Author: kannadanewsnow05

ಮಂಗಳೂರು :  ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಗತಿ ಪಥ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ಉತ್ತರ ಕರ್ನಾಟಕದಲ್ಲಿ ‘ಕಲ್ಯಾಣ ಪಥ’ ಹೆಸರಿನಲ್ಲಿ ಈ ಯೋಜನೆ ಕಾರ್ಯಗತಗೊಳ್ಳ ಲಿದ್ದು, ಮಾರ್ಚ್ 1ರಂದು ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ಪ್ರಗತಿ ಪಥದಲ್ಲಿ ರಾಜ್ಯದ 7,110 ರಸ್ತೆಗಳನ್ನು 5,190 ಕೋಟಿ ವೆಚ್ಚದಲ್ಲಿ ಹಾಗೂ ಕಲ್ಯಾಣ ಪಥದಡಿ 1,150 ಕಿ.ಮೀ.ರಸ್ತೆಗಳನ್ನು 1 ಸಾವಿರ ಕೋಟಿಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಾಕೃತಿಕ ಹಾನಿಗೆ ಸಂಬಂಧಿಸಿ 189 ಅಸೆಂಬ್ಲಿ ಕ್ಷೇತ್ರಗಳಿಗೆ 1,890 ಕೋಟಿ ಬಿಡುಗಡೆಗೊಳಿಸಲಾಗಿದ್ದು, ಪ್ರತಿ ಕ್ಷೇ ತ್ರಕ್ಕೆ 10 ಕೋಟಿ ಮಂಜೂರುಗೊಳಿಸಲಾಗಿದೆ.ಈಗಾಗಲೇ…

Read More

ಶಿವಮೊಗ್ಗ : ರಾಜ್ಯದ ಅತಿಥಿ ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಈ ಕುರಿತು ಅವರು ನಿನ್ನೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಮಕ್ಕಳಿಗೆ ಕೌಶಲ್ಯ ಭರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದೇವೆ. ಕಲಿಕೆಗೆ ಪೂರಕವಾದ ಹೊಸ ವಿಧಾನಗಳನ್ನು ಕೂಡ ಅಳವಡಿಸಿ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದ್ದೇವೆ.ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೇಳಿದ್ದೇನೆ. ಪ್ರಮುಖವಾಗಿ ನೂತನ ಕ್ಲಾಸ್ ರೂಮ್‌ಗಳು ಮತ್ತು ಶಿಕ್ಷಕರ ನೇಮಕಾತಿಯ ಅಗತ್ಯವಿದೆ. ಈ ಬಗ್ಗೆಯೂ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದೇನೆ ಕಲ್ಯಾಣ ಕರ್ನಾಟಕದ ನೇಮಕಾತಿಯಲ್ಲಿ ಶೇ.80ರಷ್ಟು ನೇಮಕ ಮಾಡಲು…

