Author: kannadanewsnow05

ಮೈಸೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ವಿರುದ್ಧ ಎನ್‌ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋತಿದ್ದಾರೆ. ಈ ಒಂದು ವಿಚಾರವಾಗಿ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ 150 ಕೋಟಿ ಖರ್ಚು ಮಾಡಿ ನಿಖಿಲ್ ಕುಮಾರಸ್ವಾಮಿ 25,000 ಮತಗಳ ಅಂತರದಿಂದ ಸೋತಿದ್ದಾರೆ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಇನ್ನಾದರೂ ಬುದ್ಧಿ ಕಲಿಯಬೇಕು. ಕಳೆದ ಬಾರಿ ನಾನು ಕುಮಾರಸ್ವಾಮಿ ಜೊತೆಯಲ್ಲಿ ಇದ್ದಾಗ 4 ಕೋಟಿ ಖರ್ಚು ಮಾಡಿ 20 ಸಾವಿರ ಲೀಡ್ನಲ್ಲಿ ಗೆದ್ದರು. ಈಗ ನಾನು ಎಚ್ ಡಿ ಕುಮಾರಸ್ವಾಮಿ ಅವರ ಜೊತೆಗೆ ಇಲ್ಲ. ಈಗ 150 ಕೋಟಿ ಖರ್ಚು ಮಾಡಿ 25,000 ಮತಗಳಿಂದ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಇಬ್ರಾಹಿಂ ತಿಳಿಸಿದರು. ಮುಸ್ಲಿಮರು ಇರದಿದ್ದರೆ ಜೆಡಿಎಸ್ ಗೆ ಒಂದು ಮತವು ಬರುತ್ತಿರಲಿಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 19 ಸ್ಥಾನ ಗೆದ್ದಿದ್ದು…

Read More

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಭ್ರಷ್ಟಾಚಾರದ ಹಗರಣದ ತನಿಖೆಯನ್ನು ಎದುರಿಸಿದ್ದ ವಕೀಲೆ ಎಸ್ ಜೀವಾ (34) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚಿನ ತನಿಖೆಗಾಗಿ ಈ ಒಂದು ಪ್ರಕರಣವನ್ನು ಸಿಸಿಬಿಗೆ ವಹಿಸಿ ಬೆಂಗಳೂರು ಕಮಿಷನರ್ ಬಿ.ದಯಾನಂದ ಆದೇಶಿಸಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ ಜೀವಾ ಎಂಬುವವರು ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು‌. ಜೀವಾ ಆತ್ಮಹತ್ಯೆಯ ಕುರಿತು ಅವರ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು, ಜೀವಾ ಆತ್ಮಹತ್ಯೆಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಪ್ರಕರಣ ಗಂಭೀರತೆ ಪಡೆಯುತ್ತಿದ್ದಂತೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ತನಿಖೆಯನ್ನ ಸಿಸಿಬಿಗೆ ವಹಿಸಿದ್ದಾರೆ. ಸಿಸಿಬಿಯ ಎಸಿಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ…

