Author: kannadanewsnow05

ಬೆಳಗಾವಿ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಅವರು ಸ್ವಪಕ್ಷದ ವಿರುದ್ಧವೆ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 9 ಸ್ಥಾನ ಸೋಲಲು ಒಳ ಒಪ್ಪಂದವೇ ಕಾರಣ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಒಪ್ಪಂದದಿಂದಲೇ ಬಿಜೆಪಿಗೆ ಹಾನಿಯಾಗಿದೆ. 9 ಕಡೆ ಬಿಜೆಪಿ ಸೋಲಲು ಒಳ ಒಪ್ಪಂದವೇ ಕಾರಣ. ಸೋಮಣ್ಣ ಸೋಲಿಸಲು 6 ಕೋಟಿ ನಮ್ಮವರೇ ಕೊಟ್ಟಿದ್ದರು ಎಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು. ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಸಿಕೊಂಡಿದ್ದಾರೆ. ಚುನಾವಣೆಗೆ ಸಾರಾಯಿ ಕೊಡಿಸಲು 187 ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತು ಇಡೀ ಅಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.ವಾಲ್ಮೀಕಿ ನಿಗಮದ ಈ ಹಗರಣದ ಆದ ತಕ್ಷಣ ಅಮಿತ್ ಶಾ ಅವರಿಗೆ ಪತ್ರ ಬರೆದೆ. ಸಿಬಿಐಗೆ ಕೊಡಬೇಕೆಂದು ಹೇಳಿದೆ. ಅವರು ಅದಕ್ಕೆ ಉತ್ತರಿಸಿದರು. 3 ಕೋಟಿಗಿಂತ ಹೆಚ್ಚಿನ ಆದರೆ ಸಿಬಿಐ ಬರುತ್ತದೆ…

Read More

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಪುರದಲ್ಲಿ ಪೊಲೀಸರ ಜೀಪಿನ ಮೇಲೆ ಕಳ್ಳರು ಕಲ್ಲೇಸಿದಿದ್ದಾರೆ. ನಿನ್ನೆ ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ತಡೆದರು ನಿಲ್ಲಿಸದೆ ಹೋಗಿದ್ದ ಬೊಲೆರೋ ವಾಹನವನ್ನು, ನಾಯಕನಹಟ್ಟಿ ಠಾಣೆಯ ಪೊಲೀಸರು ಬೊಲೆರೋ ವಾಹನವನ್ನು ಚೇಸ್ ಮಾಡಿದರು. ಈ ವೇಳೆ ಪೊಲೀಸ್ ಜೀಪ್ ಮೇಲೆ ಕಳ್ಳರು ಕಲ್ಲೆಸೆದಿದ್ದಾರೆ. ತಕ್ಷಣ ಪಿಎಸ್ಐ ಶಿವಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದರು. ಇತ್ತ ಗುಂಡು ಹಾರಿಸುತ್ತಿದ್ದಂತೆ ಕುದಾಪುರ ಬಳಿ ಖದೀಮರ ಗ್ಯಾಂಗ್ ಇದೀಗ ಎಸ್ಕೇಪ್ ಆಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಗರಣ, ಮುಡಾದಲ್ಲಿ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಎಲ್ಲಾ ಹಗರಣಗಳಿಂದಲೇ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಬರೀ ಹಗರಣಗಳೇ ಬೆಳಕಿಗೆ ಬರುತ್ತಿವೆ. ಎಲ್ಲಾ ಹಗರಣ ದಲಿತರಿಗೆ ಸೇರಬೇಕಿದ್ದ ಹಣದ್ದೇ ಆಗಿದೆ. ವಾಲ್ಮೀಕಿ ಎಸ್ ಟಿ ಪಿ, ಟಿ ಎಸ್ ಪಿ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ.ಮುಡಾ ಹಗರಣದಂತಹ ಹಗರಣಗಳೆ ಎಲ್ಲಾ ಹಗರಣಗಳು ದಲಿತರಿಗೆ ಮಾಡಿರುವ ಮೋಸಗಳೆ ಆಗಿವೆ ಎಂದರು. ಹಗರಣಗಳು ಹೊರಬಂದ ಮೇಲೆ ಸಿಎಂ ಸಿದ್ದರಾಮಯ್ಯ ಮಂಕಾಗಿದ್ದಾರೆ.ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಶಾಪ ತಟ್ಟಿದೆ. ಈ ಸರ್ಕಾರ ದಲಿತ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಸರ್ಕಾರ ಕೋಮಾ ಸ್ಟೇಜ್ ನಲ್ಲಿದೆ. ಸರ್ಕಾರ ಕೆಲಸಾನು ಮಾಡುತ್ತಿಲ್ಲ ಸುಮ್ಮನೇನು ಇರುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ ಹಾಸನದಲ್ಲಿ ವಾಗ್ದಾಳಿ…

