Author: kannadanewsnow05

ರಾಮನಗರ : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿನ್ನೆ ಭರ್ಜರಿ ಗೆಲುವು ದಾಖಲಿಸಿದೆ. ಈ ಒಂದು ಗೆಲುವಿನ ಕುರಿತಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಸ್ಫೋಟಕ ವಾದಂತಹ ಹೇಳಿಕೆ ನೀಡಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪರೋಕ್ಷವಾಗಿ ನಮಗೆ ಸಹಾಯ ಮಾಡಿದ್ದರಿಂದ ಈ ಒಂದು ಗೆಲವು ಸಿಕ್ಕಿದೆ ಎಂದು ತಿಳಿಸಿದರು. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಅವರು, ಜನರು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಮನೆ ಸೈಟ್ ಕೊಡುವುದಾಗಿ ನಾವು ವಾಗ್ದಾನ ನೀಡಿದ್ದೆವು. ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಜೆಡಿಎಸ್ ಮುಕ್ತ ರಾಮನಗರ ಜಿಲ್ಲೆ ಎಂಬ ವಿಚಾರವಾಗಿ ಮಾತನಾಡಿದ ಅವರು, ನಮಗೆ ಅದು ಮುಖ್ಯ ಅಲ್ಲ. ಮೊದಲು 19 ಶಾಸಕರು ಇದ್ದರು ಈಗ 18 ಆಗಿದ್ದಾರಷ್ಟೇ ಎಂದರು. ಇನ್ನು ಚನ್ನಪಟ್ಟಣ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದು, ಬಿಜೆಪಿ ಜೆಡಿಎಸ್ ನಾಯಕರ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಾಯದಿಂದ ನಮಗೆ ಗೆಲವು ಸಿಕ್ಕಿದೆ. ಬಿಜೆಪಿ ಜೆಡಿಎಸ್ ನಾಯಕರು ನಮಗೆ ಸಹಾಯ…

Read More

ಹಾಸನ : ವಾಲ್ಮೀಕಿ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳಿಂದ ಮುಜುಗರಕ್ಕೆ ಈಡಾಗಿತ್ತು. ಈ ಬಾರಿಯ 3 ವಿಧಾನಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಕಷ್ಟ ಅಂತ ಅಂದಾಜಿಸಲಾಗಿತ್ತು. ಆದರೆ ನಿನ್ನೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಡಿಸೆಂಬರ್ 5 ರಂದು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಹೌದು ಸಾಲು ಸಾಲು ಆರೋಪ, ವಿಪಕ್ಷಗಳ ಹೋರಾಟದಿಂದ ಬೆಂಡಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಚುನಾವಣೆ ಫಲಿತಾಂಶ ಹೊಸ ಭರವಸೆ ನೀಡಿದೆ. ಪಕ್ಷಕ್ಕೆ ಹೊಸ ಉತ್ಸಾಹ ದೊರೆತಿರುವ ಈ ಸಂದರ್ಭದಲ್ಲೇ ಸಿದ್ದರಾಮಯ್ಯ ಅಭಿಮಾನಿಗಳ ಹೆಸರಿನಲ್ಲಿ ಅವರ ಬೆಂಬಲಿಗ ಸಚಿವರು ಹಾಸನದಲ್ಲಿ ಬೃಹತ್ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ. ಡಿಸೆಂಬರ್ 5 ರಂದು ಸರ್ಕಾರ ಹೊರತುಪಡಿಸಿ, ಅಭಿಮಾನಿಗಳಿಂದಲೇ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸಾಲು ಸಾಲು ಆರೋಪ ಮಾಡಿ ಜೆಡಿಎಸ್, ಬಿಜೆಪಿ ನಡೆಸಿದ ಹೋರಾಟಕ್ಕೆ ತಮ್ಮ ಬೆಂಬಲಿಗರ ಮೂಲಕ…