Read More

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಭರದಿಂದ ಸಾಗುತ್ತಿದ್ದು, ಇವಂದು ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಡವರ ಬಿಪಿಎಲ್ ಕಾರ್ಡ್ಗಳಿಗೆ ಯಾವುದೇ ತೊಂದರೆ ಇಲ್ಲ ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ಗಳನ್ನು ನೀಡುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ರೀತಿಯಾದ ತೊಂದರೆ ಇಲ್ಲ. ಬಡವರಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ. ಎಲ್ಲಾ ಬಡವರಿಗೂ ಕೂಡ ಕಾರ್ಡ್ ಗಳನ್ನು ಕೊಡುತ್ತೇವೆ. ನಾವು ಯಾವುದೇ ಕಾರ್ಡುಗಳನ್ನು ರದ್ದು ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು. ಈಗಾಗಲೇ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಬಾಗಲಕೋಟೆಯಲ್ಲಿ ರವಿವಾರ ರಜೆಯ ದಿನದಂದು ಕೂಡ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ನಡೆಸುತ್ತಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯಲ್ಲಿ 5 ಸಾವಿರಕ್ಕೂ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಸುತ್ತಿದ್ದು, ಇದೀಗ ಬೆಂಗಳೂರಿನ ರಾಜಾಜಿನಗರದ ಆಹಾರ ಇಲಾಖೆಯಲ್ಲಿ ಜನರು ರದ್ದಾಗಿದ್ದಂತಹ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಸರಿಪಡಿಸಿಕೊಂಡು ಮತ್ತೆ ಆಕ್ಟಿವ್ ಮಾಡಿಸಿಕೊಂಡು ಸಂತಸದಿಂದ  ಹೊರ ಬರುತ್ತಿದ್ದಾರೆ. ಹೌದು ಬಿಪಿಎಲ್ ಕಾರ್ಡ್ ಮತ್ತೆ ಆಕ್ಟಿವ್ ಆಗಿದ್ದು, ಜರು ಸಂತೋಷಗೊಂಡಿದ್ದಾರೆ. ಕಾರ್ಡ್ ಆಕ್ಟಿವ್ ಆಗುತ್ತಿದ್ದಂತೆ ಜನರು ಖುಷಿಯಿಂದ ಇಲಾಖೆಯಿಂದ ಹೊರಗಡೆ ಬಂದಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಅಧಿಕಾರಿಗಳು ಕಾರ್ಡ ಪರಿಷ್ಕರಣೆ ಮಾಡುತ್ತಿದ್ದು, ಎಪಿಎಲ್ ಗೆ ಶಿಫ್ಟ್ ಆಗಿದ್ದ ಕಾರ್ಡುಗಳ ಮರುಪರುಶೀಲನೆ ಮಾಡಲಾಗುತ್ತಿದೆ. ಕೆಲವೊಂದು ಬಿಪಿಎಲ್ ಕಾರ್ಡ್ ಅಮಾನತ್ತಿನಲ್ಲಿದ್ದವು ಆದಾಯ ತೆರಿಗೆ ಹೊಂದಿದವರ ಕಾರ್ಡ್ ರದ್ದಾಗಿದ್ದವು.BPL ಕಾರ್ಡ್ ಪರಿಶೀಲನೆ ಸದ್ಯಕ್ಕೆ ಭರದಿಂದ ಸಾಗಿದೆ. ಕಾರ್ಡ್ ಪರಿಶೀಲನೆ ಬಳಿಕ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಆಕ್ಟಿವ್ ಮಾಡುತ್ತಿದ್ದಾರೆ.ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್,…

