Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ. ಈ ಆರೂಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಹಾಗಾಗಿ ಇಂದು ಗಂಗರಾಜು ಅವರು ಬೆಂಗಳೂರಿನ ಇಡೀ ಕಚೇರಿಗೆ ಹಾಜರಾಗಲಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಆರ್ಟಿಐ ಕಾರ್ಯಕರ್ತ ಗಂಗರಾಜುಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ಎಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಗಂಗರಾಜು ದಾಖಲೆಯನ್ನು ನೀಡಿ ಬಂದಿದ್ದರು. ಅಕ್ಟೋಬರ್ 28ರಂದು ಗಂಗರಾಜು ಇಡಿ ಅಧಿಕಾರಿಗಳಿಗೆ ದಾಖಲೆ ನೀಡಿದ್ದರು. ಸರ್ಚ್ ವಾರೆಂಟ್ ಬಗ್ಗೆ ಆರ್ಟಿಐ ನಲ್ಲಿ ಗಂಗರಾಜು ಮಾಹಿತಿ ಕೇಳಿದ್ದಾರೆ. ಲೋಕಾಯುಕ್ತ ಡಿ ವೈ ಎಸ್ ಪಿ ಮಾಲ್ತೇಶ್ ವಿರುದ್ಧ ಗಂಗರಾಜು ಆರೋಪ ಮಾಡಿದ್ದರು. 8 ಕೋಟಿ ಲಂಚ ಸ್ವೀಕರಿಸಿ ಮಾಹಿತಿಯನ್ನು ಸೋರಿಕೆ…
ಬೆಂಗಳೂರು : ನಿನ್ನೆ ಬೆಂಗಳೂರಿನ ಇಂದಿರಾನಗರದ ಅಪಾರ್ಟ್ಮೆಂಟ್ ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ಕೇರಳ ಮೂಲದ ಯುವಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಒಂದು ದಿನ ಆರೋಪಿ ಶವದ ಜೊತೆಗೆ ಕಳೆದಿದ್ದಾನೆ. ಅಲ್ಲದೆ ಶವವನ್ನು ಆರೋಪಿ ಪೀಸ್ ಪೀಸ್ ಮಾಡುವ ಪ್ಲಾನ್ ಹಾಕಿಕೊಂಡಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಇಂದಿರಾನಗರದ ಅಪಾರ್ಟ್ಮೆಂಟ್ನಲ್ಲಿ ಅಸ್ಸಾಂ ಮೂಲದ ಮಾಯ ಗೊಗಾಯ್ ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ದುಷ್ಕರ್ಮಿಯು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹತ್ಯೆಗೊಳಗಾದ ಯುವತಿ ಹೆಚ್ಎಸ್ಎಆರ್ ಲೇಔಟ್ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೇರಳ ಮೂಲಕ ಯುವಕ ಆರವ್ ಅರ್ನಿ ನೊಂದಿಗೆ ಪರಿಚಯವಾಗಿ ನಂತರ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಯುವತಿ ಮಾಯಾ ಗೊಗೋಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಿಸಿಟಿವಿ ದೃಶ್ಯ ದೊರೆತಿದ್ದು, ನವೆಂಬರ್ 23 ರಂದು ಮಧ್ಯಾಹ್ನ ಸರ್ವಿಸ್ ಅಪಾರ್ಟ್ ಮೆಂಟ್ಗೆ ಮಾಯಾ ಆಗಮಿಸಿದ್ದಾಳೆ. ಅಪಾರ್ಟ್ ಮೆಂಟ್ಗೆ ಮಾಯಾ…
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಶಿವಾಜಿ ನಗರದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ದಂಪತಿ ಹಾಗೂ ಚಾಲಕ ಸಾವನಪ್ಪಿದ್ದಾರೆ. ಲಿಯಾಕತ್ (48) ಅಸ್ಮ (38) ನೂರ್ (46) ಎನ್ನುವವರು ಸಾವನಪ್ಪಿದ್ದಾರೆ. ರಾಮನಗರ ತಾಲೂಕಿನ ಸಂಗಮದೊಡ್ಡಿ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ಕಡೆಗೆ ಕಾರು ಹೊರಟಿತು ಡಿವೈಡರ್ ಬಳಿ ಸೂಚನಾ ಫಲಕ ಇಲ್ಲದ್ದರಿಂದ ಈ ಒಂದು ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ ಬೆಂಗಳೂರಿನಿಂದ ಮೈಸೂರಿಗೆ ತೆರಡುವಾಗ ವೇಗವಾಗಿ ಹೊರಟಿದ್ದ ಕಾರು ರಸ್ತೆ ಬದಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಳಿಕ ಕೆಎಸ್ಆರ್ಟಿಸಿ ಬಸ್ಗೆ ಕಾರು ಹುಡುಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ, ಕಾರು ಚಾಲಕ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದ…
ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ದಿನೇ ದಿನೇ ಬಾಣಂತಿಯರ ಸಾವುಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಹೊಸಪೇಟೆ ಮೂಲದ ಮುಸ್ಕಾನ್ (22) ಎನ್ನುವ ಬಾಣಂತಿಯ ಸಾವಾಗಿದೆ. ಹಾಗಾಗಿ ಇದೀಗ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ ಬಾಣಂತಿ ಮುಸ್ಕಾನ್ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನವೆಂಬರ್ 10 ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡಿದ್ದರು. ಸಿಸೇರಿಯನ್ ಬಳಿಕ ಮುಸ್ಕಾನ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನವಂಬರ್ 11 ರಂದು ಬಾಣಂತಿ ಮುಸ್ಕಾನ್ ಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಮ್ಸ್ ಆಸ್ಪತ್ರೆಯಲ್ಲಿ ಇದ್ದು ಮುಸ್ಕಾನ್ ಒಂದು ದಿನ ಚಿಕಿತ್ಸೆ ಪಡೆದಿದ್ದಾರೆ. ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಗಾಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಮುಸ್ಕಾನ್ ನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರಿಸಿದ್ದಾರೆ. 15 ದಿನ ನಿರಂತರ ಚಿಕಿತ್ಸೆ ಪಡೆದರೂ ಖಾಸಗಿ ಆಸ್ಪತ್ರೆಯಲ್ಲಿ ಮುಸ್ಕಾನ್ ಸಾವನ್ನಪ್ಪಿದ್ದಾಳೆ.
ಬೆಂಗಳೂರು : ವಕ್ಫ್ ವಿರುದ್ಧವಾಗಿ ಈಗಾಗಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಬೀದರ್ ನಿಂದ ಪ್ರತಿಭಟನೆ ನಡೆಸಿದ್ದು, ಇದೇ ವಿಚಾರವಾಗಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಕಿಸಾನ್ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಹೌದು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿಗೆ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ…
ಕಲಬುರಗಿ : ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ತೇವಾಂಶದ ಕೊರತೆಯಾಗಿರುವದರಿಂದ ಹಾಗೂ ಒಣಬೇರು ಕೊಳೆ ರೋಗ ಹಾಗೂ ಮಚ್ಚೆರೋಗ ಕಂಡು ಬಂದಿರುವದರಿಂದ ತೊಗರಿ ಬೆಳೆ ಒಣಗಲಾರಂಭಿಸಿದ್ದು ರೈತರು ಮುಂಜಾಗರೂಕತೆ ಕ್ರಮಗಳನ್ನು ಅನುಸರಿಸಬೇಕೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರೈತರಲ್ಲಿ ಮನವಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ವಾಡಿಕೆ ಮಳೆ 17.4 ಮಿ.ಮಿ ಆಗಿದ್ದು 5.6 ಮಿ.ಮಿ ಕಡಿಮೆ ಮಳೆಯಾಗಿರುತ್ತದೆ. ಇದರಿಂದ ಕಡಿಮೆ ಆಳ ಮತ್ತು ಮಧ್ಯಮ ಆಳದ ಭೂಮಿಯಲ್ಲಿ ತೇವಾಂಶದ ಕೊರತೆ ಕಂಡು ಬಂದಿರುತ್ತದೆ. ಬಿತ್ತನೆಯಾದ ತೊಗರಿ ಬೆಳೆಯಲ್ಲಿ ತೇವಾಂಶದ ಬಾಧೆಗೆ ಮ್ಯಾಕ್ರೋಫೋಮಿನಾ ಫೆಜಿಯೊಲ್ಕೆ ಶೀಲಿಂದ್ರದಿಂದ ಬರುವ ಒಣ ಬೇರು ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಂಡಿರುತ್ತದೆ. ಅದರೊಂದಿಗೆ ಫೈಟೊಪ್ಲೋರಾ ಮಚ್ಚೆ ರೋಗವು ಅಲ್ಲಲ್ಲಿ ಉಲ್ಬಣಿಸಿರುವುದು ಕಂಡು ಬಂದಿರುವುದರಿಂದ ತೊಗರಿ ಒಣಗಲಾರಂಬಿಸಿರುತ್ತದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ. ಈ ಸಂಬಂಧದಲ್ಲಿ ಕೃಷಿ ಇಲಾಖೆ ನೀಡಿರುವ…