Read More

ಮಂಡ್ಯ : ಕುಮಾರಸ್ವಾಮಿ ಕರ್ನಾಟಕಕ್ಕೆ ಯಾಕೆ ಬರುತ್ತಾರೆ ಅಂತಾರೆ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು ಜನ ಮೃತಪಟ್ಟಿದ್ದರು. ರಾಜ್ಯ ಸರ್ಕಾರದ ಒಬ್ಬ ಮಂತ್ರಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ನಿನ್ನೆ ನಾನು ಹೋಗಿ ಬಂದ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಹೋಗಿದ್ದಾರೆ. ಪೇಪರ್ ಪೆನ್ನು ಕೇಳಿದ ವ್ಯಕ್ತಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಗೊತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಎಚ್ ಡಿ ಕುಮಾರಸ್ವಾಮಿಯವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಎಚ್ ಎಂ ಟಿ 25 ಸಾವಿರ ಕೋಟಿ ಲಾಭ ತರುವ ಕಾರ್ಖಾನೆಯಾಗಿದೆ. ಅದನ್ನು ಪುನಶ್ಚೇತನಗೊಳಿಸಬೇಕಿದೆ. ಅಲ್ಲದೆ ಆಂಧ್ರದ ವಿಶಾಖಪಟ್ಟಣದ RNI ಕಾರ್ಖಾನೆ ಪುನಶ್ಚೇತನ ಗೊಳಿಸಬೇಕಿದೆ. ಮಂಡ್ಯದಲ್ಲಿ ಉದ್ಯೋಗ ಕೊಡುವ ಕಾರ್ಖಾನೆ ಸ್ಥಾಪನೆ ಮಾಡಬೇಕು ನನಗೆ 6-7 ತಿಂಗಳ ಕಾಲ ಸಮಯಾವಕಾಶ ಕೊಡಿ ಎಂದು ತಿಳಿಸಿದರು. ಕಾವೇರಿ ನದಿ ನೀರಿನ ವಿವಾದ 125 ವರ್ಷಗಳಿಂದ ಇರುವಂತಹ ಸಮಸ್ಯೆ. ಕಾವೇರಿ ನೀರಿನ ವಿಚಾರವನ್ನು…