Read More

ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Read More

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕಲಬೆರಿಕೆ ಮತ್ತು ಕಳಪೆ ಗುಣಮಟ್ಟದ ಟೀ ಪೌಡರ್ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಂಗಾವತಿ ಪಟ್ಟಣದಲ್ಲಿರುವ ಕಲಬೆರಿಕೆ ಮತ್ತು ಕಳಪೆ ಗುಣಮಟ್ಟದ ಟೀ ಪೌಡರ್ ಗೋದಾಮಿನ ಮೇಲೆ ಪೊಲೀಸರು ಹಾಗೂ ಟಿ ಸಿಬ್ಬಂದಿ ಕಂಪನಿಗಳು ದಾಳಿ ಮಾಡಿ ಪರಿಶೀಲಿಸಿದಾಗ ಈ ಒಂದು ವಿಚಾರ ಬೆಳಕಿಗೆ ಬಂದಿದೆ.  ವಿಷ್ಣುರಾಂ ಚೌದರಿ ಎಂಬಾತನಿಂದ ಕಲಬೆರಕೆ ಟೀ ಪೌಡರ್ ಮಾರಾಟ ಮಾಡುತ್ತಿದ್ದ. ಗೋದಾಮಿನಲ್ಲಿ ಪೊಲೀಸರು ಮತ್ತು ಖಾಸಗಿ ಟೀ ಕಂಪನಿ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ಪರಿಶೀಲನೆ ಸಂದರ್ಭದಲ್ಲಿ ಅನಧಿಕೃತ ಕಲರ್ ಬಳಕೆ ಪತ್ತೆಯಾಗಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಟೀ ಪೌಡರ್ ಪತ್ತೆಯಾಗಿದೆ. ಯಾವುದೇ ಪ್ರವಾದಿ ಪಡೆಯದೆ ಟೀ ಪೌಡರ್ ಮಾರಾಟ ಮಾಡುತ್ತಿದ್ದರು. ಬೇರೆ ರಾಜ್ಯದಿಂದ ಟೀ ಪೌಡರ್ ತಂದು ಕಲಬೆರಿಕೆ ಮಾಡಿ ಮಾರಾಟ ಮಾಡುತ್ತಿದ್ದರು. ಬೇರೆ ಕಂಪನಿಗಳ ಹೆಸರಿನಲ್ಲಿ ವಿಷ್ಣು ಚೌದರಿ ಮಾರಾಟ ಮಾಡುತ್ತಿದ್ದ ಕೆಲ ಕಂಪನಿಗಳ ಪೇಟೆ ಉಲ್ಲಂಘಿಸಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಲೋಕಾಯುಕ್ತ ವರದಿಯಲ್ಲಿ ಒಂದು ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿ ಸರ್ಚ್ ವಾರೆಂಟ್ ಹೊರಡಿಸಿದಾಗ ಡಿವೈಎಸ್ಪಿ ಮಾಲತೇಶ್ ಮುಡಾ ಕಚೇರಿಗೆ ಬಂದು 144 ಕಡತಗಳನ್ನು ತೆಗೆದುಕೊಂಡು ಹೋಗಿರುವ ವಿಚಾರವಾಗಿ, ವಿಪಕ್ಷ ನಾಯಕ ಆರ್. ಅಶೋಕ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಐಎಎಸ್ ಅಧಿಕಾರಿ ಫೈಲ್ ತಗೊಂಡು ಹೋಗಿದ್ದು ದಿಗ್ಭ್ರಮೆ ಮೂಡಿಸಿದೆ. ಬೈರತಿ ಸುರೇಶ್ ಇನ್ನು ಎಷ್ಟು ಫೈಲ್ಗಳನ್ನು ತಗೊಂಡು ಹೋದರೋ ಗೊತ್ತಿಲ್ಲ. ಅದಕ್ಕೂ ಮುಂಚೆ ಅಧಿಕಾರಿ ಮುಡಾ ಫೈಲ್ ತೆಗೆದುಕೊಂಡು ಹೋಗಿದ್ದಾರೆ. ರಾಜ್ಯದಲ್ಲಿ ಆಡಳಿತ ಯಾವ ಮಟ್ಟಕ್ಕೆ ಬಂದಿದೆ ಅಂತ ನೋಡಿ. ಮುಡಾ ಅಕ್ರಮ ರಕ್ಷಣೆಗೆ ಅಧಿಕಾರಿಗಳೇ ಮುಂದಾಗಿರುವುದು ಸರಿಯಲ್ಲ. ಈ ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು ಅಂತ ಆಗ್ರಹಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು. ಉಪಚುನಾವಣಾ ಫಲಿತಾಂಶ ಪಕ್ಷದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ. ನಮ್ಮ ಸರ್ಕಾರ ಇದ್ದಾಗ 18 ಕ್ಷೇತ್ರಗಳ ಉಪಚುನಾವಣೆಯಲ್ಲಿ…

