Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಹಾಸನ ನಗರಸಭೆಗೆ ನಡೆದ ಚುನಾವಣಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು ಸಿಕ್ಕಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ. ಹಾಸನದ ನಗರ ಸಭೆ ಉಪಚುನಾವಣೆಯಲ್ಲಿ ನಡೆದ 8 ಸ್ಥಾನಗಳ ಪೈಕಿ 7ರಲ್ಲಿ ಕಾಂಗ್ರೆಸ್ ಗೆದ್ದಿದ್ದು 1ರಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ನಿಂದ ಗೆದ್ದು ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ನಗರಸಭೆ 7 ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಒಬ್ಬ ಸದಸ್ಯ ರಾಜೀನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು. ನವೆಂಬರ್ 23ರಂದು ತೆರವಾಗಿದ್ದ 8 ವಾರ್ಡ್ ಗಳಿಗೆ ಉಪಚುನಾವಣೆ ನಡೆದಿತ್ತು. 7 ವಾರ್ಡ್ ಗಳಲ್ಲಿ ಇದೀಗ ಕಾಂಗ್ರೆಸ್ ಹಾಗೂ 1 ವಾರ್ಡ್ನಲ್ಲಿ ಪಕ್ಷೇತರ ಗೆಲುವು ಸಾಧಿಸಿದೆ. ಗೆಲುವಿನ ಬಳಿಕ ಶಾಸಕ ಶಿವಲಿಂಗೇಗೌಡರಿಂದ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಶಿವಲಿಂಗೇಗೌಡ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ ಕಾರಣ ತಿಳಿಸದಿದ್ದರೆ ಅವರ ಜಾಮೀನು ರದ್ದಾಗಲಿದೆ. ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಕಳೆದರೂ ಕೂಡ ನಟ ದರ್ಶನ್ ಅವರು ಬೆನ್ನು ನೋವಿನ ಸರ್ಜಾರಿಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈ ಕೋರ್ಟ್ನಲ್ಲಿ ನಡೆಯುವ ವಿಚಾರಣೆ ಬಹಳ ಮಹತ್ವ ಪಡೆದುಕೊಂಡಿದೆ. ಅಲ್ಲದೆ ಇತ್ತೀಚಿಗೆ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರೊಂದಿಗೆ ಇತರೆ ಆರೋಪಿಗಳು ಫೋಟೋ ತೆಗೆಸಿಕೊಂಡಿರುವ ಕುರಿತು ಮಹತ್ವದ ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಆರೋಪಿಗಳ ಮೊಬೈಲ್ ಗಳನ್ನು ಪೊಲೀಸರು ಎಫ್ ಎಸ್…
ಬೆಂಗಳೂರು : ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಶಾಲಾ ಶಿಕ್ಷಕನೊಬ್ಬನನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಬಂಧಿತ ಶಿಕ್ಷಕನನ್ನು ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕು ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಗಂಭೀರವಾದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಎಫ್ಐಆರ್ ಕೂಡ ಇದೀಗ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಯೋಗದ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಶಿಕ್ಷಕ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕೆಲವರು ಮಾಟಮಂತ್ರ ವಶೀಕರಣಗಳನ್ನು ನಂಬುವುದಿಲ್ಲ ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ ಆದರೆ ಇನ್ನು ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ, ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದು ಮನೆಯ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ದರೆ ಇದೆಲ್ಲಾ ಮಾಟದ ಸಂಕೇತ ನಿಮ್ಮ ಮನೆ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದರೂ ಇಟ್ಟುಹೋದರೆ ಖಂಡಿತವಾಗಿಯೂ ನಿಮ್ಮ ಮನೆಯವರಿಗೆ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಅರ್ಥ, ನಮ್ಮ ಜೀವನದಲ್ಲಿ ಮಾಟ ಮಂತ್ರ ಆಗಿದೆ ಎಂಬುದಕ್ಕೆ ಯಾವ ಲಕ್ಷಣಗಳು ಮುಖ್ಯವೆಂದು ಇಲ್ಲಿ ತಿಳಿಯೋಣ ಬನ್ನಿ. ಮನೆಯವರೊಂದಿಗೆ ಆಗಾಗ ಜಗಳ ಆಗುತ್ತಿದ್ದರೆ ಇದು ಮಾಟದಸೂಚನೆ ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು, ಕೆಟ್ಟ ಕನಸುಗಳುಬೀಳುವುದು ಸಾಮಾನ್ಯವಾಗಿರುತ್ತದೆ, ವ್ಯವಹಾರದಲ್ಲಿ ಬದಲಾವಣೆ ದಿಢೀರಾಗಿ ನಷ್ಟವಾಗುವುದು ಹೆಚ್ಚಾಗಿ ಅನಾರೋಗ್ಯದ ಸಮಸ್ಯೆ ಕಾಣುತ್ತದೆ. ಒಂದೇ ರೀತಿ ಪದೇಪದೇ ಯೋಚನೆಯನ್ನು ನಾವು ಮಾಡುತ್ತೇವೆ ಯೋಚಿಸದೆ ಯಾವುದೇ…
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಗೆದ್ದುಬೀಗಿದೆ. ಅದರಲ್ಲೂ ಚೆನ್ನಪಟ್ಟಣ ಮತ್ತು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರರು ಸ್ಪರ್ಧಿಸಿದ್ದರು. ಆದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದೀಗ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಲಾಬಿ ನಡೆಸಲು ಸತೀಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದಾರೆ. ಉಪಚುನಾವಣೆ ಗೆಲುವಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಇದೀಗ ಕಣ್ಣು ನೆಟ್ಟಿದ್ದಾರೆ. ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಸಂಡೂರು, ಶಿಗ್ಗಾವಿಯಲ್ಲಿ ಎಸ್ ಟಿ ಮತಗಳು ನಿರ್ಣಾಯಕವಾಗಿದ್ದವು. ಹಾಗಾಗಿ ಎಸ್.ಟಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ದೆಹಲಿಗೆ…
ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಒಂದು ನಡೆದಿದ್ದು ರಾಗಿ ಬೇರ್ಪಡಿಸುವ ಯಂತ್ರ ಒಂದು ಪಲ್ಟಿಯಾಗಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಭೈರನಾಯಕನಹಳ್ಳಿ ಗ್ರಾಮದ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಕಾರ್ಮಿಕರನ್ನು ಬಂಗರಕ್ಕನಗುಡ್ಡ ಗ್ರಾಮದ ಮಹೇಶ್ (30) ಮತ್ತು ರಾಧಮ್ಮ (45) ಎಂದು ತಿಳಿದು ಬಂದಿದೆ.ಟ್ರ್ಯಾಕ್ಟರ್ಗೆ ರಾಗಿ ಬೇರ್ಪಡಿಸುವ ಯಂತ್ರವನ್ನು ಜೋಡಿಸಲಾಗಿತ್ತು. ಟ್ರ್ಯಾಕ್ಟರ್ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಯಂತ್ರ ಪಲ್ಟಿಯಾಗಿದೆ. ಇಬ್ಬರು ಕಾರ್ಮಿಕರು ಕೆಳಗಡೆ ಸಿಲುಕಿಕೊಂಡಿದ್ದರು. ನಾಯಕನ ಹಳ್ಳಿ ಗ್ರಾಮದಲ್ಲಿ ರಾಗಿ ಕಟಾವು ಮಾಡಿದ ಹುಲ್ಲನ್ನು ಬೇರ್ಪಡಿಸಿ ವಾಪಸ್ ಬಂಗಾರಕ್ಕನಗುಡ್ಡ ಗ್ರಾಮಕ್ಕೆ ಕಾರ್ಮಿಕರು ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬೆಂಗಳೂರು : ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು.ಇದೀಗ ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಲಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಹಾಜರಾಗಿದ್ದರು. ಅಲ್ಲದೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಿಕ ದೇವರಾಜು ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.