Read More

ಮೈಸೂರು : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಶಾಸಕ ಜಿಟಿ ದೇವೇಗೌಡರ ನಡುವೆ ಆಗಾಗ ಮುನಿಸು ವೈಮನಸ್ಸು ಇದ್ದಿದ್ದೆ. ಇದೀಗ ಡಿ ಟಿ ದೇವೇಗೌಡರು ಎಚ್ ಡಿ ಕುಮಾರಸ್ವಾಮಿ ಅವರದೇ ಮತ್ತೆ ಅಸಮಾಧಾನ ಹೊರಹಾಕಿದ್ದು ಎಚ್ ಡಿ ದೇವೇಗೌಡರು ಕಟ್ಟಿಸಿದ್ದ ಜೆಡಿಎಸ್ ಪಕ್ಷವನ್ನು ಕುಮಾರಸ್ವಾಮಿಯವರು ಡೆಮಾಲಿಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕಟ್ಟಿದ ಪಕ್ಷವನ್ನು ಎಚ್ ಡಿ ಕುಮಾರಸ್ವಾಮಿ ಡೆಮಾಲಿಶ್ ಮಾಡುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಈಗ ಬಿಜೆಪಿ ತಬ್ಬಿಕೊಂಡಿದ್ದಾರೆ. ದೇವರು ಮತ್ತು ದೇವೆಗೌಡರ ಶ್ರಮದಿಂದ ಜೆಡಿಎಸ್ ಪಕ್ಷ ಉಳಿಯುತ್ತಿದೆ. ಮುನಿಸು ಇದ್ದಾಗಲೂ ಕೂಡ ಎಚ್ ಡಿ ದೇವೇಗೌಡರು ಮಾತನಾಡುತ್ತಿದ್ದರು. ಸಾರಾ ಮಹೇಶ್ ತೋಟಕ್ಕೆ ಬಂದು ಹೋದರು ಆಗಲು ಮಾತಾಡಲಿಲ್ಲ. ಸಾರಾ ಮಹೇಶ್ ಗೂ ನಾನು ಬೇಕಾಗಿಲ್ಲ ಅನಿಸುತ್ತದೆ. ಕುಮಾರಸ್ವಾಮಿ ಜೊತೆ ಇದ್ದವರೆ ಸಾರಾ ಮಹೇಶ್ ಗೆ ಬೇಕಾಗಿತ್ತು. ನಾನು ಈಗ ಹೇಗಿದ್ದೇನೆ ಅದೇ ರೀತಿ ಇರುತ್ತೇನೆ. ಇನ್ನೂ ಮೂರು ವರ್ಷ ಶಾಸಕನಾಗಿ ಇರುತ್ತೇನೆ.…

Read More

ಮೈಸೂರು : ನನ್ನ ಕುಮಾರಸ್ವಾಮಿ ನಡುವೆ ಮುನಿಸು ಸಾಕಷ್ಟು ಬಾರಿ ಆಗಿದೆ. ನೊಂದಿದ್ದರು ಸಹ ನಾನು ಅವರೊಂದಿಗೆ ಮಾತನಾಡಿದ್ದೇನೆ. ನೀನು ಇದ್ದರೆ 5 ಸ್ಥಾನ ಗೆಲ್ಲುತ್ತಿದ್ವಿ ಅಂತ ಕರೆದುಕೊಂಡವರು ಕೂಡ ಅವರೇ. ಆದರೆ ಅಧಿಕಾರ ಕೊಡುವ ಸಮಯ ಬಂದಾಗ ದೂರ ಮಾಡುತ್ತಾರೆ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಖಿಲ ಸೋಲಿನ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡಲ್ಲ. ನಿಖಿಲ್ ಕುಮಾರ್ ಗೆ ಸೋಲು ಆಗಿರುವ ವಿಚಾರವಾಗಿ ಸೋಲು ಯಾಕಾಗಿದೆ ಅಂತ ಗೊತ್ತಿಲ್ಲ ಎಲ್ಲಾ ಹೆಚ್‍ಡಿ ಕುಮಾರಸ್ವಾಮಿಗೆ ಗೊತ್ತಿದೆ. ಚನ್ನಪಟ್ಟಣ ಪ್ರಚಾರಕ್ಕೆ ನನ್ನನ್ನು ಕರೆಯಲಿಲ್ಲ. ಹಾಗಾಗಿ ನಾನು ಕೂಡ ಹೋಗಿಲ್ಲ. ಮಗ ಹರೀಶ್ ಗೌಡ ಬಂದಿದ್ದಾನೆ ನಾನು ಬೇಡ ಅಂತ ಇರಬಹುದು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿದ್ದೆ. ಚುನಾವಣಾ ಪ್ರಚಾರಕ್ಕೆ ಏಕೆ ಕರೆದಿಲ್ಲ ಅಂತ ಅವರನ್ನೇ ಕೇಳಬೇಕು. ನನ್ನ ಕುಮಾರಸ್ವಾಮಿ ನಡುವೆ ಮುನಿಸು ಸಾಕಷ್ಟು ಬಾರಿ…

