Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಸೀದಿಗಳನ್ನು ಕೆಡವಿ ಮತ್ತೆ ದೇವಸ್ಥಾನಗಳನ್ನು ನಿರ್ಮಾಣ ಮಾಡುವ ತನಕ ಹಿಂದೂ ಸಮಾಜ ವಿರಮಿಸಲ್ಲ. ಸಾವಿರ ವರ್ಷಗಳ ಸೇಡು ತೀರಿಸಿಕೊಳ್ಳುವ ಸಮಯ ಬಂದಿದೆ. ಸೇಡು ತೀರಿಸಿಕೊಳ್ಳದಿದ್ದರೆ ಇದು ಹಿಂದು ರಕ್ತವೇ ಅಲ್ಲ ಎಂದು ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ ಸಮರ ಏರ್ಪಟ್ಟಿದೆ. ಹೆಗ್ಡೆ ಪರ ಬ್ಯಾಟ್ ಬೀಸಿದ ಕೆಎಸ್ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ ವಿಚಾರವಾಗಿ ಅನಂತ್ ಕುಮಾರ್ ಹೆಗಡೆ ಪರ ಕೆ ಎಸ್ ಈಶ್ವರಪ್ಪ ಬ್ಯಾಟಿಂಗ್ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಕೂಡ ತಿದ್ದಿಕೊಳ್ಳಬೇಕು ಮೋದಿ ಬಗ್ಗೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಹಿಜಾಬ್ ಬಗ್ಗೆ ಹೇಳಿಕೆ ಕೊಡುತ್ತಾರೆ.ಇದ್ಯಾವ ನ್ಯಾಯ? ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದರು. ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲೂ ಮಾಡುತ್ತೇವೆ ಭಟ್ಕಳದ ಚಿನ್ನದ ಬಳ್ಳಿ ಮಸೀದಿ ಸಹ ನಿರ್ನಾಮ…
ಮಂಡ್ಯ : ಜಿಲ್ಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಬುದ್ದಿಮಾಂದ್ಯ ಮಹಿಳೆ ಒಬ್ಬಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಪಾಳು ಬಿದ್ದ ಜಮೀನಿನಲ್ಲಿ ಮಹಿಳೆಯ ಬೆತ್ತಲೆ ಮತ ದೇಹ ಪತ್ತೆಯಾಗಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಜಮೀನು ಪಕ್ಕದಲ್ಲಿ ಈ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳನ್ನ ಅತ್ಯಾಚಾರವೆಸಗೆ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗುತ್ತಿದ್ದೂ, ನಾಗಮಂಗಲ ತಾಲೂಕಿನ 29 ವರ್ಷದ ಮಹಿಳೆ ಎಂದು ಹೇಳಲಾಗುತ್ತಿದೆ ಮೃತ ಮಹಿಳೆ ಸ್ವಲ್ಪಮಟ್ಟಿಗೆ ಬುದ್ದಿಮಂದ್ಯ ಹೇಳಲಾಗುತ್ತಿದ್ದು ನಾಲ್ಕೈದು ದಿನಗಳ ಹಿಂದೆ ಮನೆಗಳ ಇಂದಾನೆ ಕಾಣೆಯಾಗಿದ್ದಳು ಆ ಒಂದು ಮಹಿಳೆ ನಾಪತ್ತೆಯಾಗಿದ್ದಳು. ಬುದ್ಧಿಮಾಂದ್ಯ ಆಗಿರುವ ಮಹಿಳೆ ಆಗಾಗ ಮನೆ ಬಿಟ್ಟು ತಿರುಳುತ್ತಿದ್ದರಿಂದ ಕುಟುಂಬಸ್ಥರು ಯಾವುದೇ ಕೂಡ ದೂರನ್ನು ನೀಡಲಿಲ್ಲ. ಆದರೆ ನಿನ್ನೆ ರಾತ್ರಿ ಮಹಿಳೆಯ…