ಹಾಗಾಗಿ ಇಂದು ನಡೆಯುವ ವಿಚಾರಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪರ ವಕೀಲರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರು ಕಳಾದಂತಹ ನಟೇಶ್ ಹಾಗೂ ದಿನೇಶ್ ಕುಮಾರ್ ಅವರನ್ನು…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಮದುವೆ ಮಂಟಪದಿಂದಲೇ ಫೋಟೋಗ್ರಾಫರ್ ಒಬ್ಬರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೇ ಬೆಳಕಾವಿ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ. ಅಪಹರಣಕ್ಕೆ ಒಳಗಾಗಿ ಹಲ್ಲೆಗೆ ಒಳಗಾದಂತಹ ಫೋಟೋಗ್ರಾಫರ್ ನನ್ನು ಉಮೇಶ್ ಹೊಸೂರು ಎಂದು ಗುರುತಿಸಲಾಗಿದೆ. ಕಿಡ್ನಾಪ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ ಹೊಸೂರು ಅವರನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಉಮೇಶ್ ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತ ಉಮೇಶ್ ಬೆಳಗಾವಿಗೆ ಬಂದಿದ್ದರು. ಈ ವೇಳೆ ಉಮೇಶ್ ಅವರನ್ನು ಕಿಡ್ನಾಪ್ ಮಾಡಿ ನಾಲ್ವರು ಹಲ್ಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗೊಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಅವರನ್ನು ಅಲ್ಲಿಗೆ ಬಿಟ್ಟು ಹೋಗಿದ್ದಾರೆ. ಉಮೇಶ್ ಹೆಣ್ಣು ಮಕ್ಕಳನ್ನು ಕಾಡಿಸುತ್ತಿದ್ದ ಎಂದು ಆರೋಪ ಕೇಳಿ ಬಂದಿದ್ದರಿಂದ ಹಲ್ಲೆ ನಡೆಸಲಾಗಿದೆ. 8 ಜನರ ವಿರುದ್ಧ ಇದೀಗ…
ಬೆಂಗಳೂರು : ಗುತ್ತಿಗೆದಾರ ವೇಲು ನಾಯ್ಕರ್ ನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಫ್ ಎಸ್ ಎಲ್ ವರದಿಯ ಪ್ರಕಾರ ಈ ಒಂದು ಆಡಿಯೋದಲ್ಲಿ ಶಾಸಕ ಮುನಿರತ್ನ ಅವರದ್ದೇ ಧ್ವನಿ ಎಂದು FSL ವರದಿಯಲ್ಲಿ ದೃಢಪಟ್ಟಿದೆ. ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್ಐಆರ್ ದಾಖಲಾಗಿತ್ತು. ಬಳಿಕ ಸೆ.14ರಂದು ಎಸ್ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ಗೆ ಕಳುಹಿಸಿದರು. ಈಗ ಎಫ್ಎಸ್ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ…
ನವದೆಹಲಿ : ಭಾರತೀಯ ಕರಾವಳಿ ಪಡೆಯು ದೇಶದ ಇತಿಹಾಸದಲ್ಲೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರರ ಬೋಟ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಇಬ್ಬರು ಮಯನ್ಮಾರ್ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ. ಹೌದು ಪೋರ್ಟ್ ಬ್ಲೇರ್ ನಿಂದ 150 ಕಿಲೋಮೀಟರ್ ದೂರದಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಮೀನುಗಾರಿಕೆ ಬೋಟ್ನಲ್ಲಿ ಬಂಧಿತರು ಡ್ರಗ್ಸ್ ಸಾಗಿಸುತ್ತಿದ್ದರು. ಅನುಮಾನದ ಮೇಲೆ ಬೊಟ್ ಅನ್ನು ಪರಿಶೀಲನೆ ಮಾಡುವ ವೇಳೆ ಡ್ರಗ್ಸ್ ಪತ್ತೆಯಾಗಿದೆ. ಇತ್ತೀಚಿಗೆ ಬೃಹತ್ ಪ್ರಮಾಣದ ಡ್ರಗ್ಸ್ ಅನ್ನು ಕರಾವಳಿ ಪಡೆ ವಶಕ್ಕೆ ಪಡೆದುಕೊಂಡಿತ್ತು.ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ…