Read More

ನವದೆಹಲಿ : 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಇಂದು ದುಬೈನಲ್ಲಿ ನಡೆಯಲ್ಲಿದೆ.ಆದರೆ ಪಂದ್ಯ ಆರಂಭಕ್ಕೂ ಮುನ್ನ ಭಾರತಕ್ಕೆ ಬಿಗ್ ಶಾಕ್ ಎದುರಾಗಿದ್ದು, ರನ್ ಮಷಿನ್ ವಿರಾಟ್ ಕೊಹ್ಲಿ ಕಾಲಿಗೆ ಗಾಯವಾಗಿರುವ ಘಟನೆ ವರದಿಯಾಗಿದೆ. ಹೌದು ಇಂದು ಇಂಡಿಯಾ ಹಾಗೂ ಬದ್ಧವೈರಿ ಪಾಕಿಸ್ತಾನ ನಡುವೆ ಹೈವೊಲ್ಟೇಜ್ ಪಂದ್ಯ ನಡೆಯಲಿದೆ. ಇದರ ನಡುವೆ ಭಾರತಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಪಂದ್ಯಕ್ಕೂ ಮುನ್ನವೇ ವಿರಾಟ್ ಕೊಹ್ಲಿ ಅವರು ಕಾಲಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ವಿರಾಟ್ ಕೊಹ್ಲಿ ಅವರಿಗೆ ಅಭ್ಯಾಸದ ವೇಳೆ ತಮ್ಮ ಕಾಲಿಗೆ ಗಾಯ ಮಾಡಿಕೊಂಡಿದ್ದು, ಗಾಯವಾಗಿರುವ ಕಾಲಿಗೆ ಐಸ್ ಕ್ಯೂಬ್ ಕಟ್ಟಿಕೊಂಡಿರುವ ಫೋಟೋ ಇದೀಗ ವೈರಲ್ ಆಗಿದೆ. ಒಂದು ಕಡೆ ಇದು ಕೊಹ್ಲಿಗೆ ಕೊನೆ ಚಾಂಪಿಯನ್ ಶಿಪ್ ಲೀಗ್ ಆಗಲಿದೆ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಕಾಲಿಗೆ ಗಾಯ ಆಗಿರೋದು…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು,  ಕ್ಷುಲ್ಲಕ ಕಾರಣಕ್ಕೆ KSRTC ಬಸ್ ನಲ್ಲೆ ವ್ಯಕ್ತಿಗೆ ಚಾಕು ಇರಿದು ಹತ್ಯೆಗೈದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ದುಂಡಸಿನಗರದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ. ದುಂಡಸಿನಗರದ ಪ್ರೀತಂ ಡಿಸೋಜ ಎನ್ನುವ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ. ಕೊಲೆ ಮಾಡಿದ ವ್ಯಕ್ತಿಯನ್ನು ಗಂಗಾಧರ ಎಂದು ತಿಳಿದುಬಂದಿದೆ. ಪ್ರೀತಂ ಶಿರಸಿಯ ಪತ್ನಿ ಮನೆಗೆ ಬಂದಿದ್ದ. ಪತ್ನಿ ಜೊತೆ ಬಸ್ ನಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಪ್ರೀತಂ ಡಿಸೋಜ ಭೀಕರ ಕೊಲೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸರ್ಕಾರಿ ಆಸ್ಪತ್ರೆಯ ಬಳಿ ಈ ಒಂದು ಘಟನೆ ನಡೆದಿದೆ. ಪ್ರಯಾಣಿಕ ಪ್ರೀತಂ ಡಿಸೋಜಗೆ ಗಂಗಾಧರ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಆ ಕೊಲೆ ಆರೋಪಿ ಗಂಗಾಧರ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಇದೀಗ ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ನಿನ್ನೆಯಿಂದ ಕರ್ನಾಟಕಕ್ಕೆ ತಮ್ಮ ಸರ್ಕಾರಿ ಪಾಸ್ ಗಳನ್ನು ಪಡೆದೆ ಬೆಳಗಾವಿಯ ಗಡಿ ಪ್ರದೇಶದಲ್ಲಿ ನಿಲ್ಲಿಸುತ್ತೇವೆ ಆದರೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ರಾಜ್ಯ ಸರ್ಕಾರ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ನಡೆಸುತ್ತಿದೆ. ನಿನ್ನೆ ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತೆ ಬಾಲ ಬಿಚ್ಚಿದ್ದು ಕೆಎಸ್ಆರ್ಟಿಸಿ ಬಸ್ಗೆ ಮಸಿ ಬೆಳೆದು ಪುಂಡಾಟಿಕೆ ಮೆರೆದಿದ್ದಾರೆ. ಹೌದು ಮಹಾರಾಷ್ಟ್ರದಲ್ಲಿ ಮುಂದುವರಿದ ಶಿವ ಸೇನೆ ಕಾರ್ಯಕರ್ತರ ಪುಂಡಾಟ. ಕೆಎಸ್ಆರ್ಟಿಸಿ ಅಂಬಾರಿ ಬಸ್ ಮೇಲೆ ಕಪ್ಪು ಮಸಿ ಬಳಿದು ಪುಂಡಾಟೀಕೆ ಮರೆದಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಪುಣೆಯ ಸ್ವರ ಗೇಟ್ ನಲ್ಲಿ ಬಸ್ಗೆ ಮಸಿ ಬಳಿಯಲಾಗಿದೆ. ನಿನ್ನೆ ಪುಣೆಗೆ ತೆರಳಿದ್ದ ಅಂಬಾರಿ ಬಸ್ ಗೆ ವಾಪಸ್ ಬರುವಾಗ ಮಸಿ ಬಳಿದಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿಗೆ ಆಗಮಿಸುವಾಗ ಕೆಎಸ್ಆರ್ಟಿಸಿಯ ಅಂಬಾರಿ ಬಸ್ಗೆ…