ಮಂಡ್ಯ : ಮಂಡ್ಯ ಜಿಲ್ಲೆ ಮದ್ದೂರಿನ ನದಿ ಬಳಿ ನಡೆದ ಘಟನೆಯಾಗಿದ್ದು ಹೆದ್ದಾರಿಯ ನದಿ ಸೇತುವೆ ಮೇಲೆ ಡಿವೈಡರ್ರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಅಪಘಾತದಲ್ಲಿ ಶಂಕರ್ ಹಾಗೂ ಮಹದೇವು ಎನ್ನುವವರು ದುರ್ಮರಣ ಹೊಂದಿದ್ದಾರೆ. ಕಿಶೋರ್ ಎಂಬುವರ ಗಂಭೀರವಾಗಿ ಗಾಯಗೊಂಡಿದ್ದು ಮಂಡ್ಯ ವಿಮ್ಸಗೆ ಅವರನ್ನು ಶಿಫ್ಟ್ ಮಾಡಲಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ.ಮದ್ದೂರ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ. ಸಿಲಿಂಡರ್ ಲಾರಿ ಪಲ್ಟಿ ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಬಹದ್ದೂರ್ ಘಟ್ಟ ಬಳಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ರುದ್ರೇಶ್ ಎಂಬುವನಿಗೆ ಗಂಭೀರವಾಗಿ ಗಾಯವಾಗಿದ್ದು. ಗಾಯಾಳು ಚಾಲಕ ರುದ್ರೇಶ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಠಣ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ.
ಬಾಗಲಕೋಟೆ : ರಾಮ ಮಂದಿರ ಉದ್ಘಾಟನೆಯಗೆ ಆಹ್ವಾನ ನೀಡಿದರು ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸುವ ವಿಚಾರವಾಗಿ ಸಂಸದ ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಳಿ ನಡೆಸಿದ್ದು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹವರಿಂದ ಸಂಸ್ಕೃತಿಯನ್ನು ಬಯಸುವಕ್ಕೆ ಆಗುತ್ತಾ ಎಂದು ತಿರುಗೇಟು ನೀಡಿದ್ದಾರೆ. ಕೂಡಲಸಂಗಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅನಂತಕುಮಾರ್ ಹೆಗಡೆ ಕೇಂದ್ರ ಮಂತ್ರಿ ಆಗಿದ್ದಾಗ ನಾವು ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಾವಣೆ ಮಾಡಲು ಎಂದು ಹೇಳಿದ್ದರು. ಇಂಥವರನ್ನು ಸುಸಂಸ್ಕೃ ತರು ಎಂದು ಹೇಳಲು ಆಗುತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಆ ರೀತಿಯ ಹೇಳಿಕೆ ಅವರ ಸಂಸ್ಕೃತಿ. ಅವರಿಂದ ನಾವು ಸಂಸ್ಕೃತಿ ಬಯಸಲು ಆಗುತ್ತಾ ಎಂದು ತಿರುಗೇಟು ನೀಡಿದರು. ಇದೇ ವೇಳೆ ತಮ್ಮ ಕುರಿತು ಅವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿ, ಅವರ ಭಾಷೆ ಆ ರೀತಿ ಇರುತ್ತದೆ. ರಾಜ್ಯದ ಮುಖ್ಯಮಂತ್ರಿಗೆ ಗೌರವ ಕೊಡುವವರೂ ಇದ್ದಾರೆ, ಕೊಡದೇ ಇರೋರೂ ಇದ್ದಾರೆ. ರಾಜಕೀಯವಾಗಿ ಮಾತನಾಡುವವರಿಗೆ ಗೌರವ ಕೊಡಿ ಎನ್ನಲು ಆಗುತ್ತಾ? ಅವರು ರಾಜಕೀಯವಾಗಿ…
