Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಕಳೆದ ಎರಡು ದಿನಗಳ ಹಿಂದೆ ಎಸಿಪಿ ಚಂದನ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಪೊಲೀಸರು ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಹಣದ ವ್ಯವಹಾರ ಆಗಿದೆ ಎಂದು ವಿವಿಧ ಬ್ಯಾಂಕ್ಗಳನ್ನು ತನಿಖೆ ಮಾಡುತ್ತಿದ್ದಾರೆ. ಹೌದು ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ. ಒನ್ನೊಂದಷ್ಟು ಹಣದ ವ್ಯವಹಾರ ಆನ್​ಲೈನ್ ಮೂಲಕ ಆಗಿರೋ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಹಾಗಾಗಿ ಪೊಲೀಸರು ಆರೋಪಿಗಳಿಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಹಾಗೂ ಖಾತೆಯ ಲಿಂಕ್ ಗಳನ್ನು ನೀಡುವಂತೆ ಬ್ಯಾಂಕ್ಗಳಿಗೆ ಮನವಿ ಮಾಡಿತ್ತು. ಅದರ ಭಾಗವಾಗಿ ಇದೀಗ ಸಂಪೂರ್ಣ…

Read More

ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಭೀಕರವಾಗಿ ಕೊಂದು ಎಸ್ಕೇಪ್ ಆಗಿರುವ ಘಟನೆ ನಗರದ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗೌಸಿಯ ಬಿ ಕೊಲೆಯಾದ ಮಹಿಳೆ. ಇಮ್ರಾನ್ ಎಂಬಾತನೇ ಪತ್ನಿಯನ್ನ ಕೊಲೆಗೈದು ಎಸ್ಕೇಪ್ ಅದ ಆರೋಪಿಯಾಗಿದ್ದಾನೆ. ಶುಕ್ರವಾರ ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದ್ರಾ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಇಮ್ರಾನ್ ಫ್ಯಾಬರಿಕ್ ಕೆಲಸ ಮಾಡಿಕೊಂಡಿದ್ದನು. ಕೊಲೆ ಮಾಡಿ ಎಸ್ಕೇಪ್ ಆಗುವಾಗ ಸಹೋದ್ಯೋಗಿಗಳ ಜೊತೆ ಹಣ ಕೇಳಿದ್ದ ಆರೋಪಿ ಇಮ್ರಾನ್‌. ಆತನ ಸಹೋದ್ಯೋಗಿಗಳು ತುಮಕೂರಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವಿಚಾರವನ್ನು ಕೆಲಸಗಾರರು ಮಾಲೀಕರಿಗೆ ಹೇಳಿದ್ದರು. ಇಮ್ರಾನ್ ಹಣ ಕೇಳಿಕೊಂಡು ಬಂದಿರುವುದಾಗಿ ಹೇಳಿದ್ರು. ಹಣ ಕೇಳಿಕೊಂಡು ಬಂದಿರುವ ವಿಚಾರವನ್ನು ಮಾಲೀಕ ಕೊಲೆಯಾದ ಗೌಸಿಯಾ ಕುಟುಂಬಸ್ಥರಿಗೆ ಹೇಳಿದ್ದರು. ಈ ವೇಳೆ ಗೌಸಿಯ ಸಹೋದರ ಮನೆಗೆ ಹೋದಾಗ ಮನೆಯ ಚಿಲಕ ಹಾಕಿದರಿಂದ ಎಲ್ಲೋ ಹೊರಗಡೆ ಹೋಗಿರಬೇಕು ಎಂದು ಅವರು ವಾಪಸ್ ಆಗಿದ್ದಾರೆ.…

