Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ತೀವ್ರ ಚುನಾವಣೆಯ ರಂಗೇರಿದ್ದು , ಎಚ್ ಡಿ ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಈ ಒಂದು ಚುನಾವಣೆಯಲ್ಲಿ ಅರ್ಜುನನಿಗೆ ಹೋಲಿಸಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಚುನಾವಣೆಯಲ್ಲಿ ಸೋತಾಗ ಅರ್ಜುನ ಅಭಿಮನ್ಯು ಆಗಿರಲಿಲ್ಲವೇ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಖಿಲ್ ಚುನಾವಣೆಯಲ್ಲಿ ಎರಡು ಬಾರಿ ಸೋತಿದ್ದಾರೆ. ಆಗ ಅರ್ಜುನ ಮತ್ತು ಅಭಿಮನ್ಯು ಆಗಿರಲಿಲ್ವಾ? ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಮಂಡ್ಯದಲ್ಲಿ ಸೋತಿದ್ದಾರೆ. ರಾಮನಗರದಲ್ಲಿ ಸೋತಿದ್ದಾಗ ಆಗ ಅಭಿಮನ್ಯು ಆಗಿರಲಿಲ್ವಾ? ಈಗ ಇದಕ್ಕಿದಂತೆ ಅದೇನು ಅರ್ಜುನ ಅಭಿಮನ್ಯು ಅಂತ ವ್ಯಂಗವಾಡಿದರು. ಸಚಿವರು ಶಾಸಕರು ಎಂಎಲ್ಸಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಪದಾಧಿಕಾರಿಗಳು, ಶಾಸಕರು, ಸಚಿವರ ಜೊತೆಗೆ ಸಭೆ ನಡೆಸಿದ್ದೇವೆ. ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಉಪಚುನಾವಣೆಯ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು. ಸಭೆಯಲ್ಲಿ ಕೆಲ…
ಕೋಲಾರ : ಅತ್ತಿಗೆಯ ಮೇಲೆ ದೂರದ ಸಂಬಂಧಿ ಹಾಗೂ ಸ್ನೇಹಿತನಾಗಿದ್ದವನು ಕಣ್ಣು ಹಾಕಿದ್ದಾನೆ ಎಂದು ಯುವಕನೊಬ್ಬ ಸ್ನೇಹಿತನಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಇದರಿಂದ ಕೋಪಗೊಂಡ ಸ್ನೇಹಿತ ಯುವಕನ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ನಡೆದಿದೆ. ಹೌದು ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್(26) ಎಂದು ತಿಳಿದುಬಂದಿದೆ. ಇನ್ನು ಕೊಲೆಗೈದ ಯುವಕನನ್ನು ಅಮ್ಜದ್ ಎಂದು ತಿಳಿದುಬಂದಿದೆ.ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ. ಈ ವಿಷಯ ಮನೆಯವರಿಗೆ ತಿಳಿದು ಅಮ್ಜಾದ್ ಮನೆ ಬಳಿ ಹೋಗಿ ರೋಹಿದ್ & ಸಂಬಂಧಿಕರು ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು. ಇದಾದ…
ಬೀದರ್ : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ಗೆ 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಈ ವಿಚಾರವಾಗಿ ಕಾನೂನು ಸಚಿವ HK ಪಾಟೀಲ್ ಸ್ಪೋಟಕ ಆರೋಪ ಮಾಡಿದ್ದೂ, ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು., ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲವೆ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು ಎಂದರು. ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು…