ಯಾದಗಿರಿ : ಜಿಲ್ಲೆಯ ಎಲ್ಲೆರಿ ಗ್ರಾಮದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಲ್ಲೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಟ್ರ್ಯಾಕ್ಟರ್ ನಿಲುಗಡೆ ಮಾಡುವ ವಿಚಾರಕ್ಕೆ ನಡೆದ ಗಲಾಟೆ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ಆರೋಪ ಕಾನ್ಸ್ಟೇಬಲ್ ವಿರುದ್ಧ ದೂರು ದಾಖಲು ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ಠಾಣೆಯ ಪಿ ಸಿ ಬಸವರಾಜ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದಾಳೆ.ಕೌಟುಂಬಿಕ ಹಿನ್ನೆಲೆ ಮಹಿಳೆ ದೂರು ನೀಡಲು ಠಾಣೆಗೆ ತೆರಳಿದ್ದಳು.ಈ ವೇಳೆ ಮಹಿಳೆಗೆ ಕಾನ್ಸ್ಟೇಬಲ್ ಬಸವರಾಜ ಪರಿಚಯವಾಗಿದ್ದ ಎನ್ನಲಾಗಿದೆ. ಪ್ರತಿದಿನ ವಾಟ್ಸಪ್ ಮೆಸೇಜ್ ಮಾಡಿ ಪಿಸಿ ಬಸವರಾಜ್ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದೂ ಮಹಿಳೆಯೂ ಆರೋಪ ಮಾಡಿದ್ದಾಳೆ. ಸದ್ಯ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪಿ ಸಿ ಬಸವರಾಜ್ ವಿರುದ್ಧ fir ದಾಖಲಾಗಿದೆ
ತುಮಕೂರು : ತಡ ರಾತ್ರಿ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ಕೆನ್ನಾಲಿಗೆಗೆ ಜಾನುವಾರುಗಳು ಮತ್ತು ಕುರಿಗಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಕಾರನಳ್ಳಿಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಒಂಬತ್ತು ಜಾನುವಾರು, 20 ಮೇಕೆ ಕುರಿ, ಟ್ರಾಕ್ಟರ್ ಬೆಂಕಿಗಾಹೂತಿ ಯಾಗಿರುವ ಘಟನೆ ತುಮಕೂರಿನ ಕಾರನಳ್ಳಿಯಲ್ಲಿ ನಡೆದಿದ್ದು, ಚಿಕ್ಕಣ್ಣ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಡ ರಾತ್ರಿಯ ಎರಡು ಗಂಟೆಗೆ ಕೊಟ್ಟಿಗೆಯಲ್ಲಿ ಏಕಾಯಕಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಜಾನುವಾರುಗಳು ಹಾಗೂ ಕುರಿಗಳು ಸಾವನ್ನಪ್ಪಿವೆ. ಬೆಂಕಿ ಹಾಕಿ ನಾಲಿಗೆ ತೀವ್ರಗೊಳ್ಳುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿತು ಇವಳೆ 9 ಜನವರಿ 20 