Read More

ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಈಗಾಗಲೇ ಅಭಿಮಾನಿ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದರ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರ ಮತ್ತೊಬ್ಬ ಅಭಿಮಾನಿ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹರ್ಷಿತ್ ಎಂಬವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ, ನೀವು ಸೋತಿರಬಹುದು, ಆದರೆ ಜನರ ಮನಸ್ಸಿನಲ್ಲಿದ್ದೀರಿ ಎಂದಿದ್ದಾರೆ. ಎಷ್ಟೋ ನಮ್ಮಂತಹ ನಿಷ್ಠಾವಂತ ಕಾರ್ಯಕರ್ತರಲ್ಲಿ ನಮ್ಮ ಪಕ್ಷದ ಉಸಿರಿದೆ. ಒಂದಲ್ಲ ಒಂದು ದಿನ ಒಳ್ಳೆತನ ಗೆದ್ದೆ ಗೆಲ್ಲಲಿದೆ. ನಿಮ್ಮ ಜೊತೆಗೆ ನಾವಿದ್ದೇವೆ ಜೈ ಜೆಡಿಎಸ್ ಎಂದು ಉಲ್ಲೇಖಿಸಿದ್ದಾರೆ. ಇನ್ನು ನಿನ್ನೆ ಬಂದಂತಹ ಫಲಿತಾಂಶದಲ್ಲಿ, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ 87,229 ಮತ ಪಡೆದು ಸೋತಿದ್ದರೆ, ಕಾಂಗ್ರೆಸ್‌ನಿಂದ ಸಿ.ಪಿ ಯೋಗೇಶ್ವರ್ 1,12,642 ಮತಗಳನ್ನು ಪಡೆದು ಗೆಲವು ಪಡೆದಿದ್ದರು. ನಿಖಿಲ್ ಕುಮಾರಸ್ವಾಮಿ ಸೋಲುತ್ತಿದ್ದಂತೆ ಚನ್ನಪಟ್ಟಣದ ಶ್ರೀರಾಮಪುರದ ನಿಖಿಲ್…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು ಹಾಸ್ಟೆಲ್ ವಾರ್ಡನ್ ಒಬ್ಬರು, ಹಾಸ್ಟೆಲ್ ನಲ್ಲಿ ಇರುವಂತಹ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಿಸಿಎಂ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೆಟ್ರಿಕ್ ನಂತರ ಬಿಸಿಎಂ ಬಾಲಕಿಯರ ಹಾಸ್ಟೆಲ್ ಅಲ್ಲಿ ಒಂದು ಘಟನೆ ನಡೆದಿದೆ. ನಿತ್ಯವೂ ಕಾಲೇಜು ವಿದ್ಯಾರ್ಥಿನಿಯರಿಗೆ ವಾರ್ಡನ್ ಕಿರುಕುಳ ನೀಡುತ್ತಿದ್ದಾರೆ. ವಾರ್ಡನ್ ರಜಿಯಾ ಸುಲ್ತಾನ ವಿರುದ್ಧ ಇದೀಗ ವಿದ್ಯಾರ್ಥಿನಿಯರು ಗಂಭೀರವಾದ ಆರೋಪ ಮಾಡಿದ್ದಾರೆ. ಓದಬೇಕೆಂದು ವಿಧ್ಯಾರ್ಥಿಗಳು ಹೇಳಿದರು ವಾರ್ಡನ್ ಕಿರಿಕಿರಿ ಮಾಡುತ್ತಿದ್ದಾರೆ ಕಿರಿಕಿರಿ ತಾಳಲಾರದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಸ್ಟೆಲಿನ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸ್ಟೂಡೆಂಟ್ಸ್ ಅಳಲು ತೋಡಿಕೊಂಡಿದ್ದಾರೆ. ಸದ್ಯ ಶೌಚಾಲಯ ತೊಳಿಯುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

Read More

ಮಂಗಳೂರು : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಕ್ರಮ ಹಣಕಾಸು ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಕಂಟೇನರ್​ಗಳಲ್ಲಿ ಹಣ ಬಂದಿದ್ದು, ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ  ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್​ ಆರೋಪ ಮಾಡಿದ್ದಾರೆ. ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ.ಅವರ ಹಣ, ಹೆಂಡಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ಆ ಮೂಲಕ ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು. ನಮ್ಮ ಕೆಲಸದ ಮೂಲಕ ಕೂಡ ಉತ್ತರ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ…

Read More

ಮಂಡ್ಯ : 2028 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರಿನ ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣರಾಜ್ ಒಡೆಯರ್ ಭವಿಷ್ಯ ನುಡಿದರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿರುವ ಯದುವೀರ್ ಕೃಷ್ಣರಾಜ ಒಡೆಯರ್, ರಾಜ್ಯದ ಮೂರೂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ನಮ್ಮ ಪರವಾಗಿ ಬಂದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಆಗುತ್ತದೆ. ಅದನ್ನು ಸ್ವೀಕರಿಸಬೇಕಾಗುತ್ತದೆ. ಆಡಳಿತ ಪಕ್ಷದ ಪರ ಉಪಚುನಾವಣೆಯ ಫಲಿತಾಂಶ ಬರುವುದು ಸಹಜ.ಆದರೂ ನಮ್ಮ ಉತ್ಸಾಹ ಕಡಿಮೆಯಾಗಿಲ್ಲ. ಮಹಾರಾಷ್ಟ್ರ ಹರಿಯಾಣದ ರೀತಿ ಕರ್ನಾಟಕದಲ್ಲಿ ಕೂಡ ಕೇಸರಿ ಧ್ವಜ ಹಾರುತ್ತದೆ. 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದು ಲಘುವಾಗಿ ಮಾಡಿದ ತೀರ್ಮಾನ ಅಲ್ಲ. ಮೋದಿ ಆಡಳಿತದ ಸ್ಪೂರ್ತಿಯಿಂದ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರ…