Read More

ಉತ್ತರಕನ್ನಡ : ಬಹಳ ವರ್ಷಗಳಿಂದ ಲ್ಯಾಂಡ್ ಸ್ಲೈಡ್ ಆಗಿಲ್ಲ, ಈಗ ಆಗಿದೆ. ಘಟನೆ ಸಂಬಂಧಿಸಿ ನಾವು ಯಾವುದೇ ರಾಜಕಾರಣ ಮಾಡಲ್ಲ. ಬಿಜೆಪಿ ಮೇಲೆ ಆರೋಪ ಮಾಡೋ ಮಣ್ಣೆರೆಚಾಟ ಮಾಡಲ್ಲ. ನಾವು ಕೊಡೋ ಪರಿಹಾರದಿಂದ ಜೀವ ವಾಪಸ್ ಬರಲ್ಲ, ಪ್ರಾಕೃತಿಕ ಘಟನೆ. ಅವರ ಮೃತದೇಹ ಹುಡುಕುವ ಕೆಲಸ ಮಾಡಲಾಗ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುಡ್ಡ ಕುಸಿತದಲ್ಲಿ 10 ಜನರು ಕಾಣೆಯಾಗಿದ್ದಾರೆ. 7 ಜನರ ಮೃತದೇಹ ದೊರಕಿದ್ದು, ಇನ್ನೂ 3 ಮೃತದೇಹ ದೊರಕಬೇಕಿದೆ. ಎಸ್ ಡಿ ಆರ್ ಎಫ್ 44, ಎನ್ ಡಿ ಆರ್ ಎಫ್ 24, ಆರ್ಮಿಯಿಂದ 44 ಜನರು ಬಂದಿದ್ದಾರೆ. ವಾಹನಗಳು ಕೂಡ ಕಾಣೆಯಾಗಿವೆ. ಟೀ ಅಂಗಡಿಯಿಟ್ಟು ವಾಸವಾಗಿದ್ದವರೂ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತದವರಿಗೆ ಹಾಗೂ ಶಾಸರಿಗೆ ರೆಸ್ಕ್ಯೂ ಆಪರೇಶನ್ ಮಾಡಲು ತ್ವರಿತ ಮಾಡಲು ಹೇಳಿದ್ದೇನೆ.ಯಾರೇ ತಪ್ಪು ಮಾಡಿದ್ರೂ ಕ್ರಮ…

Read More

ಬೆಳಗಾವಿ : ಸದ್ಯ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಒಂದೆಡೆ ರೈತರಿಗೆ ಖುಷಿಯಾಗಿದ್ದರೆ, ಇನ್ನೊಂದಡೆ ಹಲವು ರೈತರು ಅತಿಯಾದ ಮಳೆಯಿಂದ ಬೆಳೆ ನಾಶವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಅಲ್ಲದೆ ಅತಿಯಾದ ಮಳೆಯಿಂದ ಹಲವು ಕಡೆ ಅವಾಂತರ ಸೃಷ್ಟಿಯಾಗಿದ್ದು ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಪಕ್ಕದ ಮನೆ ಗೋಡೆಗೋಸಿದ್ದು ವ್ಯಕ್ತಿ ಸಾವನ ಪರವಾಗಿ ನಡೆದಿದೆ. ಹೌದು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪಕ್ಕದ ಮನೆ ಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿ ನಗರದ ತಿರುಪತಿ ಹತ್ಕರ (45) ಮೃತರು ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ತಗಡಿನ ಶೆಡ್​ನಲ್ಲಿ ವಾಸವಿದ್ದರು. ಶನಿವಾರ ತಡರಾತ್ರಿ ಪಕ್ಕದ ಮನೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ತಹಶೀಲ್ದಾರ್ ಹಾಗೂ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ ಯಲ್ಲಿ ಇಂದು ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ್ ಮೂಲದ ಯುವಕ ರಾಜಕುಮಾರ(26) ಬಲಿಯಾಗಿದ್ದಾನೆ. ಇನ್ನು ಇದೇ ಫ್ಯಾಕ್ಟರಿಯಲ್ಲಿ ಕೆಲ‌ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಮೃತಪಟ್ಟಿದ್ದ. ಈಗ ಮತ್ತೋರ್ವನ ಬಲಿಯಾಗಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಇತ್ತ ಅಧಿಕಾರಿಗಳು ಕೂಡ ಪ್ರಕರಣ ಕುರಿತು ಬೇಜವಾಬ್ದಾರಿ ಮತ್ತು ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಅತಿಯಾದ ಮಳೆಯಿಂದ ಹಲವು ಮನೆಗಳು ಹಾಗೂ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಥಳಕ್ಕೆ ಭೇಟಿ ನೀಡಿ ಮನೆ ಕಳೆದುಕೊಂಡವರ ಜೊತೆಗೆ ನಮ್ಮ ಸರ್ಕಾರ ನಿಲ್ಲುತ್ತದೆ ಅವರಿಗೆ ಮನೆ ಕಟ್ಟಿಸಿಕೊಡುತ್ತೇವೆ  ಎಂದು ಭರವಸೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಅವರು, ಮಳೆಯಿಂದ ಮನೆ ಗೋಡೆ ಕುಸಿದು ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು. ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಳೆಯಿಂದ ಹಾನಿಯಾದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ್ ಸಿ ಇ ಓ ತಹಶೀಲ್ದಾರ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಸಂಪೂರ್ಣ ಕುಸಿದಿದ್ದರೆ ಕಟ್ಟಿಸುವ ಕೆಲಸ ಮಾಡುತ್ತೇವೆ. ಸರ್ಕಾರದಿಂದ ಈಗ ಒಂದು ಲಕ್ಷ 20,000 ಹಣ ನೀಡುತ್ತೇವೆ ಮನೆ ಕಳೆದುಕೊಂಡವರ ಜೊತೆ ನಮ್ಮ ಸರ್ಕಾರ ನಿಲ್ಲುತ್ತದೆ. ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣಗಳು…