ಬೀದರ್ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೀರ್ಗಾ (ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಔರಾದ್ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ದಿಕ್ಕಿಯ ರಭಸಕ್ಕೆ ವಿದ್ಯಾರ್ಥಿಯು 10 ಅಡಿ ಹಾರಿ ಬಿದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಖಂಡಿಸಿ ಗ್ರಾಮಸ್ಥರು ದಿಢೀರ್ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಯೋಜನೆಗಳನ್ನು ನಿಲ್ಲಿಸಿದರೆ ಅಭಿವೃದ್ಧಿಗಾಗಿ ಅನುದಾನಕ್ಕಾಗಿ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಕವಿಯಪ್ಪ ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಸಕ ಗವಿಯಪ್ಪ ಗೆ ಶೋಕಾಸ್ ನೋಟಿಸ್ ನೀಡುತ್ತೇನೆ. ಕಾಂಗ್ರೆಸ್ಸಿನ ಯಾವುದೇ ಶಾಸಕರು ಗ್ಯಾರೆಂಟಿ ಯೋಜನೆ ಕುರಿತು ಮಾತನಾಡಬಾರದು ಎಂದು ತಾಕೀತು ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತಂತೆ ಅಪಸ್ವರ ಎತ್ತಿರುವ ಕಾಂಗ್ರೆಸ್ ಶಾಸಕ ಗವಿಯಪ್ಪಗೆ ಶೋಕಾಸ್ ನೋಟಿಸ್ ಕೊಡುತ್ತೇನೆ. ಕಾಂಗ್ರೆಸ್ಸಿನ ಯಾವ ಶಾಸಕರು ಗ್ಯಾರಂಟಿ ಯೋಜನೆ ಕುರಿತು ಮಾತನಾಡಬಾರದು. ಅದೆಷ್ಟೇ ಖರ್ಚಾಗಲಿ ಗ್ಯಾರಂಟಿ ಯೋಜನೆಗಳನ್ನು ನಾವು ಜನರಿಗಾಗಿ ಜಾರಿಗೊಳಿಸಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು : ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದಿದ್ದೀರಿ ಎಂದು ಸಂಭ್ರಮ ಪಡುತ್ತಿದ್ದೀರಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ರೈತರಿಗೆ ತೊಂದರೆ ಕೊಟ್ಟರೆ ರಸ್ತೆಯಲ್ಲಿ ಓಡಾಡದಂತೆ ಹೋರಾಟ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕುರಿತು ಶಾಸಕ ಗವಿಯಪ್ಪ ಅಪಸ್ವರದ ವಿಚಾರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ನಾಟಕ ಮಾಡುತ್ತಿದ್ದಾರೆ. ಕೊಟ್ಟಿರುವ ಭರವಸೆ ಈಡೇರಿಸಲು ಆಗುತ್ತಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಇವರ ಯೋಗ್ಯತೆಗೆ ಸರ್ಕಾರ ಬಂದಾಗಿನಿಂದ ಹೊಸ ಯೋಜನೆ ಕೊಟ್ಟಿಲ್ಲ. ಮೂರೂ ಕ್ಷೇತ್ರಗಳ ಉಪಚುನಾವಣೆ ಗೆದ್ದಿದ್ದಾರೆ ಸಂತಸ ಪಡಲಿ, ಸಂಭ್ರಮ ಮಾಡಲಿ. ಸಂಭ್ರಮದಲ್ಲಿ ರೈತರಿಗೆ ತೊಂದರೆ ಕೊಟ್ಟರೆ ಬೀದಿಗೆ ಇಳಿಯುತ್ತೇವೆ. ಎಂದು ಎಚ್ಚರಿಕೆ ನೀಡಿದರು. ಸಿಎಂ ಹಾಗೂ ಸಚಿವರು ಬೀದಿಯಲ್ಲಿ ಓಡಾಡಲು ಸಾಧ್ಯವಾಗುವುದಿಲ್ಲ ಆ ರೀತಿ ನಾವು ಹೋರಾಟ ರೂಪಿಸುತ್ತೇವೆ ಬಡವರಿಗೆ ಮೀಸಲಿಟ್ಟ ಸೈಟ್ಗಳನ್ನು…
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರಿಗಾಗಿ ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಅದೇ ರೀತಿಯಾಗಿ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಚಿವ ಸಂಪುಟದ ಪುನರ್ ರಚನೆ…