ಉತ್ತರಪ್ರದೇಶ : ದೇಶಾದ್ಯಂತ ವಿಮಾನಗಳಿಗೆ ಬಾಂಬ್ ಬೆದರಿಕೆಯ ಮಧ್ಯ ನಿನ್ನೆ ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇದೀಗ ಉತ್ತರ ಪ್ರದೇಶದ ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಹೌದು ಆಂಧ್ರದ ಬಳಿಕ ಉತ್ತರ ಪ್ರದೇಶದ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ. ಲಖನೌನಲ್ಲಿರುವ ಫಾರ್ಚುನ್, ಲೆಮನ್ ಟ್ರೀ ಹಾಗೂ ಮ್ಯಾರೀಯೇಟ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದ್ದು ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬೆ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಲಾಗಿದೆ. ಇನ್ನು ನಿನ್ನೆ ತಿರುಪತಿಯ ಹಲವು ಹೋಟೆಲ್ ಗಳಿಗೆ ಬೆದರಿಕೆ ಸಂದೇಶ ಬಂದಿದ್ದವು. ಮಾದಕವಸ್ತು ನಿಯಂತ್ರಣ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾದಕವಸ್ತು ಕಳ್ಳಸಾಗಣೆ ಜಾಲದ ಕಿಂಗ್ಪಿನ್ ಜಾಫರ್ ಸಾದಿಕ್ ಅವರನ್ನು ಬೆದರಿಕೆಯಲ್ಲಿ ಉಲ್ಲೇಖಿಸಲಾಗಿದೆ.ತಮಿಳುನಾಡಿನ ಉನ್ನತ ಪೊಲೀಸ್ ಅಧಿಕಾರಿ ಶಂಕರ್ ಜಿವಾಲ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಂತ 50:50 ನಿವೇಶನ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಇ.ಡಿ. ನೋಟಿಸ್ ಜಾರಿಗೊಳಿಸಿದೆ. ಈಗಾಗಲೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಬಳಿಕ ಮುಡಾದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಗಂಗರಾಜು ಕೂಡ ಹೋರಾಟ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಮತ್ತೂಂದು ಭೂ ಅಕ್ರಮದ ಕುರಿತು ಆರೋಪಿಸಿದ್ದರು. ಕೆಆರ್ಎಸ್ ರಸ್ತೆಯಲ್ಲಿ 20 ಗುಂಟೆ ಜಮೀನು ಖರೀದಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಮೊದಲ ಪ್ರಕರಣದಲ್ಲಿ ಕೆಸರೆಯ ಸರ್ವೇ ನಂಬರ್ 462 ಮತ್ತು 464ರ 3.16 ಎಕರೆ ಭೂಮಿ ಹಾಗೂ 14 ಸೈಟ್ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಿದ್ದರು. ಹೀಗಾಗಿ ವೈಯಕ್ತಿಕ ಮಾಹಿತಿಗಳ ಜತೆಗೆ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಗಂಗರಾಜು ED ವಿಚಾರಣೆಗೆ ಹಾಜರಾಗಲಿ ದ್ದಾರೆ.
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ನಡುವೆ ವಾಕ್ಸಮರ ತೀವ್ರ ತಾರಕಕ್ಕೆ ಏರಿದ್ದು, ಇದೀಗ ಶೋಭಾ ಕರಂದ್ಲಾಜೆ ಅವರು ಭೈರತಿ ಸುರೇಶ್ ಅವರ ವಿರುದ್ಧ ತಾಕತ್ತಿದ್ದರೆ ನನ್ನ ವಿರುದ್ಧ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಕರಂದ್ಲಾಜೆ ಪ್ರತಿ ಸವಾಲು ಹಾಕಿದ್ದಾರೆ. ಶೋಭಾ ಕರಂದ್ಲಾಜೆ ವಿರುದ್ಧ ಭೈರತಿ ಸುರೇಶ್ ಭ್ರಷ್ಟಾಚಾರ ಆರೋಪ ಮಾಡಿದ್ದರು.ಇಂಧನ ಸಚಿವರಾಗಿದ್ದಾಗ ಅಕ್ರಮ ಎಸಗಿದ್ದಾರೆ ಎಂದು ಭೈರತಿ ಸುರೇಶ್ ಆರೋಪಿಸಿದ್ದರು. ಅಕ್ರಮ ಹೊರ ತರುತ್ತೇವೆ ಎಂದು ಬೈರತಿ ಸುರೇಶ್ ಹೇಳಿದ್ದರು. ಇದೀಗ ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ತಾಕತ್ ಇದ್ದರೆ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಲಿ. ಸುರೇಶ್ ಮುಡಾದ ಸಾವಿರಾರು ಫೈಲ್ಸ್ ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದೇನೆ. ಹಾಗಾಗಿ ಧ್ವನಿ ಎತ್ತಿದ ತಕ್ಷಣ…
ಬೆಂಗಳೂರು : ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಅವರು ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ ಎಂದು ತಿಳಿಸಿದರು. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು. ಕೇಂದ್ರದ ಮೋದಿ…
