Subscribe to Updates
Get the latest creative news from FooBar about art, design and business.
Author: kannadanewsnow05
ನಿನ್ನ, ನಿನ್ನ ಕುಟುಂಬದ ರಾಸಲೀಲೆ ದಾಖಲೆಗಳಿವೆ ಗಂಡಸಾಗಿದ್ದಾರೆ ಎದುರುಗಡೆ ಬಾ : ಮಾಜಿ ಸಚಿವ HD ರೇವಣ್ಣಗೆ ವಕೀಲ ಸವಾಲು
ಹಾಸನ : ಎಚ್ ಡಿ ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು, ನನ್ನ ವಿರುದ್ಧ ಪ್ರತಿಭಟನೆ ಮಾಡಬೇಕೆಂದು ಮಹಿಳೆಯಿಂದ ಹೇಳಿಕೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಹಾಗೂ ಸಂಸದ ಸ್ಥಾನ ಅಸಿಂದು ಗೊಳಿಸಿದ್ದ ಕೇಸ್ ನ ದೂರದಾರ ವಕೀಲ ದೇವರಾಜೇಗೌಡ ನಿನ್ನ ನಿನ್ನ ಕುಟುಂಬದ ರಾಸಲೀಲೆ ದಾಖಲೆಗಳಿವೆ ಗಂಡಸಾಗಿದ್ದಾರೆ ಎದುರುಗಡೆ ಬಾ ಎಂದು ಸವಾಲು ಹಾಕಿದ್ದಾರೆ. ಎಚ್ ಡಿ ರೇವಣ್ಣ ನಿನಗೆ ನೇರವಾಗಿ ಸವಾಲಾಗುತ್ತಿದ್ದೇನೆ ನಿಮಗೆ ತಾಕತ್ತಿದ್ದರೆ, ನೀನು ಗಂಡಸಾಗಿದ್ದರೆ, ನನ್ನೆದುರುಗಡೆ ಬಾ. ನಿನ್ನ ಅಕ್ರಮಗಳ ಬಗ್ಗೆ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಬರುತ್ತೇನೆ. ನಿನ್ನ ನಿನ್ನ ಕುಟುಂಬದ ರಾಸಲೀಲೆ ಸಂಬಂಧಿಸಿದ ದಾಖಲೆಗಳಿವೆ.ದೇವೇಗೌಡರ ಮೇಲೆ ಇರುವ ಗೌರವ, ಎಚ್ಡಿಕೆ ಮೇಲಿನ ಅಭಿಮಾನ ಗೌರವ ರಾಸಲೀಲೆ ದಾಖಲೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ನಾಯಕರನ್ನು ವೇದಿಕೆ ಮೇಲೆ ಡರ್ಟಿ ಫೆಲೋ ಎಂದು ಕರೆದೆಯಲ್ಲ.ಡರ್ಟಿ ಫಿಲ್ ಅಂದ್ರೆ ಅರ್ಥ ಏನು ಲಜ್ಜೆಗೆಟ್ಟವನು ಅಂತ ತಾನೆ.? ನಿನ್ನ ಮಗ…
ಕೊಪ್ಪಳ : ಕೆ ಆರ್ ಪಿ ಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ರಾಯಚೂರಿನ ಮಾಜಿ ಸಚಿವ ಶಿವನಗೌಡ ನಾಯಕ ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಗುಪ್ತ ಸಭೆ ನಡೆಸಿರುವುದು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಹೌದು ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಯತ್ತ ವಾಲುತ್ತಿದ್ದಾರಾ ಅನ್ನೋ ಪ್ರಶ್ನೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ಅವರು ನಡೆದುಕೊಳ್ಳುತ್ತಿರುವ ರೀತಿಯೂ ಇದಕ್ಕೆ ಪೂರಕವಾಗಿಯೇ ಇದೆ. ಈ ಮಧ್ಯೆ ನಿನ್ನೆ ಸಂಜೆ ದೇವದುರ್ಗದ ಮಾಜಿ ಶಾಸಕ ಶಿವನಗೌಡ ನಾಯಕ ಅವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಚರ್ಚೆ ನಡೆಸಿದ್ದು, ಈ ಚರ್ಚೆಯಿಂದ ಬಿಜೆಪಿಗೆ ಸೇರುವ ಅನುಮಾನ ಹೆಚ್ಚಾಗಿದೆ. ನಿನ್ನೆ ಸಂಜೆ ಶಾಸಕ ಜನಾರ್ದನರೆಡ್ಡಿಯನ್ನ ಭೇಟಿ ಮಾಡಿರುವ ಮಾಜಿ ಶಾಸಕ ಶಿವನಗೌಡ ನಾಯಕ. ಭೇಟಿ ವೇಳೆ ಉಭಯ ನಾಯಕರ ಮಧ್ಯೆ ಸುಮಾರು ಒಂದು ತಾಸು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ನಾಯಕರ ಚರ್ಚೆಯಿಂದ…
