿಕೆ ನಿಯಮ ಮಾಡಿ, ಅವರ ಅವಧಿಯಲ್ಲೇ ನಮ್ಮ ಕುಟುಂಬಕ್ಕೆ ಸೈಟ್ ಹಂಚಿಕೆ ಮಾಡಲಾಗಿದೆ. ಇಂತಹ ಜಾಗದಲ್ಲೇ ಸೈಟ್ ಬೇಕು ಎಂದು ನಾನು ಕೇಳಿರಲಿಲ್ಲ. ಹಂಚಿಕೆಯು ಕಾನೂನು…
ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ಕರಾವಳಿ ಭಾಗದಲ್ಲಿ ವರುಣನ ಅಬ್ಬರದಿಂದ ಭಾರಿ ಆವಾಂತರಗಳು ಸೃಷ್ಟಿಯಾಗುತ್ತಿವೆ ಈ ಹಿನ್ನಲೆಯಲ್ಲಿ ಇಂದು ಆರು ಜಿಲ್ಲೆಗಳಲ್ಲಿನ ಹಲವು ತಾಲೂಕಿನ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ 6 ತಾಲೂಕುಗಳಿಗೆ ರಜೆ ಘೋಷಿಸಿದ್ದು, ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹೊಳೆನರಸೀಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೆ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡದ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಉತ್ತರ ಕನ್ನಡದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಡಿಯ, ಹಳಿಯಾಳ, ಯಲ್ಲಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಲ್ಲಿ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ರಜೆ ಘೋಷಿಸಲಾಗಿದೆ.