Read More

ಬೆಂಗಳೂರು : ಬೆಂಗಳೂರಿನ ಬಸವನಗುಡಿಯಲ್ಲಿ ಇಂದಿನಿಂದ ಕಡಲೆಕಾಯಿ ಪರೀಷೆ ಆರಂಭವಾಗಿದ್ದು, ಬಸವನಗುಡಿ ಸರ್ಕಲ್ ಇಂದ ಬಿಎಮ್ಎಸ್ ಕಾಲೇಜಿನವರೆಗೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಭಾನುವಾರ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಭಾರಿ ಜನಸ್ತೋಮ ಕಂಡುಬಂದಿದ್ದು, ಇಂದಿನಿಂದ ಒಂದು ವಾರದವರೆಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಹೌದು ಐತಿಹಾಸಿಕ ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಿದ್ಯುತ್‌ ದೀಪಾಲಂಕಾರಗಳಿಂದ ಜಘಮಘಿಸುತ್ತಿದೆ. ಈಗಾಗಲೇ ಪರಿಷೆ ಪ್ರಾರಂಭವಾಗಲಿದೆ. ಆದರೆ ಎರಡು ದಿನಕ್ಕೂ ಮುಂಚಿತವಾಗಿಯೇ ಜಾತ್ರೆ ಜೋರಾಗಿ ನಡೆಯುತ್ತಿದೆ. ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್‌ರಾಕ್‌, ಬುಲ್‌ ಟೆಂಪಲ್‌ ರಸ್ತೆ, ದೊಡ್ಡಗಣಪತಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ರಸ್ತೆಗಳ ಬದಿಗಳಲ್ಲಿ ರಾಶಿರಾಶಿ ಕಡಲೆಕಾಯಿ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ಇತರೆ ಸಾಮಗ್ರಿಗಳ ವ್ಯಾಪಾರ ಜೋರಾಗಿದೆ. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಪರಿಷೆಯ ಸಡಗರ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಒಂದು ಸೇರು ಕಡಲೆಕಾಯಿಗೆ 50 ರೂ.ಗಳಿಂದ 60 ರೂ.ಗೆ ಮಾರಾಟವಾಗುತ್ತಿದೆ. ಮಾಗಡಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹೊಸಕೋಟೆ…

Read More

ತುಮಕೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಿಪಟೂರು ನಗರದ ಹೊರವಲಯದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಈಡೇನಹಳ್ಳಿ ಪಾಳ್ಯ ನಿವಾಸಿ ಎನ್.ಚೇತನ್​​​​ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಾಲ್ಕುರಿಕೆ ರಸ್ತೆಯ ಧನಲಕ್ಷ್ಮಿ ಕೋಕೋ ನೆಟ್ ಫ್ಯಾಕ್ಟರಿ ಬಳಿ ಶವ ಪತ್ತೆಯಾಗಿದೆ. ತಿಪಟೂರು ಈಡೇನಹಳ್ಳಿ ಪಾಳ್ಯ ನಿವಾಸಿ ಚೇತನ್ ತಿಪಟೂರು ನಗರದ ಗುಬ್ಬಿ ಲೇಔಟ್‌ನಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಿದ್ದ ಚೇತನ್ ಸ್ವಂತ ಲಾರಿ ಹೊಂದಿದ್ದ ಇವರು, ತಿಪಟೂರಿನ ಕಾರ್ಖಾನೆಗಳಿಂದ ತೆಂಗಿನಕಾಯಿ ಸರಬರಾಜು ​ಮಾಡುತ್ತಿದ್ದರು. ಈ ನಡುವೆ ಆಲೂರು ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ನಿನ್ನೆ ಪಾನಮತ್ತನಾದ ಚೇತನ್, ತಿಪಟೂರು ತಾಲೂಕಿನ ಹಾಲ್ಕುರಿಕೆ ರಸ್ತೆ ಧನಲಕ್ಷ್ಮಿ ಕಾಯಿ ಪ್ಯಾಕ್ಟರಿ ಬಳಿ ಇರುವ ಯುವತಿಯ ತಂದೆ ಲೋಕೇಶಪ್ಪ ಅವರ ಬಳಿ ಹೋಗಿ ನಿಮ್ಮ ಮಗಳನ್ನು ಕೊಡಿ ಮದುವೆಯಾಗುತ್ತೇನೆ ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಅವರು, ನಿನಗೆ ನನ್ನ ಮಗಳನ್ನು ಕೊಡುವುದಿಲ್ಲ ಎಂದಿದ್ದಾರೆ. ಈ ವಿಚಾರವಾಗಿ…

Read More

ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗೆ ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಹಾಗಲ್ಲ ಎಂದು ಟಾಂಗ್ ನೀಡಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕಾಂಗ್ರೆಸ್ ಗಿಂತ ಡಬಲ್ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ. ಸಿಎಂ ಬದಲಾಗುತ್ತಾರೆ ಅಂತ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮುದಾಯ ಆರೋಗ್ಯ ಕೇಂದ್ರದ ವೈದ್ಯನೊಬ್ಬ ಸಾವನಪ್ಪಿದ್ದಾನೆ. ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ನಡೆದಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ತಿಮ್ಮೇಗೌಡ (34) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸು ಆಗಮಿಸುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇಂದು ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಚಲಿಸಿ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ವೈದ್ಯರ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ಕುರಿತಂತೆ  ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More