ಚಿಕ್ಕಮಗಳೂರು : ಇದೆ 22ರಂದು ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾರಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರನ್ನು ಓಲೈಸಿ ಜಾತಿವಾರು ಸಮಾಜವನ್ನು ಒಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಣಿತರಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯುವುದರಲ್ಲಿ ಪರಿಣಿತ.ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ ಟಿ ರವಿ ಆಕ್ರೋಶ ಹೊರ ಹಾಕಿದ್ದು, ವೀರಶೈವ ಲಿಂಗಾಯತ ಸಮಾಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಡೆಯಲು ಹೋಗಿದ್ದರು. ಸಮಾಜ ಓಡೆಯುವುದರಲ್ಲಿ ಸಿದ್ದರಾಮಯ್ಯ ಪ್ರೊಡ್ಯೂಸರ್ ಆಗಿದ್ದಾರೆ ಎಂದರು. ಅಲ್ಪಸಂಖ್ಯಾತರ ಓಲೈಕೆಗಾಗಿ ಅಯೋಧ್ಯೆಯ ಶ್ರೀರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಬಹಿಷ್ಕರಿಸಿದ ಉದ್ದೇಶವೇ ಮುಸ್ಲಿಮತಗಳನ್ನು ಉಳಿಸಿಕೊಳ್ಳುವುದಕ್ಕೆ. ಹಿಂದುಗಳನ್ನು ಜಾತಿವಾರು ಒಡೆಯುವ ನೀತಿ ಅವರದ್ದಾಗಿದೆ. ಸಿದ್ದರಾಮಯ್ಯ ಜಾತಿವಾರು ಸಮಾಜವನ್ನು ಪಡೆಯಲು ಹೋಗಿದ್ದಾರೆ. ಅಲ್ಪಸಂಖ್ಯಾತರ ಓಲೆಕೆ ಗೋಸ್ಕರನೇ ಇವತ್ತು ರಾಮಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಕಾಂಗ್ರೆಸ್ ಬಹಿಷ್ಕಾರ ಮಾಡಿದೆ. ಬಹಿಷ್ಕಾರದ ಪ್ರಮುಖ ಉದ್ದೇಶವೇ ಮುಸ್ಲಿಮರ ಮತಗಳನ್ನು ಉಳಿಸಿಕೊಳ್ಳುವುದಕ್ಕೆ.…
ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಹೇಳಿಕೆಗಳನ್ನು ನೀಡುತ್ತಿದ್ದು ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಇದು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕ್ರಮವಾಗಿದ್ದು ಕಾಂಗ್ರೆಸ್ ವರಿಷ್ಠರ ನಿರ್ಧಾರ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರ ನಿರ್ಧಾರ ನಾನು ಸ್ವಾಗತಿಸುತ್ತೇನೆ. ಎಂದು ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.