Read More

ಮಂಗಳೂರು : ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಸೋಮೇಶ್ವರದ ರುದ್ರಬಂಡೆಯ ಸಮುದ್ರದ ಬಳಿ ಈ ಒಂದು ಉದ್ಘಾಟನೆ ನಡೆದಿದೆ ಕೂಡಲೇ ತಡಿಯಲಿದ್ದ ಮೇಲುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೌದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ ಮಾಡಲಾಗಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯ ಮೀನುಗಾರರಿಂದ ಕಾಲೇಜು ವಿದ್ಯಾರ್ಥಿನಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಕಾಲೇಜು ಒಂದರಲ್ಲಿ ವಿದ್ಯಾರ್ಥಿನಿಯು ಪದವಿ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿಯನ್ನು ಇದೀಗ ರಕ್ಷಣೆ ಮಾಡಲಾಗಿದೆ. ಘಟನೆಯ ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಜಾಗದಲ್ಲಿ ದರ್ಶನ ಇರುವ ಫೋಟೋ ಸಿಕ್ಕಿದ ವಿಚಾರವಾಗಿ FSL ರಿಪೋರ್ಟ್ ಗಾಗಿ ಹೈದರಾಬಾದ್ ಗೆ ಆರೋಪಿಗಳ ಮೊಬೈಲ್ ಗಳನ್ನು ಕಳುಹಿಸಿದ್ದೆವು.ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಕೊಲೆಯಾದ ಸ್ಥಳದಲ್ಲಿ ಇರುವಂತಹ ಫೋಟೋ ಸಿಕ್ಕಿದೆ. ಯಾರೋ ದರ್ಶನ್ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಆ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದು ಮಾಡಿಸಬೇಕು ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ಆಗುತ್ತಿದೆ ಎಂದು ತಿಳಿಸಿದರು. ಇನ್ನು ದರ್ಶನ್ ಇನ್ನೂ ಆಪರೇಷನ್ ಮಾಡಿಸಿದ ವಿಚಾರವಾಗಿ,…

Read More

ಬೆಂಗಳೂರು : ಮಹಾರಾಷ್ಟ್ರದಲ್ಲಿ ನಿನ್ನೆ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಮಹಾಯುತಿಯು 230 ಸ್ಥಾನಗಳನ್ನು ಪಡೆದುಕೊಂಡಿದ್ದು ಇನ್ನು ಕಾಂಗ್ರೆಸ್ ನ ಮಹಾ ವಿಕಾಸ್ ಅಘಾಡಿಯು ಕೇವಲ 49 ಸ್ಥಳಗಳನ್ನು ಪಡೆದುಕೊಂಡಿದೆ. ಈ ವಿಚಾರವಾಗಿ ‘EVM’ ಹ್ಯಾಕ್ ನಿಂದ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಬರುತ್ತದೆ ಎಂದು ನಿರೀಕ್ಷೆ ಮಾಡಿದ್ದು ಇದೀಗ ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ನಿಂದಲೇ ನಮಗೆ ಸೋಲಾಗಿದೆ ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು. ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲೂ ಫೇಲ್ ಆಗಿದ್ದೇವೆ. ಬಹಳಷ್ಟು ಕಡೆಗೆ EVM ಮ್ಯಾನಿಪ್ಯೂಲೇಟ್ ಮಾಡಿದ್ದಾರ ಎಂಬ ಚರ್ಚೆಯಾಗುತ್ತಿದೆ. ಆದರೆ ಜಾರ್ಖಂಡ್ ಚುನಾವಣೆಯಲ್ಲಿ ಯಾಕೆ ಹಾಗಾಗಲಿಲ್ಲ? ಬಿಜೆಪಿಯವರು ಪ್ಲಾನ್ ಆಫ್ ಆಕ್ಷನ್ ರೀತಿ ಇದನ್ನು ಮಾಡುತ್ತಾರೆ. ನಂಬಿಕೆ ಬರಬೇಕೆಂದು ಕೆಲ ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಎಂದು ಜಿ. ಪರಮೇಶ್ವರ್ ತಿಳಿಸಿದರು.