Read More

ಮಂಡ್ಯ : ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಎಷ್ಟೋ ಹೆಣ್ಣುಮಕ್ಕಳು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದೀಗ ಮಂಡ್ಯದಲ್ಲಿ ಮತ್ತೋರ್ವ ಮಹಿಳೆ ಸಮಾಜಕ್ಕೆ ಮಾದರಿಯಾಗಿದ್ದು, ಗೃಹಲಕ್ಷ್ಮಿಯಿಂದ ಬಂದ 30 ಸಾವಿರ ಹಾಗೂ ತಾವು ಕೂಡಿಟ್ಟ 20 ಸಾವಿರ ಹಣವನ್ನು ಸೇರಿಸಿ ತಮ್ಮೂರಿನ ಸರ್ಕಾರೀ ಶಾಲೆಗೆ ವಾಟರ್​ ಫಿಲ್ಟರ್​ ಕೊಡುಗೆ ನೀಡಿದ್ದಾರೆ. ಹೌದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯ ಕೊಪ್ಪಲು ಗ್ರಾಮದ ಗೃಹಿಣಿ ವಿಜಯಲಕ್ಷ್ಮಿ ಅವರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳಿಗಾಗಿ ತಮಗೆ ಬಂದಿದ್ದ ಗೃಹಲಕ್ಷಿ ಯೋಜನೆಯ 30 ಸಾವಿರ ಹಣದ ಜೊತೆಗೆ ತಾವು ಕೂಡಿಟ್ಟಿದ್ದ ಸ್ವಲ್ಪ ಹಣದ ಜೊತೆ 50 ಸಾವಿರ ರೂ. ಮೌಲ್ಯದ ಕುಡಿಯುವ ನೀರಿನ ವಾಟರ್ ಫಿಲ್ಟರ್ ಅನ್ನು ಕೊಡಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ಗ್ರಾಮದಲ್ಲಿನ ಈ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕುಡಿಯುವ ನೀರಿನ ಸಮಸ್ಯೆ ಅರಿತು‌, ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ಕೊಟ್ಟ ದಂಪತಿಯ ಕಾರ್ಯಕ್ಕೆ…

Read More

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ಕೈಬಿಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಗೆ ಸಿಐಡಿ ಎಸ್ ಪಿ ಪಿ ಬಿ ಎನ್ ಜಗದೀಶ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿ ಆದೇಶಿಸಿತು. ಕ್ರೈಂ ನಂಬರ್ 20/2024 ಕ್ಕೆ ಸಂಬಂಧಿಸಿದ ಪೆನ್ ಡ್ರೈವ್ ಸಲ್ಲಿಕೆ ಮಾಡಲಾಗಿದೆ. ಗುರುತರವಾದ ಆರೋಪ ಇರುವುದರಿಂದ ಕೇಸ್ ನಿಂದ ಕೈ ಬಿಡದಂತೆ ಜಗದೀಶ್ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲರು ವಾದ ಮಂಡಿಸಲು ಸದ್ಯ ವಿಚಾರಣೆ ಮುಂದೂಡಿಕೆ ಮಾಡಲಾಯಿತು. ಫೆಬ್ರವರಿ 28ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಿಗದಿಪಡಿಸಿದೆ.