ಇದು ಬಿಜೆಪಿ ಮತ್ತು ಸಂಘದ ರಾಜಕೀಯ ಕಾರ್ಯಕ್ರಮ ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡುತ್ತಿರುವುದು ತಪ್ಪು ಎಂದು ತಿಳಿಸಿದರು. ಹಿಂದೂ ಧರ್ಮದ ಮುಖ್ಯಸ್ಥರು ಅಂದರೆ ಶಂಕರಾಚಾರ್ಯರು ಪ್ರಾಣ ಪ್ರತಿಷ್ಠಾಪನೆ ಶಂಕರಾಚಾರ್ಯರ ಪದ್ಧತಿ ಪ್ರಕಾರ ನಡೆಯಬೇಕು.ಅಥವಾ ಹಿಂದೂ ಧಾರ್ಮಿಕ ಪದಕ್ಕೆ ಪ್ರಕಾರ ನಡೆಸಬೇಕಿತ್ತು.ಆದರೆ ಈ ಕಾರ್ಯಕ್ರಮ ಮಾಡಿದರೆ ಆಮಂತ್ರಣ ಬೇಕಾಗಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು. ಅಯೋಧ್ಯ ರಾಮಮಂದಿರ ಪ್ರಾಣತ್ ಪ್ರತಿಷ್ಠೆ ವಿಚಾರವಾಗಿ ನಾನು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಹತ್ವದ ಪತ್ರ ಬರೆದಿದ್ದೆ. ಡಿಸೆಂಬರ್ 25ರಂದು ಖರ್ಗೆ ಅವರಿಗೆ ಪತ್ರ…
ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ…
ಮೋದಿಗೆ ತಮ್ಮ ಸಾಧನೆಯನ್ನು ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಧೈರು ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ನಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ,,ಮೋದಿಗೆ ತಮ್ಮ ಸಾಧನೆಯನ್ನು ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ದರಿಂದ ಅಯೋಧ್ಯೆಯಲ್ಲಿ ಇದಕ್ಕಾಗಿ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರ ಉದ್ಘಾಟನೆ ಬಿಜೆಪಿ ನಾಯಕರು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಿಜೆಪಿಯವರು ತಮ್ಮ ವೈಫಲ್ಯ ಮುಖ್ಯ ಹಾಕುವ ಪ್ರಯತ್ನವನ್ನು ನಡೆಸಿದ್ದಾರೆ ಕಳೆದ 30 35 ವರ್ಷದಿಂದ ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂಡಿದ್ದಾರೆ.ಈ ಬಾರಿ ಜನ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗಲ್ಲ ಈಗಾಗಲೇ ಜನ ಸಂಗ್ರಹಿಸಿರುವ ದೇಣಿಗೆಯ ಲೆಕ್ಕ ಕೇಳತೊಡಗಿದ್ದಾರೆ ನಾವು ಹಿಂದೂ ಧರ್ಮದ ವಿರೋಧಿಗಳಲ್ಲ ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪೃಶ್ಯತೆ ಜಾತಿಯತೆ ಅಂದಶ್ರದ್ಧೆ ಕಂದಾಚಾರಗಳನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ವಿರೋಧ ಇದೆ ಮಹಾತ್ಮ ಗಾಂಧೀಜಿ…