ಬೆಂಗಳೂರು : ಪತ್ನಿ ಹಾಗೂ ಪ್ರಿಯಕರ ಏಕಾಂತದಲ್ಲಿದ್ದ ಖಾಸಗಿ ವಿಡಿಯೋಗಳನ್ನು ಸ್ವತಹ ಪತಿಯೇ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಪತಿಯ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತಂತೆ ಪತ್ನಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ FIR ದಾಖಳಿಸಿದ್ದಾಳೆ. ಪ್ರತಿದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿಯು ತನ್ನ ಮಾಜಿ ಪ್ರಿಯಕರನೊಂದಿಗೆ ಸಲುಗೆಯಿಂದ ಇದ್ದಾಳೆ.ಈ ವೇಳೆ ಪ್ರಿಯಕರನೊಂದಿಗೆ ಖಾಸಗಿ ಫೋಟೋ ಹಾಗೂ ವಿಡಿಯೋಗಳು ಮಹಿಳೆಯ ಮೊಬೈಲ್ ನಲ್ಲಿ ಇದ್ದವು.ಇದನ್ನು ಪತಿ ತನ್ನ ಮೊಬೈಲ್ಗೆ ಕಳುಹಿಸಿಕೊಂಡಿದ್ದಾನೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಕಿರುಕುಳ ನೀಡುತ್ತಿದ್ದಾನೆ. ಮತ್ತು ಆ ವಿಡಿಯೋಗಳನ್ನು ಆತನ ಹಾಗೂ ನನ್ನ ಸ್ನೇಹಿತರಿಗೆ ಕಳಿಸುತ್ತಿದ್ದಾನೆ. ನನಗೆ ಮತ್ತು ನನ್ನ ಮಾಜಿ ಪ್ರಿಯಕರನಿಗೆ ಜೀವ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು, ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಜಿದ್ದಾಜಿದ್ದಿ ಕುಡಿದು ಮೈತ್ರಿ ಪಕ್ಷಗಳಾದ ಬಿಜೆಪಿ ಜೆಡಿಎಸ್ ಪರವಾಗಿಲ್ಲ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಇತ್ತ ಕಾಂಗ್ರೆಸ್ ಪರವಾಗಿಶ್ವರ್ ಕಣಕ್ಕಿಳಿದಿದ್ದಾರೆ. ಈ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಿಮ್ಮ ಗುರುಗೆ ಹೋಗಿ ಹೇಳಿ ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲ್ಲೋದು ನಾವೇ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಸಭೆಯಲ್ಲಿ ಸವಾಲು ಹಾಕಿದ ಬಿ ವೈ ವಿಜಯೇಂದ್ರ, ಯೋಗೇಶ್ವರ ಶಿಷ್ಯರಿದ್ದರೆ ಸರಿಯಾಗಿ ಕೇಳಿಸಿಕೊಳ್ಳಿ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ನಾನು ಸವಾಲು ಹಾಕುತ್ತಿದ್ದೇನೆ ನಿಮ್ಮ ಗುರುಗೆ ಹೋಗಿ ಹೇಳಿ ಚನ್ನಪಟ್ಟಣದಲ್ಲಿ ಗೆಲ್ಲೋದು ನಾವೇ ಎಂದು ಬಿ ವೈ ವಿಜಯೇಂದ್ರ ಸವಾಲು ಹಾಕಿದರು. ಚನ್ನಪಟ್ಟಣ ಕ್ಷೇತ್ರದ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾಂವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ…
ಮಂಡ್ಯ : ರಸ್ತೆ ದಾಟುತ್ತಿದೆ ಸಂದರ್ಭದಲ್ಲಿ ಬೈಕ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಉಪ ತಹಶೀಲ್ದಾರ್ ಒಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಇನ್ನು ಮೃತ ಉಪ ತಹಶೀಲ್ದಾರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮೂಲದ ಎನ್.ಟಿ ಸುನೀಲ್ (55) ಎಂದು ತಿಳಿದುಬಂದಿದೆ.ಸದ್ಯ ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಅಪಘಾತವಾದ ತಕ್ಷಣ ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಪರಿಸ್ಥಿತಿ ಚಿಂತಾಜನಕವಾದಾಗ ತಕ್ಷಣ ಮೈಸೂರು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಸಾವನಪ್ಪಿದ್ದಾರೆ.ಘಟನೆ ಕುರಿತಂತೆ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














