Author: kannadanewsnow05

ಬಳ್ಳಾರಿ :ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ. ಬೆಳೆ ವಿಮೆಗೆ ಕೊನೆಯ ದಿನ: ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ…

Read More

ಚಿತ್ರದುರ್ಗ : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಸುವ ಅವಧಿಯನ್ನು ಆಡಳಿತಾತ್ಮ ಕಾರಣಗಳಿಂದ ನ.9 ವರೆಗೆ ವಿಸ್ತರಿಸಲಾಗಿದೆ. 9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ವೆಬ್‌ಸೈಟ್ https://cbsietms.nic.in/2024/nvsix/restrationclassIX/registrationclassIX ಹಾಗೂ https://cbsietms.nic.in/2024/nvsix/restrationclassXI/registrationclassXI ನಲ್ಲಿ ಅರ್ಜಿ ಸಲ್ಲಸಬಹುದು. ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

Read More

ಚಿತ್ರದುರ್ಗ : ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಸಿಹಿಸುದ್ದಿಯೊಂದು ನೀಡಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ ನೀಡಲಾಗುತ್ತಿದೆ. ಹೌದು ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆ.ಶಿವಕುಮಾರ್ ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಮಂಜುನಾಥ್ ಮೊಬೈಲ್ ಸಂಖ್ಯೆ 9738485783ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಚಿತ್ರದುರ್ಗ : ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ಕೈಮಗ್ಗ ನೇಕಾರರಿಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5000/- ಗಳನ್ನು ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ ಈಗಾಗಲೇ ನೊಂದಾಯಿತವಾಗಿರುವ ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿ ಪಡೆದು ಅರ್ಹವಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್‍ಲೋಡ್ ಮಾಡಲು ಕೇಂದ್ರ ಕಚೇರಿ ಪತ್ರದಲ್ಲಿ ಸೂಚಿಸಲಾಗಿದೆ. ಅದರಂತೆ 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ನೊಂದಾಯಿತ ಕೈಮಗ್ಗ ನೇಯ್ಗೆ, ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ, 2024ರ ಅ.20ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆ ಹೊಡಿಸಲಾಗಿತ್ತು. ಇನ್ನೂ ಹಲವಾರು ನೇಕಾರರು ಅರ್ಜಿ ಸಲ್ಲಿಸದೇ ಇರುವುದರಿಂದ ಅರ್ಜಿ ಸಲ್ಲಿಸಲು ಇನ್ನೂ ಕಾಲಾವಕಾಶ ಅವಶ್ಯಕತೆ ಇರುವುದನ್ನು ಮನಗಂಡು ಅರ್ಜಿ ಸಲ್ಲಿಕೆ ಅವಧಿಯನ್ನು 2024ರ ನ.10ರೊಳಗಾಗಿ…

Read More

ಮಡಿಕೇರಿ : ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನವನ್ನು ನವೆಂಬರ್, 01 ರಿಂದ 30 ರವರೆಗೆ ಹಮ್ಮಿಕೊಂಡಿದ್ದು, ಪಿಂಚಣಿದಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ಎಸ್.ಪಿ.ರವಿ ಅವರು ಕೋರಿದ್ದಾರೆ. ಮುಖ ಚಹರೆ ಮತ್ತು ಬೆರಳಚ್ಚು ದೃಡೀಕರಣದ ಡಿಜಿಟಲ್ ಪ್ರಕ್ರಿಯೆ ಮೂಲಕ ಈ ಅಭಿಯಾನ ನಡೆಯಲಿದೆ. ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ ಪರಿಶೀಲಿಸಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮೆನ್ ಮೂಲಕ 70 ರೂ. ಶುಲ್ಕ ಪಾವತಿಸಿ, ಈ ಸೌಲಭ್ಯ ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾ ಅಂಚೆ ಇಲಾಖೆ ತಿಳಿಸಿದೆ.