ಹಾವೇರಿ: ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಕೇಸ್ಗೆ ಬಿಗ್ಟ್ವಿಸ್ಟ್ ಸಿಕ್ಕಿದ್ದು, ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಅಂಥ ಆರೋಪಿಸಲಾಗಿದೆ. ಮುಸ್ಲಿಂ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಕಾರಣಕ್ಕೆ ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ತಮ್ಮ ಮೇಲೆ ಒಬ್ಬರ ನಂತರ ಒಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಅಂತ ಮಹಿಳೆ ಆರೋಪಿಸಿದ್ದಾರೆ. ನಿನಗೆ ನಮ್ ಹುಡುಗಿನೇ ಬೇಕಾ ಎಂದು ಮಹಿಳೆ ಜೊತೆ ಇದ್ದ ವ್ಯಕ್ತಿಗೂ ಯುವಕರು ಹೊಡೆದಿದ್ದಾರೆ. ರೂಮಲ್ಲಿ ನೀರು ಬರ್ತಾ ಇದೆಯಾ ಚೆಕ್ ಮಾಡಬೇಕು ಬಾಗಿಲಿ ತೆಗೆಯಿರಿ ಎಂದು ಯುವಕರು ಹೇಳಿದ್ದಾರೆ. ಈ ವೇಳೆ ನೀರು ಬರ್ತಾ ಇದೆ ಏನೂ ಸಮಸ್ಯೆ ಇಲ್ಲ ಎಂದು ಮಹಿಳೆಯ ಜೊತೆಗಿದ್ದ ವ್ಯಕ್ತಿ ಒಳಗಡೆಯಿಂದಲೇ ಹೇಳಿದ್ದಾನೆ. ಕೊನೆಗೆ ಬಾಗಿಲು ಓಪನ್ ಮಾಡಿದ್ದೇ ತಡ ತಮ್ಮ ಕೋಮಿನ ಯುವತಿ ಮೇಲೆ ಯುವಕರು ಮೊದಲಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತಂತೆ ಮಹಿಳೆ 31 ಮೊಬೈಲ್ ನಲ್ಲಿ ವಿಡಿಯೋ ಮಾಡಿ ಆರೋಪಿಸಿದ್ದು, ಲಾಡ್ಜ್…
ಬೆಂಗಳೂರು : ಹಾವೇರಿ ಜಿಲ್ಲೆ, ಹಾನಗಲ್ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಐಜಿಪಿ ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದು ನೈತಿಕ ಪೊಲೀಸ್ ಗಿರಿ ಯಾರೆ ನಡೆಸಿದರು ಮುಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂತಹ ಘಟನೆ ಎಲ್ಲಿ ನಡೆದರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ.ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದು ಬೆಂಗಳೂರು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ತಿಳಿಸಿದರು. ಘಟನೆ ಹಿನ್ನೆಲೆ ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿರುತ್ತಾರೆ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂದಲೇ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2…
ಬೆಂಗಳೂರು : ಇದು ಒಬ್ಬ ಅಂತರಾಷ್ಟ್ರೀಯ ಟೆಕ್ಕಿಯೊಬ್ಬ ಪಿಂಪ್ ಆದ ಕಥೆಯಾಗಿದ್ದು ಇದ್ದ ಒಂದುವರೆ ಲಕ್ಷದ ಸಂಬಳ ಕೆಲಸವನ್ನ ಬಿಟ್ಟು ಅಡ್ಡದಾರಿ ಹಿಡಿದಿದ್ದಾನೆ.ಕಂಪನಿಯೊಂದರಲ್ಲಿ ವೈಶಾಕ್ ಎನ್ನುವ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದ.ಸ್ಟಾಕ್ ಮಾರ್ಕೆಟ್ ಹುಚ್ಚಿಗೆ ಬಿದ್ದು ಇದೀಗ ಲಕ್ಷ ಲಕ್ಷ ಹಣವನ್ನು ಕಳೆದುಕೊಂಡಿರುವ ಘಟನೆ ಬೆಂಗಳೂರು ಬೈಯಪ್ಪನ ಹಳ್ಳಿ ಪೊಲೀಸ್ ಅಣ್ಣ ವ್ಯಾಪ್ತಿಯಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ವೈಶಾಕ್ ಇದ್ದ ಕೆಲಸವನ್ನ ಬಿಟ್ಟು ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆಯನ್ನು ಮಾಡಿ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾನೆ.ಲಕ್ಷ ಸಾಲ ಮಾಡಿ ವೈಶಾಖ ಇದೀಗ ಕೆಲಸವನ್ನು ಬಿಟ್ಟಿದ್ದ ಎನ್ನಲಾಗುತ್ತಿದೆ.ನಂತರ ವೈಶಾಕ್ ಮ್ಯಾಟ್ರಿಮೋನಿ ರೀತಿಯಲ್ಲಿ ಆಪ್ ತಯಾರಿಸಿದ ಎನ್ನಲಾಗುತ್ತಿದೆ. ಈ ಒಂದು ಆಪ್ ಮೂಲಕ ಪರಸ್ಪರ ಸಂಪರ್ಕ ಮಾಡಿಸಲು ವೈಶಾಖ ಹಣ ಪಡೆಯುತ್ತಿದ್ದ ಎನ್ನಲಾಗುತ್ತಿದೆ.ಈ ಒಂದು ಕೆಲಸ ಚೆನ್ನಾಗಿ ಸಾಗುತ್ತಿದೆ ಎನ್ನುವಾಗಲೇ ಗೋವಿಂದರಾಜು ಎನ್ನುವ ವ್ಯಕ್ತಿ ಎಂಟ್ರಿ ಕೊಡುತ್ತಾನೆ. ಬಿ ಟೆಕ್ ಮುಗಿಸಿದ್ದ ಗೋವಿಂದರಾಜನಿಂದ ಹೊಸ ಆಪ್ ನ ಪ್ರೈವಸಿ ನೋಡಿ ಗೋವಿಂದರಾಜು ಶಾಕ್ ಆಗಿದ್ದ. ಮ್ಯಾಟ್ರಿಮೋನಿ…
ಮಂಗಳೂರು : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಇದೆ 22 ರಂದು ಘಟನೆಗೊಳಲಿದ್ದು ಈ ಒಂದು ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನಾವು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಹೇಳಿಕೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು ಸಿಎಂ ರಾಮಮಂದಿರಕ್ಕೆ ಹೋಗಬಾರದೆಂಬ ಮಾನಸಿಕತೆಯಲ್ಲಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ,ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಮ ಕಾಲ್ಪನಿಕ ಎಂದು ಕೋರ್ಟಿಗೆ ಅಫಿಡೆವೆಟ್ ಸಲ್ಲಿಸಿದ್ದು ಕಾಂಗ್ರೆಸ್. ರಾಮಂದಿರ ಆಗಿರುವುದನ್ನು ಕಾಂಗ್ರೆಸ್ ನದ್ದು ಸಹಿಸದ ಮಾನಸಿಕತೆಯಾಗಿದೆ ಅಂದಿನಿಂದ ಇಂದಿನವರೆಗೆ ಕಾಂಗ್ರೆಸ್ ನವರ ಮಾನಸಿಕತೆ ಹಾಗೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ರಾಮಮಂದಿರಕ್ಕೆ ಹೋಗಬಾರದೆಂಬ ಮಾನಸಿಕತೆಯಲ್ಲಿ ಇದ್ದಾರೆ. ಕಾಂಗ್ರೆಸ್ನ ಕೇಳಸ್ಥರದ ಹಿಂದೂ ಕಾರ್ಯಕರ್ತರು ರಾಮ ಮಂದಿರ ಬಗ್ಗೆ ಸಂಭ್ರಮ ಪಡುತ್ತಿದ್ದಾರೆ. ಶ್ರೀರಾಮ ಭಕ್ತರಿಗೆ ಕಾಂಗ್ರೆಸ್ ಅಪಚಾರ ಮಾಡಿದೆ. ಅಲ್ಪಸಂಖ್ಯಾತರ ತುಷ್ಟಿಕರಣವೇ ಕಾಂಗ್ರೆಸ್ ನ ಈ ನಿರ್ಧಾರಕ್ಕೆ ಕಾರಣವಾಗಿದೆ.ನಮ್ಮ ಹೆಸರಲ್ಲಿ ರಾಮ ಇದ್ದಾರೆ ಎನ್ನುವ…