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಇದೀಗ ಡಿಕೆ ಶಿವಕುಮಾರ್ ಅವರು ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಕಾಲದಲ್ಲಿ 300 ಕೋಟಿ ಅಕ್ರಮ ನಡೆದಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕಾಲದಲ್ಲಿ ಹಲವು ನಿಗಮಗಳಲ್ಲಿ 300 ಕೋಟಿ ರು.ಗೂ ಹೆಚ್ಚಿನ ಅಕ್ರಮವಾಗಿದ್ದು, ಅವೆಲ್ಲವನ್ನು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರಿದ್ದ ಹಾಗೆ. ಅವರೆಲ್ಲ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ. ಅಲ್ಲದೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸದನದಲ್ಲಿ ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಯಾರ್‍ಯಾರಿದ್ದಾರೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು, ಈ ವೇಳೆ ಅಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡರು. ಈಗಾಗಲೇ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿರುವವರನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದು ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು ರಕ್ಷಣಾ ಕಾರ್ಯಚರಣೆಯನ್ನು ಸಿದ್ದರಾಮಯ್ಯನವರು ವೀಕ್ಷಿಸುತ್ತಿದ್ದು ಅವರ ಜೊತೆಗೆ ಸಚಿವರಾದ ಕೃಷ್ಣ ಭೈರೇಗೌಡ, ಆರ್.ವಿ ದೇಶಪಾಂಡೆ, ಶಾಸಕ ಮಂಕಾಳು ವೈದ್ಯ ಸಾತ್ ನೀಡಿದ್ದಾರೆ. ಸ್ಥಳಕ್ಕೆ ಈಗಾಗಲೇ ಹಲವು ಸಚಿವರು, ಶಾಸಕರುಗಳು ಭೇಟಿ ನೀಡಿದ್ದು, ಮಣ್ಣು ತೆರುವು ಕಾರ್ಯಾಚರಣೆ ಹಾಗೂ ಮಣ್ಣಿನಲ್ಲಿ ಸಿಲುಕಿರುವ ಇನ್ನೂ ಹಲವರ ಮೃತದೇಹಗಳನ್ನು ಹೊರ ತೆಗೆಯುವ ಕುರಿತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಒಂದು ಕಾಯಾಚರಣೆ ನಡೆಯುವ ಸಂದರ್ಭದಲ್ಲಿ ಇದೀಗ ಜೋರಾಗಿ ಮಳೆ ಆಗುತ್ತಿದ್ದು ಕಾರ್ಯಾಚರಣೆ ವಿಳಂಬಕ್ಕೆ…

Read More