Read More

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ಇದೆ. ಇದೆ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್‌ ಇಲಾಖೆಯು ಪಟಾಕಿ ಸಿಡಿಸುವ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ 1) ಹಸಿರು ಪಟಾಕಿಗಳನ್ನೇ ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು. 2) ಹಸಿರು ಪಟಾಕಿ ಸಂದರ್ಭದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಖಚಿತಪಡಿಸಿಕೊಳ್ಳಬೇಕು. 3) ಅಧಿಕೃತ ಪರವಾನಗಿ ಪಡೆದ ಅಂಗಡಿ / ಮಳಿಗೆಗಳಿಂದಲೇ ಪಟಾಕಿ ಖರೀದಿಸಬೇಕು. 4) ಕೆಲವು ಅಂಗಡಿಗಳಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವ ಸಾಧ್ಯತೆಯಿದ್ದು, ಅಂತಹ…

Read More

ಬೆಂಗಳೂರು : ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಡಗರ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಹ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಹಸಿರು ಪಟಾಕಿ ಹೊಡೆಯಬೇಕು ಎಂದು ಈಗಾಗಲೇ ರಾಜ್ಯಸರ್ಕಾರ ತಿಳಿಸಿದೆ. ಆದರೆ ಪಟಾಕಿ ಸಿಡಿಸುವ ಮುನ್ನ ಯಾವುದೇ ಅನಾಹುತ ಆಗದಂತೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋದು ಒಳ್ಳೆಯದು. ಇದಕ್ಕೆ ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ ಎಂದು ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ. ಹೀಗಿವೆ ವೈದ್ಯರ ಸಲಹೆಗಳು * ಪಟಾಕಿ ಖರೀದಿಸುವಾಗ ಐಎಸ್‌ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ. * ಪಟಾಕಿ ಬಾಕ್ಸ್‌ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ. * ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ. * ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ. ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ…

Read More

ಬೆಂಗಳೂರು : ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, ರೂ.1,03,683 ಕೋಟಿ ಆದಾಯ ಸಂಗ್ರಹ ಮಾಡಿದೆ.ಪ್ರಸ್ತುತ ಹಣಕಾಸು ವರ್ಷದಲ್ಲಿ ರೂ.1,95,525 ಕೋಟಿ ಆದಾಯ ಸಂಗ್ರಹ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ ಶೇ.53 ರಷ್ಟು ಗುರಿಯನ್ನು ಸಾಧಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯ ಆದಾಯ ಸಂಗ್ರಹದಲ್ಲಿ ಶೇ.11.2ರಷ್ಟು ಪ್ರಗತಿಯನ್ನು ದಾಖಲಿಸಿದ್ದು, ಗ್ರಾಹಕರ ಬೇಡಿಕೆ ಹೆಚ್ಚಳ ಮತ್ತು ಆರ್ಥಿಕ ಚಟುವಟಿಕೆಗಳು ಚುರುಕುಗೊಂಡಿರುವುದನ್ನು ಸ್ಪಷ್ಟಪಡಿಸಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನ: ಕರ್ನಾಟಕ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಹಾಗೂ ಉತ್ತಮ ಆರ್ಥಿಕ ನೀತಿಗಳಿಂದಾಗಿ ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಹೆಚ್ಚಿನ ಪ್ರಗತಿ ಸಾಧ್ಯವಾಗಿದೆ. 2024-25 ರ ಪ್ರಥಮ ತ್ರೈಮಾಸಿಕದಲ್ಲಿ ರಾಜ್ಯ 2.2 ಬಿಲಿಯನ್‌ ರೂ. ನೇರ ವಿದೇಶಿ ಬಂಡವಾಳ ಆಕರ್ಷಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಗುಜರಾತ್‌ ರಾಜ್ಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಏರಿದೆ. ಬಜೆಟ್‌ ಅನುದಾನ ವೆಚ್ಚ ಸಾಧನೆ: ರಾಜ್ಯ ಅಕ್ಟೋಬರ್‌ ಅಂತ್ಯದ ವೇಳೆಗೆ ಬಜೆಟ್‌ ಅನುದಾನದ…