ಕುರಿಗಳು ಟ್ರ್ಯಾಕ್ಟರ್ ಕೃಷಿ ಉಪಕರಣಗಳು ಸುಟ್ಟು ಬಸ್ಮವಾಗಿದ್ದವು. ಘಟನೆ ಕುರಿತಂತೆ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ನಿದ್ರೆಯಲ್ಲಿದ್ದವರ ಮೇಲೆ ಹರಿದ ಲಾರಿ ಹೊಲದಲ್ಲಿ ಮಲಗಿದ್ದವರ ಮೇಲೆ ಲಾರಿ ಹರಿದು ಇಬ್ಬರೂ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಬೆಂಚಿ ಕೊಟ್ಟಲು ಗ್ರಾಮದಲ್ಲಿ ಘಟನೆ ನಡೆದಿದೆ. ಕಬ್ಬು…
ಬೆಂಗಳೂರು : ಹಾಲು ತರುತ್ತೇನೆಂದು ಮನೆಯಲ್ಲಿ ಹೇಳಿ ತೆರಳಿದ ಗರ್ಭಿಣಿಯೊಬ್ಬಳು ನಾಪತ್ತೆಯಾಗಿದ್ದು, ಪತ್ನಿಯನ್ನು ಒಂದು ಜಾಗ ಬಿಡದೆ ಹುಡುಕಾಡಿದ ಪ್ರತಿದಿನ ಪರದಾಡುತ್ತಿರುವ ಘಟನೆ ಬೆಂಗಳೂರು ನಗರದ ತಾವರೆಕೆರೆಯ ಕಾಮತ್ ಲೇಔಟ್ ನಲ್ಲಿ ನಡೆದಿದೆ. ನಾಪತ್ತೆಯಾಗಿರೋ ಗರ್ಭಿಣಿಯನ್ನು ಶಾಲಿನಿ ಎಂದು ಹೇಳಲಾಗುತ್ತಿದ್ದು, ಪತ್ನಿಯನ್ನು ಪತಿ ಹುಡುಕಾಡುತ್ತಿದ್ದಾರೆ.ತಾವರೆಕೆರೆಯ ಕಾಮತ ಲೇಔಟ್ ನಲ್ಲಿ ದಂಪತಿ ವಾಸ ಮಾಡುತ್ತಿದ್ದರು ಎನ್ನಲಾಗುತ್ತಿದ್ದು, ನಿನ್ನೆ ಬೆಳಿಗ್ಗೆ ಆರು ಗಂಟೆಗೆ ಪತ್ನಿ ಹಾಲು ತರಲು ಹೋಗಿದ್ದಾಳೆ ಹಾಲಿಗೆ ರೂ.30 ತೆಗೆದುಕೊಂಡು ಶಾಲಿನಿ ಹೋಗಿದ್ದಾಳೆ. ಬೆಳಗ್ಗೆ 8:00 ಆದರೂ ಪತ್ನಿ ಶಾಲಿನಿ ಮನೆಗೆ ಬಂದಿಲ್ಲ.ಗಾಬರಿಯದ ಪತಿ ಸ್ವಾಮಿಯಿಂದ ಹುಡುಕಾಟ ಆರಂಭಿಸಿದ್ದಾನೆ. ಆದರೆ ಶಾಲಿನಿ ಬಿಎಂಟಿಸಿ ಬಸ್ ಹತ್ತಿ ಹೋಗಿರುವುದು ಸಿಸಿಟಿವಿಯಲ್ಲಿ ಸೇರೆಯಾಗಿದೆ.ಮೆಜೆಸ್ಟಿಕ್ ಕೆಆರ್ ಮಾರ್ಕೆಟ್ ಬಳಿ ಪತ್ನಿಗಾಗಿ ಸ್ವಾಮಿ ಹುಡುಕಾಟ ನಡೆಸುತ್ತಿದ್ದಾನೆ. ಮಧ್ಯರಾತ್ರಿ ಆದರು ಪತ್ನಿ ಸಿಕ್ಕಿಲ್ಲ. ಇದೇ ವೇಳೆ ಪತಿ ಮಾಧ್ಯಮಗಳೊಂದಿಗೆ ಮಾತನಾಡಿ ಬೆಳಿಗ್ಗೆ ಹೋದವಳು ಮತ್ತೆ ವಾಪಸ್ ಬಂದಿಲ್ಲ. ಯಾವ ಜಾಗವನ್ನು ಬಿಡದೆ ಪತ್ನಿಗಾಗಿ ಹುಡುಕಾಟ ನಡೆಸಿದ್ದೇನೆ, ಈ ಕುರಿತಂತೆ…
ಬೆಂಗಳೂರು : ರಾಜ್ಯದಲ್ಲಿರುವ ಪ್ರತಿಯೊಂದು ಮಸೀದಿಗಳನ್ನು ಕೆಡವಿ ದೇವಸ್ಥಾನ ನಿರ್ಮಾಣ ಮಾಡುತ್ತೇವೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯಿಂದ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಅವರೇ ಜವಾಬ್ದಾರಿಯಾಗಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರ ಹೇಳಿಕೆಗೆ ಇದೀಗ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಯತ್ನಾಳ್ ಅವರು ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಕೋಮು ಗಲಭೆಗೆ ಜವಾಬ್ದಾರರಾದ ‘ಬಾಂಧವರನ್ನು’ ಜೈಲಿಂದ ಖುಲಾಸೆಗೊಳಿಸುವುದರಿಂದ ಆಗುವ ಕಾನೂನು ಸುವ್ಯವಸ್ಥೆಯ ಸಮಸ್ಯೆಗೆ ಗೃಹ ಮಂತ್ರಿಗಳು ಜವಾಬ್ದಾರಿ/ಉತ್ತರದಾಯಿಗಳಾದರೆ ಹೆಗ್ಡೆ ಅವರು ಸಹ ಒಬ್ಬ ಜವಾಬ್ದಾರಿಯುತ ಸಂಸದರಾಗಿ, ರಾಷ್ಟ್ರ ಪ್ರೇಮಿಗಳಾಗಿ ತಮ್ಮ ಮಾತುಗಳಿಗೆ ಉತ್ತರದಾಯಿಗಳಾಗುತ್ತಾರೆ ಗೃಹ ಸಚಿವರೇ ಗೃಹ ಸಚಿವರು ಹೇಳಿದ್ದೇನು? ರಾಜ್ಯದ ಒಬ್ಬ ಸಂಸದರಾಗಿರುವ ಹಾಗೂ ಕೇಂದ್ರ ಸರ್ಕಾರ ಮಾಜಿ ಸಚಿವರೂ ಆಗಿರುವ ಅನಂತ ಕುಮಾರ್ ಹೆಗಡೆ ಅವರು ಅವಹೇಳನಕಾರಿಯಾಗಿ, ಬೇರೆಯವರ…
ಗದಗ : ಕಾರೊಂದು ಪಾರ್ಟಿ ಆಗಿರುವ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಹಾಗೂ ಅವರ ಇಬ್ಬರ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಹೊಂಬಳ ಗ್ರಾಮದಲ್ಲಿ ಅಪಘಾತ ಈ ಸಂಭವಿಸಿದೆ. ಘಟನೆಯಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇವಳೆ ತಕ್ಷಣ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ವೇಳೆ ಕೆರೆಗೆ ತಡೆಗೋಡೆ ನಿರ್ಮಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ.ಹೊಂಬಳ ಗ್ರಾಮ ಪಂಚಾಯಿತಿ ನಿರ್ಲಕ್ಷತನದಿಂದ ಆಗಾಗ ಇಲ್ಲಿ ಅಪಘಾತಗಳು ಸಂಭವಿಸುತ್ತೇವೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಘಟನೆ ಕುರಿತಂತೆ ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋನ್ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಬೆಟ್ಟದಲ್ಲಿ ಅನುಮತಿ ಇಲ್ಲದೆ ಡ್ರೋನ್ ಮೂಲಕ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರ ಸೆಕ್ಷನ್ 28, 1(ಬಿ) ಉಲ್ಲಂಘನೆ. ಬೆಟ್ಟದ ತಪ್ಪಲಿನಿಂದ ಬೆಟ್ಟಕ್ಕೆ ತೆರಳಲು ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇರುತ್ತದೆ. ನೀವು ಚಿತ್ರಗಳನ್ನು ಪೋಸ್ಟ್ ಮಾಡಿ ಸಂಜೆ 6 ಗಂಟೆಗೆ ಎಂದು ನಮೂದಿಸಿದ್ದೀರಿ. ಈ ಪತ್ರ ತಲುಪಿದ ಕೂಡಲೇ ಕಚೇರಿಗೆ ಹಾಜರಾಗಿ ಈ ಎರಡು ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ನೋಟಿಸ್ನಲ್ಲಿ ಆರ್ಎಫ್ಒ ಮಂಜುನಾಥ್ ಹೇಳಿದ್ದಾರೆ.