Read More

ಕೊಲ್ಹಾಪುರ : ನಿನ್ನೆ ಮಹಾರಾಷ್ಟ್ರದ ವಿಧಾನಸಭೆಯ ಚುನಾವಣೆಯಲ್ಲಿ NDA ಭರ್ಜರಿ ಗೆಲುವು ದಾಖಲಿಸಿ, ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ದಾಖಲೆ ಸೃಷ್ಟಿಸಿದೆ. ಇತ್ತ ಕೊಲ್ಹಾಪುರ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಅಗ್ನಿ ಅವಘಡ ಸಂಭವಿಸಿದ್ದು ನೂತನ ಶಾಸಕ ಸೇರಿದಂತೆ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಆರತಿ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡು ಹಲವರಿಗೆ ಗಾಯವಾಗಿದೆ. ಕೊಲ್ಹಾಪುರ ಜಿಲ್ಲೆಯ ಚಂದಗಢ ಕ್ಷೇತ್ರದ ಮಹಾಗಾಂವದಲ್ಲಿ ಈ ಒಂದು ಘಟನೆ ನಡೆದಿದೆ. ನೂತನ ಶಾಸಕ ಶಿವಾಜಿ ಪಾಟೀಲ್ ವಿಜಯೋತ್ಸವದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಚಂದಗಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಾಜಿ ಪಾಟೀಲ್ ಗೆಲುವು ಸಾಧಿಸಿದ್ದರು. ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದರು.ಈ ಸಂದರ್ಭದಲ್ಲಿ ಆರತಿಯಿಂದ ಬೆಂಕಿ ಹೊತ್ತಿಕೊಂಡು ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ. ಅಲ್ಲದೇ ನೂತನ ಶಾಸಕ ಸೇರಿದಂತೆ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ರಜೆಗೆ ಎಂದು ಊರಿಗೆ ಆಗಮಿಸಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದೇವಗಾಂವ ಗ್ರಾಮದಲ್ಲಿ ಕೆರೆಗೆ ಹಾರಿ ಯೋಧ ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 4 ವರ್ಷಗಳಿಂದ ಭಾರೀತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು. ಇಂದು ಮತ್ತೆ ಕರ್ತವ್ಯಕ್ಕೆ ಯೋಧ ನರೇಶ್ ತರಳಬೇಕಾಗಿತ್ತು. ಆದರೆ ಕರ್ತವ್ಯಕ್ಕೆ ತರಳದೆ ಕೆರೆಯಲ್ಲಿ ಹರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಇದೀಗ ಯೋಧ ನರೇಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆತ್ಮಹತ್ಯೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ದಾಖಲಿಸಿದ್ದು ಬಿಜೆಪಿ ಸೋಲು ಅನುಭವಿಸಿದೆ. ಈ ಒಂದು ಸೋಲಿನ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಪಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಯತ್ನಾಳ್ ವಿರುದ್ಧ ಕಿಡಿ ಕಾರಿದ ಬಿವೈ ವಿಜಯೇಂದ್ರ  ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು ಈ ಒಂದು ಸೋಲಿನ ಹೊಣೆಯನ್ನು, ಜವಾಬ್ದಾರಿಯನ್ನು ರಾಜ್ಯದ ಅಧ್ಯಕ್ಷನಾಗಿ ಸೋಲಿನ ಜವಾಬ್ದಾರಿ ನಾನು ಹೊರುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪನ್ನ ಸರಿಪಡಿಸುತ್ತೇನೆ. ಆದರೆ ಯಾರು ನಮ್ಮ ವಿರುದ್ಧ ಈ ರೀತಿ ಹಗುರವಾಗಿ ಮಾತನಾಡುತ್ತಾರೆ.ಈ ರೀತಿ ಮಾತನಾಡಿದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬರು ಕೇಂದ್ರದ ಸಚಿವರಾಗಿ ಕೆಲಸ ಮಾಡಿರುವಂತಹವರು. ಇನ್ಮೇಲೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಮುಂದೆ ಪಕ್ಷದಲ್ಲಿ ಮಾಡಬೇಕಾದಂತಹ…

Read More