Read More

ನವದೆಹಲಿ : ಅಕ್ಟೋಬರ್ ತಿಂಗಳು ಮುಗಿದು ನವೆಂಬರ್ ಆರಂಭವಾಗಲಿದೆ. ಪ್ರತಿ ತಿಂಗಳಂತೆ, ನವೆಂಬರ್ ತಿಂಗಳು ಕೂಡ ಅನೇಕ ದೊಡ್ಡ ಬದಲಾವಣೆಗಳನ್ನು ತರುತ್ತಿದೆ (ನವೆಂಬರ್ 1 ರಿಂದ ನಿಯಮ ಬದಲಾವಣೆ). ಈ ಬದಲಾವಣೆಗಳು ಮೊದಲ ದಿನಾಂಕದಿಂದ ಜಾರಿಗೆ ಬರುತ್ತವೆ.ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಬದಲಾವಣೆಗಳಿದ್ದರೂ, ಕ್ರೆಡಿಟ್ ಕಾರ್ಡ್‌ನ ನಿಯಮಗಳು ಸಹ ಬದಲಾಗಲಿವೆ. 6 ದೊಡ್ಡ ಬದಲಾವಣೆಗಳನ್ನು ನೋಡೋಣ… LPG ಸಿಲಿಂಡರ್ ಬೆಲೆ ಪ್ರತಿ ತಿಂಗಳ ಮೊದಲನೆಯ ದಿನ, ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು (ಎಲ್‌ಪಿಜಿ ಸಿಲಿಂಡರ್ ಬೆಲೆ) ಬದಲಾಯಿಸುತ್ತವೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡುತ್ತವೆ. ಈ ಬಾರಿಯೂ ನವೆಂಬರ್ 1 ರಂದು ಅದರ ಬೆಲೆಗಳಲ್ಲಿ ಪರಿಷ್ಕರಣೆ ಕಂಡುಬರಬಹುದು. ಬಹುಕಾಲದಿಂದ ಸ್ಥಿರವಾಗಿರುವ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಈ ಬಾರಿ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದಾರೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯ ಬಗ್ಗೆ ಮಾತನಾಡುತ್ತಾ, ಜುಲೈ ತಿಂಗಳಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಿದೆ, ಆದರೆ ನಂತರ ಅದು ಸತತ ಮೂರು…

Read More

ನವದೆಹಲಿ : ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಕಾನ್ಸ್‌ಟೇಬಲ್ (GD) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ SSF, ರೈಫಲ್‌ಮ್ಯಾನ್ (GD) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ 2025 ರಲ್ಲಿ ಕಾನ್ಸ್‌ಟೇಬಲ್ ನೇಮಕಾತಿಗಾಗಿ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಸ್ತುತ ತೆರೆದಿರುತ್ತದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಯ ಈ ನೇಮಕಾತಿ ಡ್ರೈವ್ ಕಾನ್‌ಸ್ಟೆಬಲ್ GD ಯ 39481 ಪೋಸ್ಟ್‌ಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ, ಅದರಲ್ಲಿ ಗರಿಷ್ಠ 15654 ಪೋಸ್ಟ್‌ಗಳನ್ನು BSF ನಲ್ಲಿ ನೇಮಕಾತಿಗಾಗಿ ನಿಗದಿಪಡಿಸಲಾಗಿದೆ. ಜನವರಿ 1, 2025 ರೊಳಗೆ ಹೈಸ್ಕೂಲ್ ಪೂರ್ಣಗೊಳಿಸಿದ 18 ರಿಂದ 23 ವರ್ಷ ವಯಸ್ಸಿನ ಅಭ್ಯರ್ಥಿಗಳು ಅಕ್ಟೋಬರ್ 31 ರಂದು ರಾತ್ರಿ 11 ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್‌ಲೈನ್ ಅರ್ಜಿ ಶುಲ್ಕವನ್ನು ಅಕ್ಟೋಬರ್ 31ರ ರಾತ್ರಿ 11 ಗಂಟೆಯೊಳಗೆ ಪಾವತಿಸಬೇಕು. ನವೆಂಬರ್ 5 ರಿಂದ ನವೆಂಬರ್ 7 ರ ರಾತ್ರಿ 11 ಗಂಟೆಯವರೆಗೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿನ ದೋಷಗಳನ್ನು ಸರಿಪಡಿಸಲು ಅವಕಾಶವಿರುತ್ತದೆ.…

Read More