Read More

ಕಲಬುರ್ಗಿ : ಇಂದು ಬೆಳಿಗ್ಗೆ ತಾನೇ ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಈಗ ಕಲ್ಬುರ್ಗಿಯಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಒಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ನಗರದಲ್ಲಿ ನಡೆದಿದೆ. ಹೌದು ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಲ್ಬುರ್ಗಿ ಗಂಗಾನಗರ ನಿವಾಸಿ ರವಿಕುಮಾರ್ (19) ಎನ್ನುವ ವಿದ್ಯಾರ್ಥಿ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ.ಬೆಳಿಗ್ಗೆ ಮನೆಯಲ್ಲಿ ಕಲ್ಬುರ್ಗಿ ಪಿಡಿಎ ಇಂಜಿನಿಯರ್ ಕಾಲೇಜಿನಲ್ಲಿ ರವಿಕುಮಾರ್ 4ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇಂದು ಮನೆಯಲ್ಲಿ ಇದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿ ರವಿಕುಮಾರ್ ಸಾವನ್ನಪ್ಪಿದ್ದಾನೆ.

Read More

ಹಾವೇರಿ : ಕಳೆದ ಒಂದುವಾರದಿಂದ ಹಾವೇರಿ ಜಿಲ್ಲೆಯಲ್ಲಿ ಶಿರತೆಯೊಂದು ತೀವ್ರ ಆತಂಕ ಮೂಡಿಸಿದ ಹಾವೇರಿ ಜಿಲ್ಲೆಯ ಮಾಳಾಪುರ ಹಾಗೂ ಅಗಡಿ ಗ್ರಾಮದ ಜನರಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆಗೆಟ್ಟಿದ್ದರು. ಇದೀಗ ಸತತ 8 ಗಂಟೆಗಳ ಕಾರ್ಯಾಚರಣೆಯ ಫಲವಾಗಿ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಹಿಡಿದಿದ್ದಾರೆ. ಹೌದು ಸತತ 8 ಗಂಟೆಗಳ ಬಳಿಕ ಚಿರತೆ ಸೆರೆ ಸಿಕ್ಕಿದೆ. ಹಾವೇರಿ ತಾಲೂಕಿನ ಮಾಳಾಪುರ ಬಳಿ ಚಿರತೆ ಇದೀಗ ಸರಿ ಸಿಕ್ಕಿದೆ. ಮಾಳಾಪುರ ಬಳಿ ಚಿರತೆ ಕಾಲುವೆಯಲ್ಲಿ ಅವಿತು ಕುಳಿತುಕೊಂಡಿತು. ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ ಒಂದು ವಾರದಿಂದ ಮಾಳಾಪುರ ಮತ್ತು ಭೂವಿರಾಪುರ ಮತ್ತು ಅಗಡಿ ಗ್ರಾಮದ ಸುತ್ತಮುತ್ತಲು ಈ ಒಂದು ಚರತೆ ಆತಂಕ ಹುಟ್ಟಿಸಿತ್ತು.ಇದೀಗ ಚಿರತೆಯ ಹೆಸರೆಯಿಂದ ಮೂರು ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಪೊಲೀಸರು ಭರ್ಜರಿ ಕಯಾಚರಣೆ ನಡೆಸಿದ್ದು ಖಾಸಗಿ ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 26 ಜನರನ್ನು ವಶಕ್ಕೆ ಪಡೆದುಕೊಂಡು 25 ಲಕ್ಷ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹೌದು ನಗರದ ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದಾಗ ಈ ವೇಳೆ ಅಲ್ಲೇ ಜೂಜಾಡುತ್ತಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದು, ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

Read More