Read More

ಮೈಸೂರು : ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಮೂವರು ಅಧಿಕಾರಿಗಳ ವಿರುದ್ಧ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ಪೆಕ್ಟರ್ ಗೋವಿಂದರಾಜು, ಹಾಗೂ ಎನ್ ಬೆಳ್ತೂರು ಗ್ರಾಮಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಬಿ ವಿ ಮಮತಾ ಕುಮಾರಿ ಎಂಬುವವರ ಬಳಿ 50,000 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಗುಂಡತ್ತೂರು ಗ್ರಾಮದ ಸರ್ವೆ ನಂಬರ್ 10ರ 5 ಎಕರೆ 1 ಗುಂಟೆ ಭೂಮಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿಯನ್ನು ಪರಭಾರೆ ಮಾಡಿದ್ದರು. ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದರು. ಬಳಿಕ ಹಿಂದಿನಂತೆ ದಾಖಲೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ ಮೊದಲ ಹಂತವಾಗಿ 5000 ಫೋನ್ ಮೂಲಕ ಲಂಚ ಪಡೆದುಕೊಂಡಿದ್ದರು. ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಗಿ ಬಿದ್ದಿದ್ದಾರೆ.

Read More

ರಾಯಚೂರು : ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದ್ದು ಸಹೋದರರ ಕಿರುಕುಳಕ್ಕೆ  ಬೇಸತ್ತ, ರಾಯಚೂರು ಜಿಲ್ಲಾ ರೈತ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ  ನಡೆದಿದೆ. ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟೆ ಬಳಿ ಈ ಒಂದು ಘಟನೆ ನಡೆದಿದೆ. ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಿವಪುತ್ರಪ್ಪ (42) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಗಲಾಟೆಯಾಗಿತ್ತು. ಸಹೋದರ ಕಿರುಕುಳಕ್ಕೆ ಬೇಸತ್ತು ಶಿವಪುತ್ರಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇದೀಗ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಿವಪುತ್ರಪ್ಪಗೆ ಚಿಕಿತ್ಸೆ ನೀಡಲಾಗುತ್ತಿದೆ.ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಗರಣಗಳ ಮೇಲೆ ಹಗರಣಗಳು ನಡೆಯುತ್ತಲೇ ಇವೆ. ಇದೀಗ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಒಟ್ಟು 1.15 ಲಕ್ಷ ನೌಕರರ 2 ಸಾವಿರ ಕೋಟಿಗೂ ಅಧಿಕ ಪಿ ಎಫ್ ಹಣವನ್ನು ನಿಗಮದ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಹೌದು 1.15 ಲಕ್ಷ ಸಾರಿಗೆ ನೌಕರರಿಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಸಾರಿಗೆ ಸಿಬ್ಬಂದಿಯ ಪಿಎಫ್ ಹಣವನ್ನು ನಿಗಮದ ಅಧಿಕಾರಿಗಳು ನುಂಗಿ ನೀರು ಕುಡಿದರಾ? ಎನ್ನುವ ಅನುಮಾನ ಮೂಡಿದೆ. ಸಾರಿಗೆ ಸಂಸ್ಥೆಯಯಲ್ಲಿನ ಡ್ರೈವರ್ ಮತ್ತು ಕಂಡಕ್ಟರ್ಗಳ ಪಿಎಫ್ ಹಣವನ್ನು ಇದೀಗ ಅಧಿಕಾರಿಗಳು ನುಂಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 4 ನಿಗಮಗಳ ಅಧಿಕಾರಿಗಳಿಂದ ಸಿಬ್ಬಂದಿಗಳ ಪಿಎಫ್ ಹಣ ದುರ್ಬಳಕೆಯಾಗಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿ ಒಟ್ಟು 4 ನಿಗಮದ ನೌಕರರ ಹಣವನ್ನು ನಿಗಮದ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ನಿಗಮದ ನೌಕರರ 2792.61 ಕೋಟಿ ಹಣ ನುಂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Read More